HomeಮುಖಪುಟNSE ಮಾಜಿ ಉನ್ನತ ಅಧಿಕಾರಿ ಚಿತ್ರಾ ರಾಮಕೃಷ್ಣ ಅವರ ಸಲಹೆಗಾರ ಆನಂದ್‌ ಸುಬ್ರಮಣಿಯನ್‌ ಬಂಧಿಸಿದ CBI

NSE ಮಾಜಿ ಉನ್ನತ ಅಧಿಕಾರಿ ಚಿತ್ರಾ ರಾಮಕೃಷ್ಣ ಅವರ ಸಲಹೆಗಾರ ಆನಂದ್‌ ಸುಬ್ರಮಣಿಯನ್‌ ಬಂಧಿಸಿದ CBI

- Advertisement -
- Advertisement -

ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ (NSE) ಮಾಜಿ ಗ್ರೂಪ್ ಆಪರೇಟಿಂಗ್ ಆಫೀಸರ್‌ ಆನಂದ್ ಸುಬ್ರಮಣಿಯನ್ ಅವರನ್ನು 2018 ರಲ್ಲಿ ಷೇರುಗಳನ್ನು ತಿರುಚಿರುವ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಿಬಿಐ ಬಂಧಿಸಿದೆ. “ಗುರುವಾರ ತಡರಾತ್ರಿ ಚೆನ್ನೈನಲ್ಲಿ ಅಧಿಕಾರಿಗಳ ತಂಡ ಸುಬ್ರಮಣಿಯನ್ ಅವರನ್ನು ಬಂಧಿಸಿದೆ. ಇಂದು ಅವರನ್ನು ಸಕ್ಷಮ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು” ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌‌ ವರದಿ ಮಾಡಿದೆ.

ಸಿಬಿಐ ಫೆಬ್ರವರಿ 21 ರಂದು ಮೂರು ದಿನಗಳ ಕಾಲ ಸುಬ್ರಮಣಿಯನ್ ಅವರನ್ನು ವಿಚಾರಣೆ ನಡೆಸಿ ತನ್ನ ವಿಚಾರಣೆಯನ್ನು ಅಂತ್ಯಗೊಳಿಸಿತ್ತು. ಸಿಬಿಐ ಈಗಾಗಲೇ NSEನ ಮಾಜಿ ಎಂಡಿ-ಸಿಇಒ ಚಿತ್ರಾ ರಾಮಕೃಷ್ಣ ಮತ್ತು ಮಾಜಿ ಸಿಇಒ ರವಿ ನರೇನ್‌ ಅವರನ್ನು ಪ್ರಶ್ನಿಸಿತ್ತು. ಚಿತ್ರಾ ರಾಮಕೃಷ್ಣ ಅವರ ವಿಚಾರಣೆ ಕಳೆದ ಶುಕ್ರವಾರ ನಡೆದರೆ, ಶನಿವಾರ ರವಿ ನರೇನ್ ಅವರನ್ನು ವಿಚಾರಣೆ ನಡೆಸಲಾಗಿತ್ತು.

ಇದನ್ನೂ ಓದಿ: NSEಯ ಮಹಾ ಹಗರಣ: ಸಿಇಒ ಚಿತ್ರಾ ರಾಮಕೃಷ್ಣರನ್ನು ಕೈಗೊಂಬೆ ಮಾಡಿಕೊಂಡಿದ್ದ ‘ಯೋಗಿ’ ಯಾರು? 

ಈ ವಾರದ ಆರಂಭದಲ್ಲಿ, ಸಿಬಿಐ ತಂಡವು ಮುಂಬೈನಲ್ಲಿರುವ ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಕಚೇರಿಗೆ ಭೇಟಿ ನೀಡಿ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸಿದೆ.

ಸಿಬಿಐ ಪ್ರಕಾರ, ಸೆಬಿ ವರದಿಯ ಹಿನ್ನಲೆಯಲ್ಲಿ ವಿಚಾರಣೆಗಳನ್ನು ಮಾಡಲಾಗುತ್ತಿದೆ. NSE ವಿಚಾರವಾಗಿ ಚಿತ್ರಾ ಅವರು “ಹಿಮಾಲಯದ ಯೋಗಿ” ಯೊಂದಿಗೆ ಗೌಪ್ಯ ಮಾಹಿತಿಯನ್ನು ಹಂಚಿಕೊಂಡಿದ್ದು, ನಿಯಮಗಳಿಗೆ ವಿರುದ್ಧವಾಗಿ ಆನಂದ್‌ ಸುಬ್ರಮಣಿಯನ್ ಅವರ ನೇಮಕಾತಿ ಮಾಡಿದ್ದಾರೆ ಎಂದು ದೋಷಾರೋಪಣೆ ಮಾಡಲಾಗಿದೆ.

