Homeಕರೋನಾ ತಲ್ಲಣದೆಹಲಿಗೆ ಮೀಸಲಿದ್ದ ಆಕ್ಸಿಜನ್ ಕೊಡದೇ ಕೇಂದ್ರ ವಂಚಿಸುತ್ತಿದೆ: ಕೇಜ್ರಿವಾಲ್ ಹೇಳಿಕೆ

ದೆಹಲಿಗೆ ಮೀಸಲಿದ್ದ ಆಕ್ಸಿಜನ್ ಕೊಡದೇ ಕೇಂದ್ರ ವಂಚಿಸುತ್ತಿದೆ: ಕೇಜ್ರಿವಾಲ್ ಹೇಳಿಕೆ

- Advertisement -
- Advertisement -

ದೆಹಲಿಗೆ ನೀಡಬೇಕಾಗಿದ್ದ ವೈದ್ಯಕೀಯ ಆಕ್ಸಿಜನ್‌ನ ಪ್ರಮಾಣವನ್ನು ಕಡಿಮೆಗೊಳಿಸಿ, ಇತರ ರಾಜ್ಯಗಳ ಕಡೆಗೆ ತಿರುಗಿಸಲಾಗುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಕೇಂದ್ರದ ವಿರುದ್ದ ಗಂಭೀರ ಆರೋಪ ಹೊರಿಸಿದ್ದಾರೆ. ದೆಹಲಿಗೆ ಮೀಸಲಾಗಿದ್ದ 140 ಮೆಟ್ರಿಕ್ ಟನ್ ಆಕ್ಸಿಜನ್‌‌ ಅನ್ನು ಇತರ ರಾಜ್ಯಗಳಿಗೆ ತಿರುಗಿಸಲಾಗಿದ್ದು, ಅದನ್ನು ಮತ್ತೇ ದೆಹಲಿಗೆ ನೀಡಬೇಕು ಎಂದು ಕೇಜ್ರಿವಾಲ್‌ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದಿದ್ದಾರೆ.

ದೆಹಲಿಯು ಆಕ್ಸಿಜನ್‌‌ನ ತೀವ್ರ ಕೊರತೆಯನ್ನು ಎದುರಿಸುತ್ತಿದ್ದು, ರಾಜ್ಯದಲ್ಲಿ ಆಕ್ಸಿಜನ್‌‌ “ತುರ್ತುಸ್ಥಿತಿ”ಯಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಬಿಕ್ಕಟ್ಟು ಎದುರಿಸಲು ಸೇನೆಯ ಅಗತ್ಯವಿದೆ- ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ದೆಹಲಿಯು ತೀವ್ರ ಆಕ್ಸಿಜನ್‌‌ನ ಕೊರತೆಯನ್ನು ಎದುರಿಸುತ್ತಿದೆ. ತೀವ್ರವಾಗಿ ಹೆಚ್ಚುತ್ತಿರುವ ಪ್ರಕರಣಗಳ ದೃಷ್ಟಿಯಿಂದ, ದೆಹಲಿಯು ಸಾಮಾನ್ಯ ಪೂರೈಕೆಗಿಂತ ಹೆಚ್ಚಿನ ಆಕ್ಸಿಜನ್‌‌ ಅನ್ನು ಬಯಸುತ್ತದೆ. ಕೇಂದ್ರವು ಆಕ್ಸಿಜನ್‌‌ ಪೂರೈಕೆಯನ್ನು ಹೆಚ್ಚಿಸುವ ಬದಲು, ನಮ್ಮ ಸಾಮಾನ್ಯ ಪೂರೈಕೆಯನ್ನು ತೀವ್ರವಾಗಿ ಕಡಿಮೆ ಮಾಡಲಾಗಿದೆ. ಅಲ್ಲದೆ ದೆಹಲಿಯ ಕೋಟಾವನ್ನು ಇತರ ರಾಜ್ಯಗಳಿಗೆ ತಿರುಗಿಸಲಾಗಿದೆ. ದೆಹಲಿಯಲ್ಲಿ ಆಕ್ಸಿಜನ್‌‌ ಎಮರ್ಜೆನ್ಸಿಯಾಗಿ ಮಾರ್ಪಟ್ಟಿದೆ” ಎಂದು ಬರೆದಿದ್ದಾರೆ.

“ನಮಗೆ ಹಾಸಿಗೆಗಳು,ಐಸಿಯು ಹಾಸಿಗೆ, ಆಕ್ಸಿಜನ್‌‌ ಬೇಕಾಗಿದೆ…ನಾವು ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದ್ದೇವೆ” ಎಂದು ಕೇಜ್ರಿವಾಲ್ ಇಂದು ಬೆಳಿಗ್ಗೆ ನಡೆದ ಕ್ಯಾಬಿನೆಟ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದುತ್ವದ ಉತ್ಕರ್ಷ ಮತ್ತು ಮುಸ್ಲಿಂ ಜನಪ್ರಾತಿನಿಧ್ಯಕ್ಕೆ ಹೊಡೆತ: ಇದೊಂದು ಗಂಭೀರ ಸಾಮಾಜಿಕ ದುರಂತ

ದೆಹಲಿ ಸರ್ಕಾರವು ಈಗಾಗಲೇ ಆಕ್ಸಿಜನ್‌‌ನ ಸಂಗ್ರಹಕ್ಕೆ ಸಹಾಯ ಮಾಡುವಂತೆ ಕೇಂದ್ರ ಸರ್ಕಾರದೊಂದಿಗೆ ಈಗಾಗಲೆ ಕೇಳಿದೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದರು.

ಕೇಂದ್ರ ಸಚಿವ ಪಿಯೂಷ್‌ ಗೋಯಲ್ ಅವರಿಗೆ ಕೇಜ್ರವಾಲ್‌‌ ಪತ್ರ ಬರೆದಿದ್ದಾರೆ. ಪತ್ರದಲ್ಲಿ, “ದೆಹಲಿಯ ವಿವಿಧ ಆಸ್ಪತ್ರೆಗಳಿಗೆ ಆಕ್ಸಿಜನ್‌‌ ಪೂರೈಸುವ ಪ್ರಮುಖ ಪೂರೈಕೆದಾರರಲ್ಲಿ ಒಬ್ಬರಾದ ‘ಮೆಸರ್ಸ್ ಇನಾಕ್ಸ್’‌ನ ಉತ್ಪಾದನೆಯನ್ನು ಹೆಚ್ಚಾಗಿ ಇತರ ರಾಜ್ಯಗಳಿಗೆ ತಿರುಗಿಸಲಾಗಿದೆ. ಈ ನಿರ್ಣಾಯಕ ಹಂತದಲ್ಲಿ, ಈಗ ದೆಹಲಿಗೆ ನಿಯೋಜಿಸಲಾಗಿರುವ ಹೊಸ ಪೂರೈಕೆದಾರರೊಂದಿಗೆ ಆಸ್ಪತ್ರೆಗಳು ಒಪ್ಪಂದದ ಒಪ್ಪಂದ ಮಾಡಿಕೊಳ್ಳಲು ಸಾಧ್ಯವಿಲ್ಲ. ಇದು ಪ್ರಮುಖ ಆಸ್ಪತ್ರೆಗಳಲ್ಲಿ ಭಾರಿ ಕೊರತೆಯನ್ನು ಉಂಟುಮಾಡುತ್ತಿದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಒಡಲಿನಾಳದಿಂದ ಬಂದ ಅರಿವಿನ ಆಸ್ಫೋಟವೇ; ದಲಿತ ಚಳುವಳಿ ