ಜಮ್ಮು ಮತ್ತು ಕಾಶ್ಮೀರಕ್ಕೆ (ಜೆ & ಕೆ) ನೀಡಲಾಗಿದ್ದ ವಿಶೇಷ ಸ್ಥಾನಮಾನದ 370 ನೇ ವಿಧಿಯನ್ನು ಕೇಂದ್ರ ಸರ್ಕಾರ 2019ರಲ್ಲಿ ರದ್ದು ಗೊಳಿಸಿತ್ತು. ಇದೀಗ ಕೇಂದ್ರ ಸರ್ಕಾರವು ತನ್ನ ನಿರ್ಧಾರವನ್ನು ಸಮರ್ಥಿಸಿ ಸೋಮವಾರ ಸುಪ್ರೀಂ ಕೋರ್ಟ್ಗೆ ಹೊಸ ಅಫಿಡವಿಟ್ ಸಲ್ಲಿಸಿದೆ.
ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ 20ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಲಾಗಿದೆ.
ಮೂರು ವರ್ಷಗಳ ನಂತರ ಸುಪ್ರೀಂ ಕೋರ್ಟ್ನ ಸಾಂವಿಧಾನಿಕ ಪೀಠವು ಈ ವಿಷಯವನ್ನು ಕೈಗೆತ್ತಿಕೊಂಡಿದ್ದು ವಿಚಾರಣೆ ಆರಂಭಕ್ಕೂ ಒಂದು ದಿನ ಮುಂಚಿತವಾಗಿ ಕೇಂದ್ರ ಸರ್ಕಾರ ಈ ಹೊಸ ಅಫಿಡವಿಟ್ನ್ನು ಸಲ್ಲಿಸಲಾಗಿದೆ. ತನ್ನ ಅಫಿಡವಿಟ್ನಲ್ಲಿ, ಕೇಂದ್ರ ಗೃಹ ಸಚಿವಾಲಯವು 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ, ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಮತ್ತು ಪ್ರಗತಿಯನ್ನು ಕಾಣುತ್ತಿದೆ. ಈ ಹಿಂದೆ ಕಲ್ಲು ತೂರಾಟದಂತಹ ಘಟನೆ ನಡೆಯುತ್ತಿದ್ದವು, ಆದರೆ ಇದೀಗ ಅಂತಹ ಘಟನೆಗಳು ನಡೆಯುತ್ತಿಲ್ಲ ಎಂದು ಹೇಳಿದೆ.
”ಮೂರು ದಶಕಗಳ ಪ್ರಕ್ಷುಬ್ಧತೆಯ ನಂತರ ಈ ಪ್ರದೇಶದಲ್ಲಿ ಜೀವನವು ಸಹಜ ಸ್ಥಿತಿಗೆ ಮರಳಿದೆ. ಕಳೆದ ಮೂರು ವರ್ಷಗಳಲ್ಲಿ ಶಾಲೆಗಳು, ಕಾಲೇಜುಗಳು … ಮತ್ತು ಇತರ ಸಾರ್ವಜನಿಕ ಸಂಸ್ಥೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿವೆ. ಮುಷ್ಕರಗಳು, ಕಲ್ಲು ತೂರಾಟ ಮತ್ತು ಬಂದ್ಗಳ ಹಿಂದಿನ ಅಭ್ಯಾಸವು ಈಗ ಹಳೆಯ ವಿಷಯವಾಗಿದೆ” ಎಂದು ಅಫಿಡವಿಟ್ ಹೇಳಿದೆ.
370ನೇ ವಿಧಿಯನ್ನು ರದ್ದುಪಡಿಸಿದ ನಂತರ ಯಾವುದೇ ಕಲ್ಲು ತೂರಾಟದ ಘಟನೆಗಳು ನಡೆದಿಲ್ಲ ಎಂದು ಅಫಿಡವಿಟ್ ಒತ್ತಿಹೇಳಿದೆ. ಇದಲ್ಲದೆ, ಶಿಕ್ಷಣ ಹಕ್ಕು ಕಾಯಿದೆಯಂತಹ ಕೇಂದ್ರ ಕಾನೂನುಗಳು ಮತ್ತು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಒದಗಿಸುವವುಗಳು ಈಗ ಜಮ್ಮು ಮತ್ತು ಕಾಶ್ಮೀರದಲ್ಲಿ ಅನ್ವಯಿಸುತ್ತವೆ ಎಂದು ಹೇಳಲಾಗಿದೆ.
