Homeಚಳವಳಿಉಪಚುನಾವಣೆ ಫಲಿತಾಂಶ ಬಿಜೆಪಿಗೆ ನೀಡಿದ ಉತ್ತರವಾಗಿದೆ: ಎಸ್‌ಕೆಎಂ

ಉಪಚುನಾವಣೆ ಫಲಿತಾಂಶ ಬಿಜೆಪಿಗೆ ನೀಡಿದ ಉತ್ತರವಾಗಿದೆ: ಎಸ್‌ಕೆಎಂ

- Advertisement -
- Advertisement -

14 ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ 30 ವಿಧಾನಸಭಾ ಕ್ಷೇತ್ರಗಳು, ಮೂರು ಲೋಕಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶವು ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ನೀಡಿದ ಉತ್ತರವಾಗಿದೆ.

ರೈತ ವಿರೋಧಿ ಕಾಯ್ದೆಗಳಿಗೆ ಉತ್ತರವನ್ನು ಉಪಚುನಾವಣೆಯ ಮೂಲಕ ಜನತೆ ನೀಡಿದ್ದಾರೆ. ಇದು ಬಿಜೆಪಿಗೆ ಎಚ್ಚರಿಕೆಯ ಕರೆಘಂಟೆಯಾಗಿದೆ. ಹರಿಯಾಣ, ಹಿಮಾಚಲ ಪ್ರದೇಶ, ರಾಜಸ್ತಾನದ ಫಲಿತಾಂಶಗಳು ಬಿಜೆಪಿಯ ವಿರುದ್ಧವಾಗಿ ಬಂದಿವೆ ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿದೆ.

ಮೂರು ಲೋಕಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಒಂದನ್ನು ಮಾತ್ರ ಬಿಜೆಪಿ ಗೆದ್ದಿದೆ. ರಾಜಸ್ಥಾನ, ಹಿಮಾಚಲ ಪ್ರದೇಶ, ಹರಿಯಾಣ ಥರದ ರಾಜ್ಯಗಳು ವಿಧಾನಸಭಾ ಉಪಚುನಾಣೆಯಲ್ಲಿ ತಕ್ಕ ಉತ್ತರವನ್ನು ಬಿಜೆಪಿಗೆ ನೀಡಿವೆ. ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ನಡೆಸುತ್ತಿರುವ ಚಳವಳಿಗೆ ಜನತೆ ಬೆಂಬಲ ನೀಡಿದ್ದಾರೆ.

“ಎಲ್ಲದಕ್ಕೂ ಮಾತುಕತೆಯೊಂದೇ ಪರಿಹಾರ, ಇದು ರೈತರ ಹೋರಾಟಕ್ಕೂ ಅನ್ವಯಿಸುತ್ತದೆ” ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ನೀಡಿರುವ ಹೇಳಿಕೆಗೆ ಎಸ್‌ಕೆಎಂ ಸಹಮತ ವ್ಯಕ್ತಪಡಿಸಿದೆ.

ಆದರೆ, ಪ್ರತಿಭಟನಾನಿರತ ರೈತರೊಂದಿಗೆ ಮಾತುಕತೆ ಪುನರಾರಂಭಿಸಲು ಬಿಜೆಪಿ ಸಿದ್ಧವಿಲ್ಲ. ಕೊನೆಯ ಸುತ್ತಿನ ಮಾತುಕತೆಯು ಜನವರಿ 22, 2021ರಂದು ‌ಆಯಿತು. ಇದರ ನಂತರದಲ್ಲಿ ಮತ್ತೆ ಮಾತುಕತೆ ನಡೆಸಲು ಸರ್ಕಾರ ನಿರಾಕರಿಸಿದೆ.

ಇದನ್ನೂ ಓದಿರಿ: ಶೃಂಗಸಭೆ: ಮೋದಿ ಭೇಟಿ ವಿರೋಧಿಸಿ ಅನಿವಾಸಿ ಭಾರತೀಯರ ಪ್ರತಿಭಟನೆ

ಅಷ್ಟೇ ಅಲ್ಲದೆ ಖಟ್ಟರ್ ಸೇರಿದಂತೆ ಹಲವಾರು ಬಿಜೆಪಿ ನಾಯಕರು ರೈತರ ವಿರುದ್ಧ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಸಾಧ್ಯವಿರುವ ಎಲ್ಲ ರೀತಿಯಲ್ಲಿ ಚಳವಳಿಯನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ.

