Homeಚಳವಳಿಉಪಚುನಾವಣೆ ಫಲಿತಾಂಶ ಬಿಜೆಪಿಗೆ ನೀಡಿದ ಉತ್ತರವಾಗಿದೆ: ಎಸ್‌ಕೆಎಂ

ಉಪಚುನಾವಣೆ ಫಲಿತಾಂಶ ಬಿಜೆಪಿಗೆ ನೀಡಿದ ಉತ್ತರವಾಗಿದೆ: ಎಸ್‌ಕೆಎಂ

- Advertisement -
- Advertisement -

14 ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ 30 ವಿಧಾನಸಭಾ ಕ್ಷೇತ್ರಗಳು, ಮೂರು ಲೋಕಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶವು ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ನೀಡಿದ ಉತ್ತರವಾಗಿದೆ.

ರೈತ ವಿರೋಧಿ ಕಾಯ್ದೆಗಳಿಗೆ ಉತ್ತರವನ್ನು ಉಪಚುನಾವಣೆಯ ಮೂಲಕ ಜನತೆ ನೀಡಿದ್ದಾರೆ. ಇದು ಬಿಜೆಪಿಗೆ ಎಚ್ಚರಿಕೆಯ ಕರೆಘಂಟೆಯಾಗಿದೆ. ಹರಿಯಾಣ, ಹಿಮಾಚಲ ಪ್ರದೇಶ, ರಾಜಸ್ತಾನದ ಫಲಿತಾಂಶಗಳು ಬಿಜೆಪಿಯ ವಿರುದ್ಧವಾಗಿ ಬಂದಿವೆ ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿದೆ.

ಮೂರು ಲೋಕಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಒಂದನ್ನು ಮಾತ್ರ ಬಿಜೆಪಿ ಗೆದ್ದಿದೆ. ರಾಜಸ್ಥಾನ, ಹಿಮಾಚಲ ಪ್ರದೇಶ, ಹರಿಯಾಣ ಥರದ ರಾಜ್ಯಗಳು ವಿಧಾನಸಭಾ ಉಪಚುನಾಣೆಯಲ್ಲಿ ತಕ್ಕ ಉತ್ತರವನ್ನು ಬಿಜೆಪಿಗೆ ನೀಡಿವೆ. ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ನಡೆಸುತ್ತಿರುವ ಚಳವಳಿಗೆ ಜನತೆ ಬೆಂಬಲ ನೀಡಿದ್ದಾರೆ.

“ಎಲ್ಲದಕ್ಕೂ ಮಾತುಕತೆಯೊಂದೇ ಪರಿಹಾರ, ಇದು ರೈತರ ಹೋರಾಟಕ್ಕೂ ಅನ್ವಯಿಸುತ್ತದೆ” ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ನೀಡಿರುವ ಹೇಳಿಕೆಗೆ ಎಸ್‌ಕೆಎಂ ಸಹಮತ ವ್ಯಕ್ತಪಡಿಸಿದೆ.

ಆದರೆ, ಪ್ರತಿಭಟನಾನಿರತ ರೈತರೊಂದಿಗೆ ಮಾತುಕತೆ ಪುನರಾರಂಭಿಸಲು ಬಿಜೆಪಿ ಸಿದ್ಧವಿಲ್ಲ. ಕೊನೆಯ ಸುತ್ತಿನ ಮಾತುಕತೆಯು ಜನವರಿ 22, 2021ರಂದು ‌ಆಯಿತು. ಇದರ ನಂತರದಲ್ಲಿ ಮತ್ತೆ ಮಾತುಕತೆ ನಡೆಸಲು ಸರ್ಕಾರ ನಿರಾಕರಿಸಿದೆ.

ಇದನ್ನೂ ಓದಿರಿ: ಶೃಂಗಸಭೆ: ಮೋದಿ ಭೇಟಿ ವಿರೋಧಿಸಿ ಅನಿವಾಸಿ ಭಾರತೀಯರ ಪ್ರತಿಭಟನೆ

ಅಷ್ಟೇ ಅಲ್ಲದೆ ಖಟ್ಟರ್ ಸೇರಿದಂತೆ ಹಲವಾರು ಬಿಜೆಪಿ ನಾಯಕರು ರೈತರ ವಿರುದ್ಧ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಸಾಧ್ಯವಿರುವ ಎಲ್ಲ ರೀತಿಯಲ್ಲಿ ಚಳವಳಿಯನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ.

ಹತ್ತಿ ಬೆಳೆಗೆ ಭಾರೀ ಕೀಟಗಳ ಹಾವಳಿಯಿಂದ ಉಂಟಾದ ಹಾನಿಯು ಪಂಜಾಬ್ ಮತ್ತು ಹರಿಯಾಣದ ಹಲವಾರು ಜಿಲ್ಲೆಗಳಲ್ಲಿ ಹತ್ತಿ ರೈತರಿಗೆ ವ್ಯಾಪಕ ನಷ್ಟವನ್ನು ತಂದಿವೆ. ಇಂತಹ ನಷ್ಟ ಅನುಭವಿಸುತ್ತಿರುವ ರೈತರ ಹಲವಾರು ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿವೆ. ಎಕರೆಗೆ 60,000 ರೂ. ನಷ್ಟವಾಗಿದೆ. ಹಾನಿಯ ಪ್ರಮಾಣವನ್ನು ವರ್ಗೀಕರಿಸಿ ಎಕರೆಗೆ ₹ 2000ರಿಂದ ₹ 12,000ರವರೆಗೆ ಸರ್ಕಾರ ಪರಿಹಾರ ನೀಡುತ್ತದೆ. ನಷ್ಟದ ಒಂದು ಭಾಗವನ್ನೂ ಪರಿಹಾರದ ಹಣ ಭರಿಸುವುದಿಲ್ಲ.

ನಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ಪ್ಯಾಕೇಜ್‌ಗಾಗಿ ಪಂಜಾಬ್ ರೈತ ಸಂಘಗಳು ಹೋರಾಟ ಮುಂದುವರಿಸಿವೆ. ಡಿಎಪಿಯಂತಹ ರಸಗೊಬ್ಬರದ ಕೊರತೆಯೂ ತಲೆದೋರಿದೆ. ಈ ಬಿಕ್ಕಟ್ಟನ್ನು ಬಗೆಹರಿಸಲು ಎಸ್‌ಕೆಎಂ ಒತ್ತಾಯಿಸಿದೆ. ಬಿಕ್ಕಟ್ಟನ್ನು ನಿವಾರಿಸಲು ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಎಸ್‌ಕೆಎಂ ಒತ್ತಾಯಿಸುತ್ತದೆ.

ಉಪಚುನಾವಣೆಯ ಫಲಿತಾಂಶ ಹೀಗಿದೆ:

1. ಆಂಧ್ರಪ್ರದೇಶ

  • ಬದ್ವೇಲ್‌ ಕ್ಷೇತ್ರ – ವೈಎಸ್‌ಆರ್‌‌ ಕಾಂಗ್ರೆಸ್‌

ಕ್ಷೇತ್ರವು ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಹಿಡಿತದಲ್ಲಿತ್ತು. ಉಪಚುನಾವಣೆಯಲ್ಲಿ ತನ್ನಲ್ಲೇ ಉಳಿಸಿಕೊಂಡಿದೆ.

2. ಅಸ್ಸಾಂ

  • ಭನಾನಿಪುರ್‌ – ಬಿಜೆಪಿ
  • ಗೋಸಾಯಿಗಾಂವ್ –  ಯುಪಿಪಿಎಲ್‌ – (ಬಿಜೆಪಿ ಮೈತ್ರಿ ಪಕ್ಷ)
  • ಮರಿಯಾನಿ – ಬಿಜೆಪಿ
  • ತಮುಲ್‌ಪುರ್‌ – ಯುಪಿಪಿಎಲ್‌ – (ಬಿಜೆಪಿ ಮೈತ್ರಿ ಪಕ್ಷ)
  • ಥೌರಾ – ಬಿಜೆಪಿ

ಬಿಜೆಪಿ ಗೆದ್ದ ಮೂರು ಕ್ಷೇತ್ರಗಳಲ್ಲಿ ಎರಡು ಕಾಂಗ್ರೆಸ್‌‌ನ ಹಿಡಿತದಲ್ಲಿದ್ದ ಕ್ಷೇತ್ರಗಳಾಗಿದ್ದು, ಒಂದು ಕ್ಷೇತ್ರ AIUDF ಹಿಡಿತದಲ್ಲಿದ್ದವು. ಯುಪಿಪಿಎಲ್‌ ಗೆದ್ದ ಎರಡು ಕ್ಷೇತ್ರಗಳಲ್ಲಿ ಒಂದು ತನ್ನದೇ ಕ್ಷೇತ್ರವನ್ನು ಉಳಿಸಿಕೊಂಡಿದ್ದರೆ, ಮತ್ತೊಂದನ್ನು ಬೇರೆ ಪಕ್ಷದಿಂದ ತನ್ನ ತೆಕ್ಕೆಗೆ ಪಡೆದು ಕೊಂಡಿದೆ.

ಇದನ್ನೂ ಓದಿ: ನಾನೇಕೆ ಆರ್ ಎಸ್ ಎಸ್ ತೊರೆದೆ ಸರಣಿ; ದೇಶಕ್ಕಾಗಿ ಸಂಘದ ಸಖ್ಯ ಬಿಟ್ಟೆ!

3. ಬಿಹಾರ

  • ಕುಶೇಶ್ವರ ಆಸ್ಥಾನ – JDU
  • ತಾರಾಪುರ – JDU

ಕುಶೇಶ್ವರ ಆಸ್ಥಾನ ಕ್ಷೇತ್ರದಲ್ಲಿ ಜೆಡಿಯು ತನ್ನ ಕ್ಷೇತ್ರವನ್ನು ಉಳಿಕೊಂಡರೆ, ತಾರಾಪುರದಲ್ಲಿ ಕಳೆದುಕೊಂಡಿದೆ.

4. ಹರಿಯಾಣ

  • ಎಲ್ಲೇನಾಬಾದ್ – INLD ತನ್ನದೇ ಕ್ಷೇತ್ರವನ್ನು ಮತ್ತೇ ಗೆದ್ದುಕೊಂಡಿದೆ.

5. ಹಿಮಾಚಲ ಪ್ರದೇಶ

  • ಅರ್ಕಿ – ಕಾಂಗ್ರೆಸ್
  • ಫತೇಪುರ್ – ಕಾಂಗ್ರೆಸ್
  • ಜುಟ್ಟಬ್ – ಕಾಂಗ್ರೆಸ್

ಅರ್ಕಿ ಮತ್ತು ಫೆತೇಪುರ್‌ನಲ್ಲಿ ಕಾಂಗ್ರೆಸ್ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದರೆ, ಜುಟ್ಟಬ್‌ನಲ್ಲಿ ಹೊಸದಾಗಿ ಕ್ಷೇತ್ರವನ್ನು ಗೆದ್ದುಕೊಂಡಿದೆ.

6. ಕರ್ನಾಟಕ

  • ಹಾನಗಲ್‌ – ಕಾಂಗ್ರೆಸ್
  • ಸಿಂದಗಿ – ಬಿಜೆಪಿ

ಕರ್ನಾಟಕದಲ್ಲಿ ಬಿಜೆಪಿ ವಶದಲ್ಲಿ ಇದ್ದ ಹಾನಗಲ್‌ ಕ್ಷೇತ್ರವನ್ನು ಕಾಂಗ್ರೆಸ್ ವಶಪಡಿಸಿಕೊಂಡರೆ, ಜೆಡಿಎಸ್‌ ವಶದಲ್ಲಿದ್ದ ಸಿಂದಗಿಯನ್ನು ಬಿಜೆಪಿ ಗೆದ್ದುಕೊಂಡಿದೆ.

ಇದನ್ನೂ ಓದಿ: ಅಸ್ಸಾಂ: ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಸೋಲು; ಆಪರೇಷನ್‌ ಕಮಲಕ್ಕೆ ಜಯ!

7. ಮಧ್ಯಪ್ರದೇಶ

  • ಜೋಬತ್ – ಬಿಜೆಪಿ
  • ಪೃಥ್ವಿಪುರ – ಬಿಜೆಪಿ
  • ರಾಯಗಾಂವ್ – ಕಾಂಗ್ರೆಸ್

ಜೋಬತ್ ಮತ್ತು ಪೃಥ್ವಿಪುರ ಕ್ಷೇತ್ರವನ್ನು ಬಿಜೆಪಿ ಬೇರೆ ಪಕ್ಷದಿಂದ ವಶಪಡಿಸಿಕೊಂಡರೆ, ಕಾಂಗ್ರೆಸ್‌ ರಾಯಗಾಂವ್ ಕ್ಷೇತ್ರವನ್ನು ಅನ್ನು ಹೊಸದಾಗ ಗೆದ್ದುಕೊಂಡಿದೆ.

