Homeಕರ್ನಾಟಕಕ್ಯಾಮೆರಾ ನಿರ್ಬಂಧ ಆದೇಶ ಸಿಎಂ ಗಮನಕ್ಕೆ ಬಂದಿತ್ತು: ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹೇಳಿದ್ದೇನು?

ಕ್ಯಾಮೆರಾ ನಿರ್ಬಂಧ ಆದೇಶ ಸಿಎಂ ಗಮನಕ್ಕೆ ಬಂದಿತ್ತು: ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹೇಳಿದ್ದೇನು?

“ನನ್ನ ಗಮನಕ್ಕೆ ಬಾರದೆ ಆದೇಶ ಮಾಡಲಾಗಿದೆ” ಎಂದು ಸಿಎಂ ಬೊಮ್ಮಾಯಿ ಹೇಳಿದ್ದರು. ಆದರೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಮಾಡಿರುವ ಭಾಷಣ ಬೇರೆಯೇ ಕಥೆ ಹೇಳುತ್ತಿದೆ!

- Advertisement -
- Advertisement -

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ, ವಿಡಿಯೊ ತೆಗೆಯುವಂತಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿ ನಗೆಪಾಟಲಿಗೀಡಾಯಿತು. ಶುಕ್ರವಾರ ತಡರಾತ್ರಿ ಆದೇಶವನ್ನು ರದ್ದು ಮಾಡಿಯೂ ಆಯಿತು. ನಂತರದಲ್ಲಿ ಮಾಧ್ಯಮಗಳ ಮುಂದೆ ಬಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, “ನನ್ನ ಗಮನಕ್ಕೆ ಬಾರದೆ ನಿರ್ಬಂಧ ಆದೇಶ ಹೊರಬಿದ್ದಿದೆ” ಎಂದು ಹೇಳಿಕೆ ನೀಡಿದ್ದರು.

ನಂತರದ ಬೆಳವಣಿಗೆಯಲ್ಲಿ, “ಸಿಎಂ ಸೂಚನೆಯ ಮೇರೆಗೆಯೇ ಆದೇಶ ಹೊರಡಿಸಲಾಗಿದೆ” ಎಂಬ ಸಂಗತಿ ಹೊರಬಿದ್ದಿದೆ.

ಈ ಕುರಿತು ವರದಿ ಮಾಡಿರುವ ‘ದಿ ಫೈಲ್‌’ ತನಿಖಾ ಜಾಲತಾಣ, “ಆಡಳಿತ ಸುಧಾರಣಾ ಇಲಾಖೆಯು ಶುಕ್ರವಾರ ಹೊರಡಿಸಿದ್ದ ಆದೇಶವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನದಲ್ಲಿತ್ತು” ಎಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ಮನವಿ ಮೇರೆಗೆ ಆದೇಶ ಹೊರಡಿಸಲಾಗಿದೆ. ಕರ್ನಾಟಕ ರಾಷ್ಟಸಮಿತಿಯ ಕಾರ್ಯಕರ್ತರು ಜಿಲ್ಲಾ ತಾಲೂಕು ಕಚೇರಿ, ಪೊಲೀಸ್‌ ಠಾಣೆ, ಜಿಲ್ಲಾ ತಾಲೂಕು ಆಸ್ಪತ್ರೆಗಳಿಗೆ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ವಿಡಿಯೋ ಲೈವ್ ಮಾಡುತ್ತಿರುವುದನ್ನೂ ಆಲಮಟ್ಟಿಯ ಕಾರ್ಯಕ್ರಮವೊಂದರಲ್ಲಿ ಮಾಡಿರುವ ಭಾಷಣದಲ್ಲಿ ಪ್ರಸ್ತಾಪಿಸಿರುವ ಷಡಕ್ಷರಿ ಅವರು ಮುಖ್ಯಮಂತ್ರಿಯವರೊಂದಿಗೆ ಇದನ್ನು ಪ್ರಸ್ತಾಪಿಸಿದ್ದರು. ಹಾಗೆಯೇ ಅವರ ಗಮನಕ್ಕೆ ತಂದೇ ಆದೇಶ ಹೊರಡಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆಲಮಟ್ಟಿಯಲ್ಲಿ ನಡೆದಿದ್ದ ಸ್ವಚ್ಛತಾ ಕಾರ್ಯಕ್ರಮದ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರು ಮುಖ್ಯಮಂತ್ರಿಯೊಂದಿಗೆ ಕಾರಿನಲ್ಲಿ ಹೋಗುವಾಗ ಈ ವಿಚಾರವನ್ನು ಅವರ ಗಮನಕ್ಕೆ ತಂದು ಆದೇಶ ಮಾಡಿಸಲಾಗಿದೆ ಎಂದು ನೌಕರರ ಕಾರ್ಯಕ್ರಮ ಭಾಷಣದಲ್ಲಿ ಬಹಿರಂಗಪಡಿಸಿದ್ದಾರೆ ಎಂದು ‘ದಿ ಫೈಲ್‌’ ಹಾಗೂ ‘ವಾರ್ತಾ ಭಾರತಿ’ಯಲ್ಲಿ ವರದಿಯಾಗಿದೆ.