ಹತ್ತಿ ಬೆಳೆಗೆ ಭಾರೀ ಕೀಟಗಳ ಹಾವಳಿಯಿಂದ ಉಂಟಾದ ಹಾನಿಯು ಪಂಜಾಬ್ ಮತ್ತು ಹರಿಯಾಣದ ಹಲವಾರು ಜಿಲ್ಲೆಗಳಲ್ಲಿ ಹತ್ತಿ ರೈತರಿಗೆ ವ್ಯಾಪಕ ನಷ್ಟವನ್ನು ತಂದಿವೆ. ಇಂತಹ ನಷ್ಟ ಅನುಭವಿಸುತ್ತಿರುವ ರೈತರ ಹಲವಾರು ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿವೆ. ಎಕರೆಗೆ 60,000 ರೂ. ನಷ್ಟವಾಗಿದೆ. ಹಾನಿಯ ಪ್ರಮಾಣವನ್ನು ವರ್ಗೀಕರಿಸಿ ಎಕರೆಗೆ ₹ 2000ರಿಂದ ₹ 12,000ರವರೆಗೆ ಸರ್ಕಾರ ಪರಿಹಾರ ನೀಡುತ್ತದೆ. ನಷ್ಟದ ಒಂದು ಭಾಗವನ್ನೂ ಪರಿಹಾರದ ಹಣ ಭರಿಸುವುದಿಲ್ಲ.

ನಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ಪ್ಯಾಕೇಜ್‌ಗಾಗಿ ಪಂಜಾಬ್ ರೈತ ಸಂಘಗಳು ಹೋರಾಟ ಮುಂದುವರಿಸಿವೆ. ಡಿಎಪಿಯಂತಹ ರಸಗೊಬ್ಬರದ ಕೊರತೆಯೂ ತಲೆದೋರಿದೆ. ಈ ಬಿಕ್ಕಟ್ಟನ್ನು ಬಗೆಹರಿಸಲು ಎಸ್‌ಕೆಎಂ ಒತ್ತಾಯಿಸಿದೆ. ಬಿಕ್ಕಟ್ಟನ್ನು ನಿವಾರಿಸಲು ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಎಸ್‌ಕೆಎಂ ಒತ್ತಾಯಿಸುತ್ತದೆ.

ಉಪಚುನಾವಣೆಯ ಫಲಿತಾಂಶ ಹೀಗಿದೆ:

1. ಆಂಧ್ರಪ್ರದೇಶ

  • ಬದ್ವೇಲ್‌ ಕ್ಷೇತ್ರ – ವೈಎಸ್‌ಆರ್‌‌ ಕಾಂಗ್ರೆಸ್‌

ಕ್ಷೇತ್ರವು ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಹಿಡಿತದಲ್ಲಿತ್ತು. ಉಪಚುನಾವಣೆಯಲ್ಲಿ ತನ್ನಲ್ಲೇ ಉಳಿಸಿಕೊಂಡಿದೆ.

2. ಅಸ್ಸಾಂ

  • ಭನಾನಿಪುರ್‌ – ಬಿಜೆಪಿ
  • ಗೋಸಾಯಿಗಾಂವ್ –  ಯುಪಿಪಿಎಲ್‌ – (ಬಿಜೆಪಿ ಮೈತ್ರಿ ಪಕ್ಷ)
  • ಮರಿಯಾನಿ – ಬಿಜೆಪಿ
  • ತಮುಲ್‌ಪುರ್‌ – ಯುಪಿಪಿಎಲ್‌ – (ಬಿಜೆಪಿ ಮೈತ್ರಿ ಪಕ್ಷ)
  • ಥೌರಾ – ಬಿಜೆಪಿ

ಬಿಜೆಪಿ ಗೆದ್ದ ಮೂರು ಕ್ಷೇತ್ರಗಳಲ್ಲಿ ಎರಡು ಕಾಂಗ್ರೆಸ್‌‌ನ ಹಿಡಿತದಲ್ಲಿದ್ದ ಕ್ಷೇತ್ರಗಳಾಗಿದ್ದು, ಒಂದು ಕ್ಷೇತ್ರ AIUDF ಹಿಡಿತದಲ್ಲಿದ್ದವು. ಯುಪಿಪಿಎಲ್‌ ಗೆದ್ದ ಎರಡು ಕ್ಷೇತ್ರಗಳಲ್ಲಿ ಒಂದು ತನ್ನದೇ ಕ್ಷೇತ್ರವನ್ನು ಉಳಿಸಿಕೊಂಡಿದ್ದರೆ, ಮತ್ತೊಂದನ್ನು ಬೇರೆ ಪಕ್ಷದಿಂದ ತನ್ನ ತೆಕ್ಕೆಗೆ ಪಡೆದು ಕೊಂಡಿದೆ.

