Homeಚಳವಳಿವಿದ್ಯಾರ್ಥಿ ಹೋರಾಟಗಾರರ ಪ್ರಕರಣ: ಜಾಮೀನು ತಡೆಗೆ ನಿರಾಕರಿಸಿದ ಸುಪ್ರೀಂಕೋರ್ಟ್‌

ವಿದ್ಯಾರ್ಥಿ ಹೋರಾಟಗಾರರ ಪ್ರಕರಣ: ಜಾಮೀನು ತಡೆಗೆ ನಿರಾಕರಿಸಿದ ಸುಪ್ರೀಂಕೋರ್ಟ್‌

- Advertisement -
- Advertisement -

ವಿದ್ಯಾರ್ಥಿ ಹೋರಾಟಗಾರರಾದ ನತಾಶಾ ನರ್ವಾಲ್, ದೇವಂಗಾನಾ ಕಾಲಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ದೆಹಲಿ ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿ ದೆಹಲಿ ಪೊಲೀಸರು ಸಲ್ಲಿಸಿದ್ದ ಅರ್ಜಿಯ ಕುರಿತು ಸುಪ್ರೀಂಕೋರ್ಟ್‌ ಶುಕ್ರವಾರ ನೋಟಿಸ್ ನೀಡಿದೆ. ಈ ಹಂತದಲ್ಲಿ ಹೈಕೋರ್ಟ್‌ನ ಆದೇಶಕ್ಕೆ ತಾನು ಹಸ್ತಕ್ಷೇಪ ಮಾಡುವುತ್ತಿಲ್ಲ ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಆದರೆ ಈ ತೀರ್ಪನ್ನು ಒಂದು ಪೂರ್ವನಿದರ್ಶನದಂತೆ ಪರಿಗಣಿಸಬಾರದು ಮತ್ತು ಯಾವುದೇ ನ್ಯಾಯಾಲಯವು ಈ ತೀರ್ಪನ್ನು ಅವಲಂಬಿಸಬಾರದು ಎಂದು ಹೇಳಿದೆ. ನ್ಯಾಯಮೂರ್ತಿ ಹೇಮಂತ್ ಗುಪ್ತಾ ನೇತೃತ್ವದ ನ್ಯಾಯಪೀಠವು ಯುಎಪಿಎಯನ್ನು ಹೈಕೋರ್ಟ್ ವ್ಯಾಖ್ಯಾನಿಸಿದ ರೀತಿಯ ಬಗ್ಗೆ ಬಹುಶಃ ಸುಪ್ರೀಂಕೋರ್ಟ್‌ ಪರಿಶೀಲಿಸುವ ಅಗತ್ಯವಿರುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಜೈಲನ್ನು ತೋರಿಸಿ ನಮ್ಮನ್ನು ಬೆದರಿಸಲಾಗದು’ – ಬಿಡುಗಡೆಗೊಂಡ ವಿದ್ಯಾರ್ಥಿ ಹೋರಾಟಗಾರರ ಘೋಷಣೆಗಳಿವು!

ಜಾಮೀನು ಅರ್ಜಿಗೆ ಪ್ರತಿಕ್ರಿಯೆಯಾಗಿ ಹೈಕೋರ್ಟ್‌ ನೀಡಿರುವ 100 ಪುಟಗಳ ತೀರ್ಪಿನ ಕುರಿತು ಸುಪ್ರೀಂ ಆಶ್ಚರ್ಯ ವ್ಯಕ್ತಪಡಿಸಿದೆ.

ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿ ಹೋರಾಟಗಾರರಿಗೆ ಹೈಕೋರ್ಟ್ ಜಾಮೀನು ನೀಡಿದ ಒಂದು ದಿನದ ನಂತರ, ದೆಹಲಿ ಪೊಲೀಸರು ಜಾಮೀನಿಗೆ ತಡೆ ನೀಡಬೇಕು ಎಂದು ಅರ್ಜಿ ಹಾಕಿದ್ದರು.

ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ(UAPA)ಯಡಿ ಆರೋಪ ಹೊರಿಸಲ್ಪಟ್ಟ ಈ ಮೂವರು ಒಂದು ವರ್ಷದಿಂದ ಜೈಲಿನಲ್ಲಿದ್ದರು.

ಸುಪ್ರೀಂಕೋರ್ಟ್‌ ಅವರಿಗೆ ಪ್ರತಿಕ್ರಿಯೆ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.

ಜೈಲಿನಿಂದ ಬಿಡುಗಡೆಗೊಂಡ ವಿದ್ಯಾರ್ಥಿಗಳು, ‘‘ಜೈಲನ್ನು ತೋರಿಸಿ ನಮ್ಮನ್ನು ಹೆದರಿಸಬೇಡಿ. ಅನ್ಯಾಯದ ವಿರುದ್ಧ ನಮ್ಮ ಪ್ರತಿಭಟನೆ ನಿರಂತರ. ಇದು ಸರ್ಕಾರದ ಹತಾಶೆಯನ್ನು ತೋರಿಸುತ್ತದೆ. ನಾವು ಅವರಿಗೆ ಹೆದರದ ಮಹಿಳೆಯರು. ನಮ್ಮನ್ನು ಜೈಲಿನಲ್ಲಿರಿಸುವುದಾಗಿ ಬೆದರಿಕೆ ಹಾಕಿದರೆ, ಅದು ನಮ್ಮ ಹೋರಾಟವನ್ನು ಮುಂದುವರಿಸುವ ಸಂಕಲ್ಪವನ್ನು ಬಲಪಡಿಸುತ್ತದೆ’’ ಎಂದು ಹೇಳಿದ್ದಾರೆ.

ಕಳೆದ ವರ್ಷ ನಡೆದ ದೆಹಲಿ ಗಲಭೆಯಲ್ಲಿ ಪಿಂಜ್ರಾ ತೋಡ್ ಕಾರ್ಯಕರ್ತರಾದ ನತಾಶಾ, ದೇವಂಗಾನಾ ಮತ್ತು ವಿದ್ಯಾರ್ಥಿ ಹೋರಾಟಗಾರ ಆಸಿಫ್‌ ಅವರ ಕೈವಾಡವಿದೆ ಎಂದು ಆರೋಪಿಸಿ ಅವರ ವಿರುದ್ಧ ಯುಎಪಿಎ ಭಯೋತ್ಪಾದನಾ ವಿರೋಧಿ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ನತಾಶಾ ನರ್ವಾಲ್ ಮತ್ತು ದೇವಂಗನಾ ಕಾಳಿತಾ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳಾಗಿದ್ದಾರೆ. ಪಿಂಜ್ರಾ ತೋಡ್ ಎಂಬ ಸಂಘಟನೆಯ ಸದಸ್ಯರಾದ ಇವರು ಮೇ 2020 ರಿಂದಲೂ ಬಂಧನದಲ್ಲಿದ್ದಾರೆ. ಆಸಿಫ್ ಇಕ್ಬಾಲ್ ತನ್ಹಾ ಅವರು ಬಿ.ಎ. ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಪದವಿ ಅಭ್ಯಾಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಜೈಲಿನಲ್ಲಿದ್ದಾಗಲೂ ಅವಳು ಹೋರಾಟ ಮಾಡುತ್ತಲೇ ಇದ್ದಳು, ಆಕೆಯ ಬಗ್ಗೆ ಹೆಮ್ಮೆಯಿದೆ: ದೇವಂಗನಾ ಬಗ್ಗೆ ತಾಯಿಯ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...