Homeಕರ್ನಾಟಕಕ್ಯಾಮೆರಾ ನಿರ್ಬಂಧ ಆದೇಶ ಸಿಎಂ ಗಮನಕ್ಕೆ ಬಂದಿತ್ತು: ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹೇಳಿದ್ದೇನು?

ಕ್ಯಾಮೆರಾ ನಿರ್ಬಂಧ ಆದೇಶ ಸಿಎಂ ಗಮನಕ್ಕೆ ಬಂದಿತ್ತು: ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹೇಳಿದ್ದೇನು?

“ನನ್ನ ಗಮನಕ್ಕೆ ಬಾರದೆ ಆದೇಶ ಮಾಡಲಾಗಿದೆ” ಎಂದು ಸಿಎಂ ಬೊಮ್ಮಾಯಿ ಹೇಳಿದ್ದರು. ಆದರೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಮಾಡಿರುವ ಭಾಷಣ ಬೇರೆಯೇ ಕಥೆ ಹೇಳುತ್ತಿದೆ!

- Advertisement -
- Advertisement -

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ, ವಿಡಿಯೊ ತೆಗೆಯುವಂತಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿ ನಗೆಪಾಟಲಿಗೀಡಾಯಿತು. ಶುಕ್ರವಾರ ತಡರಾತ್ರಿ ಆದೇಶವನ್ನು ರದ್ದು ಮಾಡಿಯೂ ಆಯಿತು. ನಂತರದಲ್ಲಿ ಮಾಧ್ಯಮಗಳ ಮುಂದೆ ಬಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, “ನನ್ನ ಗಮನಕ್ಕೆ ಬಾರದೆ ನಿರ್ಬಂಧ ಆದೇಶ ಹೊರಬಿದ್ದಿದೆ” ಎಂದು ಹೇಳಿಕೆ ನೀಡಿದ್ದರು.

ನಂತರದ ಬೆಳವಣಿಗೆಯಲ್ಲಿ, “ಸಿಎಂ ಸೂಚನೆಯ ಮೇರೆಗೆಯೇ ಆದೇಶ ಹೊರಡಿಸಲಾಗಿದೆ” ಎಂಬ ಸಂಗತಿ ಹೊರಬಿದ್ದಿದೆ.

ಈ ಕುರಿತು ವರದಿ ಮಾಡಿರುವ ‘ದಿ ಫೈಲ್‌’ ತನಿಖಾ ಜಾಲತಾಣ, “ಆಡಳಿತ ಸುಧಾರಣಾ ಇಲಾಖೆಯು ಶುಕ್ರವಾರ ಹೊರಡಿಸಿದ್ದ ಆದೇಶವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನದಲ್ಲಿತ್ತು” ಎಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ಮನವಿ ಮೇರೆಗೆ ಆದೇಶ ಹೊರಡಿಸಲಾಗಿದೆ. ಕರ್ನಾಟಕ ರಾಷ್ಟಸಮಿತಿಯ ಕಾರ್ಯಕರ್ತರು ಜಿಲ್ಲಾ ತಾಲೂಕು ಕಚೇರಿ, ಪೊಲೀಸ್‌ ಠಾಣೆ, ಜಿಲ್ಲಾ ತಾಲೂಕು ಆಸ್ಪತ್ರೆಗಳಿಗೆ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ವಿಡಿಯೋ ಲೈವ್ ಮಾಡುತ್ತಿರುವುದನ್ನೂ ಆಲಮಟ್ಟಿಯ ಕಾರ್ಯಕ್ರಮವೊಂದರಲ್ಲಿ ಮಾಡಿರುವ ಭಾಷಣದಲ್ಲಿ ಪ್ರಸ್ತಾಪಿಸಿರುವ ಷಡಕ್ಷರಿ ಅವರು ಮುಖ್ಯಮಂತ್ರಿಯವರೊಂದಿಗೆ ಇದನ್ನು ಪ್ರಸ್ತಾಪಿಸಿದ್ದರು. ಹಾಗೆಯೇ ಅವರ ಗಮನಕ್ಕೆ ತಂದೇ ಆದೇಶ ಹೊರಡಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆಲಮಟ್ಟಿಯಲ್ಲಿ ನಡೆದಿದ್ದ ಸ್ವಚ್ಛತಾ ಕಾರ್ಯಕ್ರಮದ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರು ಮುಖ್ಯಮಂತ್ರಿಯೊಂದಿಗೆ ಕಾರಿನಲ್ಲಿ ಹೋಗುವಾಗ ಈ ವಿಚಾರವನ್ನು ಅವರ ಗಮನಕ್ಕೆ ತಂದು ಆದೇಶ ಮಾಡಿಸಲಾಗಿದೆ ಎಂದು ನೌಕರರ ಕಾರ್ಯಕ್ರಮ ಭಾಷಣದಲ್ಲಿ ಬಹಿರಂಗಪಡಿಸಿದ್ದಾರೆ ಎಂದು ‘ದಿ ಫೈಲ್‌’ ಹಾಗೂ ‘ವಾರ್ತಾ ಭಾರತಿ’ಯಲ್ಲಿ ವರದಿಯಾಗಿದೆ.

