Homeಮುಖಪುಟಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ..

ಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ..

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಕರ್ನಾಟಕ ಸರ್ಕಾರದ ಅಡಿಷನಲ್‌ ಚೀಫ್ ಸೆಕ್ರಟರಿ ಡಾ.ನಾಗಾಂಬಿಕಾ ದೇವಿಯವರಿಗೆ ಪತ್ರ ಬರೆದಿದ್ದು, ನೀವು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಎಪಿಎಲ್‌ಎಂ 2017ರ ಕಾಯ್ದೆಗೆ ಆದಷ್ಟು ಬೇಗ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಬೇಕೆಂದು ಒತ್ತಾಯಿಸಿತ್ತು.

- Advertisement -
- Advertisement -

ಕಳೆದೊಂದು ವಾರದಿಂದ ದೇಶಾದ್ಯಂತ ರೈತರು ಬೀದಿಗಿಳಿದಿದ್ದಾರೆ. ರೈತವಿರೋಧಿ ಸುಗ್ರೀವಾಜ್ಞೆ, ಮಸೂದೆಗಳನ್ನು ಹಿಂಪಡೆಯುವಂತೆ ಕೇಂದ್ರ, ರಾಜ್ಯ ಸರ್ಕಾರಗಳ ಮೇಲೆ ತೀವ್ರ ಒತ್ತಡ ಹೇರುತ್ತಿವೆ. ಈ ಕುರಿತು ಸ್ಪಷ್ಟನೆ ನೀಡಿರುವ ಪ್ರಧಾನಿ ಮೋದಿ “ಈ ರೈತ ಮಸೂದೆಗಳು ರೈತರ ಮಂಡಿ ಮಾರುಕಟ್ಟೆಗೆ ವಿರುದ್ಧವಿವೆ ಎಂಬುದು ಸುಳ್ಳು ಎಂದು ನಾನು ಸ್ಪಷ್ಟಪಡಿಸುತ್ತೇನೆ. ಇದು ಕೃಷಿಮಂಡಿಗಳನ್ನು ಮತ್ತಷ್ಟು ಅಭಿವೃದ್ದಿಪಡಿಸಲಿದೆ. ಈ ಸಂದರ್ಭಕ್ಕೆ ತುರ್ತು ಅಗತ್ಯವಿದ್ದ ಕಾರಣಕ್ಕೆ ನಮ್ಮ ಸರ್ಕಾರ ಇವುಗಳನ್ನು ಅಂಗೀಕರಿಸಿದೆ. ಈಗ ರೈತರು ಎಲ್ಲಿ ಬೇಕಾದರೂ ತಮ್ಮ ಬೆಳೆಗಳನ್ನು ಲಾಭದ ದರಕ್ಕೆ ಮಾರುವ ಅಧಿಕಾರ ಹೊಂದಿದ್ದಾರೆ” ಎಂದು ತಿಳಿಸಿದ್ದಾರೆ.

ಖುದ್ದು ಮೋದಿಯವರೇ ಕೃಷಿ ಮಸೂದೆಗಳನ್ನು ಸಮರ್ಥಿಸಿಕೊಳ್ಳುವ ಮಟ್ಟಿಗೆ ರೈತರ ವಿರೋಧ ಬೆಳೆದುನಿಂತಿದೆ. ಅಷ್ಟೇ ಅಲ್ಲದೇ ನಿನ್ನೆ ಕೇಂದ್ರದ 6 ಸಚಿವರು ಪತ್ರಿಕಾಗೋಷ್ಠಿ ನಡೆಸಿ ಕೃಷಿ ಮಸೂದೆಗಳನ್ನು ಸಮರ್ಥಿಸಿಕೊಂಡಿದ್ದಾರೆ. ಆದರೂ ರೈತರು ತನ್ನ ಪ್ರತಿಭಟನೆಗಳನ್ನು ನಿಲ್ಲಿಸಿಲ್ಲ ಎಂದರೆ ಈ ಮಸೂದೆಗಳು ರೈತವಿರೋಧಿ ಎಂಬುದರಲ್ಲಿ ಸಂಶಯವಿಲ್ಲ ಎನಿಸುತ್ತದೆ.

