Homeಮುಖಪುಟಪಾಕ್‌ ಪರ ಘೋಷಣೆಯ ಆರೋಪಿಗಳಿಗೆ ವಕಾಲತ್ತು ನಿರ್ಬಂಧ : ಹುಬ್ಬಳ್ಳಿ ಬಾರ್‌ ಅಸೋಷಿಯೇಶನ್‌ಗೆ ಹೈಕೋರ್ಟ್‌ ಛೀಮಾರಿ

ಪಾಕ್‌ ಪರ ಘೋಷಣೆಯ ಆರೋಪಿಗಳಿಗೆ ವಕಾಲತ್ತು ನಿರ್ಬಂಧ : ಹುಬ್ಬಳ್ಳಿ ಬಾರ್‌ ಅಸೋಷಿಯೇಶನ್‌ಗೆ ಹೈಕೋರ್ಟ್‌ ಛೀಮಾರಿ

ಬಾರ್ ಅಸೋಸಿಯೇಷನ್ ತನ್ನ ​​ನಿರ್ಣಯವನ್ನು ಮರುಪರಿಶೀಲಿಸದಿದ್ದರೆ, ಅದರ ಕಾನೂನು ಮಾನ್ಯತೆಯನ್ನು ರದ್ದುಪಡಿಸಲಾಗುತ್ತದೆ ಎಂದು ಸಹ ಕೋರ್ಟ್‌ ಎಚ್ಚರಿಕೆ ನೀಡಿದೆ.

- Advertisement -
- Advertisement -

ದೇಶದ್ರೋಹದ ಆರೋಪ ಹೊತ್ತಿರುವ ಕಾಶ್ಮೀರಿ ವಿದ್ಯಾರ್ಥಿಗಳ ಪರವಾಗಿ ವಕಾಲತ್ತು ವಹಿಸಬಾರದೆಂದು ಹುಬ್ಬಳಿಯ ಬಾರ್‌ ಕೌನ್ಸಿಲ್‌ ತೆಗೆದುಕೊಂಡಿರುವ ನಿರ್ಣಯವನ್ನು ವಾಪಸ್‌ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್ ಛೀಮಾರಿ ಹಾಕಿದೆ.

ಅಲ್ಲದೇ ಆ ವಿದ್ಯಾರ್ಥಿನಿಗಳನ್ನು ಪ್ರತಿನಿಧಿಸುವ ವಕೀಲರಿಗೆ ಪೊಲೀಸ್ ರಕ್ಷಣೆ ನೀಡಬೇಕೆಂದು ಹುಬ್ಬಳ್ಳಿಯ ಪೊಲೀಸ್‌ ಕಮಿಷನರ್‌ಗೆ ಆದೇಶಿಸಿದೆ.

ಕಾಶ್ಮೀರಿ ವಿದ್ಯಾರ್ಥಿಗಳ ಪರವಾಗಿ ವಕಾಲತ್ತು ವಹಿಸಬಾರದೆಂದು ಹುಬ್ಬಳಿಯ ಬಾರ್‌ ಕೌನ್ಸಿಲ್‌ ತೆಗೆದುಕೊಂಡಿರುವ ನಿರ್ಣಯಯವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ಅಂಗೀಕರಿಸಿದೆ. ಬಾರ್ ಅಸೋಸಿಯೇಷನ್ ತನ್ನ ​​ನಿರ್ಣಯವನ್ನು ಮರುಪರಿಶೀಲಿಸದಿದ್ದರೆ, ಅದರ ಕಾನೂನು ಮಾನ್ಯತೆಯನ್ನು ರದ್ದುಪಡಿಸಲಾಗುತ್ತದೆ ಎಂದು ಸಹ ಕೋರ್ಟ್‌ ಎಚ್ಚರಿಕೆ ನೀಡಿದೆ.

ವಿಚಾರಣೆಯ ಸಮಯದಲ್ಲಿ ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ “ಬಹಿಷ್ಕಾರ ಹಾಕುವ ಮೂಲಕ ಅವರು ನ್ಯಾಯಾಲಯದ ಕೆಲಸವನ್ನು ನಿಲ್ಲಿಸುತ್ತಿದ್ದಾರೆ. ವಕೀಲರೇ ತಮ್ಮಷ್ಟಕ್ಕೆ ತಾವೇ ವಿಚಾರಣೆ ನಡೆಸುವುದನ್ನು ಒಪ್ಪಲಾಗುವುದಿಲ್ಲ” ಎಂದಿದ್ದಾರೆ.

