Homeಕರೋನಾ ತಲ್ಲಣದೆಹಲಿಗೆ ಮೀಸಲಿದ್ದ ಆಕ್ಸಿಜನ್ ಕೊಡದೇ ಕೇಂದ್ರ ವಂಚಿಸುತ್ತಿದೆ: ಕೇಜ್ರಿವಾಲ್ ಹೇಳಿಕೆ

ದೆಹಲಿಗೆ ಮೀಸಲಿದ್ದ ಆಕ್ಸಿಜನ್ ಕೊಡದೇ ಕೇಂದ್ರ ವಂಚಿಸುತ್ತಿದೆ: ಕೇಜ್ರಿವಾಲ್ ಹೇಳಿಕೆ

- Advertisement -
- Advertisement -

ದೆಹಲಿಗೆ ನೀಡಬೇಕಾಗಿದ್ದ ವೈದ್ಯಕೀಯ ಆಕ್ಸಿಜನ್‌ನ ಪ್ರಮಾಣವನ್ನು ಕಡಿಮೆಗೊಳಿಸಿ, ಇತರ ರಾಜ್ಯಗಳ ಕಡೆಗೆ ತಿರುಗಿಸಲಾಗುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಕೇಂದ್ರದ ವಿರುದ್ದ ಗಂಭೀರ ಆರೋಪ ಹೊರಿಸಿದ್ದಾರೆ. ದೆಹಲಿಗೆ ಮೀಸಲಾಗಿದ್ದ 140 ಮೆಟ್ರಿಕ್ ಟನ್ ಆಕ್ಸಿಜನ್‌‌ ಅನ್ನು ಇತರ ರಾಜ್ಯಗಳಿಗೆ ತಿರುಗಿಸಲಾಗಿದ್ದು, ಅದನ್ನು ಮತ್ತೇ ದೆಹಲಿಗೆ ನೀಡಬೇಕು ಎಂದು ಕೇಜ್ರಿವಾಲ್‌ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದಿದ್ದಾರೆ.

ದೆಹಲಿಯು ಆಕ್ಸಿಜನ್‌‌ನ ತೀವ್ರ ಕೊರತೆಯನ್ನು ಎದುರಿಸುತ್ತಿದ್ದು, ರಾಜ್ಯದಲ್ಲಿ ಆಕ್ಸಿಜನ್‌‌ “ತುರ್ತುಸ್ಥಿತಿ”ಯಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಬಿಕ್ಕಟ್ಟು ಎದುರಿಸಲು ಸೇನೆಯ ಅಗತ್ಯವಿದೆ- ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ದೆಹಲಿಯು ತೀವ್ರ ಆಕ್ಸಿಜನ್‌‌ನ ಕೊರತೆಯನ್ನು ಎದುರಿಸುತ್ತಿದೆ. ತೀವ್ರವಾಗಿ ಹೆಚ್ಚುತ್ತಿರುವ ಪ್ರಕರಣಗಳ ದೃಷ್ಟಿಯಿಂದ, ದೆಹಲಿಯು ಸಾಮಾನ್ಯ ಪೂರೈಕೆಗಿಂತ ಹೆಚ್ಚಿನ ಆಕ್ಸಿಜನ್‌‌ ಅನ್ನು ಬಯಸುತ್ತದೆ. ಕೇಂದ್ರವು ಆಕ್ಸಿಜನ್‌‌ ಪೂರೈಕೆಯನ್ನು ಹೆಚ್ಚಿಸುವ ಬದಲು, ನಮ್ಮ ಸಾಮಾನ್ಯ ಪೂರೈಕೆಯನ್ನು ತೀವ್ರವಾಗಿ ಕಡಿಮೆ ಮಾಡಲಾಗಿದೆ. ಅಲ್ಲದೆ ದೆಹಲಿಯ ಕೋಟಾವನ್ನು ಇತರ ರಾಜ್ಯಗಳಿಗೆ ತಿರುಗಿಸಲಾಗಿದೆ. ದೆಹಲಿಯಲ್ಲಿ ಆಕ್ಸಿಜನ್‌‌ ಎಮರ್ಜೆನ್ಸಿಯಾಗಿ ಮಾರ್ಪಟ್ಟಿದೆ” ಎಂದು ಬರೆದಿದ್ದಾರೆ.

“ನಮಗೆ ಹಾಸಿಗೆಗಳು,ಐಸಿಯು ಹಾಸಿಗೆ, ಆಕ್ಸಿಜನ್‌‌ ಬೇಕಾಗಿದೆ…ನಾವು ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದ್ದೇವೆ” ಎಂದು ಕೇಜ್ರಿವಾಲ್ ಇಂದು ಬೆಳಿಗ್ಗೆ ನಡೆದ ಕ್ಯಾಬಿನೆಟ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದುತ್ವದ ಉತ್ಕರ್ಷ ಮತ್ತು ಮುಸ್ಲಿಂ ಜನಪ್ರಾತಿನಿಧ್ಯಕ್ಕೆ ಹೊಡೆತ: ಇದೊಂದು ಗಂಭೀರ ಸಾಮಾಜಿಕ ದುರಂತ

ದೆಹಲಿ ಸರ್ಕಾರವು ಈಗಾಗಲೇ ಆಕ್ಸಿಜನ್‌‌ನ ಸಂಗ್ರಹಕ್ಕೆ ಸಹಾಯ ಮಾಡುವಂತೆ ಕೇಂದ್ರ ಸರ್ಕಾರದೊಂದಿಗೆ ಈಗಾಗಲೆ ಕೇಳಿದೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದರು.