ಆನಂದ್‌ ಸುಬ್ರಮಣಿಯನ್ ಅವರನ್ನು ಜಿಒಒ ಮತ್ತು ಎಂಡಿ ಸಲಹೆಗಾರರನ್ನಾಗಿ ನೇಮಿಸುವಲ್ಲಿ ಸೆಕ್ಯುರಿಟೀಸ್ ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಚಿತ್ರಾ ಮತ್ತು ಇತರ ಕೆಲವರಿಗೆ ಸೆಬಿ ಎರಡು ವಾರಗಳ ಹಿಂದೆ ದಂಡ ವಿಧಿಸಿತ್ತು. ಆನಂದ್‌ ಸುಬ್ರಮಣಿಯನ್ ಅವರ ನೇಮಕಾತಿ ಮಾಡುವಂತೆ ತನಗೆ ಒಬ್ಬ “ಯೋಗಿ” ಸಲಹೆ ನೀಡಿದ್ದರು ಎಂದು ಚಿತ್ರಾ ಸೆಬಿ ತನಿಖೆಯನ್ನು ಹೇಳಿದ್ದಾರೆ. ಆನಂದ್‌ ಸುಬ್ರಮಣಿಯನ್ ಅವರೇ ಈ ಅಪರಿಚಿತ ಯೋಗಿ ಆಗಿದ್ದರು ಎಂದು ಕೂಡಾ ಹೇಳಲಾಗುತ್ತಿದೆ.

ಇದನ್ನೂ ಓದಿ: ರಾಜನಾಥ್ ಸಿಂಗ್‌ ಮಾತು ಕಡೆಗಣಿಸಿ ಮತ್ತೆ ಜಿನ್ನಾ ಹೆಸರು ಬಳಸಿದ ಸಿಎಂ ಯೋಗಿ ಆದಿತ್ಯನಾಥ್

ಈ ವರದಿಯ ನಂತರ, ಆದಾಯ ತೆರಿಗೆ ಇಲಾಖೆಯು NSE ಆಂತರಿಕ ವಿಚಾರವನ್ನು ಹೊರಗಿನ ವ್ಯಕ್ತಿಗೆ ಮಾಹಿತಿ ರವಾನಿಸುವ ಮೂಲಕ ಅಕ್ರಮ ಲಾಭ ಮಾಡಿದ್ದಾರೆ ಎಂಬ ಆರೋಪ ಮೇಲೆ ಚಿತ್ರಾ ಮತ್ತು ಆನಂದ್‌ ಸುಬ್ರಮಣಿಯನ್ ಅವರ ನಿವಾಸಗಳಲ್ಲಿ ಶೋಧ ನಡೆಸಿತ್ತು.

NSE ಯಲ್ಲಿ ಕೆಲವು ದಳ್ಳಾಳಿಗಳಿಗೆ ಅನುಕೂಲವಾಗಿವಂತೆ ವ್ಯವಸ್ಥೆ ಮಾಡಿಕೊಡಲಾಗಿತ್ತು ಎಂದು 2018 ರಲ್ಲಿ ಪ್ರಕರಣ ದಾಖಲಾಗಿತ್ತು. ದೆಹಲಿ ಮೂಲದ ಒಪಿಜಿ ಸೆಕ್ಯುರಿಟೀಸ್ ಪ್ರೈವೇಟ್ ಲಿಮಿಟೆಡ್‌ನ ಮಾಲೀಕ ಮತ್ತು ಪ್ರವರ್ತಕ ಸಂಜಯ್ ಗುಪ್ತಾ ಮತ್ತು ಇತರರ ವಿರುದ್ಧ ಕೂಡಾ ಸಿಬಿಐ ಪ್ರಕರಣ ದಾಖಲಿಸಿದೆ.

2010 ಮತ್ತು 2014 ರ ನಡುವೆ, ಸಂಜಯ್‌ ಗುಪ್ತಾ NSEಯ ಸರ್ವರ್ ಆರ್ಕಿಟೆಕ್ಚರ್ ಅನ್ನು ದುರುಪಯೋಗಪಡಿಸಿಕೊಂಡು, NSE ಯ ಅಪರಿಚಿತ ಅಧಿಕಾರಿಗಳೊಂದಿಗೆ ಕ್ರಿಮಿನಲ್ ಪಿತೂರಿ ನಡೆಸಿದ್ದು, ಸೆಬಿ ಅಧಿಕಾರಿಗಳಿಗೆ ಲಂಚ ನೀಡಿದ್ದಾರೆ ಎಂದು ಸಿಬಿಐ ಹೇಳಿದೆ.

ಚಿತ್ರಾ ರಾಮಕೃಷ್ಣ ಅವರು ಏಪ್ರಿಲ್ 2013 ರಿಂದ ಡಿಸೆಂಬರ್ 2016 ರವರೆಗೆ NSEಯ ಎಂಡಿ ಮತ್ತು ಸಿಇಒ ಆಗಿದ್ದರು, ನರೇನ್ ಅವರು ಏಪ್ರಿಲ್ 1994 ರಿಂದ ಮಾರ್ಚ್ 2013 ರವರೆಗೆ ಆ ಹುದ್ದೆಯಲ್ಲಿದ್ದರು.

ಇದನ್ನೂ ಓದಿ: ಪ್ರಧಾನಿ, ಯೋಗಿ ಆದಿತ್ಯನಾಥ್ ಪರ ಘೋಷಣೆ ಕೂಗುವಂತೆ ಮಕ್ಕಳಿಗೆ ಸೂಚನೆ : ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...