Homeಚಳವಳಿವಿದ್ಯಾರ್ಥಿ ಹೋರಾಟಗಾರರ ಪ್ರಕರಣ: ಜಾಮೀನು ತಡೆಗೆ ನಿರಾಕರಿಸಿದ ಸುಪ್ರೀಂಕೋರ್ಟ್‌

ವಿದ್ಯಾರ್ಥಿ ಹೋರಾಟಗಾರರ ಪ್ರಕರಣ: ಜಾಮೀನು ತಡೆಗೆ ನಿರಾಕರಿಸಿದ ಸುಪ್ರೀಂಕೋರ್ಟ್‌

- Advertisement -
- Advertisement -

ವಿದ್ಯಾರ್ಥಿ ಹೋರಾಟಗಾರರಾದ ನತಾಶಾ ನರ್ವಾಲ್, ದೇವಂಗಾನಾ ಕಾಲಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ದೆಹಲಿ ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿ ದೆಹಲಿ ಪೊಲೀಸರು ಸಲ್ಲಿಸಿದ್ದ ಅರ್ಜಿಯ ಕುರಿತು ಸುಪ್ರೀಂಕೋರ್ಟ್‌ ಶುಕ್ರವಾರ ನೋಟಿಸ್ ನೀಡಿದೆ. ಈ ಹಂತದಲ್ಲಿ ಹೈಕೋರ್ಟ್‌ನ ಆದೇಶಕ್ಕೆ ತಾನು ಹಸ್ತಕ್ಷೇಪ ಮಾಡುವುತ್ತಿಲ್ಲ ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಆದರೆ ಈ ತೀರ್ಪನ್ನು ಒಂದು ಪೂರ್ವನಿದರ್ಶನದಂತೆ ಪರಿಗಣಿಸಬಾರದು ಮತ್ತು ಯಾವುದೇ ನ್ಯಾಯಾಲಯವು ಈ ತೀರ್ಪನ್ನು ಅವಲಂಬಿಸಬಾರದು ಎಂದು ಹೇಳಿದೆ. ನ್ಯಾಯಮೂರ್ತಿ ಹೇಮಂತ್ ಗುಪ್ತಾ ನೇತೃತ್ವದ ನ್ಯಾಯಪೀಠವು ಯುಎಪಿಎಯನ್ನು ಹೈಕೋರ್ಟ್ ವ್ಯಾಖ್ಯಾನಿಸಿದ ರೀತಿಯ ಬಗ್ಗೆ ಬಹುಶಃ ಸುಪ್ರೀಂಕೋರ್ಟ್‌ ಪರಿಶೀಲಿಸುವ ಅಗತ್ಯವಿರುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಜೈಲನ್ನು ತೋರಿಸಿ ನಮ್ಮನ್ನು ಬೆದರಿಸಲಾಗದು’ – ಬಿಡುಗಡೆಗೊಂಡ ವಿದ್ಯಾರ್ಥಿ ಹೋರಾಟಗಾರರ ಘೋಷಣೆಗಳಿವು!

ಜಾಮೀನು ಅರ್ಜಿಗೆ ಪ್ರತಿಕ್ರಿಯೆಯಾಗಿ ಹೈಕೋರ್ಟ್‌ ನೀಡಿರುವ 100 ಪುಟಗಳ ತೀರ್ಪಿನ ಕುರಿತು ಸುಪ್ರೀಂ ಆಶ್ಚರ್ಯ ವ್ಯಕ್ತಪಡಿಸಿದೆ.

ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿ ಹೋರಾಟಗಾರರಿಗೆ ಹೈಕೋರ್ಟ್ ಜಾಮೀನು ನೀಡಿದ ಒಂದು ದಿನದ ನಂತರ, ದೆಹಲಿ ಪೊಲೀಸರು ಜಾಮೀನಿಗೆ ತಡೆ ನೀಡಬೇಕು ಎಂದು ಅರ್ಜಿ ಹಾಕಿದ್ದರು.

ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ(UAPA)ಯಡಿ ಆರೋಪ ಹೊರಿಸಲ್ಪಟ್ಟ ಈ ಮೂವರು ಒಂದು ವರ್ಷದಿಂದ ಜೈಲಿನಲ್ಲಿದ್ದರು.

ಸುಪ್ರೀಂಕೋರ್ಟ್‌ ಅವರಿಗೆ ಪ್ರತಿಕ್ರಿಯೆ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.

ಜೈಲಿನಿಂದ ಬಿಡುಗಡೆಗೊಂಡ ವಿದ್ಯಾರ್ಥಿಗಳು, ‘‘ಜೈಲನ್ನು ತೋರಿಸಿ ನಮ್ಮನ್ನು ಹೆದರಿಸಬೇಡಿ. ಅನ್ಯಾಯದ ವಿರುದ್ಧ ನಮ್ಮ ಪ್ರತಿಭಟನೆ ನಿರಂತರ. ಇದು ಸರ್ಕಾರದ ಹತಾಶೆಯನ್ನು ತೋರಿಸುತ್ತದೆ. ನಾವು ಅವರಿಗೆ ಹೆದರದ ಮಹಿಳೆಯರು. ನಮ್ಮನ್ನು ಜೈಲಿನಲ್ಲಿರಿಸುವುದಾಗಿ ಬೆದರಿಕೆ ಹಾಕಿದರೆ, ಅದು ನಮ್ಮ ಹೋರಾಟವನ್ನು ಮುಂದುವರಿಸುವ ಸಂಕಲ್ಪವನ್ನು ಬಲಪಡಿಸುತ್ತದೆ’’ ಎಂದು ಹೇಳಿದ್ದಾರೆ.

ಕಳೆದ ವರ್ಷ ನಡೆದ ದೆಹಲಿ ಗಲಭೆಯಲ್ಲಿ ಪಿಂಜ್ರಾ ತೋಡ್ ಕಾರ್ಯಕರ್ತರಾದ ನತಾಶಾ, ದೇವಂಗಾನಾ ಮತ್ತು ವಿದ್ಯಾರ್ಥಿ ಹೋರಾಟಗಾರ ಆಸಿಫ್‌ ಅವರ ಕೈವಾಡವಿದೆ ಎಂದು ಆರೋಪಿಸಿ ಅವರ ವಿರುದ್ಧ ಯುಎಪಿಎ ಭಯೋತ್ಪಾದನಾ ವಿರೋಧಿ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ನತಾಶಾ ನರ್ವಾಲ್ ಮತ್ತು ದೇವಂಗನಾ ಕಾಳಿತಾ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳಾಗಿದ್ದಾರೆ. ಪಿಂಜ್ರಾ ತೋಡ್ ಎಂಬ ಸಂಘಟನೆಯ ಸದಸ್ಯರಾದ ಇವರು ಮೇ 2020 ರಿಂದಲೂ ಬಂಧನದಲ್ಲಿದ್ದಾರೆ. ಆಸಿಫ್ ಇಕ್ಬಾಲ್ ತನ್ಹಾ ಅವರು ಬಿ.ಎ. ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಪದವಿ ಅಭ್ಯಾಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಜೈಲಿನಲ್ಲಿದ್ದಾಗಲೂ ಅವಳು ಹೋರಾಟ ಮಾಡುತ್ತಲೇ ಇದ್ದಳು, ಆಕೆಯ ಬಗ್ಗೆ ಹೆಮ್ಮೆಯಿದೆ: ದೇವಂಗನಾ ಬಗ್ಗೆ ತಾಯಿಯ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...