Homeಕರ್ನಾಟಕಶಿಕ್ಷಣದ ಖಾಸಗೀಕರಣ, ಕೇಂದ್ರೀಕರಣ ತೀವ್ರಗೊಳಿಸುವ ಬಜೆಟ್: SFI

ಶಿಕ್ಷಣದ ಖಾಸಗೀಕರಣ, ಕೇಂದ್ರೀಕರಣ ತೀವ್ರಗೊಳಿಸುವ ಬಜೆಟ್: SFI

- Advertisement -
- Advertisement -

2018 ರ ಹಣಕಾಸು ವರ್ಶದಲ್ಲಿ ಶಿಕ್ಷಣ, ಆರೋಗ್ಯ ಒಳಗೊಂಡಂತೆ 42 ಸೆಸ್‌ಗಳನ್ನು ಹಾಕಿದ್ದ ಮೋದಿ ಸರಕಾರ ಆ ಮೂಲಕ 2.5 ಲಕ್ಷ ಕೋಟಿಯನ್ನು ಸಂಗ್ರಹ ಮಾಡಿತ್ತು. ಆದರೆ ಆ ಮೊತ್ತವನ್ನು ಮರಳಿ ಸಂಬಂಧಪಟ್ಟ ಇಲಾಖೆಗಳ ಅಬಿವೃದ್ದಿಗೆ ವೆಚ್ಚ ಮಾಡದೆ ಕೇಂದ್ರ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಅನ್ಯಾಯ ಮಾಡಿದೆ ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (SFI) ಕರ್ನಾಟಕ ರಾಜ್ಯ ಸಮಿತಿ ಪತ್ರಿಕಾ ಹೇಳಿಕೆ ನೀಡಿದೆ.

“ಯುಜಿಸಿ ರದ್ದುಗೊಳಿಸಿ ‘ಉನ್ನತ ಶಿಕ್ಷಣ ಆಯೋಗ’ (HEC) ರಚಿಸಲು ಈ ವರ್ಷ ಚಾಲನೆ. ಶಿಕ್ಷಣದ ಕೇಂದ್ರೀಕರಣಕ್ಕೂ ಚಾಲನೆ. ಇನ್ನು ವಿಶ್ವವಿದ್ಯಾಲಯಗಳ ಧನ ಸಹಾಯ ಮತ್ತು ಅನುದಾನವು ನೇರವಾಗಿ ಕೇಂದ್ರ ಶಿಕ್ಷಣ ಇಲಾಖೆಯ ಸುಪರ್ದಿಗೆ ಹೋಗುತ್ತದೆ. ಅಲ್ಲಿಗೆ ಶಿಕ್ಷಣದ ಕತೆ ಮುಗೀತು” ಎಂದು SFI ಹೇಳಿದೆ.

ಇದನ್ನೂ ಓದಿ: ರಾಮನಗರ: ಪರೀಕ್ಷೆಗಳನ್ನು ಮುಂದೂಡುವಂತೆ ಕಾನೂನು ವಿದ್ಯಾರ್ಥಿಗಳಿಂದ ಪ್ರತಿಭಟನೆ

“ಮುಂದಿನ 6 ವರ್ಷಗಳಲ್ಲಿ ದಲಿತ ಸಮುದಾಯದ ವಿದ್ಯಾರ್ಥಿಗಳಿಗಾಗಿ 35,219 ಕೋಟಿ ಹಣ ವೆಚ್ಚ ಮಾಡಲಾಗುವುದು ಎಂದು ಬಜೆಟ್ ಘೋಷಣೆ ಮಾಡಿದ್ದಾರೆ. ಇದು ವಂಚನೆ ಹಾಗೂ ಮೋಸವಾಗಿದೆ. ಇದು 1944 ರಿಂದ ಜಾರಿಯಲ್ಲಿರುವ ಪ.ಜಾತಿ ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಯೋಜನೆ. ಇದರಲ್ಲಿ ಹೊಸದೇನೂ ಇಲ್ಲ ದೇಶದಾದ್ಯಂತ ಸುಮಾರು 57 ಲಕ್ಷ ಪ.ಜಾತಿ ವಿದ್ಯಾರ್ಥಿಗಳಿದ್ದಾರೆ ಎಂದು ಅಂದಾಜಿಸಿದರೆ ಒಬ್ಬ ವಿದ್ಯಾರ್ಥಿಗೆ ಪ್ರತಿ ವರ್ಷ 10,000 ರೂ, ಪ್ರತಿ ತಿಂಗಳು 858 ರೂ. ದೊರಕುತ್ತದೆ. ಈ ಹಣದಿಂದ ವಿದ್ಯಾರ್ಥಿಗಳಿಗೆ ಯಾವ ಆರ್ಥಿಕ ಅನುಕೂಲವೂ ದೊರಕುವುದಿಲ್ಲ” ಎಂದು ಹೇಳಿದೆ.

ಈ ಹಣವನ್ನು ಕೇಂದ್ರ ಮತ್ತು ರಾಜ್ಯಗಳು 60:40 ಅನುಪಾತದಲ್ಲಿ ಕೊಡಬೇಕು. ರಾಜ್ಯ ಎಂದಿಗೂ ಕೊಡುವುದಿಲ್ಲ, ಹಾಗಾಗಿ ಕೇಂದ್ರವೂ ಕೊಡುವುದಿಲ್ಲ. ಇದು ಬಡ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚನೆ ಮಾಡುವ ಶಿಕ್ಷಣ ವಿರೋಧಿ ಬಜೆಟ್ ಆಗಿದೆ” ಎಂದು SFI ಆಕ್ರೋಶ ವ್ಯಕ್ತಪಡಿಸಿದೆ.

“ದೇಶದ ಸಮಗ್ರ ಶಿಕ್ಷಣ ಅಭಿವೃದ್ಧಿಗಾಗಿ ಕೇಂದ್ರ ಬಜೆಟ್‌ನಲ್ಲಿ ಕನಿಷ್ಠ 10% ಮೀಸಲಿಡಬೇಕು ಎಂಬ ದಶಕಗಳ ಬೇಡಿಕೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡದಿರುವುದು ಅನಿರೀಕ್ಷಿತವೇನಲ್ಲ. ದುಡ್ಡಿದ್ದವರಿಗೆ ಶಿಕ್ಷಣವನ್ನು ಮಾರಾಟ ಮಾಡುವ ಶಿಕ್ಷಣದ ಖಾಸಗೀಕರಣ ಕೇಂದ್ರೀಕರಣ ತೀವ್ರಗೊಳಿಸುವ ಉದ್ದೇಶಗಳು ಎದ್ದು ಕಾಣುತ್ತಿವೆ” ಎಂದು SFI ಅಸಮಧಾನ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಬಂಗಾಳದ 9.5 ಲಕ್ಷ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ 10 ಸಾವಿರ ಜಮೆ- ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...