Homeಕರೋನಾ ತಲ್ಲಣದೆಹಲಿಗೆ ಮೀಸಲಿದ್ದ ಆಕ್ಸಿಜನ್ ಕೊಡದೇ ಕೇಂದ್ರ ವಂಚಿಸುತ್ತಿದೆ: ಕೇಜ್ರಿವಾಲ್ ಹೇಳಿಕೆ

ದೆಹಲಿಗೆ ಮೀಸಲಿದ್ದ ಆಕ್ಸಿಜನ್ ಕೊಡದೇ ಕೇಂದ್ರ ವಂಚಿಸುತ್ತಿದೆ: ಕೇಜ್ರಿವಾಲ್ ಹೇಳಿಕೆ

- Advertisement -
- Advertisement -

ದೆಹಲಿಗೆ ನೀಡಬೇಕಾಗಿದ್ದ ವೈದ್ಯಕೀಯ ಆಕ್ಸಿಜನ್‌ನ ಪ್ರಮಾಣವನ್ನು ಕಡಿಮೆಗೊಳಿಸಿ, ಇತರ ರಾಜ್ಯಗಳ ಕಡೆಗೆ ತಿರುಗಿಸಲಾಗುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಕೇಂದ್ರದ ವಿರುದ್ದ ಗಂಭೀರ ಆರೋಪ ಹೊರಿಸಿದ್ದಾರೆ. ದೆಹಲಿಗೆ ಮೀಸಲಾಗಿದ್ದ 140 ಮೆಟ್ರಿಕ್ ಟನ್ ಆಕ್ಸಿಜನ್‌‌ ಅನ್ನು ಇತರ ರಾಜ್ಯಗಳಿಗೆ ತಿರುಗಿಸಲಾಗಿದ್ದು, ಅದನ್ನು ಮತ್ತೇ ದೆಹಲಿಗೆ ನೀಡಬೇಕು ಎಂದು ಕೇಜ್ರಿವಾಲ್‌ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದಿದ್ದಾರೆ.

ದೆಹಲಿಯು ಆಕ್ಸಿಜನ್‌‌ನ ತೀವ್ರ ಕೊರತೆಯನ್ನು ಎದುರಿಸುತ್ತಿದ್ದು, ರಾಜ್ಯದಲ್ಲಿ ಆಕ್ಸಿಜನ್‌‌ “ತುರ್ತುಸ್ಥಿತಿ”ಯಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಬಿಕ್ಕಟ್ಟು ಎದುರಿಸಲು ಸೇನೆಯ ಅಗತ್ಯವಿದೆ- ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ದೆಹಲಿಯು ತೀವ್ರ ಆಕ್ಸಿಜನ್‌‌ನ ಕೊರತೆಯನ್ನು ಎದುರಿಸುತ್ತಿದೆ. ತೀವ್ರವಾಗಿ ಹೆಚ್ಚುತ್ತಿರುವ ಪ್ರಕರಣಗಳ ದೃಷ್ಟಿಯಿಂದ, ದೆಹಲಿಯು ಸಾಮಾನ್ಯ ಪೂರೈಕೆಗಿಂತ ಹೆಚ್ಚಿನ ಆಕ್ಸಿಜನ್‌‌ ಅನ್ನು ಬಯಸುತ್ತದೆ. ಕೇಂದ್ರವು ಆಕ್ಸಿಜನ್‌‌ ಪೂರೈಕೆಯನ್ನು ಹೆಚ್ಚಿಸುವ ಬದಲು, ನಮ್ಮ ಸಾಮಾನ್ಯ ಪೂರೈಕೆಯನ್ನು ತೀವ್ರವಾಗಿ ಕಡಿಮೆ ಮಾಡಲಾಗಿದೆ. ಅಲ್ಲದೆ ದೆಹಲಿಯ ಕೋಟಾವನ್ನು ಇತರ ರಾಜ್ಯಗಳಿಗೆ ತಿರುಗಿಸಲಾಗಿದೆ. ದೆಹಲಿಯಲ್ಲಿ ಆಕ್ಸಿಜನ್‌‌ ಎಮರ್ಜೆನ್ಸಿಯಾಗಿ ಮಾರ್ಪಟ್ಟಿದೆ” ಎಂದು ಬರೆದಿದ್ದಾರೆ.

“ನಮಗೆ ಹಾಸಿಗೆಗಳು,ಐಸಿಯು ಹಾಸಿಗೆ, ಆಕ್ಸಿಜನ್‌‌ ಬೇಕಾಗಿದೆ…ನಾವು ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದ್ದೇವೆ” ಎಂದು ಕೇಜ್ರಿವಾಲ್ ಇಂದು ಬೆಳಿಗ್ಗೆ ನಡೆದ ಕ್ಯಾಬಿನೆಟ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದುತ್ವದ ಉತ್ಕರ್ಷ ಮತ್ತು ಮುಸ್ಲಿಂ ಜನಪ್ರಾತಿನಿಧ್ಯಕ್ಕೆ ಹೊಡೆತ: ಇದೊಂದು ಗಂಭೀರ ಸಾಮಾಜಿಕ ದುರಂತ

ದೆಹಲಿ ಸರ್ಕಾರವು ಈಗಾಗಲೇ ಆಕ್ಸಿಜನ್‌‌ನ ಸಂಗ್ರಹಕ್ಕೆ ಸಹಾಯ ಮಾಡುವಂತೆ ಕೇಂದ್ರ ಸರ್ಕಾರದೊಂದಿಗೆ ಈಗಾಗಲೆ ಕೇಳಿದೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದರು.

