Homeಮುಖಪುಟಪಾಕ್‌ ಪರ ಘೋಷಣೆಯ ಆರೋಪಿಗಳಿಗೆ ವಕಾಲತ್ತು ನಿರ್ಬಂಧ : ಹುಬ್ಬಳ್ಳಿ ಬಾರ್‌ ಅಸೋಷಿಯೇಶನ್‌ಗೆ ಹೈಕೋರ್ಟ್‌ ಛೀಮಾರಿ

ಪಾಕ್‌ ಪರ ಘೋಷಣೆಯ ಆರೋಪಿಗಳಿಗೆ ವಕಾಲತ್ತು ನಿರ್ಬಂಧ : ಹುಬ್ಬಳ್ಳಿ ಬಾರ್‌ ಅಸೋಷಿಯೇಶನ್‌ಗೆ ಹೈಕೋರ್ಟ್‌ ಛೀಮಾರಿ

ಬಾರ್ ಅಸೋಸಿಯೇಷನ್ ತನ್ನ ​​ನಿರ್ಣಯವನ್ನು ಮರುಪರಿಶೀಲಿಸದಿದ್ದರೆ, ಅದರ ಕಾನೂನು ಮಾನ್ಯತೆಯನ್ನು ರದ್ದುಪಡಿಸಲಾಗುತ್ತದೆ ಎಂದು ಸಹ ಕೋರ್ಟ್‌ ಎಚ್ಚರಿಕೆ ನೀಡಿದೆ.

- Advertisement -
- Advertisement -

ದೇಶದ್ರೋಹದ ಆರೋಪ ಹೊತ್ತಿರುವ ಕಾಶ್ಮೀರಿ ವಿದ್ಯಾರ್ಥಿಗಳ ಪರವಾಗಿ ವಕಾಲತ್ತು ವಹಿಸಬಾರದೆಂದು ಹುಬ್ಬಳಿಯ ಬಾರ್‌ ಕೌನ್ಸಿಲ್‌ ತೆಗೆದುಕೊಂಡಿರುವ ನಿರ್ಣಯವನ್ನು ವಾಪಸ್‌ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್ ಛೀಮಾರಿ ಹಾಕಿದೆ.

ಅಲ್ಲದೇ ಆ ವಿದ್ಯಾರ್ಥಿನಿಗಳನ್ನು ಪ್ರತಿನಿಧಿಸುವ ವಕೀಲರಿಗೆ ಪೊಲೀಸ್ ರಕ್ಷಣೆ ನೀಡಬೇಕೆಂದು ಹುಬ್ಬಳ್ಳಿಯ ಪೊಲೀಸ್‌ ಕಮಿಷನರ್‌ಗೆ ಆದೇಶಿಸಿದೆ.

ಕಾಶ್ಮೀರಿ ವಿದ್ಯಾರ್ಥಿಗಳ ಪರವಾಗಿ ವಕಾಲತ್ತು ವಹಿಸಬಾರದೆಂದು ಹುಬ್ಬಳಿಯ ಬಾರ್‌ ಕೌನ್ಸಿಲ್‌ ತೆಗೆದುಕೊಂಡಿರುವ ನಿರ್ಣಯಯವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ಅಂಗೀಕರಿಸಿದೆ. ಬಾರ್ ಅಸೋಸಿಯೇಷನ್ ತನ್ನ ​​ನಿರ್ಣಯವನ್ನು ಮರುಪರಿಶೀಲಿಸದಿದ್ದರೆ, ಅದರ ಕಾನೂನು ಮಾನ್ಯತೆಯನ್ನು ರದ್ದುಪಡಿಸಲಾಗುತ್ತದೆ ಎಂದು ಸಹ ಕೋರ್ಟ್‌ ಎಚ್ಚರಿಕೆ ನೀಡಿದೆ.

ವಿಚಾರಣೆಯ ಸಮಯದಲ್ಲಿ ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ “ಬಹಿಷ್ಕಾರ ಹಾಕುವ ಮೂಲಕ ಅವರು ನ್ಯಾಯಾಲಯದ ಕೆಲಸವನ್ನು ನಿಲ್ಲಿಸುತ್ತಿದ್ದಾರೆ. ವಕೀಲರೇ ತಮ್ಮಷ್ಟಕ್ಕೆ ತಾವೇ ವಿಚಾರಣೆ ನಡೆಸುವುದನ್ನು ಒಪ್ಪಲಾಗುವುದಿಲ್ಲ” ಎಂದಿದ್ದಾರೆ.

