Homeಮುಖಪುಟಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ..

ಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ..

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಕರ್ನಾಟಕ ಸರ್ಕಾರದ ಅಡಿಷನಲ್‌ ಚೀಫ್ ಸೆಕ್ರಟರಿ ಡಾ.ನಾಗಾಂಬಿಕಾ ದೇವಿಯವರಿಗೆ ಪತ್ರ ಬರೆದಿದ್ದು, ನೀವು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಎಪಿಎಲ್‌ಎಂ 2017ರ ಕಾಯ್ದೆಗೆ ಆದಷ್ಟು ಬೇಗ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಬೇಕೆಂದು ಒತ್ತಾಯಿಸಿತ್ತು.

- Advertisement -
- Advertisement -

ಕಳೆದೊಂದು ವಾರದಿಂದ ದೇಶಾದ್ಯಂತ ರೈತರು ಬೀದಿಗಿಳಿದಿದ್ದಾರೆ. ರೈತವಿರೋಧಿ ಸುಗ್ರೀವಾಜ್ಞೆ, ಮಸೂದೆಗಳನ್ನು ಹಿಂಪಡೆಯುವಂತೆ ಕೇಂದ್ರ, ರಾಜ್ಯ ಸರ್ಕಾರಗಳ ಮೇಲೆ ತೀವ್ರ ಒತ್ತಡ ಹೇರುತ್ತಿವೆ. ಈ ಕುರಿತು ಸ್ಪಷ್ಟನೆ ನೀಡಿರುವ ಪ್ರಧಾನಿ ಮೋದಿ “ಈ ರೈತ ಮಸೂದೆಗಳು ರೈತರ ಮಂಡಿ ಮಾರುಕಟ್ಟೆಗೆ ವಿರುದ್ಧವಿವೆ ಎಂಬುದು ಸುಳ್ಳು ಎಂದು ನಾನು ಸ್ಪಷ್ಟಪಡಿಸುತ್ತೇನೆ. ಇದು ಕೃಷಿಮಂಡಿಗಳನ್ನು ಮತ್ತಷ್ಟು ಅಭಿವೃದ್ದಿಪಡಿಸಲಿದೆ. ಈ ಸಂದರ್ಭಕ್ಕೆ ತುರ್ತು ಅಗತ್ಯವಿದ್ದ ಕಾರಣಕ್ಕೆ ನಮ್ಮ ಸರ್ಕಾರ ಇವುಗಳನ್ನು ಅಂಗೀಕರಿಸಿದೆ. ಈಗ ರೈತರು ಎಲ್ಲಿ ಬೇಕಾದರೂ ತಮ್ಮ ಬೆಳೆಗಳನ್ನು ಲಾಭದ ದರಕ್ಕೆ ಮಾರುವ ಅಧಿಕಾರ ಹೊಂದಿದ್ದಾರೆ” ಎಂದು ತಿಳಿಸಿದ್ದಾರೆ.

ಖುದ್ದು ಮೋದಿಯವರೇ ಕೃಷಿ ಮಸೂದೆಗಳನ್ನು ಸಮರ್ಥಿಸಿಕೊಳ್ಳುವ ಮಟ್ಟಿಗೆ ರೈತರ ವಿರೋಧ ಬೆಳೆದುನಿಂತಿದೆ. ಅಷ್ಟೇ ಅಲ್ಲದೇ ನಿನ್ನೆ ಕೇಂದ್ರದ 6 ಸಚಿವರು ಪತ್ರಿಕಾಗೋಷ್ಠಿ ನಡೆಸಿ ಕೃಷಿ ಮಸೂದೆಗಳನ್ನು ಸಮರ್ಥಿಸಿಕೊಂಡಿದ್ದಾರೆ. ಆದರೂ ರೈತರು ತನ್ನ ಪ್ರತಿಭಟನೆಗಳನ್ನು ನಿಲ್ಲಿಸಿಲ್ಲ ಎಂದರೆ ಈ ಮಸೂದೆಗಳು ರೈತವಿರೋಧಿ ಎಂಬುದರಲ್ಲಿ ಸಂಶಯವಿಲ್ಲ ಎನಿಸುತ್ತದೆ.

