Homeದಲಿತ್ ಫೈಲ್ಸ್ಐಐಟಿ ಬಾಂಬೆ ದಲಿತ ವಿದ್ಯಾರ್ಥಿಯ ಸಾವಿಗೆ ಜಾತಿ ತಾರತಮ್ಯ ಕಾರಣವಲ್ಲ; ವಿಚಾರಣಾ ಸಮಿತಿ ವರದಿ

ಐಐಟಿ ಬಾಂಬೆ ದಲಿತ ವಿದ್ಯಾರ್ಥಿಯ ಸಾವಿಗೆ ಜಾತಿ ತಾರತಮ್ಯ ಕಾರಣವಲ್ಲ; ವಿಚಾರಣಾ ಸಮಿತಿ ವರದಿ

- Advertisement -
- Advertisement -

ದಲಿತ ವಿದ್ಯಾರ್ಥಿ ದರ್ಶನ ಸೋಲಂಕಿಯವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ತನಿಖೆ ಮಾಡಲು ಐಐಟಿ-ಬಾಂಬೆ ರಚಿಸಿದ್ದ ವಿಚಾರಣಾ ಸಮಿತಿಯು ವರದಿ ನೀಡಿದ್ದು, “ದರ್ಶನ್‌ ಸೋಲಂಕಿ ಜಾತಿ ತಾರತಮ್ಯದಿಂದ ಸಾವನ್ನಪ್ಪಿದ್ದಾರೆ ಎಂಬುದಕ್ಕೆ ನಿರ್ದಿಷ್ಟ ಪುರಾವೆಗಳಿಲ್ಲ” ಎಂದಿದೆ.

“ಕ್ಷೀಣಿಸುತ್ತಿದ್ದ ಶೈಕ್ಷಣಿಕ ಕಾರ್ಯಕ್ಷಮತೆಯು ಈ ನಿರ್ಧಾರದ ಹಿಂದೆ ಇರಬಹುದು” ಎಂದು ವರದಿ ಹೇಳಿದೆ.

ಐಐಟಿ ಬಾಂಬೆಯಲ್ಲಿ ಪ್ರಥಮ ವರ್ಷದ ರಾಸಾಯನಿಕ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಅಹಮದಾಬಾದ್‌ನ ದರ್ಶನ್‌ ಸೋಲಂಕಿಯವರು ಫೆಬ್ರವರಿ 12 ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಸೆಮಿಸ್ಟರ್ ಪರೀಕ್ಷೆಗಳು ಮುಗಿದ ಒಂದು ದಿನದ ನಂತರ ಈ ಘಟನೆ ನಡೆದಿತ್ತು. “ಕ್ಯಾಂಪಸ್‌ನಲ್ಲಿ ಜಾತಿ ಆಧಾರಿತ ತಾರತಮ್ಯಕ್ಕೆ ದರ್ಶನ್ ಒಳಗಾಗಿದ್ದನು. ಹೀಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ” ಎಂದು ಸೊಲಂಕಿಯ ಕುಟುಂಬ ಆರೋಪಿಸಿತ್ತು.

ದರ್ಶನ್‌ ಸಾವಿಗೆ ಕಾರಣವಾದ ಸಂದರ್ಭಗಳ ಬಗ್ಗೆ ತನಿಖೆ ನಡೆಸಲು ರಸಾಯನಶಾಸ್ತ್ರ ವಿಭಾಗದ ಪ್ರೊಫೆಸರ್ ನಂದ್ ಕಿಶೋರ್ ನೇತೃತ್ವದಲ್ಲಿ 12 ಸದಸ್ಯರ ಸಮಿತಿಯನ್ನು ಐಐಟಿ ಬಾಂಬೆ ರಚಿಸಿತ್ತು. ಮಾರ್ಚ್ 2ರಂದು ಸಮಿತಿಯು ತನ್ನ ಮಧ್ಯಂತರ ವರದಿಯನ್ನು ಸಲ್ಲಿಸಿದೆ. ಒಂದು ನಕಲನ್ನು ಕೇಂದ್ರ ಸರ್ಕಾರದೊಂದಿಗೂ ಹಂಚಿಕೊಳ್ಳಲಾಗಿದೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

“ದರ್ಶನ್‌ ಸೋಲಂಕಿಯವರ ಸಹೋದರಿ ಮಾತ್ರ ಜಾತಿ ತಾರತಮ್ಯವನ್ನು ಪ್ರಸ್ತಾಪ ಮಾಡಿದ್ದಾರೆ. ತನ್ನ ಸಹೋದರ ಐಐಟಿ ಬಾಂಬೆಯಲ್ಲಿ ಕೆಲವು ವಿದ್ಯಾರ್ಥಿಗಳಿಂದ ಜಾತಿ ಸಂಬಂಧಿತ ತಾರತಮ್ಯವನ್ನು ಎದುರಿಸುತ್ತಿರುವಾಗಿ ಸೋಲಂಕಿ ಸಹೋದರಿ ತಿಳಿಸಿದ್ದಾರೆ” ಎಂಬುದನ್ನು ವರದಿಯಲ್ಲಿ ಉಲ್ಲೇಖಿಸಿರುವುದಾಗಿ ‘ಎಕ್ಸ್‌ಪ್ರೆಸ್‌’ ತಿಳಿಸಿದೆ.

