Homeಕರ್ನಾಟಕಕ್ಯಾಮೆರಾ ನಿರ್ಬಂಧ ಆದೇಶ ಸಿಎಂ ಗಮನಕ್ಕೆ ಬಂದಿತ್ತು: ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹೇಳಿದ್ದೇನು?

ಕ್ಯಾಮೆರಾ ನಿರ್ಬಂಧ ಆದೇಶ ಸಿಎಂ ಗಮನಕ್ಕೆ ಬಂದಿತ್ತು: ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹೇಳಿದ್ದೇನು?

“ನನ್ನ ಗಮನಕ್ಕೆ ಬಾರದೆ ಆದೇಶ ಮಾಡಲಾಗಿದೆ” ಎಂದು ಸಿಎಂ ಬೊಮ್ಮಾಯಿ ಹೇಳಿದ್ದರು. ಆದರೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಮಾಡಿರುವ ಭಾಷಣ ಬೇರೆಯೇ ಕಥೆ ಹೇಳುತ್ತಿದೆ!

- Advertisement -
- Advertisement -

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ, ವಿಡಿಯೊ ತೆಗೆಯುವಂತಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿ ನಗೆಪಾಟಲಿಗೀಡಾಯಿತು. ಶುಕ್ರವಾರ ತಡರಾತ್ರಿ ಆದೇಶವನ್ನು ರದ್ದು ಮಾಡಿಯೂ ಆಯಿತು. ನಂತರದಲ್ಲಿ ಮಾಧ್ಯಮಗಳ ಮುಂದೆ ಬಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, “ನನ್ನ ಗಮನಕ್ಕೆ ಬಾರದೆ ನಿರ್ಬಂಧ ಆದೇಶ ಹೊರಬಿದ್ದಿದೆ” ಎಂದು ಹೇಳಿಕೆ ನೀಡಿದ್ದರು.

ನಂತರದ ಬೆಳವಣಿಗೆಯಲ್ಲಿ, “ಸಿಎಂ ಸೂಚನೆಯ ಮೇರೆಗೆಯೇ ಆದೇಶ ಹೊರಡಿಸಲಾಗಿದೆ” ಎಂಬ ಸಂಗತಿ ಹೊರಬಿದ್ದಿದೆ.

ಈ ಕುರಿತು ವರದಿ ಮಾಡಿರುವ ‘ದಿ ಫೈಲ್‌’ ತನಿಖಾ ಜಾಲತಾಣ, “ಆಡಳಿತ ಸುಧಾರಣಾ ಇಲಾಖೆಯು ಶುಕ್ರವಾರ ಹೊರಡಿಸಿದ್ದ ಆದೇಶವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನದಲ್ಲಿತ್ತು” ಎಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ಮನವಿ ಮೇರೆಗೆ ಆದೇಶ ಹೊರಡಿಸಲಾಗಿದೆ. ಕರ್ನಾಟಕ ರಾಷ್ಟಸಮಿತಿಯ ಕಾರ್ಯಕರ್ತರು ಜಿಲ್ಲಾ ತಾಲೂಕು ಕಚೇರಿ, ಪೊಲೀಸ್‌ ಠಾಣೆ, ಜಿಲ್ಲಾ ತಾಲೂಕು ಆಸ್ಪತ್ರೆಗಳಿಗೆ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ವಿಡಿಯೋ ಲೈವ್ ಮಾಡುತ್ತಿರುವುದನ್ನೂ ಆಲಮಟ್ಟಿಯ ಕಾರ್ಯಕ್ರಮವೊಂದರಲ್ಲಿ ಮಾಡಿರುವ ಭಾಷಣದಲ್ಲಿ ಪ್ರಸ್ತಾಪಿಸಿರುವ ಷಡಕ್ಷರಿ ಅವರು ಮುಖ್ಯಮಂತ್ರಿಯವರೊಂದಿಗೆ ಇದನ್ನು ಪ್ರಸ್ತಾಪಿಸಿದ್ದರು. ಹಾಗೆಯೇ ಅವರ ಗಮನಕ್ಕೆ ತಂದೇ ಆದೇಶ ಹೊರಡಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆಲಮಟ್ಟಿಯಲ್ಲಿ ನಡೆದಿದ್ದ ಸ್ವಚ್ಛತಾ ಕಾರ್ಯಕ್ರಮದ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರು ಮುಖ್ಯಮಂತ್ರಿಯೊಂದಿಗೆ ಕಾರಿನಲ್ಲಿ ಹೋಗುವಾಗ ಈ ವಿಚಾರವನ್ನು ಅವರ ಗಮನಕ್ಕೆ ತಂದು ಆದೇಶ ಮಾಡಿಸಲಾಗಿದೆ ಎಂದು ನೌಕರರ ಕಾರ್ಯಕ್ರಮ ಭಾಷಣದಲ್ಲಿ ಬಹಿರಂಗಪಡಿಸಿದ್ದಾರೆ ಎಂದು ‘ದಿ ಫೈಲ್‌’ ಹಾಗೂ ‘ವಾರ್ತಾ ಭಾರತಿ’ಯಲ್ಲಿ ವರದಿಯಾಗಿದೆ.

