Homeಮುಖಪುಟಪಾಕ್‌ ಪರ ಘೋಷಣೆಯ ಆರೋಪಿಗಳಿಗೆ ವಕಾಲತ್ತು ನಿರ್ಬಂಧ : ಹುಬ್ಬಳ್ಳಿ ಬಾರ್‌ ಅಸೋಷಿಯೇಶನ್‌ಗೆ ಹೈಕೋರ್ಟ್‌ ಛೀಮಾರಿ

ಪಾಕ್‌ ಪರ ಘೋಷಣೆಯ ಆರೋಪಿಗಳಿಗೆ ವಕಾಲತ್ತು ನಿರ್ಬಂಧ : ಹುಬ್ಬಳ್ಳಿ ಬಾರ್‌ ಅಸೋಷಿಯೇಶನ್‌ಗೆ ಹೈಕೋರ್ಟ್‌ ಛೀಮಾರಿ

ಬಾರ್ ಅಸೋಸಿಯೇಷನ್ ತನ್ನ ​​ನಿರ್ಣಯವನ್ನು ಮರುಪರಿಶೀಲಿಸದಿದ್ದರೆ, ಅದರ ಕಾನೂನು ಮಾನ್ಯತೆಯನ್ನು ರದ್ದುಪಡಿಸಲಾಗುತ್ತದೆ ಎಂದು ಸಹ ಕೋರ್ಟ್‌ ಎಚ್ಚರಿಕೆ ನೀಡಿದೆ.

- Advertisement -
- Advertisement -

ದೇಶದ್ರೋಹದ ಆರೋಪ ಹೊತ್ತಿರುವ ಕಾಶ್ಮೀರಿ ವಿದ್ಯಾರ್ಥಿಗಳ ಪರವಾಗಿ ವಕಾಲತ್ತು ವಹಿಸಬಾರದೆಂದು ಹುಬ್ಬಳಿಯ ಬಾರ್‌ ಕೌನ್ಸಿಲ್‌ ತೆಗೆದುಕೊಂಡಿರುವ ನಿರ್ಣಯವನ್ನು ವಾಪಸ್‌ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್ ಛೀಮಾರಿ ಹಾಕಿದೆ.

ಅಲ್ಲದೇ ಆ ವಿದ್ಯಾರ್ಥಿನಿಗಳನ್ನು ಪ್ರತಿನಿಧಿಸುವ ವಕೀಲರಿಗೆ ಪೊಲೀಸ್ ರಕ್ಷಣೆ ನೀಡಬೇಕೆಂದು ಹುಬ್ಬಳ್ಳಿಯ ಪೊಲೀಸ್‌ ಕಮಿಷನರ್‌ಗೆ ಆದೇಶಿಸಿದೆ.

ಕಾಶ್ಮೀರಿ ವಿದ್ಯಾರ್ಥಿಗಳ ಪರವಾಗಿ ವಕಾಲತ್ತು ವಹಿಸಬಾರದೆಂದು ಹುಬ್ಬಳಿಯ ಬಾರ್‌ ಕೌನ್ಸಿಲ್‌ ತೆಗೆದುಕೊಂಡಿರುವ ನಿರ್ಣಯಯವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ಅಂಗೀಕರಿಸಿದೆ. ಬಾರ್ ಅಸೋಸಿಯೇಷನ್ ತನ್ನ ​​ನಿರ್ಣಯವನ್ನು ಮರುಪರಿಶೀಲಿಸದಿದ್ದರೆ, ಅದರ ಕಾನೂನು ಮಾನ್ಯತೆಯನ್ನು ರದ್ದುಪಡಿಸಲಾಗುತ್ತದೆ ಎಂದು ಸಹ ಕೋರ್ಟ್‌ ಎಚ್ಚರಿಕೆ ನೀಡಿದೆ.

ವಿಚಾರಣೆಯ ಸಮಯದಲ್ಲಿ ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ “ಬಹಿಷ್ಕಾರ ಹಾಕುವ ಮೂಲಕ ಅವರು ನ್ಯಾಯಾಲಯದ ಕೆಲಸವನ್ನು ನಿಲ್ಲಿಸುತ್ತಿದ್ದಾರೆ. ವಕೀಲರೇ ತಮ್ಮಷ್ಟಕ್ಕೆ ತಾವೇ ವಿಚಾರಣೆ ನಡೆಸುವುದನ್ನು ಒಪ್ಪಲಾಗುವುದಿಲ್ಲ” ಎಂದಿದ್ದಾರೆ.

