Homeಮುಖಪುಟಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ..

ಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ..

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಕರ್ನಾಟಕ ಸರ್ಕಾರದ ಅಡಿಷನಲ್‌ ಚೀಫ್ ಸೆಕ್ರಟರಿ ಡಾ.ನಾಗಾಂಬಿಕಾ ದೇವಿಯವರಿಗೆ ಪತ್ರ ಬರೆದಿದ್ದು, ನೀವು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಎಪಿಎಲ್‌ಎಂ 2017ರ ಕಾಯ್ದೆಗೆ ಆದಷ್ಟು ಬೇಗ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಬೇಕೆಂದು ಒತ್ತಾಯಿಸಿತ್ತು.

- Advertisement -
- Advertisement -

ಕಳೆದೊಂದು ವಾರದಿಂದ ದೇಶಾದ್ಯಂತ ರೈತರು ಬೀದಿಗಿಳಿದಿದ್ದಾರೆ. ರೈತವಿರೋಧಿ ಸುಗ್ರೀವಾಜ್ಞೆ, ಮಸೂದೆಗಳನ್ನು ಹಿಂಪಡೆಯುವಂತೆ ಕೇಂದ್ರ, ರಾಜ್ಯ ಸರ್ಕಾರಗಳ ಮೇಲೆ ತೀವ್ರ ಒತ್ತಡ ಹೇರುತ್ತಿವೆ. ಈ ಕುರಿತು ಸ್ಪಷ್ಟನೆ ನೀಡಿರುವ ಪ್ರಧಾನಿ ಮೋದಿ “ಈ ರೈತ ಮಸೂದೆಗಳು ರೈತರ ಮಂಡಿ ಮಾರುಕಟ್ಟೆಗೆ ವಿರುದ್ಧವಿವೆ ಎಂಬುದು ಸುಳ್ಳು ಎಂದು ನಾನು ಸ್ಪಷ್ಟಪಡಿಸುತ್ತೇನೆ. ಇದು ಕೃಷಿಮಂಡಿಗಳನ್ನು ಮತ್ತಷ್ಟು ಅಭಿವೃದ್ದಿಪಡಿಸಲಿದೆ. ಈ ಸಂದರ್ಭಕ್ಕೆ ತುರ್ತು ಅಗತ್ಯವಿದ್ದ ಕಾರಣಕ್ಕೆ ನಮ್ಮ ಸರ್ಕಾರ ಇವುಗಳನ್ನು ಅಂಗೀಕರಿಸಿದೆ. ಈಗ ರೈತರು ಎಲ್ಲಿ ಬೇಕಾದರೂ ತಮ್ಮ ಬೆಳೆಗಳನ್ನು ಲಾಭದ ದರಕ್ಕೆ ಮಾರುವ ಅಧಿಕಾರ ಹೊಂದಿದ್ದಾರೆ” ಎಂದು ತಿಳಿಸಿದ್ದಾರೆ.

ಖುದ್ದು ಮೋದಿಯವರೇ ಕೃಷಿ ಮಸೂದೆಗಳನ್ನು ಸಮರ್ಥಿಸಿಕೊಳ್ಳುವ ಮಟ್ಟಿಗೆ ರೈತರ ವಿರೋಧ ಬೆಳೆದುನಿಂತಿದೆ. ಅಷ್ಟೇ ಅಲ್ಲದೇ ನಿನ್ನೆ ಕೇಂದ್ರದ 6 ಸಚಿವರು ಪತ್ರಿಕಾಗೋಷ್ಠಿ ನಡೆಸಿ ಕೃಷಿ ಮಸೂದೆಗಳನ್ನು ಸಮರ್ಥಿಸಿಕೊಂಡಿದ್ದಾರೆ. ಆದರೂ ರೈತರು ತನ್ನ ಪ್ರತಿಭಟನೆಗಳನ್ನು ನಿಲ್ಲಿಸಿಲ್ಲ ಎಂದರೆ ಈ ಮಸೂದೆಗಳು ರೈತವಿರೋಧಿ ಎಂಬುದರಲ್ಲಿ ಸಂಶಯವಿಲ್ಲ ಎನಿಸುತ್ತದೆ.

