Homeಚಳವಳಿವಿದ್ಯಾರ್ಥಿ ಹೋರಾಟಗಾರರ ಪ್ರಕರಣ: ಜಾಮೀನು ತಡೆಗೆ ನಿರಾಕರಿಸಿದ ಸುಪ್ರೀಂಕೋರ್ಟ್‌

ವಿದ್ಯಾರ್ಥಿ ಹೋರಾಟಗಾರರ ಪ್ರಕರಣ: ಜಾಮೀನು ತಡೆಗೆ ನಿರಾಕರಿಸಿದ ಸುಪ್ರೀಂಕೋರ್ಟ್‌

- Advertisement -
- Advertisement -

ವಿದ್ಯಾರ್ಥಿ ಹೋರಾಟಗಾರರಾದ ನತಾಶಾ ನರ್ವಾಲ್, ದೇವಂಗಾನಾ ಕಾಲಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ದೆಹಲಿ ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿ ದೆಹಲಿ ಪೊಲೀಸರು ಸಲ್ಲಿಸಿದ್ದ ಅರ್ಜಿಯ ಕುರಿತು ಸುಪ್ರೀಂಕೋರ್ಟ್‌ ಶುಕ್ರವಾರ ನೋಟಿಸ್ ನೀಡಿದೆ. ಈ ಹಂತದಲ್ಲಿ ಹೈಕೋರ್ಟ್‌ನ ಆದೇಶಕ್ಕೆ ತಾನು ಹಸ್ತಕ್ಷೇಪ ಮಾಡುವುತ್ತಿಲ್ಲ ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಆದರೆ ಈ ತೀರ್ಪನ್ನು ಒಂದು ಪೂರ್ವನಿದರ್ಶನದಂತೆ ಪರಿಗಣಿಸಬಾರದು ಮತ್ತು ಯಾವುದೇ ನ್ಯಾಯಾಲಯವು ಈ ತೀರ್ಪನ್ನು ಅವಲಂಬಿಸಬಾರದು ಎಂದು ಹೇಳಿದೆ. ನ್ಯಾಯಮೂರ್ತಿ ಹೇಮಂತ್ ಗುಪ್ತಾ ನೇತೃತ್ವದ ನ್ಯಾಯಪೀಠವು ಯುಎಪಿಎಯನ್ನು ಹೈಕೋರ್ಟ್ ವ್ಯಾಖ್ಯಾನಿಸಿದ ರೀತಿಯ ಬಗ್ಗೆ ಬಹುಶಃ ಸುಪ್ರೀಂಕೋರ್ಟ್‌ ಪರಿಶೀಲಿಸುವ ಅಗತ್ಯವಿರುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಜೈಲನ್ನು ತೋರಿಸಿ ನಮ್ಮನ್ನು ಬೆದರಿಸಲಾಗದು’ – ಬಿಡುಗಡೆಗೊಂಡ ವಿದ್ಯಾರ್ಥಿ ಹೋರಾಟಗಾರರ ಘೋಷಣೆಗಳಿವು!

ಜಾಮೀನು ಅರ್ಜಿಗೆ ಪ್ರತಿಕ್ರಿಯೆಯಾಗಿ ಹೈಕೋರ್ಟ್‌ ನೀಡಿರುವ 100 ಪುಟಗಳ ತೀರ್ಪಿನ ಕುರಿತು ಸುಪ್ರೀಂ ಆಶ್ಚರ್ಯ ವ್ಯಕ್ತಪಡಿಸಿದೆ.

ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿ ಹೋರಾಟಗಾರರಿಗೆ ಹೈಕೋರ್ಟ್ ಜಾಮೀನು ನೀಡಿದ ಒಂದು ದಿನದ ನಂತರ, ದೆಹಲಿ ಪೊಲೀಸರು ಜಾಮೀನಿಗೆ ತಡೆ ನೀಡಬೇಕು ಎಂದು ಅರ್ಜಿ ಹಾಕಿದ್ದರು.

ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ(UAPA)ಯಡಿ ಆರೋಪ ಹೊರಿಸಲ್ಪಟ್ಟ ಈ ಮೂವರು ಒಂದು ವರ್ಷದಿಂದ ಜೈಲಿನಲ್ಲಿದ್ದರು.

ಸುಪ್ರೀಂಕೋರ್ಟ್‌ ಅವರಿಗೆ ಪ್ರತಿಕ್ರಿಯೆ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.

ಜೈಲಿನಿಂದ ಬಿಡುಗಡೆಗೊಂಡ ವಿದ್ಯಾರ್ಥಿಗಳು, ‘‘ಜೈಲನ್ನು ತೋರಿಸಿ ನಮ್ಮನ್ನು ಹೆದರಿಸಬೇಡಿ. ಅನ್ಯಾಯದ ವಿರುದ್ಧ ನಮ್ಮ ಪ್ರತಿಭಟನೆ ನಿರಂತರ. ಇದು ಸರ್ಕಾರದ ಹತಾಶೆಯನ್ನು ತೋರಿಸುತ್ತದೆ. ನಾವು ಅವರಿಗೆ ಹೆದರದ ಮಹಿಳೆಯರು. ನಮ್ಮನ್ನು ಜೈಲಿನಲ್ಲಿರಿಸುವುದಾಗಿ ಬೆದರಿಕೆ ಹಾಕಿದರೆ, ಅದು ನಮ್ಮ ಹೋರಾಟವನ್ನು ಮುಂದುವರಿಸುವ ಸಂಕಲ್ಪವನ್ನು ಬಲಪಡಿಸುತ್ತದೆ’’ ಎಂದು ಹೇಳಿದ್ದಾರೆ.

ಕಳೆದ ವರ್ಷ ನಡೆದ ದೆಹಲಿ ಗಲಭೆಯಲ್ಲಿ ಪಿಂಜ್ರಾ ತೋಡ್ ಕಾರ್ಯಕರ್ತರಾದ ನತಾಶಾ, ದೇವಂಗಾನಾ ಮತ್ತು ವಿದ್ಯಾರ್ಥಿ ಹೋರಾಟಗಾರ ಆಸಿಫ್‌ ಅವರ ಕೈವಾಡವಿದೆ ಎಂದು ಆರೋಪಿಸಿ ಅವರ ವಿರುದ್ಧ ಯುಎಪಿಎ ಭಯೋತ್ಪಾದನಾ ವಿರೋಧಿ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ನತಾಶಾ ನರ್ವಾಲ್ ಮತ್ತು ದೇವಂಗನಾ ಕಾಳಿತಾ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳಾಗಿದ್ದಾರೆ. ಪಿಂಜ್ರಾ ತೋಡ್ ಎಂಬ ಸಂಘಟನೆಯ ಸದಸ್ಯರಾದ ಇವರು ಮೇ 2020 ರಿಂದಲೂ ಬಂಧನದಲ್ಲಿದ್ದಾರೆ. ಆಸಿಫ್ ಇಕ್ಬಾಲ್ ತನ್ಹಾ ಅವರು ಬಿ.ಎ. ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಪದವಿ ಅಭ್ಯಾಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಜೈಲಿನಲ್ಲಿದ್ದಾಗಲೂ ಅವಳು ಹೋರಾಟ ಮಾಡುತ್ತಲೇ ಇದ್ದಳು, ಆಕೆಯ ಬಗ್ಗೆ ಹೆಮ್ಮೆಯಿದೆ: ದೇವಂಗನಾ ಬಗ್ಗೆ ತಾಯಿಯ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...