Homeಕರ್ನಾಟಕಕ್ಯಾಮೆರಾ ನಿರ್ಬಂಧ ಆದೇಶ ಸಿಎಂ ಗಮನಕ್ಕೆ ಬಂದಿತ್ತು: ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹೇಳಿದ್ದೇನು?

ಕ್ಯಾಮೆರಾ ನಿರ್ಬಂಧ ಆದೇಶ ಸಿಎಂ ಗಮನಕ್ಕೆ ಬಂದಿತ್ತು: ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹೇಳಿದ್ದೇನು?

“ನನ್ನ ಗಮನಕ್ಕೆ ಬಾರದೆ ಆದೇಶ ಮಾಡಲಾಗಿದೆ” ಎಂದು ಸಿಎಂ ಬೊಮ್ಮಾಯಿ ಹೇಳಿದ್ದರು. ಆದರೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಮಾಡಿರುವ ಭಾಷಣ ಬೇರೆಯೇ ಕಥೆ ಹೇಳುತ್ತಿದೆ!

- Advertisement -
- Advertisement -

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ, ವಿಡಿಯೊ ತೆಗೆಯುವಂತಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿ ನಗೆಪಾಟಲಿಗೀಡಾಯಿತು. ಶುಕ್ರವಾರ ತಡರಾತ್ರಿ ಆದೇಶವನ್ನು ರದ್ದು ಮಾಡಿಯೂ ಆಯಿತು. ನಂತರದಲ್ಲಿ ಮಾಧ್ಯಮಗಳ ಮುಂದೆ ಬಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, “ನನ್ನ ಗಮನಕ್ಕೆ ಬಾರದೆ ನಿರ್ಬಂಧ ಆದೇಶ ಹೊರಬಿದ್ದಿದೆ” ಎಂದು ಹೇಳಿಕೆ ನೀಡಿದ್ದರು.

ನಂತರದ ಬೆಳವಣಿಗೆಯಲ್ಲಿ, “ಸಿಎಂ ಸೂಚನೆಯ ಮೇರೆಗೆಯೇ ಆದೇಶ ಹೊರಡಿಸಲಾಗಿದೆ” ಎಂಬ ಸಂಗತಿ ಹೊರಬಿದ್ದಿದೆ.

ಈ ಕುರಿತು ವರದಿ ಮಾಡಿರುವ ‘ದಿ ಫೈಲ್‌’ ತನಿಖಾ ಜಾಲತಾಣ, “ಆಡಳಿತ ಸುಧಾರಣಾ ಇಲಾಖೆಯು ಶುಕ್ರವಾರ ಹೊರಡಿಸಿದ್ದ ಆದೇಶವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನದಲ್ಲಿತ್ತು” ಎಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ಮನವಿ ಮೇರೆಗೆ ಆದೇಶ ಹೊರಡಿಸಲಾಗಿದೆ. ಕರ್ನಾಟಕ ರಾಷ್ಟಸಮಿತಿಯ ಕಾರ್ಯಕರ್ತರು ಜಿಲ್ಲಾ ತಾಲೂಕು ಕಚೇರಿ, ಪೊಲೀಸ್‌ ಠಾಣೆ, ಜಿಲ್ಲಾ ತಾಲೂಕು ಆಸ್ಪತ್ರೆಗಳಿಗೆ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ವಿಡಿಯೋ ಲೈವ್ ಮಾಡುತ್ತಿರುವುದನ್ನೂ ಆಲಮಟ್ಟಿಯ ಕಾರ್ಯಕ್ರಮವೊಂದರಲ್ಲಿ ಮಾಡಿರುವ ಭಾಷಣದಲ್ಲಿ ಪ್ರಸ್ತಾಪಿಸಿರುವ ಷಡಕ್ಷರಿ ಅವರು ಮುಖ್ಯಮಂತ್ರಿಯವರೊಂದಿಗೆ ಇದನ್ನು ಪ್ರಸ್ತಾಪಿಸಿದ್ದರು. ಹಾಗೆಯೇ ಅವರ ಗಮನಕ್ಕೆ ತಂದೇ ಆದೇಶ ಹೊರಡಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆಲಮಟ್ಟಿಯಲ್ಲಿ ನಡೆದಿದ್ದ ಸ್ವಚ್ಛತಾ ಕಾರ್ಯಕ್ರಮದ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರು ಮುಖ್ಯಮಂತ್ರಿಯೊಂದಿಗೆ ಕಾರಿನಲ್ಲಿ ಹೋಗುವಾಗ ಈ ವಿಚಾರವನ್ನು ಅವರ ಗಮನಕ್ಕೆ ತಂದು ಆದೇಶ ಮಾಡಿಸಲಾಗಿದೆ ಎಂದು ನೌಕರರ ಕಾರ್ಯಕ್ರಮ ಭಾಷಣದಲ್ಲಿ ಬಹಿರಂಗಪಡಿಸಿದ್ದಾರೆ ಎಂದು ‘ದಿ ಫೈಲ್‌’ ಹಾಗೂ ‘ವಾರ್ತಾ ಭಾರತಿ’ಯಲ್ಲಿ ವರದಿಯಾಗಿದೆ.