ಇನ್ನು ಕೃಷಿ ಮಸೂದೆಗಳಲ್ಲಿ ಒಂದಾದ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ವಿವಾದ ಭುಗಿಲೆದ್ದಿದೆ. ಕೇಂದ್ರ ಸರ್ಕಾರವೇ ಈ ಕಾಯ್ದೆಗೆ ತಿದ್ದುಪಡಿ ತರಲು ಕಳೆದ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಾಗಿತ್ತು. ಆದರೆ ಎಪಿಎಂಸಿ ರಾಜ್ಯಪಟ್ಟಿಯಲ್ಲಿ ಬರುವುದರಿಂದ ಮೇ 04ರಂದು ಕೇಂದ್ರವು ಹಲವು ರಾಜ್ಯಸರ್ಕಾರಗಳಿಗೆ ಸುತ್ತೋಲೆಯೊಂದನ್ನು ಕಳಿಸಿ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರುವಂತೆ ಒತ್ತಡ ತಂದಿತ್ತು.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಈ ಕುರಿತು ಕರ್ನಾಟಕ ಸರ್ಕಾರದ ಅಡಿಷನಲ್‌ ಚೀಫ್ ಸೆಕ್ರಟರಿ ಡಾ.ನಾಗಾಂಬಿಕಾ ದೇವಿಯವರಿಗೆ ಪತ್ರ ಬರೆದಿದ್ದು, ನೀವು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಎಪಿಎಲ್‌ಎಂ 2017ರ ಕಾಯ್ದೆಗೆ ಆದಷ್ಟು ಬೇಗ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಬೇಕೆಂದು ಸೂಚಿಸಿರುವ ಪತ್ರವು ಆಗ ವೈರಲ್ ಆಗಿತ್ತು. ಅಷ್ಟೇ ಅಲ್ಲದೇ ಅದಕ್ಕೆ ಮುಂಚೆಯೇ ಕೇಂದ್ರವು ತಯಾರಿಸಿದ್ದ ಮಾದರಿ ಕಾಯ್ದೆಯ ಪ್ರತಿಯು ರೈತ ಮುಖಂಡರಿಂದ ನಾನುಗೌರಿ.ಕಾಂಗೆ ಲಭ್ಯವಾಗಿತ್ತು.

“ಮಾದರಿ ಎಪಿಎಲ್ಎಂ ಕಾಯ್ದೆ 2017 ರಲ್ಲಿ ತಿಳಿಸಿರುವಂತೆ ನಿಮ್ಮ ರಾಜ್ಯವು ಈಗಾಗಲೇ ಸುಧಾರಣೆಯ ಒಂಬತ್ತು ಕ್ಷೇತ್ರಗಳಲ್ಲಿ ಎಂಟು ಸುಧಾರಣೆಗಳನ್ನು ಅಳವಡಿಸಿಕೊಂಡಿರುವುದಕ್ಕೆ ಪ್ರಶಂಸಿಸಲಾಗುತ್ತದೆ. ಆದರೂ ಎಪಿಎಂಸಿಯನ್ನು ಕೇವಲ ಮಂಡಿ ಮಾರುಕಟ್ಟೆಗಳಿಗೆ ಸೀಮಿತಗೊಳಿಸಿರುವುದು ಸರಿಯಿಲ್ಲ. ಈ ನಿಟ್ಟಿನಲ್ಲಿ, ನೀತಿ ಆಯೋಗದ ಕೊನೆಯ ಆಡಳಿತ ಮಂಡಳಿ ಸಭೆಯಲ್ಲಿ, ಭಾರತದ ಗೌರವಾನ್ವಿತ ಪ್ರಧಾನಿ ರಾಜ್ಯಗಳು ಮಾದರಿ ಎಪಿಎಲ್ಎಂ ಕಾಯ್ದೆ 2017 ಅನ್ನು ಅಂಗೀಕರಿಸುವ ಬಗ್ಗೆ ಒತ್ತು ನೀಡಿದ್ದರು. ಆದ್ದರಿಂದ ನಿಮ್ಮ ರಾಜ್ಯವು ರೈತರು ಮತ್ತು ಉತ್ಪಾದಕರ ಹಿತದೃಷ್ಟಿಯಿಂದ ಸುಗ್ರೀವಾಜ್ಞೆ ಮಾರ್ಗದ ಮೂಲಕ ತುರ್ತಾಗಿ ಅಳವಡಿಸಿಕೊಳ್ಳಬೇಕೆಂದು ನಾನು ವಿನಂತಿಸುತ್ತೇನೆ. ಇದನ್ನು ನಿಮ್ಮ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಯ ಗಮನಕ್ಕೆ ತಂದು ಸುಗ್ರೀವಾಜ್ಞೆಯ ನಂತರ ತಿದ್ದುಪಡಿ ಮಾಡಿದ ಕಾಯಿದೆಯ ಪ್ರತಿಯನ್ನು ಸಚಿವಾಲಯಕ್ಕೆ ಬೇಗನೆ ಕಳುಹಿಸಬೇಕು” ಎಂದು ಕೇಂದ್ರದ ಪತ್ರದಲ್ಲಿ ಬರೆಯಲಾಗಿತ್ತು.

