Homeಮುಖಪುಟಇಬ್ಬರು ಮುಸ್ಲಿಮರ ಹತ್ಯೆ ಪ್ರಕರಣ; ಪೊಲೀಸರ ಮೇಲಿನ ಆರೋಪ ಪರಿಶೀಲನೆಗೆ ಎಸ್‌ಐಟಿ ರಚನೆ

ಇಬ್ಬರು ಮುಸ್ಲಿಮರ ಹತ್ಯೆ ಪ್ರಕರಣ; ಪೊಲೀಸರ ಮೇಲಿನ ಆರೋಪ ಪರಿಶೀಲನೆಗೆ ಎಸ್‌ಐಟಿ ರಚನೆ

- Advertisement -
- Advertisement -

ಭಿವಾನಿ ಜಿಲ್ಲೆಯಲ್ಲಿ ಇಬ್ಬರು ಮುಸ್ಲಿಮರ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಸಂಸ್ಥೆ ನಿರ್ಲಕ್ಷ್ಯ ತಾಳಿದೆ ಎಂಬ ಆರೋಪಗಳನ್ನು ಪರಿಶೀಲಿಸಲು ಹರಿಯಾಣ ಪೊಲೀಸರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದಾರೆ.

ಫೆಬ್ರವರಿ 16 ರಂದು ರಾಜಸ್ಥಾನದ ಭರತ್‌ಪುರ ಜಿಲ್ಲೆಯಿಂದ ಇಬ್ಬರು ಮುಸ್ಲಿಮರನ್ನು ಅಪಹರಿಸಿದ ಗೋರಕ್ಷಕರು ಕೊಲೆ ಮಾಡಿದ್ದಾರೆ ಎಂಬ ಆರೋಪಗಳು ಬಂದಿವೆ. ನಾಸಿರ್ ಮತ್ತು ಜುನೈದ್ ಅವರ ಶವಗಳು ಸುಟ್ಟ ಸ್ಥಿತಿಯಲ್ಲಿ ಕಾರಿನೊಳಗೆ ಪತ್ತೆಯಾಗಿದ್ದವು. ಈ ಪ್ರಕರಣದಲ್ಲಿ ಬಜರಂಗದಳದ ಸದಸ್ಯ ಮೋನು ಮಾನೇಸರ್ ಸೇರಿದಂತೆ ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ, ಆದರೆ ರಿಂಕು ಸೈನಿ ಎಂಬ ಒಬ್ಬನನ್ನು ಮಾತ್ರ ಈವರೆಗೆ ಬಂಧಿಸಿದ್ದಾರೆ.

ಜುನೈದ್ ಅವರ ಸಹೋದರ ಇಸ್ಮಾಯಿಲ್ ಪ್ರತಿಕ್ರಿಯಿಸಿದ್ದು, “ಹಲ್ಲೆಗೊಳಗಾಗಿದ್ದ ಸಂತ್ರಸ್ತರನ್ನು ಪೊಲೀಸ್ ಠಾಣೆಗೆ ಗೋರಕ್ಷಕರು ಕರೆದೊಯ್ದಿದ್ದರು. ಆದರೆ ಹರಿಯಾಣದ ನುಹ್ ಜಿಲ್ಲೆಯ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಳ್ಳಲು ನಿರಾಕರಿಸಿದರು” ಎಂದು ಆರೋಪಿಸಿದ್ದಾರೆ.

ನಾಸಿರ್ ಮತ್ತು ಜುನೈದ್ ಅವರನ್ನು ಅಪಹರಿಸಿದ ನಂತರ ಆರೋಪಿಗಳು ಪೊಲೀಸರನ್ನು ಭೇಟಿ ನೀಡಿದ್ದಾರೆ ಎಂಬ ಅಂಶವನ್ನು ಗಂಭೀರವಾಗಿ ರಾಜಸ್ಥಾನ ಪೊಲೀಸರು ಪರಿಗಣಿಸಿದ್ದಾರೆ. ‘ಅಪರಾಧ ತನಿಖಾ ಸಂಸ್ಥೆ ಪೊಲೀಸ್ ಠಾಣೆ’ಯ ಸಮೀಪವಿರುವ ಎಲ್ಲಾ ಸಂಸ್ಥೆಗಳ ಸಿಸಿಟಿವಿ ದೃಶ್ಯಗಳನ್ನು ರಾಜಸ್ಥಾನ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆದರೆ, ಈ ಆರೋಪ ನಿರಾಧಾರ ಎಂದು ನುಹ್ ಪೊಲೀಸ್ ವರಿಷ್ಠಾಧಿಕಾರಿ ವರುಣ್ ಸಿಂಗ್ಲಾ ತಿಳಿಸಿದ್ದಾರೆ. ಆರೋಪಗಳನ್ನು ಪರಿಶೀಲಿಸಲು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಉಷಾ ಕುಂದು ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

“ಅಪರಾಧ ತನಿಖಾ ಸಂಸ್ಥೆಯ ಪಾತ್ರದ ಕುರಿತು ರಾಜಸ್ಥಾನ ಪೊಲೀಸರ ವರದಿ ಏನು ತಿಳಿಸುತ್ತಿದೆ ಎಂದು ತಿಳಿಯಲು ನಾನು ಕಾಯುತ್ತಿದ್ದೇನೆ. ನಮ್ಮ ಪೊಲೀಸರು ಭಾಗಿಯಾಗಿರುವುದು ಕಂಡುಬಂದರೆ, ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