ಆಡಿಯೋದಲ್ಲೇನಿದೆ?

“ಈಗೊಂದು ಆರ್ಡರ್ ಮಾಡಿಸ್ದೆ. ಈಗಸ್ಟೇ ವಾಟ್ಸ್‌ಅಪ್‌ನಲ್ಲಿ ಬಂತು. ಕಳೆದ ಒಂದು ತಿಂಗಳಿಂದಲೂ ನಿರಂತರ ಪ್ರಯತ್ನ ಮಾಡಿದ್ದೇನೆ. ಇನ್ಮುಂದೆ ನಮ್ಮ ರಾಜ್ಯದ ಯಾವುದೇ ಸರ್ಕಾರಿ ಕಚೇರಿ, ಶಾಲೆಗಳಲ್ಲಿ ಯಾವುದೇ ಖಾಸಗಿ ವ್ಯಕ್ತಿ ಬಂದು ಫೋಟೋ ತೆಗಿಯಂಗಿಲ್ಲ. ವಿಡಿಯೋ ಶೂಟ್ ಮಾಡಂಗಿಲ್ಲ. ಮೇಲಾಧಿಕಾರಿಗಳ ಅನುಮತಿ ಇಲ್ಲದೆಯೇ ಯಾವುದೇ ಕಚೇರಿಗಳಿಗೆ ಹೋಗಿ ಆ ರೀತಿಯ ಪ್ರಕ್ರಿಯೆಗಳನ್ನು ಮಾಡಬಾರದು ಎಂದು ಸರ್ಕಾರ ನಿರ್ಬಂಧಿಸಿ ಆದೇಶ ಮಾಡಿದೆ” ಎನ್ನುತ್ತಾರೆ ಷಡಕ್ಷರಿ.

ಇದನ್ನೂ ಓದಿರಿ: ಇದು ‘ಮಧ್ಯರಾತ್ರಿ’ ಆದೇಶವಲ್ಲ, ‘ಮದ್ಯರಾತ್ರಿ’ ಆದೇಶ: ಸರ್ಕಾರದ ಎಡವಟ್ಟಿಗೆ ಜನರ ವ್ಯಂಗ್ಯ

“ಬಹುಶಃ ಯೋಚನೆ ಮಾಡಿ. ಬಹಳಷ್ಟು ಹೆಣ್ಮಕ್ಳು ಹೆಡ್‌ಪೀಸ್‌ಗಳಲ್ಲಿ, ತಾಲೂಕು ಆಫೀಸ್‌ಗಳಲ್ಲಿ ಜಿಲ್ಲಾ ಪಂಚಾಯ್ತಿಗಳಲ್ಲಿ, ರೆವಿನ್ಯೂ ಅಫೀಸ್‌ಗಳಲ್ಲಿ, ಜಿಲ್ಲಾ ಕಚೇರಿಗಳಲ್ಲಿ ಕೆಎಸ್‌ಆರ್ ಪಾರ್ಟಿ, ಸಂಘ ಸಂಸ್ಥೆಗಳು, ವ್ಯಕ್ತಿ ಆಧರಿತ ಸಂಘಟನೆಗಳು ಬರ್ತಾವೆ. ಫೋಟೋ ತೆಗಿತಾರೆ, ವಿಡಿಯೋ ಮಾಡ್ತಾರೆ. ಸ್ವಾಭಿಮಾನದ ಹಕ್ಕುಗಳನ್ನು ಕಿತ್‌ಕೊಳ್ಳುವಂತ ಕೆಲ್ಸಗಳು ಆ ಸಂದರ್ಭದಲ್ಲಿ ಆಗ್ತಾವೆ. ಲಾಸ್ಟ್ ವೀಕ್‌ನಲ್ಲಿ ನಾನು ಮುಖ್ಯಮಂತ್ರಿ ಜತೆ ಕಾರಿನಲ್ಲಿ ಹೋಗುವಾಗ ಮಾನ್ಯ ಮುಖ್ಯಮಂತ್ರಿಗಳಲ್ಲಿ ವಿನಂತಿ ಮಾಡ್ಡೆ. ಸಾರ್ ಈ ಆದೇಶ ಮಾಡೇಕು. ಮುಜುಗರ ಆಗ್ತಾ ಇದೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಆಗ್ತಾ ಇದೆ ಎಂದಾಗ ಮಾನ್ಯ ಮುಖ್ಯಮಂತ್ರಿಗಳು, ಆದೇಶ ಮಾಡಿದ್ರು” ಎಂದು ಭಾಷಣದಲ್ಲಿ ದಾಖಲಾಗಿದೆ. ಷಡಕ್ಷರಿಯವರ ಮಾತುಗಳಿಗೆ ಪ್ರೇಕ್ಷಕರು ಚಪ್ಪಾಳೆಯನ್ನೂ ಹೊಡೆದಿದ್ದಾರೆ.

“ಹಾಗಾದರೆ ಮುಖ್ಯಮಂತ್ರಿಯವರು ಮಾಧ್ಯಮಗಳ ಎದುರು ಸುಳ್ಳು ಹೇಳಿದರೆ?” ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಎದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...