Homeಮುಖಪುಟಇಬ್ಬರು ಮುಸ್ಲಿಮರ ಹತ್ಯೆ ಪ್ರಕರಣ; ಪೊಲೀಸರ ಮೇಲಿನ ಆರೋಪ ಪರಿಶೀಲನೆಗೆ ಎಸ್‌ಐಟಿ ರಚನೆ

ಇಬ್ಬರು ಮುಸ್ಲಿಮರ ಹತ್ಯೆ ಪ್ರಕರಣ; ಪೊಲೀಸರ ಮೇಲಿನ ಆರೋಪ ಪರಿಶೀಲನೆಗೆ ಎಸ್‌ಐಟಿ ರಚನೆ

- Advertisement -
- Advertisement -

ಭಿವಾನಿ ಜಿಲ್ಲೆಯಲ್ಲಿ ಇಬ್ಬರು ಮುಸ್ಲಿಮರ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಸಂಸ್ಥೆ ನಿರ್ಲಕ್ಷ್ಯ ತಾಳಿದೆ ಎಂಬ ಆರೋಪಗಳನ್ನು ಪರಿಶೀಲಿಸಲು ಹರಿಯಾಣ ಪೊಲೀಸರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದಾರೆ.

ಫೆಬ್ರವರಿ 16 ರಂದು ರಾಜಸ್ಥಾನದ ಭರತ್‌ಪುರ ಜಿಲ್ಲೆಯಿಂದ ಇಬ್ಬರು ಮುಸ್ಲಿಮರನ್ನು ಅಪಹರಿಸಿದ ಗೋರಕ್ಷಕರು ಕೊಲೆ ಮಾಡಿದ್ದಾರೆ ಎಂಬ ಆರೋಪಗಳು ಬಂದಿವೆ. ನಾಸಿರ್ ಮತ್ತು ಜುನೈದ್ ಅವರ ಶವಗಳು ಸುಟ್ಟ ಸ್ಥಿತಿಯಲ್ಲಿ ಕಾರಿನೊಳಗೆ ಪತ್ತೆಯಾಗಿದ್ದವು. ಈ ಪ್ರಕರಣದಲ್ಲಿ ಬಜರಂಗದಳದ ಸದಸ್ಯ ಮೋನು ಮಾನೇಸರ್ ಸೇರಿದಂತೆ ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ, ಆದರೆ ರಿಂಕು ಸೈನಿ ಎಂಬ ಒಬ್ಬನನ್ನು ಮಾತ್ರ ಈವರೆಗೆ ಬಂಧಿಸಿದ್ದಾರೆ.

ಜುನೈದ್ ಅವರ ಸಹೋದರ ಇಸ್ಮಾಯಿಲ್ ಪ್ರತಿಕ್ರಿಯಿಸಿದ್ದು, “ಹಲ್ಲೆಗೊಳಗಾಗಿದ್ದ ಸಂತ್ರಸ್ತರನ್ನು ಪೊಲೀಸ್ ಠಾಣೆಗೆ ಗೋರಕ್ಷಕರು ಕರೆದೊಯ್ದಿದ್ದರು. ಆದರೆ ಹರಿಯಾಣದ ನುಹ್ ಜಿಲ್ಲೆಯ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಳ್ಳಲು ನಿರಾಕರಿಸಿದರು” ಎಂದು ಆರೋಪಿಸಿದ್ದಾರೆ.

ನಾಸಿರ್ ಮತ್ತು ಜುನೈದ್ ಅವರನ್ನು ಅಪಹರಿಸಿದ ನಂತರ ಆರೋಪಿಗಳು ಪೊಲೀಸರನ್ನು ಭೇಟಿ ನೀಡಿದ್ದಾರೆ ಎಂಬ ಅಂಶವನ್ನು ಗಂಭೀರವಾಗಿ ರಾಜಸ್ಥಾನ ಪೊಲೀಸರು ಪರಿಗಣಿಸಿದ್ದಾರೆ. ‘ಅಪರಾಧ ತನಿಖಾ ಸಂಸ್ಥೆ ಪೊಲೀಸ್ ಠಾಣೆ’ಯ ಸಮೀಪವಿರುವ ಎಲ್ಲಾ ಸಂಸ್ಥೆಗಳ ಸಿಸಿಟಿವಿ ದೃಶ್ಯಗಳನ್ನು ರಾಜಸ್ಥಾನ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆದರೆ, ಈ ಆರೋಪ ನಿರಾಧಾರ ಎಂದು ನುಹ್ ಪೊಲೀಸ್ ವರಿಷ್ಠಾಧಿಕಾರಿ ವರುಣ್ ಸಿಂಗ್ಲಾ ತಿಳಿಸಿದ್ದಾರೆ. ಆರೋಪಗಳನ್ನು ಪರಿಶೀಲಿಸಲು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಉಷಾ ಕುಂದು ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

“ಅಪರಾಧ ತನಿಖಾ ಸಂಸ್ಥೆಯ ಪಾತ್ರದ ಕುರಿತು ರಾಜಸ್ಥಾನ ಪೊಲೀಸರ ವರದಿ ಏನು ತಿಳಿಸುತ್ತಿದೆ ಎಂದು ತಿಳಿಯಲು ನಾನು ಕಾಯುತ್ತಿದ್ದೇನೆ. ನಮ್ಮ ಪೊಲೀಸರು ಭಾಗಿಯಾಗಿರುವುದು ಕಂಡುಬಂದರೆ, ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

