Homeಮುಖಪುಟಪಾಕ್‌ ಪರ ಘೋಷಣೆಯ ಆರೋಪಿಗಳಿಗೆ ವಕಾಲತ್ತು ನಿರ್ಬಂಧ : ಹುಬ್ಬಳ್ಳಿ ಬಾರ್‌ ಅಸೋಷಿಯೇಶನ್‌ಗೆ ಹೈಕೋರ್ಟ್‌ ಛೀಮಾರಿ

ಪಾಕ್‌ ಪರ ಘೋಷಣೆಯ ಆರೋಪಿಗಳಿಗೆ ವಕಾಲತ್ತು ನಿರ್ಬಂಧ : ಹುಬ್ಬಳ್ಳಿ ಬಾರ್‌ ಅಸೋಷಿಯೇಶನ್‌ಗೆ ಹೈಕೋರ್ಟ್‌ ಛೀಮಾರಿ

ಬಾರ್ ಅಸೋಸಿಯೇಷನ್ ತನ್ನ ​​ನಿರ್ಣಯವನ್ನು ಮರುಪರಿಶೀಲಿಸದಿದ್ದರೆ, ಅದರ ಕಾನೂನು ಮಾನ್ಯತೆಯನ್ನು ರದ್ದುಪಡಿಸಲಾಗುತ್ತದೆ ಎಂದು ಸಹ ಕೋರ್ಟ್‌ ಎಚ್ಚರಿಕೆ ನೀಡಿದೆ.

- Advertisement -
- Advertisement -

ದೇಶದ್ರೋಹದ ಆರೋಪ ಹೊತ್ತಿರುವ ಕಾಶ್ಮೀರಿ ವಿದ್ಯಾರ್ಥಿಗಳ ಪರವಾಗಿ ವಕಾಲತ್ತು ವಹಿಸಬಾರದೆಂದು ಹುಬ್ಬಳಿಯ ಬಾರ್‌ ಕೌನ್ಸಿಲ್‌ ತೆಗೆದುಕೊಂಡಿರುವ ನಿರ್ಣಯವನ್ನು ವಾಪಸ್‌ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್ ಛೀಮಾರಿ ಹಾಕಿದೆ.

ಅಲ್ಲದೇ ಆ ವಿದ್ಯಾರ್ಥಿನಿಗಳನ್ನು ಪ್ರತಿನಿಧಿಸುವ ವಕೀಲರಿಗೆ ಪೊಲೀಸ್ ರಕ್ಷಣೆ ನೀಡಬೇಕೆಂದು ಹುಬ್ಬಳ್ಳಿಯ ಪೊಲೀಸ್‌ ಕಮಿಷನರ್‌ಗೆ ಆದೇಶಿಸಿದೆ.

ಕಾಶ್ಮೀರಿ ವಿದ್ಯಾರ್ಥಿಗಳ ಪರವಾಗಿ ವಕಾಲತ್ತು ವಹಿಸಬಾರದೆಂದು ಹುಬ್ಬಳಿಯ ಬಾರ್‌ ಕೌನ್ಸಿಲ್‌ ತೆಗೆದುಕೊಂಡಿರುವ ನಿರ್ಣಯಯವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ಅಂಗೀಕರಿಸಿದೆ. ಬಾರ್ ಅಸೋಸಿಯೇಷನ್ ತನ್ನ ​​ನಿರ್ಣಯವನ್ನು ಮರುಪರಿಶೀಲಿಸದಿದ್ದರೆ, ಅದರ ಕಾನೂನು ಮಾನ್ಯತೆಯನ್ನು ರದ್ದುಪಡಿಸಲಾಗುತ್ತದೆ ಎಂದು ಸಹ ಕೋರ್ಟ್‌ ಎಚ್ಚರಿಕೆ ನೀಡಿದೆ.

ವಿಚಾರಣೆಯ ಸಮಯದಲ್ಲಿ ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ “ಬಹಿಷ್ಕಾರ ಹಾಕುವ ಮೂಲಕ ಅವರು ನ್ಯಾಯಾಲಯದ ಕೆಲಸವನ್ನು ನಿಲ್ಲಿಸುತ್ತಿದ್ದಾರೆ. ವಕೀಲರೇ ತಮ್ಮಷ್ಟಕ್ಕೆ ತಾವೇ ವಿಚಾರಣೆ ನಡೆಸುವುದನ್ನು ಒಪ್ಪಲಾಗುವುದಿಲ್ಲ” ಎಂದಿದ್ದಾರೆ.