ಇದನ್ನೂ ಓದಿ: ನಾನೇಕೆ ಆರ್ ಎಸ್ ಎಸ್ ತೊರೆದೆ ಸರಣಿ; ದೇಶಕ್ಕಾಗಿ ಸಂಘದ ಸಖ್ಯ ಬಿಟ್ಟೆ!

3. ಬಿಹಾರ

  • ಕುಶೇಶ್ವರ ಆಸ್ಥಾನ – JDU
  • ತಾರಾಪುರ – JDU

ಕುಶೇಶ್ವರ ಆಸ್ಥಾನ ಕ್ಷೇತ್ರದಲ್ಲಿ ಜೆಡಿಯು ತನ್ನ ಕ್ಷೇತ್ರವನ್ನು ಉಳಿಕೊಂಡರೆ, ತಾರಾಪುರದಲ್ಲಿ ಕಳೆದುಕೊಂಡಿದೆ.

4. ಹರಿಯಾಣ

  • ಎಲ್ಲೇನಾಬಾದ್ – INLD ತನ್ನದೇ ಕ್ಷೇತ್ರವನ್ನು ಮತ್ತೇ ಗೆದ್ದುಕೊಂಡಿದೆ.

5. ಹಿಮಾಚಲ ಪ್ರದೇಶ

  • ಅರ್ಕಿ – ಕಾಂಗ್ರೆಸ್
  • ಫತೇಪುರ್ – ಕಾಂಗ್ರೆಸ್
  • ಜುಟ್ಟಬ್ – ಕಾಂಗ್ರೆಸ್

ಅರ್ಕಿ ಮತ್ತು ಫೆತೇಪುರ್‌ನಲ್ಲಿ ಕಾಂಗ್ರೆಸ್ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದರೆ, ಜುಟ್ಟಬ್‌ನಲ್ಲಿ ಹೊಸದಾಗಿ ಕ್ಷೇತ್ರವನ್ನು ಗೆದ್ದುಕೊಂಡಿದೆ.

6. ಕರ್ನಾಟಕ

  • ಹಾನಗಲ್‌ – ಕಾಂಗ್ರೆಸ್
  • ಸಿಂದಗಿ – ಬಿಜೆಪಿ

ಕರ್ನಾಟಕದಲ್ಲಿ ಬಿಜೆಪಿ ವಶದಲ್ಲಿ ಇದ್ದ ಹಾನಗಲ್‌ ಕ್ಷೇತ್ರವನ್ನು ಕಾಂಗ್ರೆಸ್ ವಶಪಡಿಸಿಕೊಂಡರೆ, ಜೆಡಿಎಸ್‌ ವಶದಲ್ಲಿದ್ದ ಸಿಂದಗಿಯನ್ನು ಬಿಜೆಪಿ ಗೆದ್ದುಕೊಂಡಿದೆ.

ಇದನ್ನೂ ಓದಿ: ಅಸ್ಸಾಂ: ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಸೋಲು; ಆಪರೇಷನ್‌ ಕಮಲಕ್ಕೆ ಜಯ!

7. ಮಧ್ಯಪ್ರದೇಶ

  • ಜೋಬತ್ – ಬಿಜೆಪಿ
  • ಪೃಥ್ವಿಪುರ – ಬಿಜೆಪಿ
  • ರಾಯಗಾಂವ್ – ಕಾಂಗ್ರೆಸ್

ಜೋಬತ್ ಮತ್ತು ಪೃಥ್ವಿಪುರ ಕ್ಷೇತ್ರವನ್ನು ಬಿಜೆಪಿ ಬೇರೆ ಪಕ್ಷದಿಂದ ವಶಪಡಿಸಿಕೊಂಡರೆ, ಕಾಂಗ್ರೆಸ್‌ ರಾಯಗಾಂವ್ ಕ್ಷೇತ್ರವನ್ನು ಅನ್ನು ಹೊಸದಾಗ ಗೆದ್ದುಕೊಂಡಿದೆ.

