Homeಮುಖಪುಟಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ..

ಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ..

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಕರ್ನಾಟಕ ಸರ್ಕಾರದ ಅಡಿಷನಲ್‌ ಚೀಫ್ ಸೆಕ್ರಟರಿ ಡಾ.ನಾಗಾಂಬಿಕಾ ದೇವಿಯವರಿಗೆ ಪತ್ರ ಬರೆದಿದ್ದು, ನೀವು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಎಪಿಎಲ್‌ಎಂ 2017ರ ಕಾಯ್ದೆಗೆ ಆದಷ್ಟು ಬೇಗ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಬೇಕೆಂದು ಒತ್ತಾಯಿಸಿತ್ತು.

- Advertisement -
- Advertisement -

ಕಳೆದೊಂದು ವಾರದಿಂದ ದೇಶಾದ್ಯಂತ ರೈತರು ಬೀದಿಗಿಳಿದಿದ್ದಾರೆ. ರೈತವಿರೋಧಿ ಸುಗ್ರೀವಾಜ್ಞೆ, ಮಸೂದೆಗಳನ್ನು ಹಿಂಪಡೆಯುವಂತೆ ಕೇಂದ್ರ, ರಾಜ್ಯ ಸರ್ಕಾರಗಳ ಮೇಲೆ ತೀವ್ರ ಒತ್ತಡ ಹೇರುತ್ತಿವೆ. ಈ ಕುರಿತು ಸ್ಪಷ್ಟನೆ ನೀಡಿರುವ ಪ್ರಧಾನಿ ಮೋದಿ “ಈ ರೈತ ಮಸೂದೆಗಳು ರೈತರ ಮಂಡಿ ಮಾರುಕಟ್ಟೆಗೆ ವಿರುದ್ಧವಿವೆ ಎಂಬುದು ಸುಳ್ಳು ಎಂದು ನಾನು ಸ್ಪಷ್ಟಪಡಿಸುತ್ತೇನೆ. ಇದು ಕೃಷಿಮಂಡಿಗಳನ್ನು ಮತ್ತಷ್ಟು ಅಭಿವೃದ್ದಿಪಡಿಸಲಿದೆ. ಈ ಸಂದರ್ಭಕ್ಕೆ ತುರ್ತು ಅಗತ್ಯವಿದ್ದ ಕಾರಣಕ್ಕೆ ನಮ್ಮ ಸರ್ಕಾರ ಇವುಗಳನ್ನು ಅಂಗೀಕರಿಸಿದೆ. ಈಗ ರೈತರು ಎಲ್ಲಿ ಬೇಕಾದರೂ ತಮ್ಮ ಬೆಳೆಗಳನ್ನು ಲಾಭದ ದರಕ್ಕೆ ಮಾರುವ ಅಧಿಕಾರ ಹೊಂದಿದ್ದಾರೆ” ಎಂದು ತಿಳಿಸಿದ್ದಾರೆ.

ಖುದ್ದು ಮೋದಿಯವರೇ ಕೃಷಿ ಮಸೂದೆಗಳನ್ನು ಸಮರ್ಥಿಸಿಕೊಳ್ಳುವ ಮಟ್ಟಿಗೆ ರೈತರ ವಿರೋಧ ಬೆಳೆದುನಿಂತಿದೆ. ಅಷ್ಟೇ ಅಲ್ಲದೇ ನಿನ್ನೆ ಕೇಂದ್ರದ 6 ಸಚಿವರು ಪತ್ರಿಕಾಗೋಷ್ಠಿ ನಡೆಸಿ ಕೃಷಿ ಮಸೂದೆಗಳನ್ನು ಸಮರ್ಥಿಸಿಕೊಂಡಿದ್ದಾರೆ. ಆದರೂ ರೈತರು ತನ್ನ ಪ್ರತಿಭಟನೆಗಳನ್ನು ನಿಲ್ಲಿಸಿಲ್ಲ ಎಂದರೆ ಈ ಮಸೂದೆಗಳು ರೈತವಿರೋಧಿ ಎಂಬುದರಲ್ಲಿ ಸಂಶಯವಿಲ್ಲ ಎನಿಸುತ್ತದೆ.

