Homeಮುಖಪುಟಪಾಕ್‌ ಪರ ಘೋಷಣೆಯ ಆರೋಪಿಗಳಿಗೆ ವಕಾಲತ್ತು ನಿರ್ಬಂಧ : ಹುಬ್ಬಳ್ಳಿ ಬಾರ್‌ ಅಸೋಷಿಯೇಶನ್‌ಗೆ ಹೈಕೋರ್ಟ್‌ ಛೀಮಾರಿ

ಪಾಕ್‌ ಪರ ಘೋಷಣೆಯ ಆರೋಪಿಗಳಿಗೆ ವಕಾಲತ್ತು ನಿರ್ಬಂಧ : ಹುಬ್ಬಳ್ಳಿ ಬಾರ್‌ ಅಸೋಷಿಯೇಶನ್‌ಗೆ ಹೈಕೋರ್ಟ್‌ ಛೀಮಾರಿ

ಬಾರ್ ಅಸೋಸಿಯೇಷನ್ ತನ್ನ ​​ನಿರ್ಣಯವನ್ನು ಮರುಪರಿಶೀಲಿಸದಿದ್ದರೆ, ಅದರ ಕಾನೂನು ಮಾನ್ಯತೆಯನ್ನು ರದ್ದುಪಡಿಸಲಾಗುತ್ತದೆ ಎಂದು ಸಹ ಕೋರ್ಟ್‌ ಎಚ್ಚರಿಕೆ ನೀಡಿದೆ.

- Advertisement -
- Advertisement -

ದೇಶದ್ರೋಹದ ಆರೋಪ ಹೊತ್ತಿರುವ ಕಾಶ್ಮೀರಿ ವಿದ್ಯಾರ್ಥಿಗಳ ಪರವಾಗಿ ವಕಾಲತ್ತು ವಹಿಸಬಾರದೆಂದು ಹುಬ್ಬಳಿಯ ಬಾರ್‌ ಕೌನ್ಸಿಲ್‌ ತೆಗೆದುಕೊಂಡಿರುವ ನಿರ್ಣಯವನ್ನು ವಾಪಸ್‌ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್ ಛೀಮಾರಿ ಹಾಕಿದೆ.

ಅಲ್ಲದೇ ಆ ವಿದ್ಯಾರ್ಥಿನಿಗಳನ್ನು ಪ್ರತಿನಿಧಿಸುವ ವಕೀಲರಿಗೆ ಪೊಲೀಸ್ ರಕ್ಷಣೆ ನೀಡಬೇಕೆಂದು ಹುಬ್ಬಳ್ಳಿಯ ಪೊಲೀಸ್‌ ಕಮಿಷನರ್‌ಗೆ ಆದೇಶಿಸಿದೆ.

ಕಾಶ್ಮೀರಿ ವಿದ್ಯಾರ್ಥಿಗಳ ಪರವಾಗಿ ವಕಾಲತ್ತು ವಹಿಸಬಾರದೆಂದು ಹುಬ್ಬಳಿಯ ಬಾರ್‌ ಕೌನ್ಸಿಲ್‌ ತೆಗೆದುಕೊಂಡಿರುವ ನಿರ್ಣಯಯವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ಅಂಗೀಕರಿಸಿದೆ. ಬಾರ್ ಅಸೋಸಿಯೇಷನ್ ತನ್ನ ​​ನಿರ್ಣಯವನ್ನು ಮರುಪರಿಶೀಲಿಸದಿದ್ದರೆ, ಅದರ ಕಾನೂನು ಮಾನ್ಯತೆಯನ್ನು ರದ್ದುಪಡಿಸಲಾಗುತ್ತದೆ ಎಂದು ಸಹ ಕೋರ್ಟ್‌ ಎಚ್ಚರಿಕೆ ನೀಡಿದೆ.

ವಿಚಾರಣೆಯ ಸಮಯದಲ್ಲಿ ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ “ಬಹಿಷ್ಕಾರ ಹಾಕುವ ಮೂಲಕ ಅವರು ನ್ಯಾಯಾಲಯದ ಕೆಲಸವನ್ನು ನಿಲ್ಲಿಸುತ್ತಿದ್ದಾರೆ. ವಕೀಲರೇ ತಮ್ಮಷ್ಟಕ್ಕೆ ತಾವೇ ವಿಚಾರಣೆ ನಡೆಸುವುದನ್ನು ಒಪ್ಪಲಾಗುವುದಿಲ್ಲ” ಎಂದಿದ್ದಾರೆ.

