Homeಮುಖಪುಟಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ..

ಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ..

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಕರ್ನಾಟಕ ಸರ್ಕಾರದ ಅಡಿಷನಲ್‌ ಚೀಫ್ ಸೆಕ್ರಟರಿ ಡಾ.ನಾಗಾಂಬಿಕಾ ದೇವಿಯವರಿಗೆ ಪತ್ರ ಬರೆದಿದ್ದು, ನೀವು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಎಪಿಎಲ್‌ಎಂ 2017ರ ಕಾಯ್ದೆಗೆ ಆದಷ್ಟು ಬೇಗ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಬೇಕೆಂದು ಒತ್ತಾಯಿಸಿತ್ತು.

- Advertisement -
- Advertisement -

ಕಳೆದೊಂದು ವಾರದಿಂದ ದೇಶಾದ್ಯಂತ ರೈತರು ಬೀದಿಗಿಳಿದಿದ್ದಾರೆ. ರೈತವಿರೋಧಿ ಸುಗ್ರೀವಾಜ್ಞೆ, ಮಸೂದೆಗಳನ್ನು ಹಿಂಪಡೆಯುವಂತೆ ಕೇಂದ್ರ, ರಾಜ್ಯ ಸರ್ಕಾರಗಳ ಮೇಲೆ ತೀವ್ರ ಒತ್ತಡ ಹೇರುತ್ತಿವೆ. ಈ ಕುರಿತು ಸ್ಪಷ್ಟನೆ ನೀಡಿರುವ ಪ್ರಧಾನಿ ಮೋದಿ “ಈ ರೈತ ಮಸೂದೆಗಳು ರೈತರ ಮಂಡಿ ಮಾರುಕಟ್ಟೆಗೆ ವಿರುದ್ಧವಿವೆ ಎಂಬುದು ಸುಳ್ಳು ಎಂದು ನಾನು ಸ್ಪಷ್ಟಪಡಿಸುತ್ತೇನೆ. ಇದು ಕೃಷಿಮಂಡಿಗಳನ್ನು ಮತ್ತಷ್ಟು ಅಭಿವೃದ್ದಿಪಡಿಸಲಿದೆ. ಈ ಸಂದರ್ಭಕ್ಕೆ ತುರ್ತು ಅಗತ್ಯವಿದ್ದ ಕಾರಣಕ್ಕೆ ನಮ್ಮ ಸರ್ಕಾರ ಇವುಗಳನ್ನು ಅಂಗೀಕರಿಸಿದೆ. ಈಗ ರೈತರು ಎಲ್ಲಿ ಬೇಕಾದರೂ ತಮ್ಮ ಬೆಳೆಗಳನ್ನು ಲಾಭದ ದರಕ್ಕೆ ಮಾರುವ ಅಧಿಕಾರ ಹೊಂದಿದ್ದಾರೆ” ಎಂದು ತಿಳಿಸಿದ್ದಾರೆ.

ಖುದ್ದು ಮೋದಿಯವರೇ ಕೃಷಿ ಮಸೂದೆಗಳನ್ನು ಸಮರ್ಥಿಸಿಕೊಳ್ಳುವ ಮಟ್ಟಿಗೆ ರೈತರ ವಿರೋಧ ಬೆಳೆದುನಿಂತಿದೆ. ಅಷ್ಟೇ ಅಲ್ಲದೇ ನಿನ್ನೆ ಕೇಂದ್ರದ 6 ಸಚಿವರು ಪತ್ರಿಕಾಗೋಷ್ಠಿ ನಡೆಸಿ ಕೃಷಿ ಮಸೂದೆಗಳನ್ನು ಸಮರ್ಥಿಸಿಕೊಂಡಿದ್ದಾರೆ. ಆದರೂ ರೈತರು ತನ್ನ ಪ್ರತಿಭಟನೆಗಳನ್ನು ನಿಲ್ಲಿಸಿಲ್ಲ ಎಂದರೆ ಈ ಮಸೂದೆಗಳು ರೈತವಿರೋಧಿ ಎಂಬುದರಲ್ಲಿ ಸಂಶಯವಿಲ್ಲ ಎನಿಸುತ್ತದೆ.