ಇನ್ನು ಕೃಷಿ ಮಸೂದೆಗಳಲ್ಲಿ ಒಂದಾದ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ವಿವಾದ ಭುಗಿಲೆದ್ದಿದೆ. ಕೇಂದ್ರ ಸರ್ಕಾರವೇ ಈ ಕಾಯ್ದೆಗೆ ತಿದ್ದುಪಡಿ ತರಲು ಕಳೆದ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಾಗಿತ್ತು. ಆದರೆ ಎಪಿಎಂಸಿ ರಾಜ್ಯಪಟ್ಟಿಯಲ್ಲಿ ಬರುವುದರಿಂದ ಮೇ 04ರಂದು ಕೇಂದ್ರವು ಹಲವು ರಾಜ್ಯಸರ್ಕಾರಗಳಿಗೆ ಸುತ್ತೋಲೆಯೊಂದನ್ನು ಕಳಿಸಿ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರುವಂತೆ ಒತ್ತಡ ತಂದಿತ್ತು.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಈ ಕುರಿತು ಕರ್ನಾಟಕ ಸರ್ಕಾರದ ಅಡಿಷನಲ್‌ ಚೀಫ್ ಸೆಕ್ರಟರಿ ಡಾ.ನಾಗಾಂಬಿಕಾ ದೇವಿಯವರಿಗೆ ಪತ್ರ ಬರೆದಿದ್ದು, ನೀವು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಎಪಿಎಲ್‌ಎಂ 2017ರ ಕಾಯ್ದೆಗೆ ಆದಷ್ಟು ಬೇಗ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಬೇಕೆಂದು ಸೂಚಿಸಿರುವ ಪತ್ರವು ಆಗ ವೈರಲ್ ಆಗಿತ್ತು. ಅಷ್ಟೇ ಅಲ್ಲದೇ ಅದಕ್ಕೆ ಮುಂಚೆಯೇ ಕೇಂದ್ರವು ತಯಾರಿಸಿದ್ದ ಮಾದರಿ ಕಾಯ್ದೆಯ ಪ್ರತಿಯು ರೈತ ಮುಖಂಡರಿಂದ ನಾನುಗೌರಿ.ಕಾಂಗೆ ಲಭ್ಯವಾಗಿತ್ತು.

“ಮಾದರಿ ಎಪಿಎಲ್ಎಂ ಕಾಯ್ದೆ 2017 ರಲ್ಲಿ ತಿಳಿಸಿರುವಂತೆ ನಿಮ್ಮ ರಾಜ್ಯವು ಈಗಾಗಲೇ ಸುಧಾರಣೆಯ ಒಂಬತ್ತು ಕ್ಷೇತ್ರಗಳಲ್ಲಿ ಎಂಟು ಸುಧಾರಣೆಗಳನ್ನು ಅಳವಡಿಸಿಕೊಂಡಿರುವುದಕ್ಕೆ ಪ್ರಶಂಸಿಸಲಾಗುತ್ತದೆ. ಆದರೂ ಎಪಿಎಂಸಿಯನ್ನು ಕೇವಲ ಮಂಡಿ ಮಾರುಕಟ್ಟೆಗಳಿಗೆ ಸೀಮಿತಗೊಳಿಸಿರುವುದು ಸರಿಯಿಲ್ಲ. ಈ ನಿಟ್ಟಿನಲ್ಲಿ, ನೀತಿ ಆಯೋಗದ ಕೊನೆಯ ಆಡಳಿತ ಮಂಡಳಿ ಸಭೆಯಲ್ಲಿ, ಭಾರತದ ಗೌರವಾನ್ವಿತ ಪ್ರಧಾನಿ ರಾಜ್ಯಗಳು ಮಾದರಿ ಎಪಿಎಲ್ಎಂ ಕಾಯ್ದೆ 2017 ಅನ್ನು ಅಂಗೀಕರಿಸುವ ಬಗ್ಗೆ ಒತ್ತು ನೀಡಿದ್ದರು. ಆದ್ದರಿಂದ ನಿಮ್ಮ ರಾಜ್ಯವು ರೈತರು ಮತ್ತು ಉತ್ಪಾದಕರ ಹಿತದೃಷ್ಟಿಯಿಂದ ಸುಗ್ರೀವಾಜ್ಞೆ ಮಾರ್ಗದ ಮೂಲಕ ತುರ್ತಾಗಿ ಅಳವಡಿಸಿಕೊಳ್ಳಬೇಕೆಂದು ನಾನು ವಿನಂತಿಸುತ್ತೇನೆ. ಇದನ್ನು ನಿಮ್ಮ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಯ ಗಮನಕ್ಕೆ ತಂದು ಸುಗ್ರೀವಾಜ್ಞೆಯ ನಂತರ ತಿದ್ದುಪಡಿ ಮಾಡಿದ ಕಾಯಿದೆಯ ಪ್ರತಿಯನ್ನು ಸಚಿವಾಲಯಕ್ಕೆ ಬೇಗನೆ ಕಳುಹಿಸಬೇಕು” ಎಂದು ಕೇಂದ್ರದ ಪತ್ರದಲ್ಲಿ ಬರೆಯಲಾಗಿತ್ತು.