ನ್ಯಾಯಪೀಠವು “ಅಂಗೀಕರಿಸಿದ ನಿರ್ಣಯವನ್ನು ಮರುಪರಿಶೀಲಿಸುವಂತೆ ನಾವು ಪ್ರತಿವಾದಿ ಸಂಖ್ಯೆ 4 (ಬಾರ್ ಅಸೋಸಿಯೇಷನ್)ಗೆ ವಿನಂತಿಸುತ್ತೇವೆ. ಇದು ಕಾನೂನಿನ ಆದೇಶಕ್ಕೆ ವಿರುದ್ಧವಾಗಿದೆ. ಬಾರ್‌ ಕೌನ್ಸಿಲ್‌ ಆಫ್‌ ಇಂಡಿಯಾ ಸಾಂವಿಧಾನಿಕ ಆದೇಶದಿಂದ ಬದ್ಧವಾಗಿದೆ ಮತ್ತು ಅದು ರೂಪಿಸಿದ ನಿಯಮಗಳಲ್ಲಿ ನೈತಿಕತೆಯನ್ನು ಪ್ರತಿಯೊಬ್ಬ ಸದಸ್ಯರು ಅನುಸರಿಸಲು ಬದ್ಧರಾಗಿರುತ್ತಾರೆ” ಎಂದು ಕೋರ್ಟ್‌ ಹೇಳಿದೆ.

ಬಾರ್ ಕೌನ್ಸಿಲ್ ಆಫ್ ಇಂಡಿಯಾದ 4 ನೇ ಪ್ರತಿವಾದಿಯು ತಮ್ಮ ನಿರ್ಣಯವನ್ನು ಮರುಪರಿಶೀಲಿಸಲು ನಿರಾಕರಿಸಿದರೆ, ನಾವು ಅದರ ಕಾನೂನುಬದ್ಧತೆಯನ್ನು ಮುಂದಿನ ವಿಚಾರಣೆಯಲ್ಲಿ ಪರಿಗಣಿಸಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.

ಹುಬ್ಬಳಿಯಲ್ಲಿ ಎಂಜಿನಿಯರಿಂಗ್ ಕಲಿಯುತ್ತಿರುವ ಮೂವರು ಕಾಶ್ಮೀರಿ ಮೂಲದ ವಿದ್ಯಾರ್ಥಿಗಳ ಮೇಲೆ ಪಾಕಿಸ್ತಾನವನ್ನು ಬೆಂಬಲಿಸಿ ಘೋಷಣೆ ಕೂಗಿದ ಆರೋಪದ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ.

ಸೋಮವಾರ 1600 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುವ ಹುಬ್ಬಳಿ ಬಾರ್ ಅಸೋಸಿಯೇಷನ್, ಆ ವಿದ್ಯಾರ್ಥಿಗಳ ಪರ ವಕಾಲತ್ತು ವಹಿಸದಂತೆ ನಿರ್ಣಯವನ್ನು ಅಂಗೀಕರಿಸಿದೆ. ಆರೋಪಿಗಳು “ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ” ಪಾಲ್ಗೊಂಡಿದ್ದರಿಂದ ಕಾನೂನು ಪ್ರಾತಿನಿಧ್ಯಕ್ಕೆ ಅರ್ಹರಲ್ಲ ಎಂದು ವಾದಿಸಿದೆ.

ಈ ನಿರ್ಣಯವನ್ನು ಪ್ರಶ್ನಿಸಿ, 24 ವಕೀಲರ ಗುಂಪು ಹೈಕೋರ್ಟ್ ಮೆಟ್ಟಿಲೇರಿದೆ. ಕಾನೂನು ನೆರವು ಪಡೆಯುವ ಆರೋಪಿಯ ತನ್ನ ಮೂಲಭೂತ ಹಕ್ಕನ್ನು ಬಾರ್‌ ಕೌನ್ಸಿಲ್‌ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಈ ನಿರ್ಣಯವು ಭಯದ ವಾತಾವರಣವನ್ನು ಸೃಷ್ಟಿಸಲು ಕಾರಣವಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಬೆದರಿಕೆ ಕಾರಣ ಯಾವುದೇ ವಕೀಲರು ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಿಲ್ಲ ಎಂದು ದೂರಿದ್ದಾರೆ.

ಈ ಹಿಂದೆ ಮೈಸೂರು ಬಾರ್ ಅಸೋಸಿಯೇಷನ್ ​​ಸಹ ಫ್ರಿ ಕಾಶ್ಮೀರ್‌ ಭಿತ್ತಿಪತ್ರದ ವಿಚಾರದಲ್ಲಿ ಇದೇ ರೀತಿಯ ನಿರ್ಣಯವನ್ನು ಅಂಗೀಕರಿಸಿತ್ತು. ಆ ನಂತರ ಕರ್ನಾಟಕದ ವಿವಿಧ ಭಾಗಗಳಿಂದ ಹಲವಾರು ವಕೀಲರು ಬಂದು ವಾದ ನಡೆಸಿದ ನಂತರ ಆ ವಿದ್ಯಾರ್ಥಿನಿಯನ್ನು ಜಾಮೀನು ದೊರಕಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...