8. ಮಹಾರಾಷ್ಟ್ರ

  • ದೆಗ್ಲೂರ್ – ಕಾಂಗ್ರೆಸ್

ಈ ಕ್ಷೇತ್ರವನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ತನ್ನಲ್ಲೇ ಉಳಿಸಕೊಂಡಿದೆ.

9. ಮೇಘಾಲಯ

  • ಮಾವ್‌ಫ್ಲಾಂಗ್‌ – ಯುನೈಟೆಡ್‌ ಡೆಮಾಕ್ರಟಿಕ್ ಪಾರ್ಟಿ
  • ಮೌರಿಂಗ್‌ಕೆಂಗ್ – ಯುನೈಟೆಡ್‌ ಡೆಮಾಕ್ರಟಿಕ್ ಪಾರ್ಟಿ
  • ರಾಜಬಾಲಾ – ನ್ಯಾಶನಲ್‌ ಪೀಪಲ್ಸ್‌ ಪಾರ್ಟಿ

10. ಮಿಜೋರಾಂ

  • ಟುಯಿರಿಯಲ್ – ಮಿಜೋ ನ್ಯಾಶನಲ್ ಫ್ರಂಟ್

ಬೇರೆ ಪಕ್ಷದಿಂದ ಕ್ಷೇತ್ರವನ್ನು ಗೆದ್ದುಕೊಂಡಿದೆ.

ಇದನ್ನೂ ಓದಿ: ಹರಿಯಾಣ ಉಪಚುನಾವಣೆ: ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜೀನಾಮೆ ಕೊಟ್ಟಿದ್ದ ಅಭಯ್ ಚೌಟಾಲಾಗೆ ಗೆಲುವು

11. ನಾಗಾಲ್ಯಾಂಡ್

  • ಶಮ್ಟೋರ್ – ನ್ಯಾಶನಲಿಸ್ಟಿಕ್‌ ಡೆಮಾಕ್ರಟಿಕ್ ಪ್ರೊಗ್ರೇಸಿವ್ ಪಾರ್ಟಿ

ಅವಿರೋಧ ಆಯ್ಕೆ!

12. ರಾಜಸ್ಥಾನ

  • ಧರಿಯಾವಾಡ – ಕಾಂಗ್ರೆಸ್
  • ವಲ್ಲಭನಗರ – ಕಾಂಗ್ರೆಸ್

ಇಲ್ಲಿ ಕಾಂಗ್ರೆಸ್ ಒಂದು ತನ್ನದೇ ಕ್ಷೇತ್ರನ್ನು ಉಳಿಸಿಕೊಂಡು, ಮತ್ತೊಂದು ಕ್ಷೇತ್ರವನ್ನು ಬೇರೆ ಪಕ್ಷದಿಂದ ವಶಕ್ಕೆ ಪಡೆದಿದೆ.

13. ತೆಲಂಗಾಣ

  • ಹುಜೂರಾಬಾದ್ – ಬಿಜೆಪಿ

ಟಿಆರ್‌ಎಸ್‌ ಪಕ್ಷದಿಂದ ಬಿಜೆಪಿಯು ಈ ಕ್ಷೇತ್ರವನ್ನು ಗೆದ್ದುಕೊಂಡಿದೆ.

14. ಪಶ್ಚಿಮ ಬಂಗಾಳ

  • ದೀನ್‌ಹಟಾ – ಟಿಎಂಸಿ
  • ಗೋಸಾಬ – ಟಿಎಂಸಿ
  • ಖಾರ್ದಹೊ – ಟಿಎಂಸಿ
  • ಶಾಂತಿಪುರ – ಟಿಎಂಸಿ

ಇಲ್ಲಿ ಎರಡು ಕ್ಷೇತ್ರಗಳನ್ನು ಟಿಎಂಸಿ ತನ್ನದೇ ಕ್ಷೇತ್ರವನ್ನು ಗೆದ್ದುಕೊಂಡು, ಮತ್ತೆರೆಡು ಕ್ಷೇತ್ರವನ್ನು ಬಿಜೆಪಿಯಿಂದ ಗೆದ್ದುಕೊಂಡಿದೆ.

ಇದನ್ನೂ ಓದಿ: ಚುನಾವಣೆ ವಿಶ್ಲೇಷಣೆ: ಹಾನಗಲ್‌ನಲ್ಲಿ ಬಿಜೆಪಿ ಸೋತಿದ್ದೇಕೆ? ಕ್ಷೇತ್ರದ ಮತದಾರರ ವೈಶಿಷ್ಟ್ಯವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...