ಕೇಂದ್ರ ಸಚಿವ ಪಿಯೂಷ್‌ ಗೋಯಲ್ ಅವರಿಗೆ ಕೇಜ್ರವಾಲ್‌‌ ಪತ್ರ ಬರೆದಿದ್ದಾರೆ. ಪತ್ರದಲ್ಲಿ, “ದೆಹಲಿಯ ವಿವಿಧ ಆಸ್ಪತ್ರೆಗಳಿಗೆ ಆಕ್ಸಿಜನ್‌‌ ಪೂರೈಸುವ ಪ್ರಮುಖ ಪೂರೈಕೆದಾರರಲ್ಲಿ ಒಬ್ಬರಾದ ‘ಮೆಸರ್ಸ್ ಇನಾಕ್ಸ್’‌ನ ಉತ್ಪಾದನೆಯನ್ನು ಹೆಚ್ಚಾಗಿ ಇತರ ರಾಜ್ಯಗಳಿಗೆ ತಿರುಗಿಸಲಾಗಿದೆ. ಈ ನಿರ್ಣಾಯಕ ಹಂತದಲ್ಲಿ, ಈಗ ದೆಹಲಿಗೆ ನಿಯೋಜಿಸಲಾಗಿರುವ ಹೊಸ ಪೂರೈಕೆದಾರರೊಂದಿಗೆ ಆಸ್ಪತ್ರೆಗಳು ಒಪ್ಪಂದದ ಒಪ್ಪಂದ ಮಾಡಿಕೊಳ್ಳಲು ಸಾಧ್ಯವಿಲ್ಲ. ಇದು ಪ್ರಮುಖ ಆಸ್ಪತ್ರೆಗಳಲ್ಲಿ ಭಾರಿ ಕೊರತೆಯನ್ನು ಉಂಟುಮಾಡುತ್ತಿದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಒಡಲಿನಾಳದಿಂದ ಬಂದ ಅರಿವಿನ ಆಸ್ಫೋಟವೇ; ದಲಿತ ಚಳುವಳಿ ಮತ್ತು ಅಂಬೇಡ್ಕರ್

“ಪ್ರತಿದಿನ 700 ಮೆಟ್ರಿಕ್ ಟನ್ ಆಕ್ಸಿಜನ್‌‌ ಅನ್ನು ನಿರಂತರವಾಗಿ ಪೂರೈಸಲು ಮತ್ತು ಬೇರೆ ರಾಜ್ಯಗಳಿಗೆ ಮುಖಮಾಡಿರುವ 140 ಮೆಟ್ರಿಕ್ ಟನ್ ಆಕ್ಸಿಜನ್‌‌ ಅನ್ನು ದೆಹಲಿಗೆ ನೀಡಲು ‘ಮೆಸಸ್ ಇನಾಕ್ಸ್’ ಸೂಕ್ತ ಸೂಚನೆಗಳನ್ನು ನೀಡುವಂತೆ ನಾನು ವಿನಂತಿಸುತ್ತೇನೆ” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪಿಯೂಷ್‌ ಗೋಯಲ್ ಅವರು, ದೇಶವು ತನ್ನ ಸಾಮರ್ಥ್ಯದ 110% ಆಕ್ಸಿಜನ್‌‌ ಅನ್ನು ಉತ್ಪಾದಿಸುತ್ತಿದೆ ಎಂದು ಹೇಳಿದ್ದು, ಭಾನುವಾರದಂದು ಟ್ರಕ್‌ಗಳು ಲೋಡ್‌ ಆಗುತ್ತಿರುವ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ.

ಮಹಾರಾಷ್ಟ್ರ ಮತ್ತು ಛತ್ತೀಸ್‌ಗಡದಂತಹ ಹಲವಾರು ರಾಜ್ಯಗಳು ಈಗಾಗಲೇ ಆಕ್ಸಿಜನ್‌‌ನ ಕೊರತೆಯಿಂದ ಬಳಲುತ್ತಿವೆ. ಪಂಜಾಬ್ ಆಕ್ಸಿಜನ್‌‌‌‌ ಕೊರತೆಯತ್ತ ಸಾಗುತ್ತಿದೆ, ಹೆಚ್ಚಿನ ಆಮ್ಲಜನಕಕ್ಕೆ ವ್ಯವಸ್ಥೆ ಮಾಡುವಂತೆ ಕೇಂದ್ರವನ್ನು ಕೇಳಿಕೊಂಡಿದೆ. ಅನೇಕ ಸ್ಥಳಗಳಲ್ಲಿ, ಜನರು ಕಾಳ ಸಂತೆಯಲ್ಲಿ ಆಕ್ಸಿಜನ್‌‌ ಖರೀದಿಸಲಾಗುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೋವಿಡ್ ಕಾರಣಕ್ಕೆ ಬಂಗಾಳದ ನನ್ನ ಎಲ್ಲಾ ಚುನಾವಣಾ ರ್‍ಯಾಲಿಗಳನ್ನು ರದ್ದುಗೊಳಿಸುತ್ತೇನೆ: ರಾಹುಲ್ ಗಾಂಧಿ

ವಿಡಿಯೋ ನೋಡಿ: ಪ್ರತಾಪಗೌಡ ಪಾಟೀಲ್ ನೀವೇನು ವಿಶ್ವೇಶ್ವರಯ್ಯನವರ? ತರಾಟೆಗೆ ತೆಗೆದುಕೊಂಡ ನೀರಾವರಿ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...