Homeಚಳವಳಿ’ನಮ್ಮ ಮೇಲಿನ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ’- ರೈತ ಮುಖಂಡರು

’ನಮ್ಮ ಮೇಲಿನ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ’- ರೈತ ಮುಖಂಡರು

ನಮ್ಮ ಚಳವಳಿಯ ಮುಖ್ಯ ವಿಷಯ ಆಂದೋಲನವಾಗಿದೆ ಮತ್ತು ಇದನ್ನು ನಾವು ಬಲಪಡಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಜನವರಿ 26 ರ ರೈತರ ಟ್ರಾಕ್ಟರ್‌ ರ್‍ಯಾಲಿಯಲ್ಲಿನ ಸಂಧರ್ಭದ ಅಹಿತಕರ ಘಟನೆಯ ನಂತರ ನಡೆದ ಬೆಳವಣಿಗೆಯಲ್ಲಿ ಕೇಂದ್ರ ಮತ್ತು ರೈತ ಮುಖಂಡರ ನಡುವಿನ ಮಾತುಕತೆಗಳು ಸಂಪೂರ್ಣವಾಗಿ ನಿಂತು ಹೋಗಿದೆ. ಜನವರಿ 22 ರಿಂದ ನಡುವೆ ಯಾವುದೇ ಸಭೆಗಳು ನಡೆದಿಲ್ಲ. ಇದುವರೆಗೂ ಹನ್ನೊಂದನೇ ಸುತ್ತಿನ ಮಾತುಕತೆಗಳನ್ನು ನಡೆದಿದ್ದು, ಎಲ್ಲವೂ ಮುರಿದು ಬಿದ್ದಿದೆ.

ಈ ಸಮಯದಲ್ಲಿ ಕೇಂದ್ರವು ಕೃಷಿ ಕಾನೂನುಗಳನ್ನು ಒಂದೂವರೆ ವರ್ಷಗಳು ಅಥವಾ ಸರ್ಕಾರಿ ಅಧಿಕಾರಿಗಳು ಮತ್ತು ರೈತ ಪ್ರತಿನಿಧಿಗಳ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ ತಡೆಹಿಡಿಯುವುದಾಗಿ ಹೇಳಿತ್ತು. ಆದರೆ ಕೇಂದ್ರದ ಈ ಪ್ರಸ್ತಾಪವನ್ನು ತಿರಸ್ಕರಿಸಿರುವ ರೈತರು ಮೂರು ಕಾನೂನುಗಳನ್ನು ವಾಪಾಸು ಪಡೆಯುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಭುತ್ವದ ಬೇಟೆಯಾಗುತ್ತಿರುವುದೇ ಪತ್ರಿಕೋದ್ಯಮ?

ಸರ್ಕಾರ ಹೊಸ ಪ್ರಸ್ತಾವನೆಯನ್ನು ಸಿದ್ಧಪಡಿಸಿದ ನಂತರ ಮುಂದಿನ ಸುತ್ತಿನ ಮಾತುಕತೆಗೆ ಸಿದ್ಧವಾಗುವುದಾಗಿ ಕೃಷಿ ಮುಖಂಡರು ಹೇಳಿದ್ದಾರೆ. “ನಮ್ಮ ಕೊನೆಯ ಸುತ್ತಿನ ಮಾತುಕತೆಯಲ್ಲಿ, ಸರ್ಕಾರಿ ಪ್ರತಿನಿಧಿಗಳು ಎಂಎಸ್ಪಿ ಪ್ರಶ್ನೆಯನ್ನು ಚರ್ಚಿಸಲು ಸಿದ್ಧರಿರಲಿಲ್ಲ. ನಮ್ಮ ಬೇಡಿಕೆಯು ಕೃಷಿ ಕಾನೂನನ್ನು ರದ್ದುಪಡಿಸ ಬೇಕು ಎಂಬುವುದಾಗಿದೆಯೆ ಹೊರತು ಅಮಾನತುಗೊಳಿಸುವುದಲ್ಲ. ಅವರು ಬೇರೆ ಪ್ರಸ್ತಾಪವನ್ನು ರೂಪಿಸಿ ನಮಗೆ ಅಧಿಕೃತ ಆಹ್ವಾನವನ್ನು ಕಳುಹಿಸಿದರೆ, ಮರುದಿನವೆ ನಾವು ಚರ್ಚಿಸಲು ಹೋಗುತ್ತೇವೆ” ಎಂದು ಬಿಕೆಯು ಏಕ್ತಾ (ಡಕೌಂಡಾ) ಪ್ರಧಾನ ಕಾರ್ಯದರ್ಶಿ ಜಗ್ಮೋಹನ್ ಸಿಂಗ್ ಹೇಳಿದ್ದಾರೆ.

