Homeಮುಖಪುಟಇಬ್ಬರು ಮುಸ್ಲಿಮರ ಹತ್ಯೆ ಪ್ರಕರಣ; ಪೊಲೀಸರ ಮೇಲಿನ ಆರೋಪ ಪರಿಶೀಲನೆಗೆ ಎಸ್‌ಐಟಿ ರಚನೆ

ಇಬ್ಬರು ಮುಸ್ಲಿಮರ ಹತ್ಯೆ ಪ್ರಕರಣ; ಪೊಲೀಸರ ಮೇಲಿನ ಆರೋಪ ಪರಿಶೀಲನೆಗೆ ಎಸ್‌ಐಟಿ ರಚನೆ

- Advertisement -
- Advertisement -

ಭಿವಾನಿ ಜಿಲ್ಲೆಯಲ್ಲಿ ಇಬ್ಬರು ಮುಸ್ಲಿಮರ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಸಂಸ್ಥೆ ನಿರ್ಲಕ್ಷ್ಯ ತಾಳಿದೆ ಎಂಬ ಆರೋಪಗಳನ್ನು ಪರಿಶೀಲಿಸಲು ಹರಿಯಾಣ ಪೊಲೀಸರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದಾರೆ.

ಫೆಬ್ರವರಿ 16 ರಂದು ರಾಜಸ್ಥಾನದ ಭರತ್‌ಪುರ ಜಿಲ್ಲೆಯಿಂದ ಇಬ್ಬರು ಮುಸ್ಲಿಮರನ್ನು ಅಪಹರಿಸಿದ ಗೋರಕ್ಷಕರು ಕೊಲೆ ಮಾಡಿದ್ದಾರೆ ಎಂಬ ಆರೋಪಗಳು ಬಂದಿವೆ. ನಾಸಿರ್ ಮತ್ತು ಜುನೈದ್ ಅವರ ಶವಗಳು ಸುಟ್ಟ ಸ್ಥಿತಿಯಲ್ಲಿ ಕಾರಿನೊಳಗೆ ಪತ್ತೆಯಾಗಿದ್ದವು. ಈ ಪ್ರಕರಣದಲ್ಲಿ ಬಜರಂಗದಳದ ಸದಸ್ಯ ಮೋನು ಮಾನೇಸರ್ ಸೇರಿದಂತೆ ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ, ಆದರೆ ರಿಂಕು ಸೈನಿ ಎಂಬ ಒಬ್ಬನನ್ನು ಮಾತ್ರ ಈವರೆಗೆ ಬಂಧಿಸಿದ್ದಾರೆ.

ಜುನೈದ್ ಅವರ ಸಹೋದರ ಇಸ್ಮಾಯಿಲ್ ಪ್ರತಿಕ್ರಿಯಿಸಿದ್ದು, “ಹಲ್ಲೆಗೊಳಗಾಗಿದ್ದ ಸಂತ್ರಸ್ತರನ್ನು ಪೊಲೀಸ್ ಠಾಣೆಗೆ ಗೋರಕ್ಷಕರು ಕರೆದೊಯ್ದಿದ್ದರು. ಆದರೆ ಹರಿಯಾಣದ ನುಹ್ ಜಿಲ್ಲೆಯ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಳ್ಳಲು ನಿರಾಕರಿಸಿದರು” ಎಂದು ಆರೋಪಿಸಿದ್ದಾರೆ.

ನಾಸಿರ್ ಮತ್ತು ಜುನೈದ್ ಅವರನ್ನು ಅಪಹರಿಸಿದ ನಂತರ ಆರೋಪಿಗಳು ಪೊಲೀಸರನ್ನು ಭೇಟಿ ನೀಡಿದ್ದಾರೆ ಎಂಬ ಅಂಶವನ್ನು ಗಂಭೀರವಾಗಿ ರಾಜಸ್ಥಾನ ಪೊಲೀಸರು ಪರಿಗಣಿಸಿದ್ದಾರೆ. ‘ಅಪರಾಧ ತನಿಖಾ ಸಂಸ್ಥೆ ಪೊಲೀಸ್ ಠಾಣೆ’ಯ ಸಮೀಪವಿರುವ ಎಲ್ಲಾ ಸಂಸ್ಥೆಗಳ ಸಿಸಿಟಿವಿ ದೃಶ್ಯಗಳನ್ನು ರಾಜಸ್ಥಾನ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆದರೆ, ಈ ಆರೋಪ ನಿರಾಧಾರ ಎಂದು ನುಹ್ ಪೊಲೀಸ್ ವರಿಷ್ಠಾಧಿಕಾರಿ ವರುಣ್ ಸಿಂಗ್ಲಾ ತಿಳಿಸಿದ್ದಾರೆ. ಆರೋಪಗಳನ್ನು ಪರಿಶೀಲಿಸಲು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಉಷಾ ಕುಂದು ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

“ಅಪರಾಧ ತನಿಖಾ ಸಂಸ್ಥೆಯ ಪಾತ್ರದ ಕುರಿತು ರಾಜಸ್ಥಾನ ಪೊಲೀಸರ ವರದಿ ಏನು ತಿಳಿಸುತ್ತಿದೆ ಎಂದು ತಿಳಿಯಲು ನಾನು ಕಾಯುತ್ತಿದ್ದೇನೆ. ನಮ್ಮ ಪೊಲೀಸರು ಭಾಗಿಯಾಗಿರುವುದು ಕಂಡುಬಂದರೆ, ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