ಇದರ ನಡುವೆ ಆರೋಪಿ ಮಾನೇಸರ್ ಅವರನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಸಂತ್ರಸ್ತ ಕುಟುಂಬಗಳು ಧರಣಿ ನಡೆಸುತ್ತಿವೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

“ನಮಗೆ ನ್ಯಾಯ ನೀಡಲಾಗಿಲ್ಲ” ಎಂದು ಜುನೈದ್ ಅವರ ಸಂಬಂಧಿಕರೊಬ್ಬರು ಭಾನುವಾರ ಆರೋಪಿಸಿದ್ದಾರೆ. “ಮೋನು ಮಾನೇಸರ್ ಅವರನ್ನು ಬಂಧಿಸಬೇಕು; ಅಲ್ಲಿಯವರೆಗೆ ನಾವು ಧರಣಿಯನ್ನು ಮುಂದುವರಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಗೋಸಂರಕ್ಷಣೆ ಹೆಸರಲ್ಲಿ ಆಗಾಗ್ಗೆ ವಿವಾದಗಳನ್ನು ಸೃಷ್ಟಿಸುತ್ತಿರುವ ಮಾನೇಸರ್, ಪ್ರಕರಣದಲ್ಲಿ ತಾನು ಭಾಗಿಯಾಗಿರುವುದನ್ನು ನಿರಾಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಗೋವು ಕಳ್ಳಸಾಗಣೆದಾರರನ್ನು ಹಿಂಬಾಲಿಸುವ, ಎದುರಿಸುವ ಮತ್ತು ಬಂಧಿಸುವ ವೀಡಿಯೋಗಳನ್ನು ಹಂಚಿಕೊಳ್ಳುವಲ್ಲಿ ಈ ಆರೋಪಿ ಮಾನೇಸರ್‌ ಪ್ರಖ್ಯಾತನಾಗಿದ್ದಾನೆ.

ಮಾನೇಸರ್ 2013ರಿಂದಲೂ ಭಜರಂಗ ದಳದೊಂದಿಗೆ ಸಂಬಂಧ ಹೊಂದಿದ್ದಾರೆ. ಗೋ ರಕ್ಷಣೆಯ ಹೆಸರಲ್ಲಿ ಹಲವಾರು ದಾಂಧಲೆಗಳನ್ನು ನಡೆಸಿರುವುದನ್ನು ‘ಆಲ್ಟ್‌ನ್ಯೂಸ್‌’ ಬಯಲಿಗೆಳೆದಿದೆ.

ಹಸು ಕಳ್ಳಸಾಗಣೆದಾರರ ಮೇಲೆ ತಮ್ಮ ತಂಡವು ಎಂದಿಗೂ ಹಲ್ಲೆ ನಡೆಸಿಲ್ಲ ಎಂದು ಅವರು ಹೇಳಿಕೊಂಡಿದ್ದರೂ, ಹಿಂದುತ್ವ ಸಂಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿರುವ ಹಲವಾರು ಫೋಟೋಗಳು ಬೇರೆಯದೆ ಕಥೆಯನ್ನು ಹೇಳುತ್ತಿವೆ. ಇವರು ಹಿಡಿದ ಅನೇಕ ವ್ಯಕ್ತಿಗಳ ಚಿತ್ರಗಳು ಗಾಯಗೊಂಡ ಸ್ಥಿತಿಯಲ್ಲಿ ಕಂಡುಬಂದಿವೆ.

ಪ್ರಕರಣದಲ್ಲಿ ದಾಖಲಾಗಿರುವ ಮತ್ತೊಬ್ಬ ವ್ಯಕ್ತಿ ಲೋಕೇಶ್ ಸಿಂಗ್ಲಾ ಮೇವತ್ ಪ್ರತಿಕ್ರಿಯಿಸಿ, “ನನ್ನ ಕೈವಾಡ ಪ್ರಕರಣದಲ್ಲಿ ಇಲ್ಲ. ಕೇಂದ್ರೀಯ ತನಿಖಾ ದಳದಿಂದ ತನಿಖೆ ನಡೆಯಲಿ” ಎಂದು ಆಗ್ರಹಿಸಿದ್ದಾರೆ.

ಈ ವಿಷಯಕ್ಕೆ ಧಾರ್ಮಿಕ ಅಥವಾ ರಾಜಕೀಯ ಬಣ್ಣ ನೀಡಬಾರದು ಎಂದು ಗೋರಕ್ಷಕ ಗುಂಪಿನ ಗೌ ರಕ್ಷಾ ದಳದ ಸ್ಥಳೀಯ ಅಧ್ಯಕ್ಷ ಮೇವಾತ್ ಅವರು ವಿಡಿಯೋವೊಂದರಲ್ಲಿ ಹೇಳಿದ್ದಾರೆ.

“ನನ್ನನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ. ಆದರೆ ಇದು ಯಾವುದೇ ಸತ್ಯವನ್ನು ಆಧರಿಸಿಲ್ಲ. ಫೆಬ್ರವರಿ 14 ರಂದು ನಾನು ನನ್ನ ಸ್ನೇಹಿತನೊಂದಿಗೆ ನ್ಯಾಯಾಲಯಕ್ಕೆ ಹಾಜರಾಗಿದ್ದೆ. ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಬಹುದು. ಮರುದಿನ, ನನ್ನ ಮಗ ಅಸ್ವಸ್ಥನಾಗಿದ್ದರಿಂದ ನಾನು ಆಸ್ಪತ್ರೆಯಲ್ಲಿದ್ದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...