ಆಡಿಯೋದಲ್ಲೇನಿದೆ?

“ಈಗೊಂದು ಆರ್ಡರ್ ಮಾಡಿಸ್ದೆ. ಈಗಸ್ಟೇ ವಾಟ್ಸ್‌ಅಪ್‌ನಲ್ಲಿ ಬಂತು. ಕಳೆದ ಒಂದು ತಿಂಗಳಿಂದಲೂ ನಿರಂತರ ಪ್ರಯತ್ನ ಮಾಡಿದ್ದೇನೆ. ಇನ್ಮುಂದೆ ನಮ್ಮ ರಾಜ್ಯದ ಯಾವುದೇ ಸರ್ಕಾರಿ ಕಚೇರಿ, ಶಾಲೆಗಳಲ್ಲಿ ಯಾವುದೇ ಖಾಸಗಿ ವ್ಯಕ್ತಿ ಬಂದು ಫೋಟೋ ತೆಗಿಯಂಗಿಲ್ಲ. ವಿಡಿಯೋ ಶೂಟ್ ಮಾಡಂಗಿಲ್ಲ. ಮೇಲಾಧಿಕಾರಿಗಳ ಅನುಮತಿ ಇಲ್ಲದೆಯೇ ಯಾವುದೇ ಕಚೇರಿಗಳಿಗೆ ಹೋಗಿ ಆ ರೀತಿಯ ಪ್ರಕ್ರಿಯೆಗಳನ್ನು ಮಾಡಬಾರದು ಎಂದು ಸರ್ಕಾರ ನಿರ್ಬಂಧಿಸಿ ಆದೇಶ ಮಾಡಿದೆ” ಎನ್ನುತ್ತಾರೆ ಷಡಕ್ಷರಿ.

ಇದನ್ನೂ ಓದಿರಿ: ಇದು ‘ಮಧ್ಯರಾತ್ರಿ’ ಆದೇಶವಲ್ಲ, ‘ಮದ್ಯರಾತ್ರಿ’ ಆದೇಶ: ಸರ್ಕಾರದ ಎಡವಟ್ಟಿಗೆ ಜನರ ವ್ಯಂಗ್ಯ

“ಬಹುಶಃ ಯೋಚನೆ ಮಾಡಿ. ಬಹಳಷ್ಟು ಹೆಣ್ಮಕ್ಳು ಹೆಡ್‌ಪೀಸ್‌ಗಳಲ್ಲಿ, ತಾಲೂಕು ಆಫೀಸ್‌ಗಳಲ್ಲಿ ಜಿಲ್ಲಾ ಪಂಚಾಯ್ತಿಗಳಲ್ಲಿ, ರೆವಿನ್ಯೂ ಅಫೀಸ್‌ಗಳಲ್ಲಿ, ಜಿಲ್ಲಾ ಕಚೇರಿಗಳಲ್ಲಿ ಕೆಎಸ್‌ಆರ್ ಪಾರ್ಟಿ, ಸಂಘ ಸಂಸ್ಥೆಗಳು, ವ್ಯಕ್ತಿ ಆಧರಿತ ಸಂಘಟನೆಗಳು ಬರ್ತಾವೆ. ಫೋಟೋ ತೆಗಿತಾರೆ, ವಿಡಿಯೋ ಮಾಡ್ತಾರೆ. ಸ್ವಾಭಿಮಾನದ ಹಕ್ಕುಗಳನ್ನು ಕಿತ್‌ಕೊಳ್ಳುವಂತ ಕೆಲ್ಸಗಳು ಆ ಸಂದರ್ಭದಲ್ಲಿ ಆಗ್ತಾವೆ. ಲಾಸ್ಟ್ ವೀಕ್‌ನಲ್ಲಿ ನಾನು ಮುಖ್ಯಮಂತ್ರಿ ಜತೆ ಕಾರಿನಲ್ಲಿ ಹೋಗುವಾಗ ಮಾನ್ಯ ಮುಖ್ಯಮಂತ್ರಿಗಳಲ್ಲಿ ವಿನಂತಿ ಮಾಡ್ಡೆ. ಸಾರ್ ಈ ಆದೇಶ ಮಾಡೇಕು. ಮುಜುಗರ ಆಗ್ತಾ ಇದೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಆಗ್ತಾ ಇದೆ ಎಂದಾಗ ಮಾನ್ಯ ಮುಖ್ಯಮಂತ್ರಿಗಳು, ಆದೇಶ ಮಾಡಿದ್ರು” ಎಂದು ಭಾಷಣದಲ್ಲಿ ದಾಖಲಾಗಿದೆ. ಷಡಕ್ಷರಿಯವರ ಮಾತುಗಳಿಗೆ ಪ್ರೇಕ್ಷಕರು ಚಪ್ಪಾಳೆಯನ್ನೂ ಹೊಡೆದಿದ್ದಾರೆ.

“ಹಾಗಾದರೆ ಮುಖ್ಯಮಂತ್ರಿಯವರು ಮಾಧ್ಯಮಗಳ ಎದುರು ಸುಳ್ಳು ಹೇಳಿದರೆ?” ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಎದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...