ಆಡಿಯೋದಲ್ಲೇನಿದೆ?

“ಈಗೊಂದು ಆರ್ಡರ್ ಮಾಡಿಸ್ದೆ. ಈಗಸ್ಟೇ ವಾಟ್ಸ್‌ಅಪ್‌ನಲ್ಲಿ ಬಂತು. ಕಳೆದ ಒಂದು ತಿಂಗಳಿಂದಲೂ ನಿರಂತರ ಪ್ರಯತ್ನ ಮಾಡಿದ್ದೇನೆ. ಇನ್ಮುಂದೆ ನಮ್ಮ ರಾಜ್ಯದ ಯಾವುದೇ ಸರ್ಕಾರಿ ಕಚೇರಿ, ಶಾಲೆಗಳಲ್ಲಿ ಯಾವುದೇ ಖಾಸಗಿ ವ್ಯಕ್ತಿ ಬಂದು ಫೋಟೋ ತೆಗಿಯಂಗಿಲ್ಲ. ವಿಡಿಯೋ ಶೂಟ್ ಮಾಡಂಗಿಲ್ಲ. ಮೇಲಾಧಿಕಾರಿಗಳ ಅನುಮತಿ ಇಲ್ಲದೆಯೇ ಯಾವುದೇ ಕಚೇರಿಗಳಿಗೆ ಹೋಗಿ ಆ ರೀತಿಯ ಪ್ರಕ್ರಿಯೆಗಳನ್ನು ಮಾಡಬಾರದು ಎಂದು ಸರ್ಕಾರ ನಿರ್ಬಂಧಿಸಿ ಆದೇಶ ಮಾಡಿದೆ” ಎನ್ನುತ್ತಾರೆ ಷಡಕ್ಷರಿ.

ಇದನ್ನೂ ಓದಿರಿ: ಇದು ‘ಮಧ್ಯರಾತ್ರಿ’ ಆದೇಶವಲ್ಲ, ‘ಮದ್ಯರಾತ್ರಿ’ ಆದೇಶ: ಸರ್ಕಾರದ ಎಡವಟ್ಟಿಗೆ ಜನರ ವ್ಯಂಗ್ಯ

“ಬಹುಶಃ ಯೋಚನೆ ಮಾಡಿ. ಬಹಳಷ್ಟು ಹೆಣ್ಮಕ್ಳು ಹೆಡ್‌ಪೀಸ್‌ಗಳಲ್ಲಿ, ತಾಲೂಕು ಆಫೀಸ್‌ಗಳಲ್ಲಿ ಜಿಲ್ಲಾ ಪಂಚಾಯ್ತಿಗಳಲ್ಲಿ, ರೆವಿನ್ಯೂ ಅಫೀಸ್‌ಗಳಲ್ಲಿ, ಜಿಲ್ಲಾ ಕಚೇರಿಗಳಲ್ಲಿ ಕೆಎಸ್‌ಆರ್ ಪಾರ್ಟಿ, ಸಂಘ ಸಂಸ್ಥೆಗಳು, ವ್ಯಕ್ತಿ ಆಧರಿತ ಸಂಘಟನೆಗಳು ಬರ್ತಾವೆ. ಫೋಟೋ ತೆಗಿತಾರೆ, ವಿಡಿಯೋ ಮಾಡ್ತಾರೆ. ಸ್ವಾಭಿಮಾನದ ಹಕ್ಕುಗಳನ್ನು ಕಿತ್‌ಕೊಳ್ಳುವಂತ ಕೆಲ್ಸಗಳು ಆ ಸಂದರ್ಭದಲ್ಲಿ ಆಗ್ತಾವೆ. ಲಾಸ್ಟ್ ವೀಕ್‌ನಲ್ಲಿ ನಾನು ಮುಖ್ಯಮಂತ್ರಿ ಜತೆ ಕಾರಿನಲ್ಲಿ ಹೋಗುವಾಗ ಮಾನ್ಯ ಮುಖ್ಯಮಂತ್ರಿಗಳಲ್ಲಿ ವಿನಂತಿ ಮಾಡ್ಡೆ. ಸಾರ್ ಈ ಆದೇಶ ಮಾಡೇಕು. ಮುಜುಗರ ಆಗ್ತಾ ಇದೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಆಗ್ತಾ ಇದೆ ಎಂದಾಗ ಮಾನ್ಯ ಮುಖ್ಯಮಂತ್ರಿಗಳು, ಆದೇಶ ಮಾಡಿದ್ರು” ಎಂದು ಭಾಷಣದಲ್ಲಿ ದಾಖಲಾಗಿದೆ. ಷಡಕ್ಷರಿಯವರ ಮಾತುಗಳಿಗೆ ಪ್ರೇಕ್ಷಕರು ಚಪ್ಪಾಳೆಯನ್ನೂ ಹೊಡೆದಿದ್ದಾರೆ.

“ಹಾಗಾದರೆ ಮುಖ್ಯಮಂತ್ರಿಯವರು ಮಾಧ್ಯಮಗಳ ಎದುರು ಸುಳ್ಳು ಹೇಳಿದರೆ?” ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಎದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...