ನ್ಯಾಯಪೀಠವು “ಅಂಗೀಕರಿಸಿದ ನಿರ್ಣಯವನ್ನು ಮರುಪರಿಶೀಲಿಸುವಂತೆ ನಾವು ಪ್ರತಿವಾದಿ ಸಂಖ್ಯೆ 4 (ಬಾರ್ ಅಸೋಸಿಯೇಷನ್)ಗೆ ವಿನಂತಿಸುತ್ತೇವೆ. ಇದು ಕಾನೂನಿನ ಆದೇಶಕ್ಕೆ ವಿರುದ್ಧವಾಗಿದೆ. ಬಾರ್‌ ಕೌನ್ಸಿಲ್‌ ಆಫ್‌ ಇಂಡಿಯಾ ಸಾಂವಿಧಾನಿಕ ಆದೇಶದಿಂದ ಬದ್ಧವಾಗಿದೆ ಮತ್ತು ಅದು ರೂಪಿಸಿದ ನಿಯಮಗಳಲ್ಲಿ ನೈತಿಕತೆಯನ್ನು ಪ್ರತಿಯೊಬ್ಬ ಸದಸ್ಯರು ಅನುಸರಿಸಲು ಬದ್ಧರಾಗಿರುತ್ತಾರೆ” ಎಂದು ಕೋರ್ಟ್‌ ಹೇಳಿದೆ.

ಬಾರ್ ಕೌನ್ಸಿಲ್ ಆಫ್ ಇಂಡಿಯಾದ 4 ನೇ ಪ್ರತಿವಾದಿಯು ತಮ್ಮ ನಿರ್ಣಯವನ್ನು ಮರುಪರಿಶೀಲಿಸಲು ನಿರಾಕರಿಸಿದರೆ, ನಾವು ಅದರ ಕಾನೂನುಬದ್ಧತೆಯನ್ನು ಮುಂದಿನ ವಿಚಾರಣೆಯಲ್ಲಿ ಪರಿಗಣಿಸಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.

ಹುಬ್ಬಳಿಯಲ್ಲಿ ಎಂಜಿನಿಯರಿಂಗ್ ಕಲಿಯುತ್ತಿರುವ ಮೂವರು ಕಾಶ್ಮೀರಿ ಮೂಲದ ವಿದ್ಯಾರ್ಥಿಗಳ ಮೇಲೆ ಪಾಕಿಸ್ತಾನವನ್ನು ಬೆಂಬಲಿಸಿ ಘೋಷಣೆ ಕೂಗಿದ ಆರೋಪದ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ.

ಸೋಮವಾರ 1600 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುವ ಹುಬ್ಬಳಿ ಬಾರ್ ಅಸೋಸಿಯೇಷನ್, ಆ ವಿದ್ಯಾರ್ಥಿಗಳ ಪರ ವಕಾಲತ್ತು ವಹಿಸದಂತೆ ನಿರ್ಣಯವನ್ನು ಅಂಗೀಕರಿಸಿದೆ. ಆರೋಪಿಗಳು “ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ” ಪಾಲ್ಗೊಂಡಿದ್ದರಿಂದ ಕಾನೂನು ಪ್ರಾತಿನಿಧ್ಯಕ್ಕೆ ಅರ್ಹರಲ್ಲ ಎಂದು ವಾದಿಸಿದೆ.

ಈ ನಿರ್ಣಯವನ್ನು ಪ್ರಶ್ನಿಸಿ, 24 ವಕೀಲರ ಗುಂಪು ಹೈಕೋರ್ಟ್ ಮೆಟ್ಟಿಲೇರಿದೆ. ಕಾನೂನು ನೆರವು ಪಡೆಯುವ ಆರೋಪಿಯ ತನ್ನ ಮೂಲಭೂತ ಹಕ್ಕನ್ನು ಬಾರ್‌ ಕೌನ್ಸಿಲ್‌ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಈ ನಿರ್ಣಯವು ಭಯದ ವಾತಾವರಣವನ್ನು ಸೃಷ್ಟಿಸಲು ಕಾರಣವಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಬೆದರಿಕೆ ಕಾರಣ ಯಾವುದೇ ವಕೀಲರು ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಿಲ್ಲ ಎಂದು ದೂರಿದ್ದಾರೆ.

ಈ ಹಿಂದೆ ಮೈಸೂರು ಬಾರ್ ಅಸೋಸಿಯೇಷನ್ ​​ಸಹ ಫ್ರಿ ಕಾಶ್ಮೀರ್‌ ಭಿತ್ತಿಪತ್ರದ ವಿಚಾರದಲ್ಲಿ ಇದೇ ರೀತಿಯ ನಿರ್ಣಯವನ್ನು ಅಂಗೀಕರಿಸಿತ್ತು. ಆ ನಂತರ ಕರ್ನಾಟಕದ ವಿವಿಧ ಭಾಗಗಳಿಂದ ಹಲವಾರು ವಕೀಲರು ಬಂದು ವಾದ ನಡೆಸಿದ ನಂತರ ಆ ವಿದ್ಯಾರ್ಥಿನಿಯನ್ನು ಜಾಮೀನು ದೊರಕಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...