Homeಮುಖಪುಟಇಬ್ಬರು ಮುಸ್ಲಿಮರ ಹತ್ಯೆ ಪ್ರಕರಣ; ಪೊಲೀಸರ ಮೇಲಿನ ಆರೋಪ ಪರಿಶೀಲನೆಗೆ ಎಸ್‌ಐಟಿ ರಚನೆ

ಇಬ್ಬರು ಮುಸ್ಲಿಮರ ಹತ್ಯೆ ಪ್ರಕರಣ; ಪೊಲೀಸರ ಮೇಲಿನ ಆರೋಪ ಪರಿಶೀಲನೆಗೆ ಎಸ್‌ಐಟಿ ರಚನೆ

- Advertisement -
- Advertisement -

ಭಿವಾನಿ ಜಿಲ್ಲೆಯಲ್ಲಿ ಇಬ್ಬರು ಮುಸ್ಲಿಮರ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಸಂಸ್ಥೆ ನಿರ್ಲಕ್ಷ್ಯ ತಾಳಿದೆ ಎಂಬ ಆರೋಪಗಳನ್ನು ಪರಿಶೀಲಿಸಲು ಹರಿಯಾಣ ಪೊಲೀಸರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದಾರೆ.

ಫೆಬ್ರವರಿ 16 ರಂದು ರಾಜಸ್ಥಾನದ ಭರತ್‌ಪುರ ಜಿಲ್ಲೆಯಿಂದ ಇಬ್ಬರು ಮುಸ್ಲಿಮರನ್ನು ಅಪಹರಿಸಿದ ಗೋರಕ್ಷಕರು ಕೊಲೆ ಮಾಡಿದ್ದಾರೆ ಎಂಬ ಆರೋಪಗಳು ಬಂದಿವೆ. ನಾಸಿರ್ ಮತ್ತು ಜುನೈದ್ ಅವರ ಶವಗಳು ಸುಟ್ಟ ಸ್ಥಿತಿಯಲ್ಲಿ ಕಾರಿನೊಳಗೆ ಪತ್ತೆಯಾಗಿದ್ದವು. ಈ ಪ್ರಕರಣದಲ್ಲಿ ಬಜರಂಗದಳದ ಸದಸ್ಯ ಮೋನು ಮಾನೇಸರ್ ಸೇರಿದಂತೆ ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ, ಆದರೆ ರಿಂಕು ಸೈನಿ ಎಂಬ ಒಬ್ಬನನ್ನು ಮಾತ್ರ ಈವರೆಗೆ ಬಂಧಿಸಿದ್ದಾರೆ.

ಜುನೈದ್ ಅವರ ಸಹೋದರ ಇಸ್ಮಾಯಿಲ್ ಪ್ರತಿಕ್ರಿಯಿಸಿದ್ದು, “ಹಲ್ಲೆಗೊಳಗಾಗಿದ್ದ ಸಂತ್ರಸ್ತರನ್ನು ಪೊಲೀಸ್ ಠಾಣೆಗೆ ಗೋರಕ್ಷಕರು ಕರೆದೊಯ್ದಿದ್ದರು. ಆದರೆ ಹರಿಯಾಣದ ನುಹ್ ಜಿಲ್ಲೆಯ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಳ್ಳಲು ನಿರಾಕರಿಸಿದರು” ಎಂದು ಆರೋಪಿಸಿದ್ದಾರೆ.

ನಾಸಿರ್ ಮತ್ತು ಜುನೈದ್ ಅವರನ್ನು ಅಪಹರಿಸಿದ ನಂತರ ಆರೋಪಿಗಳು ಪೊಲೀಸರನ್ನು ಭೇಟಿ ನೀಡಿದ್ದಾರೆ ಎಂಬ ಅಂಶವನ್ನು ಗಂಭೀರವಾಗಿ ರಾಜಸ್ಥಾನ ಪೊಲೀಸರು ಪರಿಗಣಿಸಿದ್ದಾರೆ. ‘ಅಪರಾಧ ತನಿಖಾ ಸಂಸ್ಥೆ ಪೊಲೀಸ್ ಠಾಣೆ’ಯ ಸಮೀಪವಿರುವ ಎಲ್ಲಾ ಸಂಸ್ಥೆಗಳ ಸಿಸಿಟಿವಿ ದೃಶ್ಯಗಳನ್ನು ರಾಜಸ್ಥಾನ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆದರೆ, ಈ ಆರೋಪ ನಿರಾಧಾರ ಎಂದು ನುಹ್ ಪೊಲೀಸ್ ವರಿಷ್ಠಾಧಿಕಾರಿ ವರುಣ್ ಸಿಂಗ್ಲಾ ತಿಳಿಸಿದ್ದಾರೆ. ಆರೋಪಗಳನ್ನು ಪರಿಶೀಲಿಸಲು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಉಷಾ ಕುಂದು ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

“ಅಪರಾಧ ತನಿಖಾ ಸಂಸ್ಥೆಯ ಪಾತ್ರದ ಕುರಿತು ರಾಜಸ್ಥಾನ ಪೊಲೀಸರ ವರದಿ ಏನು ತಿಳಿಸುತ್ತಿದೆ ಎಂದು ತಿಳಿಯಲು ನಾನು ಕಾಯುತ್ತಿದ್ದೇನೆ. ನಮ್ಮ ಪೊಲೀಸರು ಭಾಗಿಯಾಗಿರುವುದು ಕಂಡುಬಂದರೆ, ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

