Homeಕರ್ನಾಟಕಅಧಿಕಾರ ವಹಿಸಿ 2 ತಿಂಗಳು ಸಂಪುಟ ರಚನೆಗೆ ಕೇಂದ್ರದವರು ಬಿಡಲಿಲ್ಲ...ಹುಚ್ಚನಂತೆ ಸುತ್ತಾಡಿದೆ: ಯಡಿಯೂರಪ್ಪ

ಅಧಿಕಾರ ವಹಿಸಿ 2 ತಿಂಗಳು ಸಂಪುಟ ರಚನೆಗೆ ಕೇಂದ್ರದವರು ಬಿಡಲಿಲ್ಲ…ಹುಚ್ಚನಂತೆ ಸುತ್ತಾಡಿದೆ: ಯಡಿಯೂರಪ್ಪ

- Advertisement -
- Advertisement -

‘ನಾನು ಅಧಿಕಾರ ವಹಿಸಿಕೊಂಡಾಗ 2 ತಿಂಗಳು ಮಂತ್ರಿ ಮಂಡಲ ಮಾಡಲು ಕೇಂದ್ರದವರು ಬಿಡಲಿಲ್ಲ, ಪ್ರವಾಹದ ನಡುವೆ ಎಲ್ಲಾ ಕಡೆ ಹುಚ್ಚನಂತೆ ಸುತ್ತಬೇಕಾಯಿತು ಎಂದು ಯಡಿಯೂರಪ್ಪ ಸೋಮವಾರದಂದು ರಾಜೀನಾಮೆ ಘೋಷಿಸಿದ ಭಾಷಣದಲ್ಲಿ ಹೇಳಿದ್ದಾರೆ. ಈ ಮೂಲಕ ಅವರು ಅಧಿಕಾರ ವಹಿಸಿಕೊಂಡ ನಂತರ ಬಿಜೆಪಿಯ ಕೇಂದ್ರ ನಾಯಕತ್ವವು ಸಚಿವ ಸಂಪುಟ ರಚನೆ ಮಾಡಲು ಬಿಡದೆ ಸತಾಯಿಸಿತ್ತು ಎಂದು ಬಹಿರಂಗ ಪಡಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‌‌ ಸಮ್ಮಿಶ್ರ ಸರ್ಕಾರ ಉರುಳಿದ ನಂತರ ಯಡಿಯೂರಪ್ಪ ಅಧಿಕಾರಕ್ಕೆ ಏರಿದ್ದರು. ಈ ಸಮಯದಲ್ಲಿ ಉತ್ತರ ಕರ್ನಾಟಕದಾದ್ಯಂತ ಭಾರಿ ಪ್ರವಾಹ ಉಂಟಾಗಿತ್ತು. ಆದರೂ ಯಡಿಯೂರಪ್ಪ ತಮ್ಮ ಮಂತ್ರಿ ಮಂಡಲವನ್ನು ರಚಿಸಿರಲಿಲ್ಲ. ಇದು ರಾಜ್ಯದಾದ್ಯಂತ ಭಾರಿ ಆಕ್ರೋಶವನ್ನೂ ಹುಟ್ಟುಹಾಕಿತ್ತು.

ಇದನ್ನೂ ಓದಿ: ಶಿಕಾರಿಪುರ ಬಂದ್; ಪ್ರಧಾನಿ ಮೋದಿಗೆ ಧಿಕ್ಕಾರ ಕೂಗಿದ ಬಿಎಸ್‌ವೈ ಬೆಂಬಲಿಗರು!

ಸರ್ಕಾರದ ಎರಡು ವರ್ಷದ ಸಾಧನೆಯ ಸಮಾರಂಭದಲ್ಲಿ ರಾಜೀನಾಮೆ ಘೋಷಿಸುತ್ತಾ ಭಾವುಕರಾಗಿ ಮಾತನಾಡಿದ ಯಡಿಯೂರಪ್ಪ, ‘‘ಎಲ್ಲಾ ಸಂದರ್ಭದಲ್ಲೂ ಅಗ್ನಿ ಪರಿಕ್ಷೆ ಎದುರಾಗಿತ್ತು. ನಾನು ಅಧಿಕಾರ ವಹಿಸಿಕೊಂಡಾಗ ಕೇಂದ್ರದವರು ಎರಡು ತಿಂಗಳು ಮಂತ್ರಿ ಮಂಡಲ ಮಾಡಲೇ ಬಿಡಲಿಲ್ಲ. ಪ್ರವಾಹ ಶುರುವಾಯಿತು, ಎಲ್ಲಾ ಕಡೆ ಹುಚ್ಚನಂತೆ ಸುತ್ತಬೇಕಾಯಿತು. ಅದರ ನಂತರ ಸಚಿವ ಸಂಪುಟ ರಚನೆಯಾಗಿದ್ದು. ಒಂದು ರೀತಿಯಲ್ಲಿ ಎಲ್ಲಾ ಸಂದರ್ಭದಲ್ಲೂ ಅಗ್ನಿ ಪರೀಕ್ಷೆ” ಎಂದು ಹೇಳಿದ್ದಾರೆ.

ಭಾಷಣದ ನಂತರ ರಾಜಭವನಕ್ಕೆ ತೆರಳಿದ ಬಿಎಸ್‌ವೈ ರಾಜ್ಯಪಾಲರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರು ಅವರ ರಾಜೀನಾಮೆಯನ್ನು ಸ್ವೀಕರಿಸಿದ್ದಾಗಿ ಘೋಷಿಸಿದ್ದಾರೆ.

ಈ ನಡುವೆ ಯಡಿಯೂರಪ್ಪ ಅವರ ರಾಜೀನಾಮೆ ನೀಡುವಂತೆ ಮಾಡಿದ ಬಿಜೆಪಿ ಹೈಕಮಾಂಡ್ ವಿರುದ್ದ ಅವರ ಸ್ವಕ್ಷೇತ್ರವಾದ ಶಿಕಾರಿಪುರದಲ್ಲಿ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಪ್ರಧಾನಿ ಮೋದಿಗೆ ಧಿಕ್ಕಾರ ಕೂಗಿದ್ದಾರೆ. ಶಿಕಾರಿಪುರ ನಗರದ ಅಂಗಡಿ ಮುಗ್ಗಟ್ಟುಗಳು ಬಂದ್ ಆಚರಿಸಿದ್ದು ತಮ್ಮ ನಾಯಕನ ವಿದಾಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಆಪರೇಷನ್ ಕಮಲ: ಬಿಜೆಪಿಯ ಮುಂದಿನ ಬೇಟೆ ಜಾರ್ಖಂಡ್?

ವಿಡಿಯೊ ನೋಡಿ: ಬಿಎಸ್‌ವೈ ರಾಜೀನಾಮೆ; ಶಿಕಾರಿಪುರದಲ್ಲಿ ಪ್ರಧಾನಿ ಮೋದಿಗೆ ಧಿಕ್ಕಾರ ಕೂಗಿದ ಬಿಎಸ್‌ವೈ ಬೆಂಬಲಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...