ಈ ನಡುವೆ ಅದೇ ಸಮಯದಲ್ಲಿ ಕರ್ನಾಟಕದ ರಾಜ್ಯಪಾಲರ ಕಚೇರಿಯು ಆದಷ್ಟು ಬೇಗ ತಿದ್ದುಪಡಿ ತರಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿತ್ತೆಂಬ ಸುದ್ದಿ ಹರಿದಾಡಿತ್ತು. ಅದು ಎಷ್ಟರಮಟ್ಟಿಗೆಂದರೆ ಪ್ರತಿ ಗಂಟೆಗೊಮ್ಮೆ ಸುಗ್ರೀವಾಜ್ಞೆಯ ಸಹಿಗಾಗಿ ರಾಜ್ಯಪಾಲರ ಕಚೇರಿಗೆ ಆದಷ್ಟು ಬೇಗ ಕಳಿಸಿಕೊಡಬೇಕೆಂದು ಒತ್ತಾಯಿಸಲಾಗುತ್ತಿತ್ತು ಎಂದು ಹೆಸರು ಹೇಳಲಿಚ್ಚಿಸದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದರು.

ಈ ರೀತಿಯಾಗಿ ತನ್ನ ವ್ಯಾಪ್ತಿಗೆ ಬಾರದ ತಿದ್ದುಪಡಿಯನ್ನು ಸಹ ಕೇಂದ್ರ ಸರ್ಕಾರವು ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿಯೂ ಸುಗ್ರೀವಾಜ್ಞೆಗಳ ಮೂಲಕ ತಂದಿತ್ತು. ಈಗಲೂ ಸಹ ಅವುಗಳನ್ನು ಸಮರ್ಪಕವಾಗಿ ಚರ್ಚಿಸದೇ ತರಾತುರಿಯಲ್ಲಿ ಅಂಗೀಕರಿಸಲಾಗುತ್ತಿದೆ. ವಿರೋಧಿಸಿದ ಸಂಸದರನ್ನು ಅಧಿವೇಶನದಿಂದ ದೂರ ಇಡಲಾಗುತ್ತಿದೆ. ದೇಶದ ರೈತರ ಮೇಲೆ ಗಮನಾರ್ಹ ಪರಿಣಾಮ ಬೀರುವ ತಿದ್ದುಪಡಿಗಳನ್ನು ರಾಜ್ಯಗಳಿಗೆ ಒತ್ತಡ ಹೇರಿ ಸುಗ್ರೀವಾಜ್ಞೆಗಳ ಮೂಲಕ ತಂದು ಈಗ ತರಾತುರಿಯಲ್ಲಿ ಅಂಗೀಕರಿಸುತ್ತಿರುವುದಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಅಂತಹ ರೈತರನ್ನು ಕಂಗನಾ ರಾಣಾವತ್‌ರಂತಹ ನಟಿಯರು ಭಯೋತ್ಪಾದಕರು ಎಂದು ಕರೆಯುತ್ತಿದ್ದಾರೆ.

ಒಟ್ಟಿನಲ್ಲಿ ಕೇಂದ್ರ ಸರ್ಕಾರವು ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದೆ. ಆದರೆ ರೈತರು ಇದರ ವಿರುದ್ಧ ತಿರುಗಿಬಿದ್ದಿರುವುದು ಸರ್ಕಾರಕ್ಕೆ ತಲೆನೋವಾಗಿದೆ. ಆದ ಕಾರಣವೇ ನಿನ್ನೆ ಮೋದಿ ಸೇರಿದಂತೆ ಹಲವು ಸಚಿವರು ಕೃಷಿ ಮಸೂದೆಗಳ ಸಮರ್ಥನೆಗಿಳಿದಿದ್ದಾರೆ. ಕಳೆದ ಹಲವು ದಿನಗಳಿಂದ ವಿದ್ಯಾರ್ಥಿ ಯುವಜನರು ಪರೀಕ್ಷೆ ಮುಂದೂಡಿಕೆ ಮತ್ತು ಉದ್ಯೋಗದ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದರು. ಈಗ ರೈತರು ದನಿಯೆತ್ತುತ್ತಿದ್ದಾರೆ. ಸರ್ಕಾರ ಇನ್ನೆಷ್ಟು ಜನರ ಕೋಪ ಆಕ್ರೋಶಗಳಿಗೆ ಗುರಿಯಾಗಿಲಿದೆ ಎಂದು ಕಾದು ನೋಡಬೇಕಿದೆ.


ಇದನ್ನೂ ಓದಿ: ಕೃಷಿ ಮಸೂದೆಗಳು ರೈತರನ್ನು ಬಲಶಾಲಿಗಳನ್ನಾಗಿಸಲಿವೆ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...