ಈ ನಡುವೆ ಅದೇ ಸಮಯದಲ್ಲಿ ಕರ್ನಾಟಕದ ರಾಜ್ಯಪಾಲರ ಕಚೇರಿಯು ಆದಷ್ಟು ಬೇಗ ತಿದ್ದುಪಡಿ ತರಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿತ್ತೆಂಬ ಸುದ್ದಿ ಹರಿದಾಡಿತ್ತು. ಅದು ಎಷ್ಟರಮಟ್ಟಿಗೆಂದರೆ ಪ್ರತಿ ಗಂಟೆಗೊಮ್ಮೆ ಸುಗ್ರೀವಾಜ್ಞೆಯ ಸಹಿಗಾಗಿ ರಾಜ್ಯಪಾಲರ ಕಚೇರಿಗೆ ಆದಷ್ಟು ಬೇಗ ಕಳಿಸಿಕೊಡಬೇಕೆಂದು ಒತ್ತಾಯಿಸಲಾಗುತ್ತಿತ್ತು ಎಂದು ಹೆಸರು ಹೇಳಲಿಚ್ಚಿಸದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದರು.

ಈ ರೀತಿಯಾಗಿ ತನ್ನ ವ್ಯಾಪ್ತಿಗೆ ಬಾರದ ತಿದ್ದುಪಡಿಯನ್ನು ಸಹ ಕೇಂದ್ರ ಸರ್ಕಾರವು ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿಯೂ ಸುಗ್ರೀವಾಜ್ಞೆಗಳ ಮೂಲಕ ತಂದಿತ್ತು. ಈಗಲೂ ಸಹ ಅವುಗಳನ್ನು ಸಮರ್ಪಕವಾಗಿ ಚರ್ಚಿಸದೇ ತರಾತುರಿಯಲ್ಲಿ ಅಂಗೀಕರಿಸಲಾಗುತ್ತಿದೆ. ವಿರೋಧಿಸಿದ ಸಂಸದರನ್ನು ಅಧಿವೇಶನದಿಂದ ದೂರ ಇಡಲಾಗುತ್ತಿದೆ. ದೇಶದ ರೈತರ ಮೇಲೆ ಗಮನಾರ್ಹ ಪರಿಣಾಮ ಬೀರುವ ತಿದ್ದುಪಡಿಗಳನ್ನು ರಾಜ್ಯಗಳಿಗೆ ಒತ್ತಡ ಹೇರಿ ಸುಗ್ರೀವಾಜ್ಞೆಗಳ ಮೂಲಕ ತಂದು ಈಗ ತರಾತುರಿಯಲ್ಲಿ ಅಂಗೀಕರಿಸುತ್ತಿರುವುದಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಅಂತಹ ರೈತರನ್ನು ಕಂಗನಾ ರಾಣಾವತ್‌ರಂತಹ ನಟಿಯರು ಭಯೋತ್ಪಾದಕರು ಎಂದು ಕರೆಯುತ್ತಿದ್ದಾರೆ.

ಒಟ್ಟಿನಲ್ಲಿ ಕೇಂದ್ರ ಸರ್ಕಾರವು ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದೆ. ಆದರೆ ರೈತರು ಇದರ ವಿರುದ್ಧ ತಿರುಗಿಬಿದ್ದಿರುವುದು ಸರ್ಕಾರಕ್ಕೆ ತಲೆನೋವಾಗಿದೆ. ಆದ ಕಾರಣವೇ ನಿನ್ನೆ ಮೋದಿ ಸೇರಿದಂತೆ ಹಲವು ಸಚಿವರು ಕೃಷಿ ಮಸೂದೆಗಳ ಸಮರ್ಥನೆಗಿಳಿದಿದ್ದಾರೆ. ಕಳೆದ ಹಲವು ದಿನಗಳಿಂದ ವಿದ್ಯಾರ್ಥಿ ಯುವಜನರು ಪರೀಕ್ಷೆ ಮುಂದೂಡಿಕೆ ಮತ್ತು ಉದ್ಯೋಗದ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದರು. ಈಗ ರೈತರು ದನಿಯೆತ್ತುತ್ತಿದ್ದಾರೆ. ಸರ್ಕಾರ ಇನ್ನೆಷ್ಟು ಜನರ ಕೋಪ ಆಕ್ರೋಶಗಳಿಗೆ ಗುರಿಯಾಗಿಲಿದೆ ಎಂದು ಕಾದು ನೋಡಬೇಕಿದೆ.


ಇದನ್ನೂ ಓದಿ: ಕೃಷಿ ಮಸೂದೆಗಳು ರೈತರನ್ನು ಬಲಶಾಲಿಗಳನ್ನಾಗಿಸಲಿವೆ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...