Homeದಲಿತ್ ಫೈಲ್ಸ್ಐಐಟಿ ಬಾಂಬೆ ದಲಿತ ವಿದ್ಯಾರ್ಥಿಯ ಸಾವಿಗೆ ಜಾತಿ ತಾರತಮ್ಯ ಕಾರಣವಲ್ಲ; ವಿಚಾರಣಾ ಸಮಿತಿ ವರದಿ

ಐಐಟಿ ಬಾಂಬೆ ದಲಿತ ವಿದ್ಯಾರ್ಥಿಯ ಸಾವಿಗೆ ಜಾತಿ ತಾರತಮ್ಯ ಕಾರಣವಲ್ಲ; ವಿಚಾರಣಾ ಸಮಿತಿ ವರದಿ

- Advertisement -
- Advertisement -

ದಲಿತ ವಿದ್ಯಾರ್ಥಿ ದರ್ಶನ ಸೋಲಂಕಿಯವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ತನಿಖೆ ಮಾಡಲು ಐಐಟಿ-ಬಾಂಬೆ ರಚಿಸಿದ್ದ ವಿಚಾರಣಾ ಸಮಿತಿಯು ವರದಿ ನೀಡಿದ್ದು, “ದರ್ಶನ್‌ ಸೋಲಂಕಿ ಜಾತಿ ತಾರತಮ್ಯದಿಂದ ಸಾವನ್ನಪ್ಪಿದ್ದಾರೆ ಎಂಬುದಕ್ಕೆ ನಿರ್ದಿಷ್ಟ ಪುರಾವೆಗಳಿಲ್ಲ” ಎಂದಿದೆ.

“ಕ್ಷೀಣಿಸುತ್ತಿದ್ದ ಶೈಕ್ಷಣಿಕ ಕಾರ್ಯಕ್ಷಮತೆಯು ಈ ನಿರ್ಧಾರದ ಹಿಂದೆ ಇರಬಹುದು” ಎಂದು ವರದಿ ಹೇಳಿದೆ.

ಐಐಟಿ ಬಾಂಬೆಯಲ್ಲಿ ಪ್ರಥಮ ವರ್ಷದ ರಾಸಾಯನಿಕ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಅಹಮದಾಬಾದ್‌ನ ದರ್ಶನ್‌ ಸೋಲಂಕಿಯವರು ಫೆಬ್ರವರಿ 12 ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಸೆಮಿಸ್ಟರ್ ಪರೀಕ್ಷೆಗಳು ಮುಗಿದ ಒಂದು ದಿನದ ನಂತರ ಈ ಘಟನೆ ನಡೆದಿತ್ತು. “ಕ್ಯಾಂಪಸ್‌ನಲ್ಲಿ ಜಾತಿ ಆಧಾರಿತ ತಾರತಮ್ಯಕ್ಕೆ ದರ್ಶನ್ ಒಳಗಾಗಿದ್ದನು. ಹೀಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ” ಎಂದು ಸೊಲಂಕಿಯ ಕುಟುಂಬ ಆರೋಪಿಸಿತ್ತು.

ದರ್ಶನ್‌ ಸಾವಿಗೆ ಕಾರಣವಾದ ಸಂದರ್ಭಗಳ ಬಗ್ಗೆ ತನಿಖೆ ನಡೆಸಲು ರಸಾಯನಶಾಸ್ತ್ರ ವಿಭಾಗದ ಪ್ರೊಫೆಸರ್ ನಂದ್ ಕಿಶೋರ್ ನೇತೃತ್ವದಲ್ಲಿ 12 ಸದಸ್ಯರ ಸಮಿತಿಯನ್ನು ಐಐಟಿ ಬಾಂಬೆ ರಚಿಸಿತ್ತು. ಮಾರ್ಚ್ 2ರಂದು ಸಮಿತಿಯು ತನ್ನ ಮಧ್ಯಂತರ ವರದಿಯನ್ನು ಸಲ್ಲಿಸಿದೆ. ಒಂದು ನಕಲನ್ನು ಕೇಂದ್ರ ಸರ್ಕಾರದೊಂದಿಗೂ ಹಂಚಿಕೊಳ್ಳಲಾಗಿದೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

“ದರ್ಶನ್‌ ಸೋಲಂಕಿಯವರ ಸಹೋದರಿ ಮಾತ್ರ ಜಾತಿ ತಾರತಮ್ಯವನ್ನು ಪ್ರಸ್ತಾಪ ಮಾಡಿದ್ದಾರೆ. ತನ್ನ ಸಹೋದರ ಐಐಟಿ ಬಾಂಬೆಯಲ್ಲಿ ಕೆಲವು ವಿದ್ಯಾರ್ಥಿಗಳಿಂದ ಜಾತಿ ಸಂಬಂಧಿತ ತಾರತಮ್ಯವನ್ನು ಎದುರಿಸುತ್ತಿರುವಾಗಿ ಸೋಲಂಕಿ ಸಹೋದರಿ ತಿಳಿಸಿದ್ದಾರೆ” ಎಂಬುದನ್ನು ವರದಿಯಲ್ಲಿ ಉಲ್ಲೇಖಿಸಿರುವುದಾಗಿ ‘ಎಕ್ಸ್‌ಪ್ರೆಸ್‌’ ತಿಳಿಸಿದೆ.