”370ನೇ ವಿಧಿಯನ್ನು ರದ್ದು ಮಾಡಿದ ಬಳಿಕ ಭಯೋತ್ಪಾದಕ ಜಾಲವನ್ನು ಕಿತ್ತುಹಾಕಲಾಯಿತು. ಮೂರು ಹಂತದ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಪರಿಚಯಿಸಲು ಮತ್ತು ಜಿಲ್ಲಾ ಅಭಿವೃದ್ಧಿ ಮಂಡಳಿಗಳಿಗೆ ಸುಗಮ ಚುನಾವಣೆ ನಡೆಸಲಾಯಿತು. ಇದಲ್ಲದೆ, ರದ್ದತಿಯ ನಂತರ, ಸ್ಥಳೀಯ ಭಾಷೆಗಳಾದ ಕಾಶ್ಮೀರಿ, ಡೋಗ್ರಿ, ಉರ್ದು ಮತ್ತು ಹಿಂದಿಯನ್ನು ಸಹ ಅಧಿಕೃತ ಭಾಷೆಯಾಗಿ ಸೇರಿಸಲಾಗಿದೆ” ಎಂದು ಅಫಿಡವಿಟ್ ಎತ್ತಿ ತೋರಿಸಿದೆ.
ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ 20ಕ್ಕೂ ಹೆಚ್ಚು ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ಅಫಿಡವಿಟ್ ಸಲ್ಲಿಸಲಾಗಿದೆ.
ಹಿಂದಿನ ರಾಜ್ಯವನ್ನು ತರುವಾಯ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು.
ಕೇಂದ್ರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಕೊನೆಯದಾಗಿ ಮಾರ್ಚ್ 2020 ರಲ್ಲಿ ವಿಚಾರಣೆಗೆ ಪಟ್ಟಿ ಮಾಡಲಾಗಿತ್ತು. ಆಗ ಸುಪ್ರೀಂ ಕೋರ್ಟ್ನ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಕೆಲವು ಅರ್ಜಿದಾರರು ಉಲ್ಲೇಖವನ್ನು ಕೋರಿದ್ದರೂ ಸಹ, ಅರ್ಜಿಗಳ ಬ್ಯಾಚ್ ಅನ್ನು ಏಳು ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ಉಲ್ಲೇಖಿಸದಿರಲು ನಿರ್ಧರಿಸಿತು.
ಈ ವರ್ಷದ ಫೆಬ್ರುವರಿಯಲ್ಲಿ ಸಿಜೆಐ ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ಅರ್ಜಿಗಳನ್ನು ಉಲ್ಲೇಖಿಸಲಾಗಿದೆ. ನಂತರ ಸಿಜೆಐ ಅವರು ಅದೇ ಪಟ್ಟಿಯನ್ನು ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದರು.
ಈ ಪ್ರಕರಣವನ್ನು ಮಂಗಳವಾರ ಸುಪ್ರೀಂ ಕೋರ್ಟ್ನ ಸಂವಿಧಾನ ಪೀಠದ ಮುಂದೆ ನಿರ್ದೇಶನಕ್ಕಾಗಿ ಪಟ್ಟಿ ಮಾಡಿದೆ.
ಇದನ್ನೂ ಓದಿ: ಜಮ್ಮು ಕಾಶ್ಮೀರದ 370ನೇ ವಿಧಿ ರದ್ದತಿ ಪ್ರಶ್ನಿಸುವ ಅರ್ಜಿ ವಿಚಾರಣೆಗೆ ಮುಂದಾದ ಸುಪ್ರೀಂ