Homeಚಳವಳಿ’ನಮ್ಮ ಮೇಲಿನ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ’- ರೈತ ಮುಖಂಡರು

’ನಮ್ಮ ಮೇಲಿನ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ’- ರೈತ ಮುಖಂಡರು

ನಮ್ಮ ಚಳವಳಿಯ ಮುಖ್ಯ ವಿಷಯ ಆಂದೋಲನವಾಗಿದೆ ಮತ್ತು ಇದನ್ನು ನಾವು ಬಲಪಡಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಜನವರಿ 26 ರ ರೈತರ ಟ್ರಾಕ್ಟರ್‌ ರ್‍ಯಾಲಿಯಲ್ಲಿನ ಸಂಧರ್ಭದ ಅಹಿತಕರ ಘಟನೆಯ ನಂತರ ನಡೆದ ಬೆಳವಣಿಗೆಯಲ್ಲಿ ಕೇಂದ್ರ ಮತ್ತು ರೈತ ಮುಖಂಡರ ನಡುವಿನ ಮಾತುಕತೆಗಳು ಸಂಪೂರ್ಣವಾಗಿ ನಿಂತು ಹೋಗಿದೆ. ಜನವರಿ 22 ರಿಂದ ನಡುವೆ ಯಾವುದೇ ಸಭೆಗಳು ನಡೆದಿಲ್ಲ. ಇದುವರೆಗೂ ಹನ್ನೊಂದನೇ ಸುತ್ತಿನ ಮಾತುಕತೆಗಳನ್ನು ನಡೆದಿದ್ದು, ಎಲ್ಲವೂ ಮುರಿದು ಬಿದ್ದಿದೆ.

ಈ ಸಮಯದಲ್ಲಿ ಕೇಂದ್ರವು ಕೃಷಿ ಕಾನೂನುಗಳನ್ನು ಒಂದೂವರೆ ವರ್ಷಗಳು ಅಥವಾ ಸರ್ಕಾರಿ ಅಧಿಕಾರಿಗಳು ಮತ್ತು ರೈತ ಪ್ರತಿನಿಧಿಗಳ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ ತಡೆಹಿಡಿಯುವುದಾಗಿ ಹೇಳಿತ್ತು. ಆದರೆ ಕೇಂದ್ರದ ಈ ಪ್ರಸ್ತಾಪವನ್ನು ತಿರಸ್ಕರಿಸಿರುವ ರೈತರು ಮೂರು ಕಾನೂನುಗಳನ್ನು ವಾಪಾಸು ಪಡೆಯುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಭುತ್ವದ ಬೇಟೆಯಾಗುತ್ತಿರುವುದೇ ಪತ್ರಿಕೋದ್ಯಮ?

ಸರ್ಕಾರ ಹೊಸ ಪ್ರಸ್ತಾವನೆಯನ್ನು ಸಿದ್ಧಪಡಿಸಿದ ನಂತರ ಮುಂದಿನ ಸುತ್ತಿನ ಮಾತುಕತೆಗೆ ಸಿದ್ಧವಾಗುವುದಾಗಿ ಕೃಷಿ ಮುಖಂಡರು ಹೇಳಿದ್ದಾರೆ. “ನಮ್ಮ ಕೊನೆಯ ಸುತ್ತಿನ ಮಾತುಕತೆಯಲ್ಲಿ, ಸರ್ಕಾರಿ ಪ್ರತಿನಿಧಿಗಳು ಎಂಎಸ್ಪಿ ಪ್ರಶ್ನೆಯನ್ನು ಚರ್ಚಿಸಲು ಸಿದ್ಧರಿರಲಿಲ್ಲ. ನಮ್ಮ ಬೇಡಿಕೆಯು ಕೃಷಿ ಕಾನೂನನ್ನು ರದ್ದುಪಡಿಸ ಬೇಕು ಎಂಬುವುದಾಗಿದೆಯೆ ಹೊರತು ಅಮಾನತುಗೊಳಿಸುವುದಲ್ಲ. ಅವರು ಬೇರೆ ಪ್ರಸ್ತಾಪವನ್ನು ರೂಪಿಸಿ ನಮಗೆ ಅಧಿಕೃತ ಆಹ್ವಾನವನ್ನು ಕಳುಹಿಸಿದರೆ, ಮರುದಿನವೆ ನಾವು ಚರ್ಚಿಸಲು ಹೋಗುತ್ತೇವೆ” ಎಂದು ಬಿಕೆಯು ಏಕ್ತಾ (ಡಕೌಂಡಾ) ಪ್ರಧಾನ ಕಾರ್ಯದರ್ಶಿ ಜಗ್ಮೋಹನ್ ಸಿಂಗ್ ಹೇಳಿದ್ದಾರೆ.

