Homeಕರ್ನಾಟಕಡಿಕೆಶಿ,‌ ಸಿದ್ದರಾಮಯ್ಯ ಹೆಸರು; ಸಿಡಿ ಹಗರಣ ಹನಿಟ್ಯ್ರಾಪ್‌ ಸ್ವರೂಪ ಪಡೆಯುತ್ತಿದೆ - ಜೆಡಿಎಸ್‌‌ ಆರೋಪ

ಡಿಕೆಶಿ,‌ ಸಿದ್ದರಾಮಯ್ಯ ಹೆಸರು; ಸಿಡಿ ಹಗರಣ ಹನಿಟ್ಯ್ರಾಪ್‌ ಸ್ವರೂಪ ಪಡೆಯುತ್ತಿದೆ – ಜೆಡಿಎಸ್‌‌ ಆರೋಪ

- Advertisement -
- Advertisement -

ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ. ಪ್ರಕರಣದಲ್ಲಿ ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಹೆಸರು ಕೇಳಿಬರುವ ಮೂಲಕ ಪ್ರಕರಣ ಈಗ ‘ಹನಿಟ್ರ್ಯಾಪ್‌’ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೆಲ್ಲದರ ನಡುವೆ ರಾಷ್ಟ್ರದ ಎದುರು ನಾಚಿಕೆ ಪಡುವ ಸ್ಥಿತಿಯಲ್ಲಿ ರಾಜ್ಯ ನಿಂತಿದೆ ಎಂದು ಜಾತ್ಯಾತೀತ ಜನತಾದಳ ಪಕ್ಷವು ಶನಿವಾರ ಹೇಳಿದೆ.

ಈ ಬಗ್ಗೆ ಪಕ್ಷದ ಅಧೀಕೃತ ಟ್ವಿಟರ್‌ ಖಾತೆಯಿಂದ ಸರಣಿ ಟ್ವೀಟ್ ಮಾಡಲಾಗಿದ್ದು, ‘‘ರಾತ್ರಿ ಒಂದು ಆಡಿಯೊ ಬಿಡುಗಡೆಯಾಗುವುದು, ಬೆಳಗ್ಗೆ ಅದಕ್ಕೊಂದು ಸ್ಪಷ್ಟನೆಯ ವಿಡಿಯೊ ಬಿಡುಗಡೆಯಾಗುವುದು… ಇವೆಲ್ಲವನ್ನೂ ಗಮನಿಸುತ್ತಿದ್ದರೆ ಇದರ ಹಿಂದೆ ದೊಡ್ಡ ಕೂಟವೇ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಸಂತ್ರಸ್ತೆಗೆ ನ್ಯಾಯ ಕೊಡಿಸುವ ನೆಪದಲ್ಲಿ, ಆಕೆಯನ್ನು ಮುಂದಿಟ್ಟುಕೊಂಡು ಯಾರೋ ಆಟವಾಡುತ್ತಿರುವುದು ಸ್ಪಷ್ಟವಾಗುತ್ತಲಿದೆ” ಎಂದು ಜೆಡಿಎಸ್‌ ಸಂಶಯ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಮತ ಹಾಕಿದ್ದು TMCಗೆ, ವಿವಿಪ್ಯಾಟ್‌ BJP ಚಿನ್ಹೆ ತೋರಿಸುತ್ತಿದೆ!: ಚುನಾವಣಾ ಆಯೋಗಕ್ಕೆ TMC ದೂರು

“ಪ್ರಕರಣವನ್ನು ಅದರಪಾಡಿಗೆ ಬಿಟ್ಟು, ಆಗುವ ಬೆಳವಣಿಗೆಯನ್ನು ರಾಷ್ಟ್ರ ನೋಡಿ ಮನರಂಜನೆ ಪಡೆಯುವಂತೆ ಮಾಡುವುದು ರಾಜ್ಯಕ್ಕೆ, ನಮ್ಮ ಪೊಲೀಸರಿಗೆ ಮಾಡುವ ಅತಿ ದೊಡ್ಡ ಅಪಮಾನವಾಗುತ್ತದೆ. ಈ ಸಂದರ್ಭದಲ್ಲಿ ಪೊಲೀಸರು ದಿಟ್ಟತನ ಮೆರೆಯುವುದು ಅತ್ಯಗತ್ಯ. ಯಾವುದೇ ರಾಜಕೀಯ ಒತ್ತಡಗಳನ್ನೂ ಲೆಕ್ಕಿಸದೇ ತನಿಖೆ ನಡೆಸಿ ಅಸಲಿ ಸತ್ಯ ಬಯಲಿಗೆಳೆಯಬೇಕು” ಎಂದು ಪಕ್ಷವು ಆಗ್ರಹಿಸಿದೆ.

“ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪ್‌ ಆಗಿದೆಯೋ ಎಂಬ ಪ್ರಶ್ನೆಗಳು ಸಾರ್ವಜನಿಕರನ್ನು ಕಾಡುತ್ತಿವೆ. ಆಡಳಿತ ಪಕ್ಷ, ವಿರೋಧ ಪಕ್ಷ ಎಂಬುದನ್ನು ಲೆಕ್ಕಿಸದೇ ಅಸಲಿ ಸಂಗತಿಯನ್ನು ಪೊಲೀಸರು ಹೊರ ತರಬೇಕು. ರಾಜ್ಯದ ಪೊಲೀಸರ ಕರ್ತವ್ಯ ನಿಷ್ಠೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರಿದೆ. ಅದರ ಪ್ರದರ್ಶನಕ್ಕೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ” ಎಂದು ಹೇಳಿದೆ.

“ಲೈಂಗಿಕ ಪ್ರಕರಣವೊಂದರ ವರದಿಗಳು ನಿತ್ಯ ಪ್ರಕಟವಾಗುತ್ತಿದ್ದರೆ, ಅದರಿಂದ ಕುಟುಂಬಗಳು ಮತ್ತು ಮಕ್ಕಳ ಮೇಲೆ ಆಗುವ ಪರಿಣಾಮಗಳನ್ನು ನಾವು ಚಿಂತಿಸಬೇಕಿದೆ. ಇದಕ್ಕೆ ಅಂತ್ಯ ಹಾಡಬೇಕಿದ್ದರೆ ಸೂಕ್ತ ತನಿಖೆಯೊಂದೇ ದಾರಿ. ಇಲ್ಲವಾದರೆ, ಈ ಪ್ರಕರಣದ ಬೆಳವಣಿಗೆಗಳು ಮತ್ತಷ್ಟು ವಿಸ್ತಾರವಾಗುತ್ತ ನಾಗರಿಕ ಸಮಾಜ ನಾಚಿಕೆಯಲ್ಲಿ ದಿನ ಕಳೆಯಬೇಕಾಗುತ್ತದೆ” ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಸಂತ್ರಸ್ತ ಯುವತಿ ನನ್ನನ್ನು ಭೇಟಿಯಾಗಿಲ್ಲ: ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...