ಇನ್ನು ಕೃಷಿ ಮಸೂದೆಗಳಲ್ಲಿ ಒಂದಾದ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ವಿವಾದ ಭುಗಿಲೆದ್ದಿದೆ. ಕೇಂದ್ರ ಸರ್ಕಾರವೇ ಈ ಕಾಯ್ದೆಗೆ ತಿದ್ದುಪಡಿ ತರಲು ಕಳೆದ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಾಗಿತ್ತು. ಆದರೆ ಎಪಿಎಂಸಿ ರಾಜ್ಯಪಟ್ಟಿಯಲ್ಲಿ ಬರುವುದರಿಂದ ಮೇ 04ರಂದು ಕೇಂದ್ರವು ಹಲವು ರಾಜ್ಯಸರ್ಕಾರಗಳಿಗೆ ಸುತ್ತೋಲೆಯೊಂದನ್ನು ಕಳಿಸಿ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರುವಂತೆ ಒತ್ತಡ ತಂದಿತ್ತು.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಈ ಕುರಿತು ಕರ್ನಾಟಕ ಸರ್ಕಾರದ ಅಡಿಷನಲ್‌ ಚೀಫ್ ಸೆಕ್ರಟರಿ ಡಾ.ನಾಗಾಂಬಿಕಾ ದೇವಿಯವರಿಗೆ ಪತ್ರ ಬರೆದಿದ್ದು, ನೀವು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಎಪಿಎಲ್‌ಎಂ 2017ರ ಕಾಯ್ದೆಗೆ ಆದಷ್ಟು ಬೇಗ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಬೇಕೆಂದು ಸೂಚಿಸಿರುವ ಪತ್ರವು ಆಗ ವೈರಲ್ ಆಗಿತ್ತು. ಅಷ್ಟೇ ಅಲ್ಲದೇ ಅದಕ್ಕೆ ಮುಂಚೆಯೇ ಕೇಂದ್ರವು ತಯಾರಿಸಿದ್ದ ಮಾದರಿ ಕಾಯ್ದೆಯ ಪ್ರತಿಯು ರೈತ ಮುಖಂಡರಿಂದ ನಾನುಗೌರಿ.ಕಾಂಗೆ ಲಭ್ಯವಾಗಿತ್ತು.

“ಮಾದರಿ ಎಪಿಎಲ್ಎಂ ಕಾಯ್ದೆ 2017 ರಲ್ಲಿ ತಿಳಿಸಿರುವಂತೆ ನಿಮ್ಮ ರಾಜ್ಯವು ಈಗಾಗಲೇ ಸುಧಾರಣೆಯ ಒಂಬತ್ತು ಕ್ಷೇತ್ರಗಳಲ್ಲಿ ಎಂಟು ಸುಧಾರಣೆಗಳನ್ನು ಅಳವಡಿಸಿಕೊಂಡಿರುವುದಕ್ಕೆ ಪ್ರಶಂಸಿಸಲಾಗುತ್ತದೆ. ಆದರೂ ಎಪಿಎಂಸಿಯನ್ನು ಕೇವಲ ಮಂಡಿ ಮಾರುಕಟ್ಟೆಗಳಿಗೆ ಸೀಮಿತಗೊಳಿಸಿರುವುದು ಸರಿಯಿಲ್ಲ. ಈ ನಿಟ್ಟಿನಲ್ಲಿ, ನೀತಿ ಆಯೋಗದ ಕೊನೆಯ ಆಡಳಿತ ಮಂಡಳಿ ಸಭೆಯಲ್ಲಿ, ಭಾರತದ ಗೌರವಾನ್ವಿತ ಪ್ರಧಾನಿ ರಾಜ್ಯಗಳು ಮಾದರಿ ಎಪಿಎಲ್ಎಂ ಕಾಯ್ದೆ 2017 ಅನ್ನು ಅಂಗೀಕರಿಸುವ ಬಗ್ಗೆ ಒತ್ತು ನೀಡಿದ್ದರು. ಆದ್ದರಿಂದ ನಿಮ್ಮ ರಾಜ್ಯವು ರೈತರು ಮತ್ತು ಉತ್ಪಾದಕರ ಹಿತದೃಷ್ಟಿಯಿಂದ ಸುಗ್ರೀವಾಜ್ಞೆ ಮಾರ್ಗದ ಮೂಲಕ ತುರ್ತಾಗಿ ಅಳವಡಿಸಿಕೊಳ್ಳಬೇಕೆಂದು ನಾನು ವಿನಂತಿಸುತ್ತೇನೆ. ಇದನ್ನು ನಿಮ್ಮ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಯ ಗಮನಕ್ಕೆ ತಂದು ಸುಗ್ರೀವಾಜ್ಞೆಯ ನಂತರ ತಿದ್ದುಪಡಿ ಮಾಡಿದ ಕಾಯಿದೆಯ ಪ್ರತಿಯನ್ನು ಸಚಿವಾಲಯಕ್ಕೆ ಬೇಗನೆ ಕಳುಹಿಸಬೇಕು” ಎಂದು ಕೇಂದ್ರದ ಪತ್ರದಲ್ಲಿ ಬರೆಯಲಾಗಿತ್ತು.