ಆಡಿಯೋದಲ್ಲೇನಿದೆ?

“ಈಗೊಂದು ಆರ್ಡರ್ ಮಾಡಿಸ್ದೆ. ಈಗಸ್ಟೇ ವಾಟ್ಸ್‌ಅಪ್‌ನಲ್ಲಿ ಬಂತು. ಕಳೆದ ಒಂದು ತಿಂಗಳಿಂದಲೂ ನಿರಂತರ ಪ್ರಯತ್ನ ಮಾಡಿದ್ದೇನೆ. ಇನ್ಮುಂದೆ ನಮ್ಮ ರಾಜ್ಯದ ಯಾವುದೇ ಸರ್ಕಾರಿ ಕಚೇರಿ, ಶಾಲೆಗಳಲ್ಲಿ ಯಾವುದೇ ಖಾಸಗಿ ವ್ಯಕ್ತಿ ಬಂದು ಫೋಟೋ ತೆಗಿಯಂಗಿಲ್ಲ. ವಿಡಿಯೋ ಶೂಟ್ ಮಾಡಂಗಿಲ್ಲ. ಮೇಲಾಧಿಕಾರಿಗಳ ಅನುಮತಿ ಇಲ್ಲದೆಯೇ ಯಾವುದೇ ಕಚೇರಿಗಳಿಗೆ ಹೋಗಿ ಆ ರೀತಿಯ ಪ್ರಕ್ರಿಯೆಗಳನ್ನು ಮಾಡಬಾರದು ಎಂದು ಸರ್ಕಾರ ನಿರ್ಬಂಧಿಸಿ ಆದೇಶ ಮಾಡಿದೆ” ಎನ್ನುತ್ತಾರೆ ಷಡಕ್ಷರಿ.

ಇದನ್ನೂ ಓದಿರಿ: ಇದು ‘ಮಧ್ಯರಾತ್ರಿ’ ಆದೇಶವಲ್ಲ, ‘ಮದ್ಯರಾತ್ರಿ’ ಆದೇಶ: ಸರ್ಕಾರದ ಎಡವಟ್ಟಿಗೆ ಜನರ ವ್ಯಂಗ್ಯ

“ಬಹುಶಃ ಯೋಚನೆ ಮಾಡಿ. ಬಹಳಷ್ಟು ಹೆಣ್ಮಕ್ಳು ಹೆಡ್‌ಪೀಸ್‌ಗಳಲ್ಲಿ, ತಾಲೂಕು ಆಫೀಸ್‌ಗಳಲ್ಲಿ ಜಿಲ್ಲಾ ಪಂಚಾಯ್ತಿಗಳಲ್ಲಿ, ರೆವಿನ್ಯೂ ಅಫೀಸ್‌ಗಳಲ್ಲಿ, ಜಿಲ್ಲಾ ಕಚೇರಿಗಳಲ್ಲಿ ಕೆಎಸ್‌ಆರ್ ಪಾರ್ಟಿ, ಸಂಘ ಸಂಸ್ಥೆಗಳು, ವ್ಯಕ್ತಿ ಆಧರಿತ ಸಂಘಟನೆಗಳು ಬರ್ತಾವೆ. ಫೋಟೋ ತೆಗಿತಾರೆ, ವಿಡಿಯೋ ಮಾಡ್ತಾರೆ. ಸ್ವಾಭಿಮಾನದ ಹಕ್ಕುಗಳನ್ನು ಕಿತ್‌ಕೊಳ್ಳುವಂತ ಕೆಲ್ಸಗಳು ಆ ಸಂದರ್ಭದಲ್ಲಿ ಆಗ್ತಾವೆ. ಲಾಸ್ಟ್ ವೀಕ್‌ನಲ್ಲಿ ನಾನು ಮುಖ್ಯಮಂತ್ರಿ ಜತೆ ಕಾರಿನಲ್ಲಿ ಹೋಗುವಾಗ ಮಾನ್ಯ ಮುಖ್ಯಮಂತ್ರಿಗಳಲ್ಲಿ ವಿನಂತಿ ಮಾಡ್ಡೆ. ಸಾರ್ ಈ ಆದೇಶ ಮಾಡೇಕು. ಮುಜುಗರ ಆಗ್ತಾ ಇದೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಆಗ್ತಾ ಇದೆ ಎಂದಾಗ ಮಾನ್ಯ ಮುಖ್ಯಮಂತ್ರಿಗಳು, ಆದೇಶ ಮಾಡಿದ್ರು” ಎಂದು ಭಾಷಣದಲ್ಲಿ ದಾಖಲಾಗಿದೆ. ಷಡಕ್ಷರಿಯವರ ಮಾತುಗಳಿಗೆ ಪ್ರೇಕ್ಷಕರು ಚಪ್ಪಾಳೆಯನ್ನೂ ಹೊಡೆದಿದ್ದಾರೆ.

“ಹಾಗಾದರೆ ಮುಖ್ಯಮಂತ್ರಿಯವರು ಮಾಧ್ಯಮಗಳ ಎದುರು ಸುಳ್ಳು ಹೇಳಿದರೆ?” ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಎದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...