Homeಮುಖಪುಟಪಾಕ್‌ ಪರ ಘೋಷಣೆಯ ಆರೋಪಿಗಳಿಗೆ ವಕಾಲತ್ತು ನಿರ್ಬಂಧ : ಹುಬ್ಬಳ್ಳಿ ಬಾರ್‌ ಅಸೋಷಿಯೇಶನ್‌ಗೆ ಹೈಕೋರ್ಟ್‌ ಛೀಮಾರಿ

ಪಾಕ್‌ ಪರ ಘೋಷಣೆಯ ಆರೋಪಿಗಳಿಗೆ ವಕಾಲತ್ತು ನಿರ್ಬಂಧ : ಹುಬ್ಬಳ್ಳಿ ಬಾರ್‌ ಅಸೋಷಿಯೇಶನ್‌ಗೆ ಹೈಕೋರ್ಟ್‌ ಛೀಮಾರಿ

ಬಾರ್ ಅಸೋಸಿಯೇಷನ್ ತನ್ನ ​​ನಿರ್ಣಯವನ್ನು ಮರುಪರಿಶೀಲಿಸದಿದ್ದರೆ, ಅದರ ಕಾನೂನು ಮಾನ್ಯತೆಯನ್ನು ರದ್ದುಪಡಿಸಲಾಗುತ್ತದೆ ಎಂದು ಸಹ ಕೋರ್ಟ್‌ ಎಚ್ಚರಿಕೆ ನೀಡಿದೆ.

- Advertisement -
- Advertisement -

ದೇಶದ್ರೋಹದ ಆರೋಪ ಹೊತ್ತಿರುವ ಕಾಶ್ಮೀರಿ ವಿದ್ಯಾರ್ಥಿಗಳ ಪರವಾಗಿ ವಕಾಲತ್ತು ವಹಿಸಬಾರದೆಂದು ಹುಬ್ಬಳಿಯ ಬಾರ್‌ ಕೌನ್ಸಿಲ್‌ ತೆಗೆದುಕೊಂಡಿರುವ ನಿರ್ಣಯವನ್ನು ವಾಪಸ್‌ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್ ಛೀಮಾರಿ ಹಾಕಿದೆ.

ಅಲ್ಲದೇ ಆ ವಿದ್ಯಾರ್ಥಿನಿಗಳನ್ನು ಪ್ರತಿನಿಧಿಸುವ ವಕೀಲರಿಗೆ ಪೊಲೀಸ್ ರಕ್ಷಣೆ ನೀಡಬೇಕೆಂದು ಹುಬ್ಬಳ್ಳಿಯ ಪೊಲೀಸ್‌ ಕಮಿಷನರ್‌ಗೆ ಆದೇಶಿಸಿದೆ.

ಕಾಶ್ಮೀರಿ ವಿದ್ಯಾರ್ಥಿಗಳ ಪರವಾಗಿ ವಕಾಲತ್ತು ವಹಿಸಬಾರದೆಂದು ಹುಬ್ಬಳಿಯ ಬಾರ್‌ ಕೌನ್ಸಿಲ್‌ ತೆಗೆದುಕೊಂಡಿರುವ ನಿರ್ಣಯಯವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ಅಂಗೀಕರಿಸಿದೆ. ಬಾರ್ ಅಸೋಸಿಯೇಷನ್ ತನ್ನ ​​ನಿರ್ಣಯವನ್ನು ಮರುಪರಿಶೀಲಿಸದಿದ್ದರೆ, ಅದರ ಕಾನೂನು ಮಾನ್ಯತೆಯನ್ನು ರದ್ದುಪಡಿಸಲಾಗುತ್ತದೆ ಎಂದು ಸಹ ಕೋರ್ಟ್‌ ಎಚ್ಚರಿಕೆ ನೀಡಿದೆ.

ವಿಚಾರಣೆಯ ಸಮಯದಲ್ಲಿ ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ “ಬಹಿಷ್ಕಾರ ಹಾಕುವ ಮೂಲಕ ಅವರು ನ್ಯಾಯಾಲಯದ ಕೆಲಸವನ್ನು ನಿಲ್ಲಿಸುತ್ತಿದ್ದಾರೆ. ವಕೀಲರೇ ತಮ್ಮಷ್ಟಕ್ಕೆ ತಾವೇ ವಿಚಾರಣೆ ನಡೆಸುವುದನ್ನು ಒಪ್ಪಲಾಗುವುದಿಲ್ಲ” ಎಂದಿದ್ದಾರೆ.

