Homeಚಳವಳಿ’ನಮ್ಮ ಮೇಲಿನ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ’- ರೈತ ಮುಖಂಡರು

’ನಮ್ಮ ಮೇಲಿನ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ’- ರೈತ ಮುಖಂಡರು

ನಮ್ಮ ಚಳವಳಿಯ ಮುಖ್ಯ ವಿಷಯ ಆಂದೋಲನವಾಗಿದೆ ಮತ್ತು ಇದನ್ನು ನಾವು ಬಲಪಡಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಜನವರಿ 26 ರ ರೈತರ ಟ್ರಾಕ್ಟರ್‌ ರ್‍ಯಾಲಿಯಲ್ಲಿನ ಸಂಧರ್ಭದ ಅಹಿತಕರ ಘಟನೆಯ ನಂತರ ನಡೆದ ಬೆಳವಣಿಗೆಯಲ್ಲಿ ಕೇಂದ್ರ ಮತ್ತು ರೈತ ಮುಖಂಡರ ನಡುವಿನ ಮಾತುಕತೆಗಳು ಸಂಪೂರ್ಣವಾಗಿ ನಿಂತು ಹೋಗಿದೆ. ಜನವರಿ 22 ರಿಂದ ನಡುವೆ ಯಾವುದೇ ಸಭೆಗಳು ನಡೆದಿಲ್ಲ. ಇದುವರೆಗೂ ಹನ್ನೊಂದನೇ ಸುತ್ತಿನ ಮಾತುಕತೆಗಳನ್ನು ನಡೆದಿದ್ದು, ಎಲ್ಲವೂ ಮುರಿದು ಬಿದ್ದಿದೆ.

ಈ ಸಮಯದಲ್ಲಿ ಕೇಂದ್ರವು ಕೃಷಿ ಕಾನೂನುಗಳನ್ನು ಒಂದೂವರೆ ವರ್ಷಗಳು ಅಥವಾ ಸರ್ಕಾರಿ ಅಧಿಕಾರಿಗಳು ಮತ್ತು ರೈತ ಪ್ರತಿನಿಧಿಗಳ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ ತಡೆಹಿಡಿಯುವುದಾಗಿ ಹೇಳಿತ್ತು. ಆದರೆ ಕೇಂದ್ರದ ಈ ಪ್ರಸ್ತಾಪವನ್ನು ತಿರಸ್ಕರಿಸಿರುವ ರೈತರು ಮೂರು ಕಾನೂನುಗಳನ್ನು ವಾಪಾಸು ಪಡೆಯುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಭುತ್ವದ ಬೇಟೆಯಾಗುತ್ತಿರುವುದೇ ಪತ್ರಿಕೋದ್ಯಮ?

ಸರ್ಕಾರ ಹೊಸ ಪ್ರಸ್ತಾವನೆಯನ್ನು ಸಿದ್ಧಪಡಿಸಿದ ನಂತರ ಮುಂದಿನ ಸುತ್ತಿನ ಮಾತುಕತೆಗೆ ಸಿದ್ಧವಾಗುವುದಾಗಿ ಕೃಷಿ ಮುಖಂಡರು ಹೇಳಿದ್ದಾರೆ. “ನಮ್ಮ ಕೊನೆಯ ಸುತ್ತಿನ ಮಾತುಕತೆಯಲ್ಲಿ, ಸರ್ಕಾರಿ ಪ್ರತಿನಿಧಿಗಳು ಎಂಎಸ್ಪಿ ಪ್ರಶ್ನೆಯನ್ನು ಚರ್ಚಿಸಲು ಸಿದ್ಧರಿರಲಿಲ್ಲ. ನಮ್ಮ ಬೇಡಿಕೆಯು ಕೃಷಿ ಕಾನೂನನ್ನು ರದ್ದುಪಡಿಸ ಬೇಕು ಎಂಬುವುದಾಗಿದೆಯೆ ಹೊರತು ಅಮಾನತುಗೊಳಿಸುವುದಲ್ಲ. ಅವರು ಬೇರೆ ಪ್ರಸ್ತಾಪವನ್ನು ರೂಪಿಸಿ ನಮಗೆ ಅಧಿಕೃತ ಆಹ್ವಾನವನ್ನು ಕಳುಹಿಸಿದರೆ, ಮರುದಿನವೆ ನಾವು ಚರ್ಚಿಸಲು ಹೋಗುತ್ತೇವೆ” ಎಂದು ಬಿಕೆಯು ಏಕ್ತಾ (ಡಕೌಂಡಾ) ಪ್ರಧಾನ ಕಾರ್ಯದರ್ಶಿ ಜಗ್ಮೋಹನ್ ಸಿಂಗ್ ಹೇಳಿದ್ದಾರೆ.