ಕೃಷಿ ಮುಖಂಡರು ಮತ್ತು ಪ್ರತಿಭಟನಾಕಾರರ ಮೇಲೆ ದಾಖಲಾಗಿರುವ ಪ್ರಕರಣದಿಂದಾಗಿ ಮಾತುಕತೆ ನಡೆಯುತ್ತಿಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಿರುವ, ಲೋಕ ಭಲೈ ಇನ್ಸಾಫ್ ವೆಲ್ಫೇರ್‌ ಸೊಸಟಿಯ ಅಧ್ಯಕ್ಷ ಬಾಲ್ದೇವ್ ಸಿಂಗ್ ಸಿರ್ಸಾ, “ನಮಗೆ ಎಫ್‌ಐಆರ್‌ ಮತ್ತು ಕಾನೂನು ನೋಟಿಸ್‌ಗಳ ಬಗ್ಗೆ ಚಿಂತೆಯಿಲ್ಲ, ಯಾಕೆಂದರೆ ಅದು ಯಾವುದೆ ಆಂದೋಲನದ ಭಾಗವಾಗಿದ್ದು ಅದಕ್ಕೆ ನಾವು ಸಿದ್ದರಾಗಿಯೆ ಇದ್ದೇವೆ. ಈ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

“ನಾವು ಮಾತುಕತೆಗಾಗಿ ಹೋದಾಗ ನಮ್ಮ ಹೋರಾಟದ ಎಲ್ಲಾ ಬೇಡಿಕೆಗಳು ಈಡೇರಿದ ನಂತರ, ನಮ್ಮ ಮೇಲಿನ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವ ಬಗ್ಗೆ ಮಾತನಾಡುತ್ತೇವೆ. ಹೋರಾಟದಲ್ಲಿ ಅವುಗಳ ಬಗ್ಗೆ ನಾವು ಚಿಂತಿತರಾಗಿಲ್ಲ” ಎಂದು ರೈತ ಮುಖಂಡ ಜಗಮೋಹನ್ ಹೇಳುತ್ತಾರೆ.

ಇದನ್ನೂ ಓದಿ: ಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು: ರೈತರ ಸಾವಿನ ಬಗ್ಗೆ ನಾಲಗೆ ಹರಿಯ ಬಿಟ್ಟ ಹರಿಯಾಣ ಕೃಷಿ ಸಚಿವ

“ಸಾರ್ವಜನಿಕರ ಭಾಗವಹಿಸುವಿಕೆ ಉತ್ತೇಜಿಸಲು ಭಾನುವಾರದಂದು ಕ್ಯಾಂಡಲ್ ಮಾರ್ಚ್‌‌ನಂತಹ ಹಲವಾರು ಕಾರ್ಯಕ್ರಮಗಳನ್ನು ನಾವು ಸಂಘಟಿಸುತ್ತಿದ್ದೇವೆ. ಮಂಗಳವಾರ ರೈತ ಚಳವಳಿಗೆ ಸರ್ ಚೋಟೂ ರಾಮ್ ಅವರ ಕೊಡುಗೆಗಳನ್ನು ಸ್ಮರಿಸಲಿದ್ದೇವೆ. ಫೆಬ್ರವರಿ 18 ರಂದು ರೈಲ್ ರೋಕೊ ಚಳುವಳಿ ನಡೆಸುತ್ತಿದ್ದೇವೆ. ಆದರೆ ಅದಕ್ಕಿಂತ ಹೆಚ್ಚಾಗಿ, ನಿಯಮಿತವಾಗಿ ನಡೆಯುತ್ತಿರುವ ದೊಡ್ಡ ಮಹಾಪಂಚಾಯತ್‌ಗಳನ್ನು ನಡೆಸಿ ನಮ್ಮ ಹೋರಾಟದವನ್ನು ಇನ್ನಷ್ಟು ಹುರಿಗೊಳಿಸುತ್ತೇವೆ” ಎಂದು ಮಹಿಲಾ ಕಿಸಾನ್ ಅಧಿಕಾರ ಮಂಚ್‌ನ ನಾಯಕಿ ಕವಿತಾ ಕುರುಗಂತಿ ಹೇಳಿದ್ದಾರೆ.

“ನಮ್ಮ ಚಳವಳಿಯ ಮುಖ್ಯ ವಿಷಯ ಆಂದೋಲನವಾಗಿದೆ ಮತ್ತು ಅದನ್ನು ನಾವು ಬಲಪಡಿಸುತ್ತಿದ್ದೇವೆ. ಅಲ್ಲದೆ ಈ ಆಂದೋಲನ ಎಲ್ಲಾ ರಾಜ್ಯಗಳಲ್ಲಿ ಬೆಳೆಯುತ್ತಿದೆ. ಮಾತುಕತೆಗಾಗಿ ಸರ್ಕಾರವನ್ನು ಒತ್ತಾಯಿಸುವ ಮುಖ್ಯಶಕ್ತಿ ಇದುವೆ ಆಗಿದೆ” ಎಂದು ರೈತ ಮುಖಂಡ ಭಂಗು ಹೇಳಿದ್ದಾರೆ.

ಇದನ್ನೂ ಓದಿ: ‘ವಕೀಲರ ನಡಿಗೆ ರೈತರ ಕಡೆಗೆ’ – ರೈತ ಹೋರಾಟಕ್ಕೆ ಬೆಂಬಲ ನೀಡಿದ ಬೆಂಗಳೂರಿನ ವಕೀಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...