Homeಚಳವಳಿ’ನಮ್ಮ ಮೇಲಿನ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ’- ರೈತ ಮುಖಂಡರು

’ನಮ್ಮ ಮೇಲಿನ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ’- ರೈತ ಮುಖಂಡರು

ನಮ್ಮ ಚಳವಳಿಯ ಮುಖ್ಯ ವಿಷಯ ಆಂದೋಲನವಾಗಿದೆ ಮತ್ತು ಇದನ್ನು ನಾವು ಬಲಪಡಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಜನವರಿ 26 ರ ರೈತರ ಟ್ರಾಕ್ಟರ್‌ ರ್‍ಯಾಲಿಯಲ್ಲಿನ ಸಂಧರ್ಭದ ಅಹಿತಕರ ಘಟನೆಯ ನಂತರ ನಡೆದ ಬೆಳವಣಿಗೆಯಲ್ಲಿ ಕೇಂದ್ರ ಮತ್ತು ರೈತ ಮುಖಂಡರ ನಡುವಿನ ಮಾತುಕತೆಗಳು ಸಂಪೂರ್ಣವಾಗಿ ನಿಂತು ಹೋಗಿದೆ. ಜನವರಿ 22 ರಿಂದ ನಡುವೆ ಯಾವುದೇ ಸಭೆಗಳು ನಡೆದಿಲ್ಲ. ಇದುವರೆಗೂ ಹನ್ನೊಂದನೇ ಸುತ್ತಿನ ಮಾತುಕತೆಗಳನ್ನು ನಡೆದಿದ್ದು, ಎಲ್ಲವೂ ಮುರಿದು ಬಿದ್ದಿದೆ.

ಈ ಸಮಯದಲ್ಲಿ ಕೇಂದ್ರವು ಕೃಷಿ ಕಾನೂನುಗಳನ್ನು ಒಂದೂವರೆ ವರ್ಷಗಳು ಅಥವಾ ಸರ್ಕಾರಿ ಅಧಿಕಾರಿಗಳು ಮತ್ತು ರೈತ ಪ್ರತಿನಿಧಿಗಳ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ ತಡೆಹಿಡಿಯುವುದಾಗಿ ಹೇಳಿತ್ತು. ಆದರೆ ಕೇಂದ್ರದ ಈ ಪ್ರಸ್ತಾಪವನ್ನು ತಿರಸ್ಕರಿಸಿರುವ ರೈತರು ಮೂರು ಕಾನೂನುಗಳನ್ನು ವಾಪಾಸು ಪಡೆಯುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಭುತ್ವದ ಬೇಟೆಯಾಗುತ್ತಿರುವುದೇ ಪತ್ರಿಕೋದ್ಯಮ?

ಸರ್ಕಾರ ಹೊಸ ಪ್ರಸ್ತಾವನೆಯನ್ನು ಸಿದ್ಧಪಡಿಸಿದ ನಂತರ ಮುಂದಿನ ಸುತ್ತಿನ ಮಾತುಕತೆಗೆ ಸಿದ್ಧವಾಗುವುದಾಗಿ ಕೃಷಿ ಮುಖಂಡರು ಹೇಳಿದ್ದಾರೆ. “ನಮ್ಮ ಕೊನೆಯ ಸುತ್ತಿನ ಮಾತುಕತೆಯಲ್ಲಿ, ಸರ್ಕಾರಿ ಪ್ರತಿನಿಧಿಗಳು ಎಂಎಸ್ಪಿ ಪ್ರಶ್ನೆಯನ್ನು ಚರ್ಚಿಸಲು ಸಿದ್ಧರಿರಲಿಲ್ಲ. ನಮ್ಮ ಬೇಡಿಕೆಯು ಕೃಷಿ ಕಾನೂನನ್ನು ರದ್ದುಪಡಿಸ ಬೇಕು ಎಂಬುವುದಾಗಿದೆಯೆ ಹೊರತು ಅಮಾನತುಗೊಳಿಸುವುದಲ್ಲ. ಅವರು ಬೇರೆ ಪ್ರಸ್ತಾಪವನ್ನು ರೂಪಿಸಿ ನಮಗೆ ಅಧಿಕೃತ ಆಹ್ವಾನವನ್ನು ಕಳುಹಿಸಿದರೆ, ಮರುದಿನವೆ ನಾವು ಚರ್ಚಿಸಲು ಹೋಗುತ್ತೇವೆ” ಎಂದು ಬಿಕೆಯು ಏಕ್ತಾ (ಡಕೌಂಡಾ) ಪ್ರಧಾನ ಕಾರ್ಯದರ್ಶಿ ಜಗ್ಮೋಹನ್ ಸಿಂಗ್ ಹೇಳಿದ್ದಾರೆ.

