Homeದಲಿತ್ ಫೈಲ್ಸ್ಐಐಟಿ ಬಾಂಬೆ ದಲಿತ ವಿದ್ಯಾರ್ಥಿಯ ಸಾವಿಗೆ ಜಾತಿ ತಾರತಮ್ಯ ಕಾರಣವಲ್ಲ; ವಿಚಾರಣಾ ಸಮಿತಿ ವರದಿ

ಐಐಟಿ ಬಾಂಬೆ ದಲಿತ ವಿದ್ಯಾರ್ಥಿಯ ಸಾವಿಗೆ ಜಾತಿ ತಾರತಮ್ಯ ಕಾರಣವಲ್ಲ; ವಿಚಾರಣಾ ಸಮಿತಿ ವರದಿ

- Advertisement -
- Advertisement -

ದಲಿತ ವಿದ್ಯಾರ್ಥಿ ದರ್ಶನ ಸೋಲಂಕಿಯವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ತನಿಖೆ ಮಾಡಲು ಐಐಟಿ-ಬಾಂಬೆ ರಚಿಸಿದ್ದ ವಿಚಾರಣಾ ಸಮಿತಿಯು ವರದಿ ನೀಡಿದ್ದು, “ದರ್ಶನ್‌ ಸೋಲಂಕಿ ಜಾತಿ ತಾರತಮ್ಯದಿಂದ ಸಾವನ್ನಪ್ಪಿದ್ದಾರೆ ಎಂಬುದಕ್ಕೆ ನಿರ್ದಿಷ್ಟ ಪುರಾವೆಗಳಿಲ್ಲ” ಎಂದಿದೆ.

“ಕ್ಷೀಣಿಸುತ್ತಿದ್ದ ಶೈಕ್ಷಣಿಕ ಕಾರ್ಯಕ್ಷಮತೆಯು ಈ ನಿರ್ಧಾರದ ಹಿಂದೆ ಇರಬಹುದು” ಎಂದು ವರದಿ ಹೇಳಿದೆ.

ಐಐಟಿ ಬಾಂಬೆಯಲ್ಲಿ ಪ್ರಥಮ ವರ್ಷದ ರಾಸಾಯನಿಕ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಅಹಮದಾಬಾದ್‌ನ ದರ್ಶನ್‌ ಸೋಲಂಕಿಯವರು ಫೆಬ್ರವರಿ 12 ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಸೆಮಿಸ್ಟರ್ ಪರೀಕ್ಷೆಗಳು ಮುಗಿದ ಒಂದು ದಿನದ ನಂತರ ಈ ಘಟನೆ ನಡೆದಿತ್ತು. “ಕ್ಯಾಂಪಸ್‌ನಲ್ಲಿ ಜಾತಿ ಆಧಾರಿತ ತಾರತಮ್ಯಕ್ಕೆ ದರ್ಶನ್ ಒಳಗಾಗಿದ್ದನು. ಹೀಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ” ಎಂದು ಸೊಲಂಕಿಯ ಕುಟುಂಬ ಆರೋಪಿಸಿತ್ತು.

ದರ್ಶನ್‌ ಸಾವಿಗೆ ಕಾರಣವಾದ ಸಂದರ್ಭಗಳ ಬಗ್ಗೆ ತನಿಖೆ ನಡೆಸಲು ರಸಾಯನಶಾಸ್ತ್ರ ವಿಭಾಗದ ಪ್ರೊಫೆಸರ್ ನಂದ್ ಕಿಶೋರ್ ನೇತೃತ್ವದಲ್ಲಿ 12 ಸದಸ್ಯರ ಸಮಿತಿಯನ್ನು ಐಐಟಿ ಬಾಂಬೆ ರಚಿಸಿತ್ತು. ಮಾರ್ಚ್ 2ರಂದು ಸಮಿತಿಯು ತನ್ನ ಮಧ್ಯಂತರ ವರದಿಯನ್ನು ಸಲ್ಲಿಸಿದೆ. ಒಂದು ನಕಲನ್ನು ಕೇಂದ್ರ ಸರ್ಕಾರದೊಂದಿಗೂ ಹಂಚಿಕೊಳ್ಳಲಾಗಿದೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

“ದರ್ಶನ್‌ ಸೋಲಂಕಿಯವರ ಸಹೋದರಿ ಮಾತ್ರ ಜಾತಿ ತಾರತಮ್ಯವನ್ನು ಪ್ರಸ್ತಾಪ ಮಾಡಿದ್ದಾರೆ. ತನ್ನ ಸಹೋದರ ಐಐಟಿ ಬಾಂಬೆಯಲ್ಲಿ ಕೆಲವು ವಿದ್ಯಾರ್ಥಿಗಳಿಂದ ಜಾತಿ ಸಂಬಂಧಿತ ತಾರತಮ್ಯವನ್ನು ಎದುರಿಸುತ್ತಿರುವಾಗಿ ಸೋಲಂಕಿ ಸಹೋದರಿ ತಿಳಿಸಿದ್ದಾರೆ” ಎಂಬುದನ್ನು ವರದಿಯಲ್ಲಿ ಉಲ್ಲೇಖಿಸಿರುವುದಾಗಿ ‘ಎಕ್ಸ್‌ಪ್ರೆಸ್‌’ ತಿಳಿಸಿದೆ.