ಇದರ ನಡುವೆ ಆರೋಪಿ ಮಾನೇಸರ್ ಅವರನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಸಂತ್ರಸ್ತ ಕುಟುಂಬಗಳು ಧರಣಿ ನಡೆಸುತ್ತಿವೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

“ನಮಗೆ ನ್ಯಾಯ ನೀಡಲಾಗಿಲ್ಲ” ಎಂದು ಜುನೈದ್ ಅವರ ಸಂಬಂಧಿಕರೊಬ್ಬರು ಭಾನುವಾರ ಆರೋಪಿಸಿದ್ದಾರೆ. “ಮೋನು ಮಾನೇಸರ್ ಅವರನ್ನು ಬಂಧಿಸಬೇಕು; ಅಲ್ಲಿಯವರೆಗೆ ನಾವು ಧರಣಿಯನ್ನು ಮುಂದುವರಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಗೋಸಂರಕ್ಷಣೆ ಹೆಸರಲ್ಲಿ ಆಗಾಗ್ಗೆ ವಿವಾದಗಳನ್ನು ಸೃಷ್ಟಿಸುತ್ತಿರುವ ಮಾನೇಸರ್, ಪ್ರಕರಣದಲ್ಲಿ ತಾನು ಭಾಗಿಯಾಗಿರುವುದನ್ನು ನಿರಾಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಗೋವು ಕಳ್ಳಸಾಗಣೆದಾರರನ್ನು ಹಿಂಬಾಲಿಸುವ, ಎದುರಿಸುವ ಮತ್ತು ಬಂಧಿಸುವ ವೀಡಿಯೋಗಳನ್ನು ಹಂಚಿಕೊಳ್ಳುವಲ್ಲಿ ಈ ಆರೋಪಿ ಮಾನೇಸರ್‌ ಪ್ರಖ್ಯಾತನಾಗಿದ್ದಾನೆ.

ಮಾನೇಸರ್ 2013ರಿಂದಲೂ ಭಜರಂಗ ದಳದೊಂದಿಗೆ ಸಂಬಂಧ ಹೊಂದಿದ್ದಾರೆ. ಗೋ ರಕ್ಷಣೆಯ ಹೆಸರಲ್ಲಿ ಹಲವಾರು ದಾಂಧಲೆಗಳನ್ನು ನಡೆಸಿರುವುದನ್ನು ‘ಆಲ್ಟ್‌ನ್ಯೂಸ್‌’ ಬಯಲಿಗೆಳೆದಿದೆ.

ಹಸು ಕಳ್ಳಸಾಗಣೆದಾರರ ಮೇಲೆ ತಮ್ಮ ತಂಡವು ಎಂದಿಗೂ ಹಲ್ಲೆ ನಡೆಸಿಲ್ಲ ಎಂದು ಅವರು ಹೇಳಿಕೊಂಡಿದ್ದರೂ, ಹಿಂದುತ್ವ ಸಂಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿರುವ ಹಲವಾರು ಫೋಟೋಗಳು ಬೇರೆಯದೆ ಕಥೆಯನ್ನು ಹೇಳುತ್ತಿವೆ. ಇವರು ಹಿಡಿದ ಅನೇಕ ವ್ಯಕ್ತಿಗಳ ಚಿತ್ರಗಳು ಗಾಯಗೊಂಡ ಸ್ಥಿತಿಯಲ್ಲಿ ಕಂಡುಬಂದಿವೆ.

ಪ್ರಕರಣದಲ್ಲಿ ದಾಖಲಾಗಿರುವ ಮತ್ತೊಬ್ಬ ವ್ಯಕ್ತಿ ಲೋಕೇಶ್ ಸಿಂಗ್ಲಾ ಮೇವತ್ ಪ್ರತಿಕ್ರಿಯಿಸಿ, “ನನ್ನ ಕೈವಾಡ ಪ್ರಕರಣದಲ್ಲಿ ಇಲ್ಲ. ಕೇಂದ್ರೀಯ ತನಿಖಾ ದಳದಿಂದ ತನಿಖೆ ನಡೆಯಲಿ” ಎಂದು ಆಗ್ರಹಿಸಿದ್ದಾರೆ.

ಈ ವಿಷಯಕ್ಕೆ ಧಾರ್ಮಿಕ ಅಥವಾ ರಾಜಕೀಯ ಬಣ್ಣ ನೀಡಬಾರದು ಎಂದು ಗೋರಕ್ಷಕ ಗುಂಪಿನ ಗೌ ರಕ್ಷಾ ದಳದ ಸ್ಥಳೀಯ ಅಧ್ಯಕ್ಷ ಮೇವಾತ್ ಅವರು ವಿಡಿಯೋವೊಂದರಲ್ಲಿ ಹೇಳಿದ್ದಾರೆ.

“ನನ್ನನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ. ಆದರೆ ಇದು ಯಾವುದೇ ಸತ್ಯವನ್ನು ಆಧರಿಸಿಲ್ಲ. ಫೆಬ್ರವರಿ 14 ರಂದು ನಾನು ನನ್ನ ಸ್ನೇಹಿತನೊಂದಿಗೆ ನ್ಯಾಯಾಲಯಕ್ಕೆ ಹಾಜರಾಗಿದ್ದೆ. ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಬಹುದು. ಮರುದಿನ, ನನ್ನ ಮಗ ಅಸ್ವಸ್ಥನಾಗಿದ್ದರಿಂದ ನಾನು ಆಸ್ಪತ್ರೆಯಲ್ಲಿದ್ದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...