ಇನ್ನು ಕೃಷಿ ಮಸೂದೆಗಳಲ್ಲಿ ಒಂದಾದ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ವಿವಾದ ಭುಗಿಲೆದ್ದಿದೆ. ಕೇಂದ್ರ ಸರ್ಕಾರವೇ ಈ ಕಾಯ್ದೆಗೆ ತಿದ್ದುಪಡಿ ತರಲು ಕಳೆದ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಾಗಿತ್ತು. ಆದರೆ ಎಪಿಎಂಸಿ ರಾಜ್ಯಪಟ್ಟಿಯಲ್ಲಿ ಬರುವುದರಿಂದ ಮೇ 04ರಂದು ಕೇಂದ್ರವು ಹಲವು ರಾಜ್ಯಸರ್ಕಾರಗಳಿಗೆ ಸುತ್ತೋಲೆಯೊಂದನ್ನು ಕಳಿಸಿ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರುವಂತೆ ಒತ್ತಡ ತಂದಿತ್ತು.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಈ ಕುರಿತು ಕರ್ನಾಟಕ ಸರ್ಕಾರದ ಅಡಿಷನಲ್‌ ಚೀಫ್ ಸೆಕ್ರಟರಿ ಡಾ.ನಾಗಾಂಬಿಕಾ ದೇವಿಯವರಿಗೆ ಪತ್ರ ಬರೆದಿದ್ದು, ನೀವು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಎಪಿಎಲ್‌ಎಂ 2017ರ ಕಾಯ್ದೆಗೆ ಆದಷ್ಟು ಬೇಗ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಬೇಕೆಂದು ಸೂಚಿಸಿರುವ ಪತ್ರವು ಆಗ ವೈರಲ್ ಆಗಿತ್ತು. ಅಷ್ಟೇ ಅಲ್ಲದೇ ಅದಕ್ಕೆ ಮುಂಚೆಯೇ ಕೇಂದ್ರವು ತಯಾರಿಸಿದ್ದ ಮಾದರಿ ಕಾಯ್ದೆಯ ಪ್ರತಿಯು ರೈತ ಮುಖಂಡರಿಂದ ನಾನುಗೌರಿ.ಕಾಂಗೆ ಲಭ್ಯವಾಗಿತ್ತು.

“ಮಾದರಿ ಎಪಿಎಲ್ಎಂ ಕಾಯ್ದೆ 2017 ರಲ್ಲಿ ತಿಳಿಸಿರುವಂತೆ ನಿಮ್ಮ ರಾಜ್ಯವು ಈಗಾಗಲೇ ಸುಧಾರಣೆಯ ಒಂಬತ್ತು ಕ್ಷೇತ್ರಗಳಲ್ಲಿ ಎಂಟು ಸುಧಾರಣೆಗಳನ್ನು ಅಳವಡಿಸಿಕೊಂಡಿರುವುದಕ್ಕೆ ಪ್ರಶಂಸಿಸಲಾಗುತ್ತದೆ. ಆದರೂ ಎಪಿಎಂಸಿಯನ್ನು ಕೇವಲ ಮಂಡಿ ಮಾರುಕಟ್ಟೆಗಳಿಗೆ ಸೀಮಿತಗೊಳಿಸಿರುವುದು ಸರಿಯಿಲ್ಲ. ಈ ನಿಟ್ಟಿನಲ್ಲಿ, ನೀತಿ ಆಯೋಗದ ಕೊನೆಯ ಆಡಳಿತ ಮಂಡಳಿ ಸಭೆಯಲ್ಲಿ, ಭಾರತದ ಗೌರವಾನ್ವಿತ ಪ್ರಧಾನಿ ರಾಜ್ಯಗಳು ಮಾದರಿ ಎಪಿಎಲ್ಎಂ ಕಾಯ್ದೆ 2017 ಅನ್ನು ಅಂಗೀಕರಿಸುವ ಬಗ್ಗೆ ಒತ್ತು ನೀಡಿದ್ದರು. ಆದ್ದರಿಂದ ನಿಮ್ಮ ರಾಜ್ಯವು ರೈತರು ಮತ್ತು ಉತ್ಪಾದಕರ ಹಿತದೃಷ್ಟಿಯಿಂದ ಸುಗ್ರೀವಾಜ್ಞೆ ಮಾರ್ಗದ ಮೂಲಕ ತುರ್ತಾಗಿ ಅಳವಡಿಸಿಕೊಳ್ಳಬೇಕೆಂದು ನಾನು ವಿನಂತಿಸುತ್ತೇನೆ. ಇದನ್ನು ನಿಮ್ಮ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಯ ಗಮನಕ್ಕೆ ತಂದು ಸುಗ್ರೀವಾಜ್ಞೆಯ ನಂತರ ತಿದ್ದುಪಡಿ ಮಾಡಿದ ಕಾಯಿದೆಯ ಪ್ರತಿಯನ್ನು ಸಚಿವಾಲಯಕ್ಕೆ ಬೇಗನೆ ಕಳುಹಿಸಬೇಕು” ಎಂದು ಕೇಂದ್ರದ ಪತ್ರದಲ್ಲಿ ಬರೆಯಲಾಗಿತ್ತು.