ಕೇಂದ್ರ ಸಚಿವ ಪಿಯೂಷ್‌ ಗೋಯಲ್ ಅವರಿಗೆ ಕೇಜ್ರವಾಲ್‌‌ ಪತ್ರ ಬರೆದಿದ್ದಾರೆ. ಪತ್ರದಲ್ಲಿ, “ದೆಹಲಿಯ ವಿವಿಧ ಆಸ್ಪತ್ರೆಗಳಿಗೆ ಆಕ್ಸಿಜನ್‌‌ ಪೂರೈಸುವ ಪ್ರಮುಖ ಪೂರೈಕೆದಾರರಲ್ಲಿ ಒಬ್ಬರಾದ ‘ಮೆಸರ್ಸ್ ಇನಾಕ್ಸ್’‌ನ ಉತ್ಪಾದನೆಯನ್ನು ಹೆಚ್ಚಾಗಿ ಇತರ ರಾಜ್ಯಗಳಿಗೆ ತಿರುಗಿಸಲಾಗಿದೆ. ಈ ನಿರ್ಣಾಯಕ ಹಂತದಲ್ಲಿ, ಈಗ ದೆಹಲಿಗೆ ನಿಯೋಜಿಸಲಾಗಿರುವ ಹೊಸ ಪೂರೈಕೆದಾರರೊಂದಿಗೆ ಆಸ್ಪತ್ರೆಗಳು ಒಪ್ಪಂದದ ಒಪ್ಪಂದ ಮಾಡಿಕೊಳ್ಳಲು ಸಾಧ್ಯವಿಲ್ಲ. ಇದು ಪ್ರಮುಖ ಆಸ್ಪತ್ರೆಗಳಲ್ಲಿ ಭಾರಿ ಕೊರತೆಯನ್ನು ಉಂಟುಮಾಡುತ್ತಿದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಒಡಲಿನಾಳದಿಂದ ಬಂದ ಅರಿವಿನ ಆಸ್ಫೋಟವೇ; ದಲಿತ ಚಳುವಳಿ ಮತ್ತು ಅಂಬೇಡ್ಕರ್

“ಪ್ರತಿದಿನ 700 ಮೆಟ್ರಿಕ್ ಟನ್ ಆಕ್ಸಿಜನ್‌‌ ಅನ್ನು ನಿರಂತರವಾಗಿ ಪೂರೈಸಲು ಮತ್ತು ಬೇರೆ ರಾಜ್ಯಗಳಿಗೆ ಮುಖಮಾಡಿರುವ 140 ಮೆಟ್ರಿಕ್ ಟನ್ ಆಕ್ಸಿಜನ್‌‌ ಅನ್ನು ದೆಹಲಿಗೆ ನೀಡಲು ‘ಮೆಸಸ್ ಇನಾಕ್ಸ್’ ಸೂಕ್ತ ಸೂಚನೆಗಳನ್ನು ನೀಡುವಂತೆ ನಾನು ವಿನಂತಿಸುತ್ತೇನೆ” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪಿಯೂಷ್‌ ಗೋಯಲ್ ಅವರು, ದೇಶವು ತನ್ನ ಸಾಮರ್ಥ್ಯದ 110% ಆಕ್ಸಿಜನ್‌‌ ಅನ್ನು ಉತ್ಪಾದಿಸುತ್ತಿದೆ ಎಂದು ಹೇಳಿದ್ದು, ಭಾನುವಾರದಂದು ಟ್ರಕ್‌ಗಳು ಲೋಡ್‌ ಆಗುತ್ತಿರುವ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ.

ಮಹಾರಾಷ್ಟ್ರ ಮತ್ತು ಛತ್ತೀಸ್‌ಗಡದಂತಹ ಹಲವಾರು ರಾಜ್ಯಗಳು ಈಗಾಗಲೇ ಆಕ್ಸಿಜನ್‌‌ನ ಕೊರತೆಯಿಂದ ಬಳಲುತ್ತಿವೆ. ಪಂಜಾಬ್ ಆಕ್ಸಿಜನ್‌‌‌‌ ಕೊರತೆಯತ್ತ ಸಾಗುತ್ತಿದೆ, ಹೆಚ್ಚಿನ ಆಮ್ಲಜನಕಕ್ಕೆ ವ್ಯವಸ್ಥೆ ಮಾಡುವಂತೆ ಕೇಂದ್ರವನ್ನು ಕೇಳಿಕೊಂಡಿದೆ. ಅನೇಕ ಸ್ಥಳಗಳಲ್ಲಿ, ಜನರು ಕಾಳ ಸಂತೆಯಲ್ಲಿ ಆಕ್ಸಿಜನ್‌‌ ಖರೀದಿಸಲಾಗುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೋವಿಡ್ ಕಾರಣಕ್ಕೆ ಬಂಗಾಳದ ನನ್ನ ಎಲ್ಲಾ ಚುನಾವಣಾ ರ್‍ಯಾಲಿಗಳನ್ನು ರದ್ದುಗೊಳಿಸುತ್ತೇನೆ: ರಾಹುಲ್ ಗಾಂಧಿ

ವಿಡಿಯೋ ನೋಡಿ: ಪ್ರತಾಪಗೌಡ ಪಾಟೀಲ್ ನೀವೇನು ವಿಶ್ವೇಶ್ವರಯ್ಯನವರ? ತರಾಟೆಗೆ ತೆಗೆದುಕೊಂಡ ನೀರಾವರಿ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...