ಕ್ಯಾಂಪಸ್‌ನಲ್ಲಿ ಜಾತಿ ತಾರತಮ್ಯ ನಡೆಯುತ್ತಿದೆ ಎಂದು ಆರೋಪಿಸಿರುವ ಐಐಟಿ ಬಾಂಬೆಯಲ್ಲಿನ ‘ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್’ ಮತ್ತು ಅಂಬೇಡ್ಕರ್‌ವಾದಿ ವಿದ್ಯಾರ್ಥಿಗಳ್ಯಾರೂ ದರ್ಶನ್‌ ಸೋಲಂಕಿಯವರನ್ನು ಭೇಟಿ ಮಾಡಿಲ್ಲ. ದರ್ಶನ್ ಅವರು ಯಾವ ರೀತಿಯ ಸಮಸ್ಯೆಯನ್ನು ಎದುರಿಸುತ್ತಿದ್ದರೆಂದು ನೇರವಾಗಿ ಕೇಳಿ ತಿಳಿದುಕೊಂಡಿರಲಿಲ್ಲ ಎಂದಿದೆ ವರದಿ.

“ಆದ್ದರಿಂದ ದರ್ಶನ್ ಸಹೋದರಿಯ ಹೇಳಿಕೆಯನ್ನು ಹೊರತುಪಡಿಸಿ, ಐಐಟಿ ಬಾಂಬೆಯಲ್ಲಿದ್ದ ಸಮಯದಲ್ಲಿ ದರ್ಶನ್‌ ಎದುರಿಸುತ್ತಿರುವ ನೇರ ಜಾತಿ ಆಧಾರಿತ ತಾರತಮ್ಯದ ಬಗ್ಗೆ ಯಾವುದೇ ನಿರ್ದಿಷ್ಟ ಪುರಾವೆಗಳಿಲ್ಲ” ಎಂದು ಮಧ್ಯಂತರ ವರದಿ ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಲು ಸಜ್ಜಾಗಿರುವ ಸಚಿವರು

ಸಮಿತಿಯು ಜಾತಿ ತಾರತಮ್ಯವನ್ನು ಒಂದು ಕಾರಣವೆಂದು ತಳ್ಳಿಹಾಕಿದ್ದರೂ, ವರದಿಯಲ್ಲಿ ಸೋಲಂಕಿಯವರ ಶೈಕ್ಷಣಿಕ ಕಾರ್ಯಕ್ಷಮತೆಯ ಬಗ್ಗೆ ಮಾತನಾಡಿದ್ದಾರೆ. ಒಂದು ವಿಷಯವನ್ನು ಹೊರತುಪಡಿಸಿ, ಇತರ ಎಲ್ಲದರಲ್ಲೂ ಸೋಲಂಕಿಯವರ ಅಧ್ಯಯನ ತೀರಾ ಕಳಪೆಯಾಗಿದೆ ಎಂದು ವಿಚಾರಣಾ ಸಮಿತಿ ತಿಳಿಸಿದೆ.

“ಉಪನ್ಯಾಸಗಳನ್ನು ಅರ್ಥಮಾಡಿಕೊಳ್ಳುವಲ್ಲಿ ದರ್ಶನ್‌ ಸಮಸ್ಯೆಗಳನ್ನು ಎದುರಿಸುತ್ತಿದ್ದರು, ಅದು ಆತನ ಮೇಲೆ ಗಂಭೀರ ಪರಿಣಾಮ ಬೀರಿರಬಹುದು. ದರ್ಶನ್‌ ತರಗತಿಗಳಿಗೆ ಗೈರು ಹಾಜರಾಗುತ್ತಿದ್ದರು. ಆದ್ದರಿಂದ, ಕ್ಷೀಣಿಸುತ್ತಿರುವ ಶೈಕ್ಷಣಿಕ ಕಾರ್ಯಕ್ಷಮತೆಯ ಹತಾಶೆಯು ಆತನ ಮೇಲೆ ಗಂಭೀರ ಪರಿಣಾಮ ಬೀರಿರಬಹುದು” ಎಂದಿದ್ದಾರೆ.

ಫೆಬ್ರವರಿ 12ರಂದು ಮಧ್ಯಾಹ್ನ ಶಾಪಿಂಗ್ ಮಾಡಲು ಸೋಲಂಕಿ ತನ್ನ ಸ್ನೇಹಿತರೊಂದಿಗೆ ಹೊರಗೆ ಹೋಗಲು ಯೋಜಿಸಿದ್ದರು. “ಸ್ವಲ್ಪ ಹಣವನ್ನು ತನ್ನ ತಂದೆಯಿಂದ ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದರು” ಎಂದು ಸಮಿತಿ ತಿಳಿಸಿದೆ.

“ಕುಟುಂಬದೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ನಂತರ ಮತ್ತು ದುರಂತ ಘಟನೆಯ ಮೊದಲು ಏನಾಯಿತು ಎಂಬುದರ ಕುರಿತು ಸಮಿತಿಗೆ ಯಾವುದೇ ಮಾಹಿತಿ ಇಲ್ಲ” ಎಂದಿದೆ ವರದಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...