ಕ್ಯಾಂಪಸ್‌ನಲ್ಲಿ ಜಾತಿ ತಾರತಮ್ಯ ನಡೆಯುತ್ತಿದೆ ಎಂದು ಆರೋಪಿಸಿರುವ ಐಐಟಿ ಬಾಂಬೆಯಲ್ಲಿನ ‘ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್’ ಮತ್ತು ಅಂಬೇಡ್ಕರ್‌ವಾದಿ ವಿದ್ಯಾರ್ಥಿಗಳ್ಯಾರೂ ದರ್ಶನ್‌ ಸೋಲಂಕಿಯವರನ್ನು ಭೇಟಿ ಮಾಡಿಲ್ಲ. ದರ್ಶನ್ ಅವರು ಯಾವ ರೀತಿಯ ಸಮಸ್ಯೆಯನ್ನು ಎದುರಿಸುತ್ತಿದ್ದರೆಂದು ನೇರವಾಗಿ ಕೇಳಿ ತಿಳಿದುಕೊಂಡಿರಲಿಲ್ಲ ಎಂದಿದೆ ವರದಿ.

“ಆದ್ದರಿಂದ ದರ್ಶನ್ ಸಹೋದರಿಯ ಹೇಳಿಕೆಯನ್ನು ಹೊರತುಪಡಿಸಿ, ಐಐಟಿ ಬಾಂಬೆಯಲ್ಲಿದ್ದ ಸಮಯದಲ್ಲಿ ದರ್ಶನ್‌ ಎದುರಿಸುತ್ತಿರುವ ನೇರ ಜಾತಿ ಆಧಾರಿತ ತಾರತಮ್ಯದ ಬಗ್ಗೆ ಯಾವುದೇ ನಿರ್ದಿಷ್ಟ ಪುರಾವೆಗಳಿಲ್ಲ” ಎಂದು ಮಧ್ಯಂತರ ವರದಿ ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಲು ಸಜ್ಜಾಗಿರುವ ಸಚಿವರು

ಸಮಿತಿಯು ಜಾತಿ ತಾರತಮ್ಯವನ್ನು ಒಂದು ಕಾರಣವೆಂದು ತಳ್ಳಿಹಾಕಿದ್ದರೂ, ವರದಿಯಲ್ಲಿ ಸೋಲಂಕಿಯವರ ಶೈಕ್ಷಣಿಕ ಕಾರ್ಯಕ್ಷಮತೆಯ ಬಗ್ಗೆ ಮಾತನಾಡಿದ್ದಾರೆ. ಒಂದು ವಿಷಯವನ್ನು ಹೊರತುಪಡಿಸಿ, ಇತರ ಎಲ್ಲದರಲ್ಲೂ ಸೋಲಂಕಿಯವರ ಅಧ್ಯಯನ ತೀರಾ ಕಳಪೆಯಾಗಿದೆ ಎಂದು ವಿಚಾರಣಾ ಸಮಿತಿ ತಿಳಿಸಿದೆ.

“ಉಪನ್ಯಾಸಗಳನ್ನು ಅರ್ಥಮಾಡಿಕೊಳ್ಳುವಲ್ಲಿ ದರ್ಶನ್‌ ಸಮಸ್ಯೆಗಳನ್ನು ಎದುರಿಸುತ್ತಿದ್ದರು, ಅದು ಆತನ ಮೇಲೆ ಗಂಭೀರ ಪರಿಣಾಮ ಬೀರಿರಬಹುದು. ದರ್ಶನ್‌ ತರಗತಿಗಳಿಗೆ ಗೈರು ಹಾಜರಾಗುತ್ತಿದ್ದರು. ಆದ್ದರಿಂದ, ಕ್ಷೀಣಿಸುತ್ತಿರುವ ಶೈಕ್ಷಣಿಕ ಕಾರ್ಯಕ್ಷಮತೆಯ ಹತಾಶೆಯು ಆತನ ಮೇಲೆ ಗಂಭೀರ ಪರಿಣಾಮ ಬೀರಿರಬಹುದು” ಎಂದಿದ್ದಾರೆ.

ಫೆಬ್ರವರಿ 12ರಂದು ಮಧ್ಯಾಹ್ನ ಶಾಪಿಂಗ್ ಮಾಡಲು ಸೋಲಂಕಿ ತನ್ನ ಸ್ನೇಹಿತರೊಂದಿಗೆ ಹೊರಗೆ ಹೋಗಲು ಯೋಜಿಸಿದ್ದರು. “ಸ್ವಲ್ಪ ಹಣವನ್ನು ತನ್ನ ತಂದೆಯಿಂದ ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದರು” ಎಂದು ಸಮಿತಿ ತಿಳಿಸಿದೆ.

“ಕುಟುಂಬದೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ನಂತರ ಮತ್ತು ದುರಂತ ಘಟನೆಯ ಮೊದಲು ಏನಾಯಿತು ಎಂಬುದರ ಕುರಿತು ಸಮಿತಿಗೆ ಯಾವುದೇ ಮಾಹಿತಿ ಇಲ್ಲ” ಎಂದಿದೆ ವರದಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...