8. ಮಹಾರಾಷ್ಟ್ರ

  • ದೆಗ್ಲೂರ್ – ಕಾಂಗ್ರೆಸ್

ಈ ಕ್ಷೇತ್ರವನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ತನ್ನಲ್ಲೇ ಉಳಿಸಕೊಂಡಿದೆ.

9. ಮೇಘಾಲಯ

  • ಮಾವ್‌ಫ್ಲಾಂಗ್‌ – ಯುನೈಟೆಡ್‌ ಡೆಮಾಕ್ರಟಿಕ್ ಪಾರ್ಟಿ
  • ಮೌರಿಂಗ್‌ಕೆಂಗ್ – ಯುನೈಟೆಡ್‌ ಡೆಮಾಕ್ರಟಿಕ್ ಪಾರ್ಟಿ
  • ರಾಜಬಾಲಾ – ನ್ಯಾಶನಲ್‌ ಪೀಪಲ್ಸ್‌ ಪಾರ್ಟಿ

10. ಮಿಜೋರಾಂ

  • ಟುಯಿರಿಯಲ್ – ಮಿಜೋ ನ್ಯಾಶನಲ್ ಫ್ರಂಟ್

ಬೇರೆ ಪಕ್ಷದಿಂದ ಕ್ಷೇತ್ರವನ್ನು ಗೆದ್ದುಕೊಂಡಿದೆ.

ಇದನ್ನೂ ಓದಿ: ಹರಿಯಾಣ ಉಪಚುನಾವಣೆ: ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜೀನಾಮೆ ಕೊಟ್ಟಿದ್ದ ಅಭಯ್ ಚೌಟಾಲಾಗೆ ಗೆಲುವು

11. ನಾಗಾಲ್ಯಾಂಡ್

  • ಶಮ್ಟೋರ್ – ನ್ಯಾಶನಲಿಸ್ಟಿಕ್‌ ಡೆಮಾಕ್ರಟಿಕ್ ಪ್ರೊಗ್ರೇಸಿವ್ ಪಾರ್ಟಿ

ಅವಿರೋಧ ಆಯ್ಕೆ!

12. ರಾಜಸ್ಥಾನ

  • ಧರಿಯಾವಾಡ – ಕಾಂಗ್ರೆಸ್
  • ವಲ್ಲಭನಗರ – ಕಾಂಗ್ರೆಸ್

ಇಲ್ಲಿ ಕಾಂಗ್ರೆಸ್ ಒಂದು ತನ್ನದೇ ಕ್ಷೇತ್ರನ್ನು ಉಳಿಸಿಕೊಂಡು, ಮತ್ತೊಂದು ಕ್ಷೇತ್ರವನ್ನು ಬೇರೆ ಪಕ್ಷದಿಂದ ವಶಕ್ಕೆ ಪಡೆದಿದೆ.

13. ತೆಲಂಗಾಣ

  • ಹುಜೂರಾಬಾದ್ – ಬಿಜೆಪಿ

ಟಿಆರ್‌ಎಸ್‌ ಪಕ್ಷದಿಂದ ಬಿಜೆಪಿಯು ಈ ಕ್ಷೇತ್ರವನ್ನು ಗೆದ್ದುಕೊಂಡಿದೆ.

14. ಪಶ್ಚಿಮ ಬಂಗಾಳ

  • ದೀನ್‌ಹಟಾ – ಟಿಎಂಸಿ
  • ಗೋಸಾಬ – ಟಿಎಂಸಿ
  • ಖಾರ್ದಹೊ – ಟಿಎಂಸಿ
  • ಶಾಂತಿಪುರ – ಟಿಎಂಸಿ

ಇಲ್ಲಿ ಎರಡು ಕ್ಷೇತ್ರಗಳನ್ನು ಟಿಎಂಸಿ ತನ್ನದೇ ಕ್ಷೇತ್ರವನ್ನು ಗೆದ್ದುಕೊಂಡು, ಮತ್ತೆರೆಡು ಕ್ಷೇತ್ರವನ್ನು ಬಿಜೆಪಿಯಿಂದ ಗೆದ್ದುಕೊಂಡಿದೆ.

ಇದನ್ನೂ ಓದಿ: ಚುನಾವಣೆ ವಿಶ್ಲೇಷಣೆ: ಹಾನಗಲ್‌ನಲ್ಲಿ ಬಿಜೆಪಿ ಸೋತಿದ್ದೇಕೆ? ಕ್ಷೇತ್ರದ ಮತದಾರರ ವೈಶಿಷ್ಟ್ಯವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...