ಈ ನಡುವೆ ಅದೇ ಸಮಯದಲ್ಲಿ ಕರ್ನಾಟಕದ ರಾಜ್ಯಪಾಲರ ಕಚೇರಿಯು ಆದಷ್ಟು ಬೇಗ ತಿದ್ದುಪಡಿ ತರಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿತ್ತೆಂಬ ಸುದ್ದಿ ಹರಿದಾಡಿತ್ತು. ಅದು ಎಷ್ಟರಮಟ್ಟಿಗೆಂದರೆ ಪ್ರತಿ ಗಂಟೆಗೊಮ್ಮೆ ಸುಗ್ರೀವಾಜ್ಞೆಯ ಸಹಿಗಾಗಿ ರಾಜ್ಯಪಾಲರ ಕಚೇರಿಗೆ ಆದಷ್ಟು ಬೇಗ ಕಳಿಸಿಕೊಡಬೇಕೆಂದು ಒತ್ತಾಯಿಸಲಾಗುತ್ತಿತ್ತು ಎಂದು ಹೆಸರು ಹೇಳಲಿಚ್ಚಿಸದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದರು.

ಈ ರೀತಿಯಾಗಿ ತನ್ನ ವ್ಯಾಪ್ತಿಗೆ ಬಾರದ ತಿದ್ದುಪಡಿಯನ್ನು ಸಹ ಕೇಂದ್ರ ಸರ್ಕಾರವು ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿಯೂ ಸುಗ್ರೀವಾಜ್ಞೆಗಳ ಮೂಲಕ ತಂದಿತ್ತು. ಈಗಲೂ ಸಹ ಅವುಗಳನ್ನು ಸಮರ್ಪಕವಾಗಿ ಚರ್ಚಿಸದೇ ತರಾತುರಿಯಲ್ಲಿ ಅಂಗೀಕರಿಸಲಾಗುತ್ತಿದೆ. ವಿರೋಧಿಸಿದ ಸಂಸದರನ್ನು ಅಧಿವೇಶನದಿಂದ ದೂರ ಇಡಲಾಗುತ್ತಿದೆ. ದೇಶದ ರೈತರ ಮೇಲೆ ಗಮನಾರ್ಹ ಪರಿಣಾಮ ಬೀರುವ ತಿದ್ದುಪಡಿಗಳನ್ನು ರಾಜ್ಯಗಳಿಗೆ ಒತ್ತಡ ಹೇರಿ ಸುಗ್ರೀವಾಜ್ಞೆಗಳ ಮೂಲಕ ತಂದು ಈಗ ತರಾತುರಿಯಲ್ಲಿ ಅಂಗೀಕರಿಸುತ್ತಿರುವುದಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಅಂತಹ ರೈತರನ್ನು ಕಂಗನಾ ರಾಣಾವತ್‌ರಂತಹ ನಟಿಯರು ಭಯೋತ್ಪಾದಕರು ಎಂದು ಕರೆಯುತ್ತಿದ್ದಾರೆ.

ಒಟ್ಟಿನಲ್ಲಿ ಕೇಂದ್ರ ಸರ್ಕಾರವು ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದೆ. ಆದರೆ ರೈತರು ಇದರ ವಿರುದ್ಧ ತಿರುಗಿಬಿದ್ದಿರುವುದು ಸರ್ಕಾರಕ್ಕೆ ತಲೆನೋವಾಗಿದೆ. ಆದ ಕಾರಣವೇ ನಿನ್ನೆ ಮೋದಿ ಸೇರಿದಂತೆ ಹಲವು ಸಚಿವರು ಕೃಷಿ ಮಸೂದೆಗಳ ಸಮರ್ಥನೆಗಿಳಿದಿದ್ದಾರೆ. ಕಳೆದ ಹಲವು ದಿನಗಳಿಂದ ವಿದ್ಯಾರ್ಥಿ ಯುವಜನರು ಪರೀಕ್ಷೆ ಮುಂದೂಡಿಕೆ ಮತ್ತು ಉದ್ಯೋಗದ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದರು. ಈಗ ರೈತರು ದನಿಯೆತ್ತುತ್ತಿದ್ದಾರೆ. ಸರ್ಕಾರ ಇನ್ನೆಷ್ಟು ಜನರ ಕೋಪ ಆಕ್ರೋಶಗಳಿಗೆ ಗುರಿಯಾಗಿಲಿದೆ ಎಂದು ಕಾದು ನೋಡಬೇಕಿದೆ.


ಇದನ್ನೂ ಓದಿ: ಕೃಷಿ ಮಸೂದೆಗಳು ರೈತರನ್ನು ಬಲಶಾಲಿಗಳನ್ನಾಗಿಸಲಿವೆ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...