ಇನ್ನು ಕೃಷಿ ಮಸೂದೆಗಳಲ್ಲಿ ಒಂದಾದ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ವಿವಾದ ಭುಗಿಲೆದ್ದಿದೆ. ಕೇಂದ್ರ ಸರ್ಕಾರವೇ ಈ ಕಾಯ್ದೆಗೆ ತಿದ್ದುಪಡಿ ತರಲು ಕಳೆದ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಾಗಿತ್ತು. ಆದರೆ ಎಪಿಎಂಸಿ ರಾಜ್ಯಪಟ್ಟಿಯಲ್ಲಿ ಬರುವುದರಿಂದ ಮೇ 04ರಂದು ಕೇಂದ್ರವು ಹಲವು ರಾಜ್ಯಸರ್ಕಾರಗಳಿಗೆ ಸುತ್ತೋಲೆಯೊಂದನ್ನು ಕಳಿಸಿ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರುವಂತೆ ಒತ್ತಡ ತಂದಿತ್ತು.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಈ ಕುರಿತು ಕರ್ನಾಟಕ ಸರ್ಕಾರದ ಅಡಿಷನಲ್‌ ಚೀಫ್ ಸೆಕ್ರಟರಿ ಡಾ.ನಾಗಾಂಬಿಕಾ ದೇವಿಯವರಿಗೆ ಪತ್ರ ಬರೆದಿದ್ದು, ನೀವು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಎಪಿಎಲ್‌ಎಂ 2017ರ ಕಾಯ್ದೆಗೆ ಆದಷ್ಟು ಬೇಗ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಬೇಕೆಂದು ಸೂಚಿಸಿರುವ ಪತ್ರವು ಆಗ ವೈರಲ್ ಆಗಿತ್ತು. ಅಷ್ಟೇ ಅಲ್ಲದೇ ಅದಕ್ಕೆ ಮುಂಚೆಯೇ ಕೇಂದ್ರವು ತಯಾರಿಸಿದ್ದ ಮಾದರಿ ಕಾಯ್ದೆಯ ಪ್ರತಿಯು ರೈತ ಮುಖಂಡರಿಂದ ನಾನುಗೌರಿ.ಕಾಂಗೆ ಲಭ್ಯವಾಗಿತ್ತು.

“ಮಾದರಿ ಎಪಿಎಲ್ಎಂ ಕಾಯ್ದೆ 2017 ರಲ್ಲಿ ತಿಳಿಸಿರುವಂತೆ ನಿಮ್ಮ ರಾಜ್ಯವು ಈಗಾಗಲೇ ಸುಧಾರಣೆಯ ಒಂಬತ್ತು ಕ್ಷೇತ್ರಗಳಲ್ಲಿ ಎಂಟು ಸುಧಾರಣೆಗಳನ್ನು ಅಳವಡಿಸಿಕೊಂಡಿರುವುದಕ್ಕೆ ಪ್ರಶಂಸಿಸಲಾಗುತ್ತದೆ. ಆದರೂ ಎಪಿಎಂಸಿಯನ್ನು ಕೇವಲ ಮಂಡಿ ಮಾರುಕಟ್ಟೆಗಳಿಗೆ ಸೀಮಿತಗೊಳಿಸಿರುವುದು ಸರಿಯಿಲ್ಲ. ಈ ನಿಟ್ಟಿನಲ್ಲಿ, ನೀತಿ ಆಯೋಗದ ಕೊನೆಯ ಆಡಳಿತ ಮಂಡಳಿ ಸಭೆಯಲ್ಲಿ, ಭಾರತದ ಗೌರವಾನ್ವಿತ ಪ್ರಧಾನಿ ರಾಜ್ಯಗಳು ಮಾದರಿ ಎಪಿಎಲ್ಎಂ ಕಾಯ್ದೆ 2017 ಅನ್ನು ಅಂಗೀಕರಿಸುವ ಬಗ್ಗೆ ಒತ್ತು ನೀಡಿದ್ದರು. ಆದ್ದರಿಂದ ನಿಮ್ಮ ರಾಜ್ಯವು ರೈತರು ಮತ್ತು ಉತ್ಪಾದಕರ ಹಿತದೃಷ್ಟಿಯಿಂದ ಸುಗ್ರೀವಾಜ್ಞೆ ಮಾರ್ಗದ ಮೂಲಕ ತುರ್ತಾಗಿ ಅಳವಡಿಸಿಕೊಳ್ಳಬೇಕೆಂದು ನಾನು ವಿನಂತಿಸುತ್ತೇನೆ. ಇದನ್ನು ನಿಮ್ಮ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಯ ಗಮನಕ್ಕೆ ತಂದು ಸುಗ್ರೀವಾಜ್ಞೆಯ ನಂತರ ತಿದ್ದುಪಡಿ ಮಾಡಿದ ಕಾಯಿದೆಯ ಪ್ರತಿಯನ್ನು ಸಚಿವಾಲಯಕ್ಕೆ ಬೇಗನೆ ಕಳುಹಿಸಬೇಕು” ಎಂದು ಕೇಂದ್ರದ ಪತ್ರದಲ್ಲಿ ಬರೆಯಲಾಗಿತ್ತು.

