Homeಚಳವಳಿ’ನಮ್ಮ ಮೇಲಿನ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ’- ರೈತ ಮುಖಂಡರು

’ನಮ್ಮ ಮೇಲಿನ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ’- ರೈತ ಮುಖಂಡರು

ನಮ್ಮ ಚಳವಳಿಯ ಮುಖ್ಯ ವಿಷಯ ಆಂದೋಲನವಾಗಿದೆ ಮತ್ತು ಇದನ್ನು ನಾವು ಬಲಪಡಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಜನವರಿ 26 ರ ರೈತರ ಟ್ರಾಕ್ಟರ್‌ ರ್‍ಯಾಲಿಯಲ್ಲಿನ ಸಂಧರ್ಭದ ಅಹಿತಕರ ಘಟನೆಯ ನಂತರ ನಡೆದ ಬೆಳವಣಿಗೆಯಲ್ಲಿ ಕೇಂದ್ರ ಮತ್ತು ರೈತ ಮುಖಂಡರ ನಡುವಿನ ಮಾತುಕತೆಗಳು ಸಂಪೂರ್ಣವಾಗಿ ನಿಂತು ಹೋಗಿದೆ. ಜನವರಿ 22 ರಿಂದ ನಡುವೆ ಯಾವುದೇ ಸಭೆಗಳು ನಡೆದಿಲ್ಲ. ಇದುವರೆಗೂ ಹನ್ನೊಂದನೇ ಸುತ್ತಿನ ಮಾತುಕತೆಗಳನ್ನು ನಡೆದಿದ್ದು, ಎಲ್ಲವೂ ಮುರಿದು ಬಿದ್ದಿದೆ.

ಈ ಸಮಯದಲ್ಲಿ ಕೇಂದ್ರವು ಕೃಷಿ ಕಾನೂನುಗಳನ್ನು ಒಂದೂವರೆ ವರ್ಷಗಳು ಅಥವಾ ಸರ್ಕಾರಿ ಅಧಿಕಾರಿಗಳು ಮತ್ತು ರೈತ ಪ್ರತಿನಿಧಿಗಳ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ ತಡೆಹಿಡಿಯುವುದಾಗಿ ಹೇಳಿತ್ತು. ಆದರೆ ಕೇಂದ್ರದ ಈ ಪ್ರಸ್ತಾಪವನ್ನು ತಿರಸ್ಕರಿಸಿರುವ ರೈತರು ಮೂರು ಕಾನೂನುಗಳನ್ನು ವಾಪಾಸು ಪಡೆಯುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಭುತ್ವದ ಬೇಟೆಯಾಗುತ್ತಿರುವುದೇ ಪತ್ರಿಕೋದ್ಯಮ?

ಸರ್ಕಾರ ಹೊಸ ಪ್ರಸ್ತಾವನೆಯನ್ನು ಸಿದ್ಧಪಡಿಸಿದ ನಂತರ ಮುಂದಿನ ಸುತ್ತಿನ ಮಾತುಕತೆಗೆ ಸಿದ್ಧವಾಗುವುದಾಗಿ ಕೃಷಿ ಮುಖಂಡರು ಹೇಳಿದ್ದಾರೆ. “ನಮ್ಮ ಕೊನೆಯ ಸುತ್ತಿನ ಮಾತುಕತೆಯಲ್ಲಿ, ಸರ್ಕಾರಿ ಪ್ರತಿನಿಧಿಗಳು ಎಂಎಸ್ಪಿ ಪ್ರಶ್ನೆಯನ್ನು ಚರ್ಚಿಸಲು ಸಿದ್ಧರಿರಲಿಲ್ಲ. ನಮ್ಮ ಬೇಡಿಕೆಯು ಕೃಷಿ ಕಾನೂನನ್ನು ರದ್ದುಪಡಿಸ ಬೇಕು ಎಂಬುವುದಾಗಿದೆಯೆ ಹೊರತು ಅಮಾನತುಗೊಳಿಸುವುದಲ್ಲ. ಅವರು ಬೇರೆ ಪ್ರಸ್ತಾಪವನ್ನು ರೂಪಿಸಿ ನಮಗೆ ಅಧಿಕೃತ ಆಹ್ವಾನವನ್ನು ಕಳುಹಿಸಿದರೆ, ಮರುದಿನವೆ ನಾವು ಚರ್ಚಿಸಲು ಹೋಗುತ್ತೇವೆ” ಎಂದು ಬಿಕೆಯು ಏಕ್ತಾ (ಡಕೌಂಡಾ) ಪ್ರಧಾನ ಕಾರ್ಯದರ್ಶಿ ಜಗ್ಮೋಹನ್ ಸಿಂಗ್ ಹೇಳಿದ್ದಾರೆ.

