Homeಚಳವಳಿ’ನಮ್ಮ ಮೇಲಿನ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ’- ರೈತ ಮುಖಂಡರು

’ನಮ್ಮ ಮೇಲಿನ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ’- ರೈತ ಮುಖಂಡರು

ನಮ್ಮ ಚಳವಳಿಯ ಮುಖ್ಯ ವಿಷಯ ಆಂದೋಲನವಾಗಿದೆ ಮತ್ತು ಇದನ್ನು ನಾವು ಬಲಪಡಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಜನವರಿ 26 ರ ರೈತರ ಟ್ರಾಕ್ಟರ್‌ ರ್‍ಯಾಲಿಯಲ್ಲಿನ ಸಂಧರ್ಭದ ಅಹಿತಕರ ಘಟನೆಯ ನಂತರ ನಡೆದ ಬೆಳವಣಿಗೆಯಲ್ಲಿ ಕೇಂದ್ರ ಮತ್ತು ರೈತ ಮುಖಂಡರ ನಡುವಿನ ಮಾತುಕತೆಗಳು ಸಂಪೂರ್ಣವಾಗಿ ನಿಂತು ಹೋಗಿದೆ. ಜನವರಿ 22 ರಿಂದ ನಡುವೆ ಯಾವುದೇ ಸಭೆಗಳು ನಡೆದಿಲ್ಲ. ಇದುವರೆಗೂ ಹನ್ನೊಂದನೇ ಸುತ್ತಿನ ಮಾತುಕತೆಗಳನ್ನು ನಡೆದಿದ್ದು, ಎಲ್ಲವೂ ಮುರಿದು ಬಿದ್ದಿದೆ.

ಈ ಸಮಯದಲ್ಲಿ ಕೇಂದ್ರವು ಕೃಷಿ ಕಾನೂನುಗಳನ್ನು ಒಂದೂವರೆ ವರ್ಷಗಳು ಅಥವಾ ಸರ್ಕಾರಿ ಅಧಿಕಾರಿಗಳು ಮತ್ತು ರೈತ ಪ್ರತಿನಿಧಿಗಳ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ ತಡೆಹಿಡಿಯುವುದಾಗಿ ಹೇಳಿತ್ತು. ಆದರೆ ಕೇಂದ್ರದ ಈ ಪ್ರಸ್ತಾಪವನ್ನು ತಿರಸ್ಕರಿಸಿರುವ ರೈತರು ಮೂರು ಕಾನೂನುಗಳನ್ನು ವಾಪಾಸು ಪಡೆಯುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಭುತ್ವದ ಬೇಟೆಯಾಗುತ್ತಿರುವುದೇ ಪತ್ರಿಕೋದ್ಯಮ?

ಸರ್ಕಾರ ಹೊಸ ಪ್ರಸ್ತಾವನೆಯನ್ನು ಸಿದ್ಧಪಡಿಸಿದ ನಂತರ ಮುಂದಿನ ಸುತ್ತಿನ ಮಾತುಕತೆಗೆ ಸಿದ್ಧವಾಗುವುದಾಗಿ ಕೃಷಿ ಮುಖಂಡರು ಹೇಳಿದ್ದಾರೆ. “ನಮ್ಮ ಕೊನೆಯ ಸುತ್ತಿನ ಮಾತುಕತೆಯಲ್ಲಿ, ಸರ್ಕಾರಿ ಪ್ರತಿನಿಧಿಗಳು ಎಂಎಸ್ಪಿ ಪ್ರಶ್ನೆಯನ್ನು ಚರ್ಚಿಸಲು ಸಿದ್ಧರಿರಲಿಲ್ಲ. ನಮ್ಮ ಬೇಡಿಕೆಯು ಕೃಷಿ ಕಾನೂನನ್ನು ರದ್ದುಪಡಿಸ ಬೇಕು ಎಂಬುವುದಾಗಿದೆಯೆ ಹೊರತು ಅಮಾನತುಗೊಳಿಸುವುದಲ್ಲ. ಅವರು ಬೇರೆ ಪ್ರಸ್ತಾಪವನ್ನು ರೂಪಿಸಿ ನಮಗೆ ಅಧಿಕೃತ ಆಹ್ವಾನವನ್ನು ಕಳುಹಿಸಿದರೆ, ಮರುದಿನವೆ ನಾವು ಚರ್ಚಿಸಲು ಹೋಗುತ್ತೇವೆ” ಎಂದು ಬಿಕೆಯು ಏಕ್ತಾ (ಡಕೌಂಡಾ) ಪ್ರಧಾನ ಕಾರ್ಯದರ್ಶಿ ಜಗ್ಮೋಹನ್ ಸಿಂಗ್ ಹೇಳಿದ್ದಾರೆ.