ಕ್ಯಾಂಪಸ್‌ನಲ್ಲಿ ಜಾತಿ ತಾರತಮ್ಯ ನಡೆಯುತ್ತಿದೆ ಎಂದು ಆರೋಪಿಸಿರುವ ಐಐಟಿ ಬಾಂಬೆಯಲ್ಲಿನ ‘ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್’ ಮತ್ತು ಅಂಬೇಡ್ಕರ್‌ವಾದಿ ವಿದ್ಯಾರ್ಥಿಗಳ್ಯಾರೂ ದರ್ಶನ್‌ ಸೋಲಂಕಿಯವರನ್ನು ಭೇಟಿ ಮಾಡಿಲ್ಲ. ದರ್ಶನ್ ಅವರು ಯಾವ ರೀತಿಯ ಸಮಸ್ಯೆಯನ್ನು ಎದುರಿಸುತ್ತಿದ್ದರೆಂದು ನೇರವಾಗಿ ಕೇಳಿ ತಿಳಿದುಕೊಂಡಿರಲಿಲ್ಲ ಎಂದಿದೆ ವರದಿ.

“ಆದ್ದರಿಂದ ದರ್ಶನ್ ಸಹೋದರಿಯ ಹೇಳಿಕೆಯನ್ನು ಹೊರತುಪಡಿಸಿ, ಐಐಟಿ ಬಾಂಬೆಯಲ್ಲಿದ್ದ ಸಮಯದಲ್ಲಿ ದರ್ಶನ್‌ ಎದುರಿಸುತ್ತಿರುವ ನೇರ ಜಾತಿ ಆಧಾರಿತ ತಾರತಮ್ಯದ ಬಗ್ಗೆ ಯಾವುದೇ ನಿರ್ದಿಷ್ಟ ಪುರಾವೆಗಳಿಲ್ಲ” ಎಂದು ಮಧ್ಯಂತರ ವರದಿ ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಲು ಸಜ್ಜಾಗಿರುವ ಸಚಿವರು

ಸಮಿತಿಯು ಜಾತಿ ತಾರತಮ್ಯವನ್ನು ಒಂದು ಕಾರಣವೆಂದು ತಳ್ಳಿಹಾಕಿದ್ದರೂ, ವರದಿಯಲ್ಲಿ ಸೋಲಂಕಿಯವರ ಶೈಕ್ಷಣಿಕ ಕಾರ್ಯಕ್ಷಮತೆಯ ಬಗ್ಗೆ ಮಾತನಾಡಿದ್ದಾರೆ. ಒಂದು ವಿಷಯವನ್ನು ಹೊರತುಪಡಿಸಿ, ಇತರ ಎಲ್ಲದರಲ್ಲೂ ಸೋಲಂಕಿಯವರ ಅಧ್ಯಯನ ತೀರಾ ಕಳಪೆಯಾಗಿದೆ ಎಂದು ವಿಚಾರಣಾ ಸಮಿತಿ ತಿಳಿಸಿದೆ.

“ಉಪನ್ಯಾಸಗಳನ್ನು ಅರ್ಥಮಾಡಿಕೊಳ್ಳುವಲ್ಲಿ ದರ್ಶನ್‌ ಸಮಸ್ಯೆಗಳನ್ನು ಎದುರಿಸುತ್ತಿದ್ದರು, ಅದು ಆತನ ಮೇಲೆ ಗಂಭೀರ ಪರಿಣಾಮ ಬೀರಿರಬಹುದು. ದರ್ಶನ್‌ ತರಗತಿಗಳಿಗೆ ಗೈರು ಹಾಜರಾಗುತ್ತಿದ್ದರು. ಆದ್ದರಿಂದ, ಕ್ಷೀಣಿಸುತ್ತಿರುವ ಶೈಕ್ಷಣಿಕ ಕಾರ್ಯಕ್ಷಮತೆಯ ಹತಾಶೆಯು ಆತನ ಮೇಲೆ ಗಂಭೀರ ಪರಿಣಾಮ ಬೀರಿರಬಹುದು” ಎಂದಿದ್ದಾರೆ.

ಫೆಬ್ರವರಿ 12ರಂದು ಮಧ್ಯಾಹ್ನ ಶಾಪಿಂಗ್ ಮಾಡಲು ಸೋಲಂಕಿ ತನ್ನ ಸ್ನೇಹಿತರೊಂದಿಗೆ ಹೊರಗೆ ಹೋಗಲು ಯೋಜಿಸಿದ್ದರು. “ಸ್ವಲ್ಪ ಹಣವನ್ನು ತನ್ನ ತಂದೆಯಿಂದ ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದರು” ಎಂದು ಸಮಿತಿ ತಿಳಿಸಿದೆ.

“ಕುಟುಂಬದೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ನಂತರ ಮತ್ತು ದುರಂತ ಘಟನೆಯ ಮೊದಲು ಏನಾಯಿತು ಎಂಬುದರ ಕುರಿತು ಸಮಿತಿಗೆ ಯಾವುದೇ ಮಾಹಿತಿ ಇಲ್ಲ” ಎಂದಿದೆ ವರದಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...