ಇದರ ನಡುವೆ ಆರೋಪಿ ಮಾನೇಸರ್ ಅವರನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಸಂತ್ರಸ್ತ ಕುಟುಂಬಗಳು ಧರಣಿ ನಡೆಸುತ್ತಿವೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

“ನಮಗೆ ನ್ಯಾಯ ನೀಡಲಾಗಿಲ್ಲ” ಎಂದು ಜುನೈದ್ ಅವರ ಸಂಬಂಧಿಕರೊಬ್ಬರು ಭಾನುವಾರ ಆರೋಪಿಸಿದ್ದಾರೆ. “ಮೋನು ಮಾನೇಸರ್ ಅವರನ್ನು ಬಂಧಿಸಬೇಕು; ಅಲ್ಲಿಯವರೆಗೆ ನಾವು ಧರಣಿಯನ್ನು ಮುಂದುವರಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಗೋಸಂರಕ್ಷಣೆ ಹೆಸರಲ್ಲಿ ಆಗಾಗ್ಗೆ ವಿವಾದಗಳನ್ನು ಸೃಷ್ಟಿಸುತ್ತಿರುವ ಮಾನೇಸರ್, ಪ್ರಕರಣದಲ್ಲಿ ತಾನು ಭಾಗಿಯಾಗಿರುವುದನ್ನು ನಿರಾಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಗೋವು ಕಳ್ಳಸಾಗಣೆದಾರರನ್ನು ಹಿಂಬಾಲಿಸುವ, ಎದುರಿಸುವ ಮತ್ತು ಬಂಧಿಸುವ ವೀಡಿಯೋಗಳನ್ನು ಹಂಚಿಕೊಳ್ಳುವಲ್ಲಿ ಈ ಆರೋಪಿ ಮಾನೇಸರ್‌ ಪ್ರಖ್ಯಾತನಾಗಿದ್ದಾನೆ.

ಮಾನೇಸರ್ 2013ರಿಂದಲೂ ಭಜರಂಗ ದಳದೊಂದಿಗೆ ಸಂಬಂಧ ಹೊಂದಿದ್ದಾರೆ. ಗೋ ರಕ್ಷಣೆಯ ಹೆಸರಲ್ಲಿ ಹಲವಾರು ದಾಂಧಲೆಗಳನ್ನು ನಡೆಸಿರುವುದನ್ನು ‘ಆಲ್ಟ್‌ನ್ಯೂಸ್‌’ ಬಯಲಿಗೆಳೆದಿದೆ.

ಹಸು ಕಳ್ಳಸಾಗಣೆದಾರರ ಮೇಲೆ ತಮ್ಮ ತಂಡವು ಎಂದಿಗೂ ಹಲ್ಲೆ ನಡೆಸಿಲ್ಲ ಎಂದು ಅವರು ಹೇಳಿಕೊಂಡಿದ್ದರೂ, ಹಿಂದುತ್ವ ಸಂಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿರುವ ಹಲವಾರು ಫೋಟೋಗಳು ಬೇರೆಯದೆ ಕಥೆಯನ್ನು ಹೇಳುತ್ತಿವೆ. ಇವರು ಹಿಡಿದ ಅನೇಕ ವ್ಯಕ್ತಿಗಳ ಚಿತ್ರಗಳು ಗಾಯಗೊಂಡ ಸ್ಥಿತಿಯಲ್ಲಿ ಕಂಡುಬಂದಿವೆ.

ಪ್ರಕರಣದಲ್ಲಿ ದಾಖಲಾಗಿರುವ ಮತ್ತೊಬ್ಬ ವ್ಯಕ್ತಿ ಲೋಕೇಶ್ ಸಿಂಗ್ಲಾ ಮೇವತ್ ಪ್ರತಿಕ್ರಿಯಿಸಿ, “ನನ್ನ ಕೈವಾಡ ಪ್ರಕರಣದಲ್ಲಿ ಇಲ್ಲ. ಕೇಂದ್ರೀಯ ತನಿಖಾ ದಳದಿಂದ ತನಿಖೆ ನಡೆಯಲಿ” ಎಂದು ಆಗ್ರಹಿಸಿದ್ದಾರೆ.

ಈ ವಿಷಯಕ್ಕೆ ಧಾರ್ಮಿಕ ಅಥವಾ ರಾಜಕೀಯ ಬಣ್ಣ ನೀಡಬಾರದು ಎಂದು ಗೋರಕ್ಷಕ ಗುಂಪಿನ ಗೌ ರಕ್ಷಾ ದಳದ ಸ್ಥಳೀಯ ಅಧ್ಯಕ್ಷ ಮೇವಾತ್ ಅವರು ವಿಡಿಯೋವೊಂದರಲ್ಲಿ ಹೇಳಿದ್ದಾರೆ.

“ನನ್ನನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ. ಆದರೆ ಇದು ಯಾವುದೇ ಸತ್ಯವನ್ನು ಆಧರಿಸಿಲ್ಲ. ಫೆಬ್ರವರಿ 14 ರಂದು ನಾನು ನನ್ನ ಸ್ನೇಹಿತನೊಂದಿಗೆ ನ್ಯಾಯಾಲಯಕ್ಕೆ ಹಾಜರಾಗಿದ್ದೆ. ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಬಹುದು. ಮರುದಿನ, ನನ್ನ ಮಗ ಅಸ್ವಸ್ಥನಾಗಿದ್ದರಿಂದ ನಾನು ಆಸ್ಪತ್ರೆಯಲ್ಲಿದ್ದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...