Homeಕರ್ನಾಟಕಶಿಕ್ಷಣದ ಖಾಸಗೀಕರಣ, ಕೇಂದ್ರೀಕರಣ ತೀವ್ರಗೊಳಿಸುವ ಬಜೆಟ್: SFI

ಶಿಕ್ಷಣದ ಖಾಸಗೀಕರಣ, ಕೇಂದ್ರೀಕರಣ ತೀವ್ರಗೊಳಿಸುವ ಬಜೆಟ್: SFI

- Advertisement -
- Advertisement -

2018 ರ ಹಣಕಾಸು ವರ್ಶದಲ್ಲಿ ಶಿಕ್ಷಣ, ಆರೋಗ್ಯ ಒಳಗೊಂಡಂತೆ 42 ಸೆಸ್‌ಗಳನ್ನು ಹಾಕಿದ್ದ ಮೋದಿ ಸರಕಾರ ಆ ಮೂಲಕ 2.5 ಲಕ್ಷ ಕೋಟಿಯನ್ನು ಸಂಗ್ರಹ ಮಾಡಿತ್ತು. ಆದರೆ ಆ ಮೊತ್ತವನ್ನು ಮರಳಿ ಸಂಬಂಧಪಟ್ಟ ಇಲಾಖೆಗಳ ಅಬಿವೃದ್ದಿಗೆ ವೆಚ್ಚ ಮಾಡದೆ ಕೇಂದ್ರ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಅನ್ಯಾಯ ಮಾಡಿದೆ ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (SFI) ಕರ್ನಾಟಕ ರಾಜ್ಯ ಸಮಿತಿ ಪತ್ರಿಕಾ ಹೇಳಿಕೆ ನೀಡಿದೆ.

“ಯುಜಿಸಿ ರದ್ದುಗೊಳಿಸಿ ‘ಉನ್ನತ ಶಿಕ್ಷಣ ಆಯೋಗ’ (HEC) ರಚಿಸಲು ಈ ವರ್ಷ ಚಾಲನೆ. ಶಿಕ್ಷಣದ ಕೇಂದ್ರೀಕರಣಕ್ಕೂ ಚಾಲನೆ. ಇನ್ನು ವಿಶ್ವವಿದ್ಯಾಲಯಗಳ ಧನ ಸಹಾಯ ಮತ್ತು ಅನುದಾನವು ನೇರವಾಗಿ ಕೇಂದ್ರ ಶಿಕ್ಷಣ ಇಲಾಖೆಯ ಸುಪರ್ದಿಗೆ ಹೋಗುತ್ತದೆ. ಅಲ್ಲಿಗೆ ಶಿಕ್ಷಣದ ಕತೆ ಮುಗೀತು” ಎಂದು SFI ಹೇಳಿದೆ.

ಇದನ್ನೂ ಓದಿ: ರಾಮನಗರ: ಪರೀಕ್ಷೆಗಳನ್ನು ಮುಂದೂಡುವಂತೆ ಕಾನೂನು ವಿದ್ಯಾರ್ಥಿಗಳಿಂದ ಪ್ರತಿಭಟನೆ

“ಮುಂದಿನ 6 ವರ್ಷಗಳಲ್ಲಿ ದಲಿತ ಸಮುದಾಯದ ವಿದ್ಯಾರ್ಥಿಗಳಿಗಾಗಿ 35,219 ಕೋಟಿ ಹಣ ವೆಚ್ಚ ಮಾಡಲಾಗುವುದು ಎಂದು ಬಜೆಟ್ ಘೋಷಣೆ ಮಾಡಿದ್ದಾರೆ. ಇದು ವಂಚನೆ ಹಾಗೂ ಮೋಸವಾಗಿದೆ. ಇದು 1944 ರಿಂದ ಜಾರಿಯಲ್ಲಿರುವ ಪ.ಜಾತಿ ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಯೋಜನೆ. ಇದರಲ್ಲಿ ಹೊಸದೇನೂ ಇಲ್ಲ ದೇಶದಾದ್ಯಂತ ಸುಮಾರು 57 ಲಕ್ಷ ಪ.ಜಾತಿ ವಿದ್ಯಾರ್ಥಿಗಳಿದ್ದಾರೆ ಎಂದು ಅಂದಾಜಿಸಿದರೆ ಒಬ್ಬ ವಿದ್ಯಾರ್ಥಿಗೆ ಪ್ರತಿ ವರ್ಷ 10,000 ರೂ, ಪ್ರತಿ ತಿಂಗಳು 858 ರೂ. ದೊರಕುತ್ತದೆ. ಈ ಹಣದಿಂದ ವಿದ್ಯಾರ್ಥಿಗಳಿಗೆ ಯಾವ ಆರ್ಥಿಕ ಅನುಕೂಲವೂ ದೊರಕುವುದಿಲ್ಲ” ಎಂದು ಹೇಳಿದೆ.

ಈ ಹಣವನ್ನು ಕೇಂದ್ರ ಮತ್ತು ರಾಜ್ಯಗಳು 60:40 ಅನುಪಾತದಲ್ಲಿ ಕೊಡಬೇಕು. ರಾಜ್ಯ ಎಂದಿಗೂ ಕೊಡುವುದಿಲ್ಲ, ಹಾಗಾಗಿ ಕೇಂದ್ರವೂ ಕೊಡುವುದಿಲ್ಲ. ಇದು ಬಡ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚನೆ ಮಾಡುವ ಶಿಕ್ಷಣ ವಿರೋಧಿ ಬಜೆಟ್ ಆಗಿದೆ” ಎಂದು SFI ಆಕ್ರೋಶ ವ್ಯಕ್ತಪಡಿಸಿದೆ.

“ದೇಶದ ಸಮಗ್ರ ಶಿಕ್ಷಣ ಅಭಿವೃದ್ಧಿಗಾಗಿ ಕೇಂದ್ರ ಬಜೆಟ್‌ನಲ್ಲಿ ಕನಿಷ್ಠ 10% ಮೀಸಲಿಡಬೇಕು ಎಂಬ ದಶಕಗಳ ಬೇಡಿಕೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡದಿರುವುದು ಅನಿರೀಕ್ಷಿತವೇನಲ್ಲ. ದುಡ್ಡಿದ್ದವರಿಗೆ ಶಿಕ್ಷಣವನ್ನು ಮಾರಾಟ ಮಾಡುವ ಶಿಕ್ಷಣದ ಖಾಸಗೀಕರಣ ಕೇಂದ್ರೀಕರಣ ತೀವ್ರಗೊಳಿಸುವ ಉದ್ದೇಶಗಳು ಎದ್ದು ಕಾಣುತ್ತಿವೆ” ಎಂದು SFI ಅಸಮಧಾನ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಬಂಗಾಳದ 9.5 ಲಕ್ಷ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ 10 ಸಾವಿರ ಜಮೆ- ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...