ನ್ಯಾಯಪೀಠವು “ಅಂಗೀಕರಿಸಿದ ನಿರ್ಣಯವನ್ನು ಮರುಪರಿಶೀಲಿಸುವಂತೆ ನಾವು ಪ್ರತಿವಾದಿ ಸಂಖ್ಯೆ 4 (ಬಾರ್ ಅಸೋಸಿಯೇಷನ್)ಗೆ ವಿನಂತಿಸುತ್ತೇವೆ. ಇದು ಕಾನೂನಿನ ಆದೇಶಕ್ಕೆ ವಿರುದ್ಧವಾಗಿದೆ. ಬಾರ್‌ ಕೌನ್ಸಿಲ್‌ ಆಫ್‌ ಇಂಡಿಯಾ ಸಾಂವಿಧಾನಿಕ ಆದೇಶದಿಂದ ಬದ್ಧವಾಗಿದೆ ಮತ್ತು ಅದು ರೂಪಿಸಿದ ನಿಯಮಗಳಲ್ಲಿ ನೈತಿಕತೆಯನ್ನು ಪ್ರತಿಯೊಬ್ಬ ಸದಸ್ಯರು ಅನುಸರಿಸಲು ಬದ್ಧರಾಗಿರುತ್ತಾರೆ” ಎಂದು ಕೋರ್ಟ್‌ ಹೇಳಿದೆ.

ಬಾರ್ ಕೌನ್ಸಿಲ್ ಆಫ್ ಇಂಡಿಯಾದ 4 ನೇ ಪ್ರತಿವಾದಿಯು ತಮ್ಮ ನಿರ್ಣಯವನ್ನು ಮರುಪರಿಶೀಲಿಸಲು ನಿರಾಕರಿಸಿದರೆ, ನಾವು ಅದರ ಕಾನೂನುಬದ್ಧತೆಯನ್ನು ಮುಂದಿನ ವಿಚಾರಣೆಯಲ್ಲಿ ಪರಿಗಣಿಸಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.

ಹುಬ್ಬಳಿಯಲ್ಲಿ ಎಂಜಿನಿಯರಿಂಗ್ ಕಲಿಯುತ್ತಿರುವ ಮೂವರು ಕಾಶ್ಮೀರಿ ಮೂಲದ ವಿದ್ಯಾರ್ಥಿಗಳ ಮೇಲೆ ಪಾಕಿಸ್ತಾನವನ್ನು ಬೆಂಬಲಿಸಿ ಘೋಷಣೆ ಕೂಗಿದ ಆರೋಪದ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ.

ಸೋಮವಾರ 1600 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುವ ಹುಬ್ಬಳಿ ಬಾರ್ ಅಸೋಸಿಯೇಷನ್, ಆ ವಿದ್ಯಾರ್ಥಿಗಳ ಪರ ವಕಾಲತ್ತು ವಹಿಸದಂತೆ ನಿರ್ಣಯವನ್ನು ಅಂಗೀಕರಿಸಿದೆ. ಆರೋಪಿಗಳು “ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ” ಪಾಲ್ಗೊಂಡಿದ್ದರಿಂದ ಕಾನೂನು ಪ್ರಾತಿನಿಧ್ಯಕ್ಕೆ ಅರ್ಹರಲ್ಲ ಎಂದು ವಾದಿಸಿದೆ.

ಈ ನಿರ್ಣಯವನ್ನು ಪ್ರಶ್ನಿಸಿ, 24 ವಕೀಲರ ಗುಂಪು ಹೈಕೋರ್ಟ್ ಮೆಟ್ಟಿಲೇರಿದೆ. ಕಾನೂನು ನೆರವು ಪಡೆಯುವ ಆರೋಪಿಯ ತನ್ನ ಮೂಲಭೂತ ಹಕ್ಕನ್ನು ಬಾರ್‌ ಕೌನ್ಸಿಲ್‌ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಈ ನಿರ್ಣಯವು ಭಯದ ವಾತಾವರಣವನ್ನು ಸೃಷ್ಟಿಸಲು ಕಾರಣವಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಬೆದರಿಕೆ ಕಾರಣ ಯಾವುದೇ ವಕೀಲರು ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಿಲ್ಲ ಎಂದು ದೂರಿದ್ದಾರೆ.

ಈ ಹಿಂದೆ ಮೈಸೂರು ಬಾರ್ ಅಸೋಸಿಯೇಷನ್ ​​ಸಹ ಫ್ರಿ ಕಾಶ್ಮೀರ್‌ ಭಿತ್ತಿಪತ್ರದ ವಿಚಾರದಲ್ಲಿ ಇದೇ ರೀತಿಯ ನಿರ್ಣಯವನ್ನು ಅಂಗೀಕರಿಸಿತ್ತು. ಆ ನಂತರ ಕರ್ನಾಟಕದ ವಿವಿಧ ಭಾಗಗಳಿಂದ ಹಲವಾರು ವಕೀಲರು ಬಂದು ವಾದ ನಡೆಸಿದ ನಂತರ ಆ ವಿದ್ಯಾರ್ಥಿನಿಯನ್ನು ಜಾಮೀನು ದೊರಕಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...