ನ್ಯಾಯಪೀಠವು “ಅಂಗೀಕರಿಸಿದ ನಿರ್ಣಯವನ್ನು ಮರುಪರಿಶೀಲಿಸುವಂತೆ ನಾವು ಪ್ರತಿವಾದಿ ಸಂಖ್ಯೆ 4 (ಬಾರ್ ಅಸೋಸಿಯೇಷನ್)ಗೆ ವಿನಂತಿಸುತ್ತೇವೆ. ಇದು ಕಾನೂನಿನ ಆದೇಶಕ್ಕೆ ವಿರುದ್ಧವಾಗಿದೆ. ಬಾರ್‌ ಕೌನ್ಸಿಲ್‌ ಆಫ್‌ ಇಂಡಿಯಾ ಸಾಂವಿಧಾನಿಕ ಆದೇಶದಿಂದ ಬದ್ಧವಾಗಿದೆ ಮತ್ತು ಅದು ರೂಪಿಸಿದ ನಿಯಮಗಳಲ್ಲಿ ನೈತಿಕತೆಯನ್ನು ಪ್ರತಿಯೊಬ್ಬ ಸದಸ್ಯರು ಅನುಸರಿಸಲು ಬದ್ಧರಾಗಿರುತ್ತಾರೆ” ಎಂದು ಕೋರ್ಟ್‌ ಹೇಳಿದೆ.

ಬಾರ್ ಕೌನ್ಸಿಲ್ ಆಫ್ ಇಂಡಿಯಾದ 4 ನೇ ಪ್ರತಿವಾದಿಯು ತಮ್ಮ ನಿರ್ಣಯವನ್ನು ಮರುಪರಿಶೀಲಿಸಲು ನಿರಾಕರಿಸಿದರೆ, ನಾವು ಅದರ ಕಾನೂನುಬದ್ಧತೆಯನ್ನು ಮುಂದಿನ ವಿಚಾರಣೆಯಲ್ಲಿ ಪರಿಗಣಿಸಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.

ಹುಬ್ಬಳಿಯಲ್ಲಿ ಎಂಜಿನಿಯರಿಂಗ್ ಕಲಿಯುತ್ತಿರುವ ಮೂವರು ಕಾಶ್ಮೀರಿ ಮೂಲದ ವಿದ್ಯಾರ್ಥಿಗಳ ಮೇಲೆ ಪಾಕಿಸ್ತಾನವನ್ನು ಬೆಂಬಲಿಸಿ ಘೋಷಣೆ ಕೂಗಿದ ಆರೋಪದ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ.

ಸೋಮವಾರ 1600 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುವ ಹುಬ್ಬಳಿ ಬಾರ್ ಅಸೋಸಿಯೇಷನ್, ಆ ವಿದ್ಯಾರ್ಥಿಗಳ ಪರ ವಕಾಲತ್ತು ವಹಿಸದಂತೆ ನಿರ್ಣಯವನ್ನು ಅಂಗೀಕರಿಸಿದೆ. ಆರೋಪಿಗಳು “ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ” ಪಾಲ್ಗೊಂಡಿದ್ದರಿಂದ ಕಾನೂನು ಪ್ರಾತಿನಿಧ್ಯಕ್ಕೆ ಅರ್ಹರಲ್ಲ ಎಂದು ವಾದಿಸಿದೆ.

ಈ ನಿರ್ಣಯವನ್ನು ಪ್ರಶ್ನಿಸಿ, 24 ವಕೀಲರ ಗುಂಪು ಹೈಕೋರ್ಟ್ ಮೆಟ್ಟಿಲೇರಿದೆ. ಕಾನೂನು ನೆರವು ಪಡೆಯುವ ಆರೋಪಿಯ ತನ್ನ ಮೂಲಭೂತ ಹಕ್ಕನ್ನು ಬಾರ್‌ ಕೌನ್ಸಿಲ್‌ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಈ ನಿರ್ಣಯವು ಭಯದ ವಾತಾವರಣವನ್ನು ಸೃಷ್ಟಿಸಲು ಕಾರಣವಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಬೆದರಿಕೆ ಕಾರಣ ಯಾವುದೇ ವಕೀಲರು ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಿಲ್ಲ ಎಂದು ದೂರಿದ್ದಾರೆ.

ಈ ಹಿಂದೆ ಮೈಸೂರು ಬಾರ್ ಅಸೋಸಿಯೇಷನ್ ​​ಸಹ ಫ್ರಿ ಕಾಶ್ಮೀರ್‌ ಭಿತ್ತಿಪತ್ರದ ವಿಚಾರದಲ್ಲಿ ಇದೇ ರೀತಿಯ ನಿರ್ಣಯವನ್ನು ಅಂಗೀಕರಿಸಿತ್ತು. ಆ ನಂತರ ಕರ್ನಾಟಕದ ವಿವಿಧ ಭಾಗಗಳಿಂದ ಹಲವಾರು ವಕೀಲರು ಬಂದು ವಾದ ನಡೆಸಿದ ನಂತರ ಆ ವಿದ್ಯಾರ್ಥಿನಿಯನ್ನು ಜಾಮೀನು ದೊರಕಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...