ಕೃಷಿ ಮುಖಂಡರು ಮತ್ತು ಪ್ರತಿಭಟನಾಕಾರರ ಮೇಲೆ ದಾಖಲಾಗಿರುವ ಪ್ರಕರಣದಿಂದಾಗಿ ಮಾತುಕತೆ ನಡೆಯುತ್ತಿಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಿರುವ, ಲೋಕ ಭಲೈ ಇನ್ಸಾಫ್ ವೆಲ್ಫೇರ್‌ ಸೊಸಟಿಯ ಅಧ್ಯಕ್ಷ ಬಾಲ್ದೇವ್ ಸಿಂಗ್ ಸಿರ್ಸಾ, “ನಮಗೆ ಎಫ್‌ಐಆರ್‌ ಮತ್ತು ಕಾನೂನು ನೋಟಿಸ್‌ಗಳ ಬಗ್ಗೆ ಚಿಂತೆಯಿಲ್ಲ, ಯಾಕೆಂದರೆ ಅದು ಯಾವುದೆ ಆಂದೋಲನದ ಭಾಗವಾಗಿದ್ದು ಅದಕ್ಕೆ ನಾವು ಸಿದ್ದರಾಗಿಯೆ ಇದ್ದೇವೆ. ಈ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

“ನಾವು ಮಾತುಕತೆಗಾಗಿ ಹೋದಾಗ ನಮ್ಮ ಹೋರಾಟದ ಎಲ್ಲಾ ಬೇಡಿಕೆಗಳು ಈಡೇರಿದ ನಂತರ, ನಮ್ಮ ಮೇಲಿನ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವ ಬಗ್ಗೆ ಮಾತನಾಡುತ್ತೇವೆ. ಹೋರಾಟದಲ್ಲಿ ಅವುಗಳ ಬಗ್ಗೆ ನಾವು ಚಿಂತಿತರಾಗಿಲ್ಲ” ಎಂದು ರೈತ ಮುಖಂಡ ಜಗಮೋಹನ್ ಹೇಳುತ್ತಾರೆ.

ಇದನ್ನೂ ಓದಿ: ಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು: ರೈತರ ಸಾವಿನ ಬಗ್ಗೆ ನಾಲಗೆ ಹರಿಯ ಬಿಟ್ಟ ಹರಿಯಾಣ ಕೃಷಿ ಸಚಿವ

“ಸಾರ್ವಜನಿಕರ ಭಾಗವಹಿಸುವಿಕೆ ಉತ್ತೇಜಿಸಲು ಭಾನುವಾರದಂದು ಕ್ಯಾಂಡಲ್ ಮಾರ್ಚ್‌‌ನಂತಹ ಹಲವಾರು ಕಾರ್ಯಕ್ರಮಗಳನ್ನು ನಾವು ಸಂಘಟಿಸುತ್ತಿದ್ದೇವೆ. ಮಂಗಳವಾರ ರೈತ ಚಳವಳಿಗೆ ಸರ್ ಚೋಟೂ ರಾಮ್ ಅವರ ಕೊಡುಗೆಗಳನ್ನು ಸ್ಮರಿಸಲಿದ್ದೇವೆ. ಫೆಬ್ರವರಿ 18 ರಂದು ರೈಲ್ ರೋಕೊ ಚಳುವಳಿ ನಡೆಸುತ್ತಿದ್ದೇವೆ. ಆದರೆ ಅದಕ್ಕಿಂತ ಹೆಚ್ಚಾಗಿ, ನಿಯಮಿತವಾಗಿ ನಡೆಯುತ್ತಿರುವ ದೊಡ್ಡ ಮಹಾಪಂಚಾಯತ್‌ಗಳನ್ನು ನಡೆಸಿ ನಮ್ಮ ಹೋರಾಟದವನ್ನು ಇನ್ನಷ್ಟು ಹುರಿಗೊಳಿಸುತ್ತೇವೆ” ಎಂದು ಮಹಿಲಾ ಕಿಸಾನ್ ಅಧಿಕಾರ ಮಂಚ್‌ನ ನಾಯಕಿ ಕವಿತಾ ಕುರುಗಂತಿ ಹೇಳಿದ್ದಾರೆ.

“ನಮ್ಮ ಚಳವಳಿಯ ಮುಖ್ಯ ವಿಷಯ ಆಂದೋಲನವಾಗಿದೆ ಮತ್ತು ಅದನ್ನು ನಾವು ಬಲಪಡಿಸುತ್ತಿದ್ದೇವೆ. ಅಲ್ಲದೆ ಈ ಆಂದೋಲನ ಎಲ್ಲಾ ರಾಜ್ಯಗಳಲ್ಲಿ ಬೆಳೆಯುತ್ತಿದೆ. ಮಾತುಕತೆಗಾಗಿ ಸರ್ಕಾರವನ್ನು ಒತ್ತಾಯಿಸುವ ಮುಖ್ಯಶಕ್ತಿ ಇದುವೆ ಆಗಿದೆ” ಎಂದು ರೈತ ಮುಖಂಡ ಭಂಗು ಹೇಳಿದ್ದಾರೆ.

ಇದನ್ನೂ ಓದಿ: ‘ವಕೀಲರ ನಡಿಗೆ ರೈತರ ಕಡೆಗೆ’ – ರೈತ ಹೋರಾಟಕ್ಕೆ ಬೆಂಬಲ ನೀಡಿದ ಬೆಂಗಳೂರಿನ ವಕೀಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...