ಕೃಷಿ ಮುಖಂಡರು ಮತ್ತು ಪ್ರತಿಭಟನಾಕಾರರ ಮೇಲೆ ದಾಖಲಾಗಿರುವ ಪ್ರಕರಣದಿಂದಾಗಿ ಮಾತುಕತೆ ನಡೆಯುತ್ತಿಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಿರುವ, ಲೋಕ ಭಲೈ ಇನ್ಸಾಫ್ ವೆಲ್ಫೇರ್‌ ಸೊಸಟಿಯ ಅಧ್ಯಕ್ಷ ಬಾಲ್ದೇವ್ ಸಿಂಗ್ ಸಿರ್ಸಾ, “ನಮಗೆ ಎಫ್‌ಐಆರ್‌ ಮತ್ತು ಕಾನೂನು ನೋಟಿಸ್‌ಗಳ ಬಗ್ಗೆ ಚಿಂತೆಯಿಲ್ಲ, ಯಾಕೆಂದರೆ ಅದು ಯಾವುದೆ ಆಂದೋಲನದ ಭಾಗವಾಗಿದ್ದು ಅದಕ್ಕೆ ನಾವು ಸಿದ್ದರಾಗಿಯೆ ಇದ್ದೇವೆ. ಈ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

“ನಾವು ಮಾತುಕತೆಗಾಗಿ ಹೋದಾಗ ನಮ್ಮ ಹೋರಾಟದ ಎಲ್ಲಾ ಬೇಡಿಕೆಗಳು ಈಡೇರಿದ ನಂತರ, ನಮ್ಮ ಮೇಲಿನ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವ ಬಗ್ಗೆ ಮಾತನಾಡುತ್ತೇವೆ. ಹೋರಾಟದಲ್ಲಿ ಅವುಗಳ ಬಗ್ಗೆ ನಾವು ಚಿಂತಿತರಾಗಿಲ್ಲ” ಎಂದು ರೈತ ಮುಖಂಡ ಜಗಮೋಹನ್ ಹೇಳುತ್ತಾರೆ.

ಇದನ್ನೂ ಓದಿ: ಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು: ರೈತರ ಸಾವಿನ ಬಗ್ಗೆ ನಾಲಗೆ ಹರಿಯ ಬಿಟ್ಟ ಹರಿಯಾಣ ಕೃಷಿ ಸಚಿವ

“ಸಾರ್ವಜನಿಕರ ಭಾಗವಹಿಸುವಿಕೆ ಉತ್ತೇಜಿಸಲು ಭಾನುವಾರದಂದು ಕ್ಯಾಂಡಲ್ ಮಾರ್ಚ್‌‌ನಂತಹ ಹಲವಾರು ಕಾರ್ಯಕ್ರಮಗಳನ್ನು ನಾವು ಸಂಘಟಿಸುತ್ತಿದ್ದೇವೆ. ಮಂಗಳವಾರ ರೈತ ಚಳವಳಿಗೆ ಸರ್ ಚೋಟೂ ರಾಮ್ ಅವರ ಕೊಡುಗೆಗಳನ್ನು ಸ್ಮರಿಸಲಿದ್ದೇವೆ. ಫೆಬ್ರವರಿ 18 ರಂದು ರೈಲ್ ರೋಕೊ ಚಳುವಳಿ ನಡೆಸುತ್ತಿದ್ದೇವೆ. ಆದರೆ ಅದಕ್ಕಿಂತ ಹೆಚ್ಚಾಗಿ, ನಿಯಮಿತವಾಗಿ ನಡೆಯುತ್ತಿರುವ ದೊಡ್ಡ ಮಹಾಪಂಚಾಯತ್‌ಗಳನ್ನು ನಡೆಸಿ ನಮ್ಮ ಹೋರಾಟದವನ್ನು ಇನ್ನಷ್ಟು ಹುರಿಗೊಳಿಸುತ್ತೇವೆ” ಎಂದು ಮಹಿಲಾ ಕಿಸಾನ್ ಅಧಿಕಾರ ಮಂಚ್‌ನ ನಾಯಕಿ ಕವಿತಾ ಕುರುಗಂತಿ ಹೇಳಿದ್ದಾರೆ.

“ನಮ್ಮ ಚಳವಳಿಯ ಮುಖ್ಯ ವಿಷಯ ಆಂದೋಲನವಾಗಿದೆ ಮತ್ತು ಅದನ್ನು ನಾವು ಬಲಪಡಿಸುತ್ತಿದ್ದೇವೆ. ಅಲ್ಲದೆ ಈ ಆಂದೋಲನ ಎಲ್ಲಾ ರಾಜ್ಯಗಳಲ್ಲಿ ಬೆಳೆಯುತ್ತಿದೆ. ಮಾತುಕತೆಗಾಗಿ ಸರ್ಕಾರವನ್ನು ಒತ್ತಾಯಿಸುವ ಮುಖ್ಯಶಕ್ತಿ ಇದುವೆ ಆಗಿದೆ” ಎಂದು ರೈತ ಮುಖಂಡ ಭಂಗು ಹೇಳಿದ್ದಾರೆ.

ಇದನ್ನೂ ಓದಿ: ‘ವಕೀಲರ ನಡಿಗೆ ರೈತರ ಕಡೆಗೆ’ – ರೈತ ಹೋರಾಟಕ್ಕೆ ಬೆಂಬಲ ನೀಡಿದ ಬೆಂಗಳೂರಿನ ವಕೀಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...