ಇದರ ನಡುವೆ ಆರೋಪಿ ಮಾನೇಸರ್ ಅವರನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಸಂತ್ರಸ್ತ ಕುಟುಂಬಗಳು ಧರಣಿ ನಡೆಸುತ್ತಿವೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

“ನಮಗೆ ನ್ಯಾಯ ನೀಡಲಾಗಿಲ್ಲ” ಎಂದು ಜುನೈದ್ ಅವರ ಸಂಬಂಧಿಕರೊಬ್ಬರು ಭಾನುವಾರ ಆರೋಪಿಸಿದ್ದಾರೆ. “ಮೋನು ಮಾನೇಸರ್ ಅವರನ್ನು ಬಂಧಿಸಬೇಕು; ಅಲ್ಲಿಯವರೆಗೆ ನಾವು ಧರಣಿಯನ್ನು ಮುಂದುವರಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಗೋಸಂರಕ್ಷಣೆ ಹೆಸರಲ್ಲಿ ಆಗಾಗ್ಗೆ ವಿವಾದಗಳನ್ನು ಸೃಷ್ಟಿಸುತ್ತಿರುವ ಮಾನೇಸರ್, ಪ್ರಕರಣದಲ್ಲಿ ತಾನು ಭಾಗಿಯಾಗಿರುವುದನ್ನು ನಿರಾಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಗೋವು ಕಳ್ಳಸಾಗಣೆದಾರರನ್ನು ಹಿಂಬಾಲಿಸುವ, ಎದುರಿಸುವ ಮತ್ತು ಬಂಧಿಸುವ ವೀಡಿಯೋಗಳನ್ನು ಹಂಚಿಕೊಳ್ಳುವಲ್ಲಿ ಈ ಆರೋಪಿ ಮಾನೇಸರ್‌ ಪ್ರಖ್ಯಾತನಾಗಿದ್ದಾನೆ.

ಮಾನೇಸರ್ 2013ರಿಂದಲೂ ಭಜರಂಗ ದಳದೊಂದಿಗೆ ಸಂಬಂಧ ಹೊಂದಿದ್ದಾರೆ. ಗೋ ರಕ್ಷಣೆಯ ಹೆಸರಲ್ಲಿ ಹಲವಾರು ದಾಂಧಲೆಗಳನ್ನು ನಡೆಸಿರುವುದನ್ನು ‘ಆಲ್ಟ್‌ನ್ಯೂಸ್‌’ ಬಯಲಿಗೆಳೆದಿದೆ.

ಹಸು ಕಳ್ಳಸಾಗಣೆದಾರರ ಮೇಲೆ ತಮ್ಮ ತಂಡವು ಎಂದಿಗೂ ಹಲ್ಲೆ ನಡೆಸಿಲ್ಲ ಎಂದು ಅವರು ಹೇಳಿಕೊಂಡಿದ್ದರೂ, ಹಿಂದುತ್ವ ಸಂಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿರುವ ಹಲವಾರು ಫೋಟೋಗಳು ಬೇರೆಯದೆ ಕಥೆಯನ್ನು ಹೇಳುತ್ತಿವೆ. ಇವರು ಹಿಡಿದ ಅನೇಕ ವ್ಯಕ್ತಿಗಳ ಚಿತ್ರಗಳು ಗಾಯಗೊಂಡ ಸ್ಥಿತಿಯಲ್ಲಿ ಕಂಡುಬಂದಿವೆ.

ಪ್ರಕರಣದಲ್ಲಿ ದಾಖಲಾಗಿರುವ ಮತ್ತೊಬ್ಬ ವ್ಯಕ್ತಿ ಲೋಕೇಶ್ ಸಿಂಗ್ಲಾ ಮೇವತ್ ಪ್ರತಿಕ್ರಿಯಿಸಿ, “ನನ್ನ ಕೈವಾಡ ಪ್ರಕರಣದಲ್ಲಿ ಇಲ್ಲ. ಕೇಂದ್ರೀಯ ತನಿಖಾ ದಳದಿಂದ ತನಿಖೆ ನಡೆಯಲಿ” ಎಂದು ಆಗ್ರಹಿಸಿದ್ದಾರೆ.

ಈ ವಿಷಯಕ್ಕೆ ಧಾರ್ಮಿಕ ಅಥವಾ ರಾಜಕೀಯ ಬಣ್ಣ ನೀಡಬಾರದು ಎಂದು ಗೋರಕ್ಷಕ ಗುಂಪಿನ ಗೌ ರಕ್ಷಾ ದಳದ ಸ್ಥಳೀಯ ಅಧ್ಯಕ್ಷ ಮೇವಾತ್ ಅವರು ವಿಡಿಯೋವೊಂದರಲ್ಲಿ ಹೇಳಿದ್ದಾರೆ.

“ನನ್ನನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ. ಆದರೆ ಇದು ಯಾವುದೇ ಸತ್ಯವನ್ನು ಆಧರಿಸಿಲ್ಲ. ಫೆಬ್ರವರಿ 14 ರಂದು ನಾನು ನನ್ನ ಸ್ನೇಹಿತನೊಂದಿಗೆ ನ್ಯಾಯಾಲಯಕ್ಕೆ ಹಾಜರಾಗಿದ್ದೆ. ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಬಹುದು. ಮರುದಿನ, ನನ್ನ ಮಗ ಅಸ್ವಸ್ಥನಾಗಿದ್ದರಿಂದ ನಾನು ಆಸ್ಪತ್ರೆಯಲ್ಲಿದ್ದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...