ಕೃಷಿ ಮುಖಂಡರು ಮತ್ತು ಪ್ರತಿಭಟನಾಕಾರರ ಮೇಲೆ ದಾಖಲಾಗಿರುವ ಪ್ರಕರಣದಿಂದಾಗಿ ಮಾತುಕತೆ ನಡೆಯುತ್ತಿಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಿರುವ, ಲೋಕ ಭಲೈ ಇನ್ಸಾಫ್ ವೆಲ್ಫೇರ್‌ ಸೊಸಟಿಯ ಅಧ್ಯಕ್ಷ ಬಾಲ್ದೇವ್ ಸಿಂಗ್ ಸಿರ್ಸಾ, “ನಮಗೆ ಎಫ್‌ಐಆರ್‌ ಮತ್ತು ಕಾನೂನು ನೋಟಿಸ್‌ಗಳ ಬಗ್ಗೆ ಚಿಂತೆಯಿಲ್ಲ, ಯಾಕೆಂದರೆ ಅದು ಯಾವುದೆ ಆಂದೋಲನದ ಭಾಗವಾಗಿದ್ದು ಅದಕ್ಕೆ ನಾವು ಸಿದ್ದರಾಗಿಯೆ ಇದ್ದೇವೆ. ಈ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

“ನಾವು ಮಾತುಕತೆಗಾಗಿ ಹೋದಾಗ ನಮ್ಮ ಹೋರಾಟದ ಎಲ್ಲಾ ಬೇಡಿಕೆಗಳು ಈಡೇರಿದ ನಂತರ, ನಮ್ಮ ಮೇಲಿನ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವ ಬಗ್ಗೆ ಮಾತನಾಡುತ್ತೇವೆ. ಹೋರಾಟದಲ್ಲಿ ಅವುಗಳ ಬಗ್ಗೆ ನಾವು ಚಿಂತಿತರಾಗಿಲ್ಲ” ಎಂದು ರೈತ ಮುಖಂಡ ಜಗಮೋಹನ್ ಹೇಳುತ್ತಾರೆ.

ಇದನ್ನೂ ಓದಿ: ಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು: ರೈತರ ಸಾವಿನ ಬಗ್ಗೆ ನಾಲಗೆ ಹರಿಯ ಬಿಟ್ಟ ಹರಿಯಾಣ ಕೃಷಿ ಸಚಿವ

“ಸಾರ್ವಜನಿಕರ ಭಾಗವಹಿಸುವಿಕೆ ಉತ್ತೇಜಿಸಲು ಭಾನುವಾರದಂದು ಕ್ಯಾಂಡಲ್ ಮಾರ್ಚ್‌‌ನಂತಹ ಹಲವಾರು ಕಾರ್ಯಕ್ರಮಗಳನ್ನು ನಾವು ಸಂಘಟಿಸುತ್ತಿದ್ದೇವೆ. ಮಂಗಳವಾರ ರೈತ ಚಳವಳಿಗೆ ಸರ್ ಚೋಟೂ ರಾಮ್ ಅವರ ಕೊಡುಗೆಗಳನ್ನು ಸ್ಮರಿಸಲಿದ್ದೇವೆ. ಫೆಬ್ರವರಿ 18 ರಂದು ರೈಲ್ ರೋಕೊ ಚಳುವಳಿ ನಡೆಸುತ್ತಿದ್ದೇವೆ. ಆದರೆ ಅದಕ್ಕಿಂತ ಹೆಚ್ಚಾಗಿ, ನಿಯಮಿತವಾಗಿ ನಡೆಯುತ್ತಿರುವ ದೊಡ್ಡ ಮಹಾಪಂಚಾಯತ್‌ಗಳನ್ನು ನಡೆಸಿ ನಮ್ಮ ಹೋರಾಟದವನ್ನು ಇನ್ನಷ್ಟು ಹುರಿಗೊಳಿಸುತ್ತೇವೆ” ಎಂದು ಮಹಿಲಾ ಕಿಸಾನ್ ಅಧಿಕಾರ ಮಂಚ್‌ನ ನಾಯಕಿ ಕವಿತಾ ಕುರುಗಂತಿ ಹೇಳಿದ್ದಾರೆ.

“ನಮ್ಮ ಚಳವಳಿಯ ಮುಖ್ಯ ವಿಷಯ ಆಂದೋಲನವಾಗಿದೆ ಮತ್ತು ಅದನ್ನು ನಾವು ಬಲಪಡಿಸುತ್ತಿದ್ದೇವೆ. ಅಲ್ಲದೆ ಈ ಆಂದೋಲನ ಎಲ್ಲಾ ರಾಜ್ಯಗಳಲ್ಲಿ ಬೆಳೆಯುತ್ತಿದೆ. ಮಾತುಕತೆಗಾಗಿ ಸರ್ಕಾರವನ್ನು ಒತ್ತಾಯಿಸುವ ಮುಖ್ಯಶಕ್ತಿ ಇದುವೆ ಆಗಿದೆ” ಎಂದು ರೈತ ಮುಖಂಡ ಭಂಗು ಹೇಳಿದ್ದಾರೆ.

ಇದನ್ನೂ ಓದಿ: ‘ವಕೀಲರ ನಡಿಗೆ ರೈತರ ಕಡೆಗೆ’ – ರೈತ ಹೋರಾಟಕ್ಕೆ ಬೆಂಬಲ ನೀಡಿದ ಬೆಂಗಳೂರಿನ ವಕೀಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...