ಕೃಷಿ ಮುಖಂಡರು ಮತ್ತು ಪ್ರತಿಭಟನಾಕಾರರ ಮೇಲೆ ದಾಖಲಾಗಿರುವ ಪ್ರಕರಣದಿಂದಾಗಿ ಮಾತುಕತೆ ನಡೆಯುತ್ತಿಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಿರುವ, ಲೋಕ ಭಲೈ ಇನ್ಸಾಫ್ ವೆಲ್ಫೇರ್‌ ಸೊಸಟಿಯ ಅಧ್ಯಕ್ಷ ಬಾಲ್ದೇವ್ ಸಿಂಗ್ ಸಿರ್ಸಾ, “ನಮಗೆ ಎಫ್‌ಐಆರ್‌ ಮತ್ತು ಕಾನೂನು ನೋಟಿಸ್‌ಗಳ ಬಗ್ಗೆ ಚಿಂತೆಯಿಲ್ಲ, ಯಾಕೆಂದರೆ ಅದು ಯಾವುದೆ ಆಂದೋಲನದ ಭಾಗವಾಗಿದ್ದು ಅದಕ್ಕೆ ನಾವು ಸಿದ್ದರಾಗಿಯೆ ಇದ್ದೇವೆ. ಈ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

“ನಾವು ಮಾತುಕತೆಗಾಗಿ ಹೋದಾಗ ನಮ್ಮ ಹೋರಾಟದ ಎಲ್ಲಾ ಬೇಡಿಕೆಗಳು ಈಡೇರಿದ ನಂತರ, ನಮ್ಮ ಮೇಲಿನ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವ ಬಗ್ಗೆ ಮಾತನಾಡುತ್ತೇವೆ. ಹೋರಾಟದಲ್ಲಿ ಅವುಗಳ ಬಗ್ಗೆ ನಾವು ಚಿಂತಿತರಾಗಿಲ್ಲ” ಎಂದು ರೈತ ಮುಖಂಡ ಜಗಮೋಹನ್ ಹೇಳುತ್ತಾರೆ.

ಇದನ್ನೂ ಓದಿ: ಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು: ರೈತರ ಸಾವಿನ ಬಗ್ಗೆ ನಾಲಗೆ ಹರಿಯ ಬಿಟ್ಟ ಹರಿಯಾಣ ಕೃಷಿ ಸಚಿವ

“ಸಾರ್ವಜನಿಕರ ಭಾಗವಹಿಸುವಿಕೆ ಉತ್ತೇಜಿಸಲು ಭಾನುವಾರದಂದು ಕ್ಯಾಂಡಲ್ ಮಾರ್ಚ್‌‌ನಂತಹ ಹಲವಾರು ಕಾರ್ಯಕ್ರಮಗಳನ್ನು ನಾವು ಸಂಘಟಿಸುತ್ತಿದ್ದೇವೆ. ಮಂಗಳವಾರ ರೈತ ಚಳವಳಿಗೆ ಸರ್ ಚೋಟೂ ರಾಮ್ ಅವರ ಕೊಡುಗೆಗಳನ್ನು ಸ್ಮರಿಸಲಿದ್ದೇವೆ. ಫೆಬ್ರವರಿ 18 ರಂದು ರೈಲ್ ರೋಕೊ ಚಳುವಳಿ ನಡೆಸುತ್ತಿದ್ದೇವೆ. ಆದರೆ ಅದಕ್ಕಿಂತ ಹೆಚ್ಚಾಗಿ, ನಿಯಮಿತವಾಗಿ ನಡೆಯುತ್ತಿರುವ ದೊಡ್ಡ ಮಹಾಪಂಚಾಯತ್‌ಗಳನ್ನು ನಡೆಸಿ ನಮ್ಮ ಹೋರಾಟದವನ್ನು ಇನ್ನಷ್ಟು ಹುರಿಗೊಳಿಸುತ್ತೇವೆ” ಎಂದು ಮಹಿಲಾ ಕಿಸಾನ್ ಅಧಿಕಾರ ಮಂಚ್‌ನ ನಾಯಕಿ ಕವಿತಾ ಕುರುಗಂತಿ ಹೇಳಿದ್ದಾರೆ.

“ನಮ್ಮ ಚಳವಳಿಯ ಮುಖ್ಯ ವಿಷಯ ಆಂದೋಲನವಾಗಿದೆ ಮತ್ತು ಅದನ್ನು ನಾವು ಬಲಪಡಿಸುತ್ತಿದ್ದೇವೆ. ಅಲ್ಲದೆ ಈ ಆಂದೋಲನ ಎಲ್ಲಾ ರಾಜ್ಯಗಳಲ್ಲಿ ಬೆಳೆಯುತ್ತಿದೆ. ಮಾತುಕತೆಗಾಗಿ ಸರ್ಕಾರವನ್ನು ಒತ್ತಾಯಿಸುವ ಮುಖ್ಯಶಕ್ತಿ ಇದುವೆ ಆಗಿದೆ” ಎಂದು ರೈತ ಮುಖಂಡ ಭಂಗು ಹೇಳಿದ್ದಾರೆ.

ಇದನ್ನೂ ಓದಿ: ‘ವಕೀಲರ ನಡಿಗೆ ರೈತರ ಕಡೆಗೆ’ – ರೈತ ಹೋರಾಟಕ್ಕೆ ಬೆಂಬಲ ನೀಡಿದ ಬೆಂಗಳೂರಿನ ವಕೀಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...