ಈ ನಡುವೆ ಅದೇ ಸಮಯದಲ್ಲಿ ಕರ್ನಾಟಕದ ರಾಜ್ಯಪಾಲರ ಕಚೇರಿಯು ಆದಷ್ಟು ಬೇಗ ತಿದ್ದುಪಡಿ ತರಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿತ್ತೆಂಬ ಸುದ್ದಿ ಹರಿದಾಡಿತ್ತು. ಅದು ಎಷ್ಟರಮಟ್ಟಿಗೆಂದರೆ ಪ್ರತಿ ಗಂಟೆಗೊಮ್ಮೆ ಸುಗ್ರೀವಾಜ್ಞೆಯ ಸಹಿಗಾಗಿ ರಾಜ್ಯಪಾಲರ ಕಚೇರಿಗೆ ಆದಷ್ಟು ಬೇಗ ಕಳಿಸಿಕೊಡಬೇಕೆಂದು ಒತ್ತಾಯಿಸಲಾಗುತ್ತಿತ್ತು ಎಂದು ಹೆಸರು ಹೇಳಲಿಚ್ಚಿಸದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದರು.

ಈ ರೀತಿಯಾಗಿ ತನ್ನ ವ್ಯಾಪ್ತಿಗೆ ಬಾರದ ತಿದ್ದುಪಡಿಯನ್ನು ಸಹ ಕೇಂದ್ರ ಸರ್ಕಾರವು ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿಯೂ ಸುಗ್ರೀವಾಜ್ಞೆಗಳ ಮೂಲಕ ತಂದಿತ್ತು. ಈಗಲೂ ಸಹ ಅವುಗಳನ್ನು ಸಮರ್ಪಕವಾಗಿ ಚರ್ಚಿಸದೇ ತರಾತುರಿಯಲ್ಲಿ ಅಂಗೀಕರಿಸಲಾಗುತ್ತಿದೆ. ವಿರೋಧಿಸಿದ ಸಂಸದರನ್ನು ಅಧಿವೇಶನದಿಂದ ದೂರ ಇಡಲಾಗುತ್ತಿದೆ. ದೇಶದ ರೈತರ ಮೇಲೆ ಗಮನಾರ್ಹ ಪರಿಣಾಮ ಬೀರುವ ತಿದ್ದುಪಡಿಗಳನ್ನು ರಾಜ್ಯಗಳಿಗೆ ಒತ್ತಡ ಹೇರಿ ಸುಗ್ರೀವಾಜ್ಞೆಗಳ ಮೂಲಕ ತಂದು ಈಗ ತರಾತುರಿಯಲ್ಲಿ ಅಂಗೀಕರಿಸುತ್ತಿರುವುದಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಅಂತಹ ರೈತರನ್ನು ಕಂಗನಾ ರಾಣಾವತ್‌ರಂತಹ ನಟಿಯರು ಭಯೋತ್ಪಾದಕರು ಎಂದು ಕರೆಯುತ್ತಿದ್ದಾರೆ.

ಒಟ್ಟಿನಲ್ಲಿ ಕೇಂದ್ರ ಸರ್ಕಾರವು ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದೆ. ಆದರೆ ರೈತರು ಇದರ ವಿರುದ್ಧ ತಿರುಗಿಬಿದ್ದಿರುವುದು ಸರ್ಕಾರಕ್ಕೆ ತಲೆನೋವಾಗಿದೆ. ಆದ ಕಾರಣವೇ ನಿನ್ನೆ ಮೋದಿ ಸೇರಿದಂತೆ ಹಲವು ಸಚಿವರು ಕೃಷಿ ಮಸೂದೆಗಳ ಸಮರ್ಥನೆಗಿಳಿದಿದ್ದಾರೆ. ಕಳೆದ ಹಲವು ದಿನಗಳಿಂದ ವಿದ್ಯಾರ್ಥಿ ಯುವಜನರು ಪರೀಕ್ಷೆ ಮುಂದೂಡಿಕೆ ಮತ್ತು ಉದ್ಯೋಗದ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದರು. ಈಗ ರೈತರು ದನಿಯೆತ್ತುತ್ತಿದ್ದಾರೆ. ಸರ್ಕಾರ ಇನ್ನೆಷ್ಟು ಜನರ ಕೋಪ ಆಕ್ರೋಶಗಳಿಗೆ ಗುರಿಯಾಗಿಲಿದೆ ಎಂದು ಕಾದು ನೋಡಬೇಕಿದೆ.


ಇದನ್ನೂ ಓದಿ: ಕೃಷಿ ಮಸೂದೆಗಳು ರೈತರನ್ನು ಬಲಶಾಲಿಗಳನ್ನಾಗಿಸಲಿವೆ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...