ಈ ನಡುವೆ ಅದೇ ಸಮಯದಲ್ಲಿ ಕರ್ನಾಟಕದ ರಾಜ್ಯಪಾಲರ ಕಚೇರಿಯು ಆದಷ್ಟು ಬೇಗ ತಿದ್ದುಪಡಿ ತರಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿತ್ತೆಂಬ ಸುದ್ದಿ ಹರಿದಾಡಿತ್ತು. ಅದು ಎಷ್ಟರಮಟ್ಟಿಗೆಂದರೆ ಪ್ರತಿ ಗಂಟೆಗೊಮ್ಮೆ ಸುಗ್ರೀವಾಜ್ಞೆಯ ಸಹಿಗಾಗಿ ರಾಜ್ಯಪಾಲರ ಕಚೇರಿಗೆ ಆದಷ್ಟು ಬೇಗ ಕಳಿಸಿಕೊಡಬೇಕೆಂದು ಒತ್ತಾಯಿಸಲಾಗುತ್ತಿತ್ತು ಎಂದು ಹೆಸರು ಹೇಳಲಿಚ್ಚಿಸದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದರು.

ಈ ರೀತಿಯಾಗಿ ತನ್ನ ವ್ಯಾಪ್ತಿಗೆ ಬಾರದ ತಿದ್ದುಪಡಿಯನ್ನು ಸಹ ಕೇಂದ್ರ ಸರ್ಕಾರವು ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿಯೂ ಸುಗ್ರೀವಾಜ್ಞೆಗಳ ಮೂಲಕ ತಂದಿತ್ತು. ಈಗಲೂ ಸಹ ಅವುಗಳನ್ನು ಸಮರ್ಪಕವಾಗಿ ಚರ್ಚಿಸದೇ ತರಾತುರಿಯಲ್ಲಿ ಅಂಗೀಕರಿಸಲಾಗುತ್ತಿದೆ. ವಿರೋಧಿಸಿದ ಸಂಸದರನ್ನು ಅಧಿವೇಶನದಿಂದ ದೂರ ಇಡಲಾಗುತ್ತಿದೆ. ದೇಶದ ರೈತರ ಮೇಲೆ ಗಮನಾರ್ಹ ಪರಿಣಾಮ ಬೀರುವ ತಿದ್ದುಪಡಿಗಳನ್ನು ರಾಜ್ಯಗಳಿಗೆ ಒತ್ತಡ ಹೇರಿ ಸುಗ್ರೀವಾಜ್ಞೆಗಳ ಮೂಲಕ ತಂದು ಈಗ ತರಾತುರಿಯಲ್ಲಿ ಅಂಗೀಕರಿಸುತ್ತಿರುವುದಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಅಂತಹ ರೈತರನ್ನು ಕಂಗನಾ ರಾಣಾವತ್‌ರಂತಹ ನಟಿಯರು ಭಯೋತ್ಪಾದಕರು ಎಂದು ಕರೆಯುತ್ತಿದ್ದಾರೆ.

ಒಟ್ಟಿನಲ್ಲಿ ಕೇಂದ್ರ ಸರ್ಕಾರವು ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದೆ. ಆದರೆ ರೈತರು ಇದರ ವಿರುದ್ಧ ತಿರುಗಿಬಿದ್ದಿರುವುದು ಸರ್ಕಾರಕ್ಕೆ ತಲೆನೋವಾಗಿದೆ. ಆದ ಕಾರಣವೇ ನಿನ್ನೆ ಮೋದಿ ಸೇರಿದಂತೆ ಹಲವು ಸಚಿವರು ಕೃಷಿ ಮಸೂದೆಗಳ ಸಮರ್ಥನೆಗಿಳಿದಿದ್ದಾರೆ. ಕಳೆದ ಹಲವು ದಿನಗಳಿಂದ ವಿದ್ಯಾರ್ಥಿ ಯುವಜನರು ಪರೀಕ್ಷೆ ಮುಂದೂಡಿಕೆ ಮತ್ತು ಉದ್ಯೋಗದ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದರು. ಈಗ ರೈತರು ದನಿಯೆತ್ತುತ್ತಿದ್ದಾರೆ. ಸರ್ಕಾರ ಇನ್ನೆಷ್ಟು ಜನರ ಕೋಪ ಆಕ್ರೋಶಗಳಿಗೆ ಗುರಿಯಾಗಿಲಿದೆ ಎಂದು ಕಾದು ನೋಡಬೇಕಿದೆ.


ಇದನ್ನೂ ಓದಿ: ಕೃಷಿ ಮಸೂದೆಗಳು ರೈತರನ್ನು ಬಲಶಾಲಿಗಳನ್ನಾಗಿಸಲಿವೆ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...