ಕೃಷಿ ಮುಖಂಡರು ಮತ್ತು ಪ್ರತಿಭಟನಾಕಾರರ ಮೇಲೆ ದಾಖಲಾಗಿರುವ ಪ್ರಕರಣದಿಂದಾಗಿ ಮಾತುಕತೆ ನಡೆಯುತ್ತಿಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಿರುವ, ಲೋಕ ಭಲೈ ಇನ್ಸಾಫ್ ವೆಲ್ಫೇರ್‌ ಸೊಸಟಿಯ ಅಧ್ಯಕ್ಷ ಬಾಲ್ದೇವ್ ಸಿಂಗ್ ಸಿರ್ಸಾ, “ನಮಗೆ ಎಫ್‌ಐಆರ್‌ ಮತ್ತು ಕಾನೂನು ನೋಟಿಸ್‌ಗಳ ಬಗ್ಗೆ ಚಿಂತೆಯಿಲ್ಲ, ಯಾಕೆಂದರೆ ಅದು ಯಾವುದೆ ಆಂದೋಲನದ ಭಾಗವಾಗಿದ್ದು ಅದಕ್ಕೆ ನಾವು ಸಿದ್ದರಾಗಿಯೆ ಇದ್ದೇವೆ. ಈ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

“ನಾವು ಮಾತುಕತೆಗಾಗಿ ಹೋದಾಗ ನಮ್ಮ ಹೋರಾಟದ ಎಲ್ಲಾ ಬೇಡಿಕೆಗಳು ಈಡೇರಿದ ನಂತರ, ನಮ್ಮ ಮೇಲಿನ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವ ಬಗ್ಗೆ ಮಾತನಾಡುತ್ತೇವೆ. ಹೋರಾಟದಲ್ಲಿ ಅವುಗಳ ಬಗ್ಗೆ ನಾವು ಚಿಂತಿತರಾಗಿಲ್ಲ” ಎಂದು ರೈತ ಮುಖಂಡ ಜಗಮೋಹನ್ ಹೇಳುತ್ತಾರೆ.

ಇದನ್ನೂ ಓದಿ: ಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು: ರೈತರ ಸಾವಿನ ಬಗ್ಗೆ ನಾಲಗೆ ಹರಿಯ ಬಿಟ್ಟ ಹರಿಯಾಣ ಕೃಷಿ ಸಚಿವ

“ಸಾರ್ವಜನಿಕರ ಭಾಗವಹಿಸುವಿಕೆ ಉತ್ತೇಜಿಸಲು ಭಾನುವಾರದಂದು ಕ್ಯಾಂಡಲ್ ಮಾರ್ಚ್‌‌ನಂತಹ ಹಲವಾರು ಕಾರ್ಯಕ್ರಮಗಳನ್ನು ನಾವು ಸಂಘಟಿಸುತ್ತಿದ್ದೇವೆ. ಮಂಗಳವಾರ ರೈತ ಚಳವಳಿಗೆ ಸರ್ ಚೋಟೂ ರಾಮ್ ಅವರ ಕೊಡುಗೆಗಳನ್ನು ಸ್ಮರಿಸಲಿದ್ದೇವೆ. ಫೆಬ್ರವರಿ 18 ರಂದು ರೈಲ್ ರೋಕೊ ಚಳುವಳಿ ನಡೆಸುತ್ತಿದ್ದೇವೆ. ಆದರೆ ಅದಕ್ಕಿಂತ ಹೆಚ್ಚಾಗಿ, ನಿಯಮಿತವಾಗಿ ನಡೆಯುತ್ತಿರುವ ದೊಡ್ಡ ಮಹಾಪಂಚಾಯತ್‌ಗಳನ್ನು ನಡೆಸಿ ನಮ್ಮ ಹೋರಾಟದವನ್ನು ಇನ್ನಷ್ಟು ಹುರಿಗೊಳಿಸುತ್ತೇವೆ” ಎಂದು ಮಹಿಲಾ ಕಿಸಾನ್ ಅಧಿಕಾರ ಮಂಚ್‌ನ ನಾಯಕಿ ಕವಿತಾ ಕುರುಗಂತಿ ಹೇಳಿದ್ದಾರೆ.

“ನಮ್ಮ ಚಳವಳಿಯ ಮುಖ್ಯ ವಿಷಯ ಆಂದೋಲನವಾಗಿದೆ ಮತ್ತು ಅದನ್ನು ನಾವು ಬಲಪಡಿಸುತ್ತಿದ್ದೇವೆ. ಅಲ್ಲದೆ ಈ ಆಂದೋಲನ ಎಲ್ಲಾ ರಾಜ್ಯಗಳಲ್ಲಿ ಬೆಳೆಯುತ್ತಿದೆ. ಮಾತುಕತೆಗಾಗಿ ಸರ್ಕಾರವನ್ನು ಒತ್ತಾಯಿಸುವ ಮುಖ್ಯಶಕ್ತಿ ಇದುವೆ ಆಗಿದೆ” ಎಂದು ರೈತ ಮುಖಂಡ ಭಂಗು ಹೇಳಿದ್ದಾರೆ.

ಇದನ್ನೂ ಓದಿ: ‘ವಕೀಲರ ನಡಿಗೆ ರೈತರ ಕಡೆಗೆ’ – ರೈತ ಹೋರಾಟಕ್ಕೆ ಬೆಂಬಲ ನೀಡಿದ ಬೆಂಗಳೂರಿನ ವಕೀಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...