ನ್ಯಾಯಪೀಠವು “ಅಂಗೀಕರಿಸಿದ ನಿರ್ಣಯವನ್ನು ಮರುಪರಿಶೀಲಿಸುವಂತೆ ನಾವು ಪ್ರತಿವಾದಿ ಸಂಖ್ಯೆ 4 (ಬಾರ್ ಅಸೋಸಿಯೇಷನ್)ಗೆ ವಿನಂತಿಸುತ್ತೇವೆ. ಇದು ಕಾನೂನಿನ ಆದೇಶಕ್ಕೆ ವಿರುದ್ಧವಾಗಿದೆ. ಬಾರ್‌ ಕೌನ್ಸಿಲ್‌ ಆಫ್‌ ಇಂಡಿಯಾ ಸಾಂವಿಧಾನಿಕ ಆದೇಶದಿಂದ ಬದ್ಧವಾಗಿದೆ ಮತ್ತು ಅದು ರೂಪಿಸಿದ ನಿಯಮಗಳಲ್ಲಿ ನೈತಿಕತೆಯನ್ನು ಪ್ರತಿಯೊಬ್ಬ ಸದಸ್ಯರು ಅನುಸರಿಸಲು ಬದ್ಧರಾಗಿರುತ್ತಾರೆ” ಎಂದು ಕೋರ್ಟ್‌ ಹೇಳಿದೆ.

ಬಾರ್ ಕೌನ್ಸಿಲ್ ಆಫ್ ಇಂಡಿಯಾದ 4 ನೇ ಪ್ರತಿವಾದಿಯು ತಮ್ಮ ನಿರ್ಣಯವನ್ನು ಮರುಪರಿಶೀಲಿಸಲು ನಿರಾಕರಿಸಿದರೆ, ನಾವು ಅದರ ಕಾನೂನುಬದ್ಧತೆಯನ್ನು ಮುಂದಿನ ವಿಚಾರಣೆಯಲ್ಲಿ ಪರಿಗಣಿಸಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.

ಹುಬ್ಬಳಿಯಲ್ಲಿ ಎಂಜಿನಿಯರಿಂಗ್ ಕಲಿಯುತ್ತಿರುವ ಮೂವರು ಕಾಶ್ಮೀರಿ ಮೂಲದ ವಿದ್ಯಾರ್ಥಿಗಳ ಮೇಲೆ ಪಾಕಿಸ್ತಾನವನ್ನು ಬೆಂಬಲಿಸಿ ಘೋಷಣೆ ಕೂಗಿದ ಆರೋಪದ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ.

ಸೋಮವಾರ 1600 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುವ ಹುಬ್ಬಳಿ ಬಾರ್ ಅಸೋಸಿಯೇಷನ್, ಆ ವಿದ್ಯಾರ್ಥಿಗಳ ಪರ ವಕಾಲತ್ತು ವಹಿಸದಂತೆ ನಿರ್ಣಯವನ್ನು ಅಂಗೀಕರಿಸಿದೆ. ಆರೋಪಿಗಳು “ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ” ಪಾಲ್ಗೊಂಡಿದ್ದರಿಂದ ಕಾನೂನು ಪ್ರಾತಿನಿಧ್ಯಕ್ಕೆ ಅರ್ಹರಲ್ಲ ಎಂದು ವಾದಿಸಿದೆ.

ಈ ನಿರ್ಣಯವನ್ನು ಪ್ರಶ್ನಿಸಿ, 24 ವಕೀಲರ ಗುಂಪು ಹೈಕೋರ್ಟ್ ಮೆಟ್ಟಿಲೇರಿದೆ. ಕಾನೂನು ನೆರವು ಪಡೆಯುವ ಆರೋಪಿಯ ತನ್ನ ಮೂಲಭೂತ ಹಕ್ಕನ್ನು ಬಾರ್‌ ಕೌನ್ಸಿಲ್‌ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಈ ನಿರ್ಣಯವು ಭಯದ ವಾತಾವರಣವನ್ನು ಸೃಷ್ಟಿಸಲು ಕಾರಣವಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಬೆದರಿಕೆ ಕಾರಣ ಯಾವುದೇ ವಕೀಲರು ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಿಲ್ಲ ಎಂದು ದೂರಿದ್ದಾರೆ.

ಈ ಹಿಂದೆ ಮೈಸೂರು ಬಾರ್ ಅಸೋಸಿಯೇಷನ್ ​​ಸಹ ಫ್ರಿ ಕಾಶ್ಮೀರ್‌ ಭಿತ್ತಿಪತ್ರದ ವಿಚಾರದಲ್ಲಿ ಇದೇ ರೀತಿಯ ನಿರ್ಣಯವನ್ನು ಅಂಗೀಕರಿಸಿತ್ತು. ಆ ನಂತರ ಕರ್ನಾಟಕದ ವಿವಿಧ ಭಾಗಗಳಿಂದ ಹಲವಾರು ವಕೀಲರು ಬಂದು ವಾದ ನಡೆಸಿದ ನಂತರ ಆ ವಿದ್ಯಾರ್ಥಿನಿಯನ್ನು ಜಾಮೀನು ದೊರಕಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....