ನ್ಯಾಯಪೀಠವು “ಅಂಗೀಕರಿಸಿದ ನಿರ್ಣಯವನ್ನು ಮರುಪರಿಶೀಲಿಸುವಂತೆ ನಾವು ಪ್ರತಿವಾದಿ ಸಂಖ್ಯೆ 4 (ಬಾರ್ ಅಸೋಸಿಯೇಷನ್)ಗೆ ವಿನಂತಿಸುತ್ತೇವೆ. ಇದು ಕಾನೂನಿನ ಆದೇಶಕ್ಕೆ ವಿರುದ್ಧವಾಗಿದೆ. ಬಾರ್‌ ಕೌನ್ಸಿಲ್‌ ಆಫ್‌ ಇಂಡಿಯಾ ಸಾಂವಿಧಾನಿಕ ಆದೇಶದಿಂದ ಬದ್ಧವಾಗಿದೆ ಮತ್ತು ಅದು ರೂಪಿಸಿದ ನಿಯಮಗಳಲ್ಲಿ ನೈತಿಕತೆಯನ್ನು ಪ್ರತಿಯೊಬ್ಬ ಸದಸ್ಯರು ಅನುಸರಿಸಲು ಬದ್ಧರಾಗಿರುತ್ತಾರೆ” ಎಂದು ಕೋರ್ಟ್‌ ಹೇಳಿದೆ.

ಬಾರ್ ಕೌನ್ಸಿಲ್ ಆಫ್ ಇಂಡಿಯಾದ 4 ನೇ ಪ್ರತಿವಾದಿಯು ತಮ್ಮ ನಿರ್ಣಯವನ್ನು ಮರುಪರಿಶೀಲಿಸಲು ನಿರಾಕರಿಸಿದರೆ, ನಾವು ಅದರ ಕಾನೂನುಬದ್ಧತೆಯನ್ನು ಮುಂದಿನ ವಿಚಾರಣೆಯಲ್ಲಿ ಪರಿಗಣಿಸಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.

ಹುಬ್ಬಳಿಯಲ್ಲಿ ಎಂಜಿನಿಯರಿಂಗ್ ಕಲಿಯುತ್ತಿರುವ ಮೂವರು ಕಾಶ್ಮೀರಿ ಮೂಲದ ವಿದ್ಯಾರ್ಥಿಗಳ ಮೇಲೆ ಪಾಕಿಸ್ತಾನವನ್ನು ಬೆಂಬಲಿಸಿ ಘೋಷಣೆ ಕೂಗಿದ ಆರೋಪದ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ.

ಸೋಮವಾರ 1600 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುವ ಹುಬ್ಬಳಿ ಬಾರ್ ಅಸೋಸಿಯೇಷನ್, ಆ ವಿದ್ಯಾರ್ಥಿಗಳ ಪರ ವಕಾಲತ್ತು ವಹಿಸದಂತೆ ನಿರ್ಣಯವನ್ನು ಅಂಗೀಕರಿಸಿದೆ. ಆರೋಪಿಗಳು “ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ” ಪಾಲ್ಗೊಂಡಿದ್ದರಿಂದ ಕಾನೂನು ಪ್ರಾತಿನಿಧ್ಯಕ್ಕೆ ಅರ್ಹರಲ್ಲ ಎಂದು ವಾದಿಸಿದೆ.

ಈ ನಿರ್ಣಯವನ್ನು ಪ್ರಶ್ನಿಸಿ, 24 ವಕೀಲರ ಗುಂಪು ಹೈಕೋರ್ಟ್ ಮೆಟ್ಟಿಲೇರಿದೆ. ಕಾನೂನು ನೆರವು ಪಡೆಯುವ ಆರೋಪಿಯ ತನ್ನ ಮೂಲಭೂತ ಹಕ್ಕನ್ನು ಬಾರ್‌ ಕೌನ್ಸಿಲ್‌ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಈ ನಿರ್ಣಯವು ಭಯದ ವಾತಾವರಣವನ್ನು ಸೃಷ್ಟಿಸಲು ಕಾರಣವಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಬೆದರಿಕೆ ಕಾರಣ ಯಾವುದೇ ವಕೀಲರು ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಿಲ್ಲ ಎಂದು ದೂರಿದ್ದಾರೆ.

ಈ ಹಿಂದೆ ಮೈಸೂರು ಬಾರ್ ಅಸೋಸಿಯೇಷನ್ ​​ಸಹ ಫ್ರಿ ಕಾಶ್ಮೀರ್‌ ಭಿತ್ತಿಪತ್ರದ ವಿಚಾರದಲ್ಲಿ ಇದೇ ರೀತಿಯ ನಿರ್ಣಯವನ್ನು ಅಂಗೀಕರಿಸಿತ್ತು. ಆ ನಂತರ ಕರ್ನಾಟಕದ ವಿವಿಧ ಭಾಗಗಳಿಂದ ಹಲವಾರು ವಕೀಲರು ಬಂದು ವಾದ ನಡೆಸಿದ ನಂತರ ಆ ವಿದ್ಯಾರ್ಥಿನಿಯನ್ನು ಜಾಮೀನು ದೊರಕಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...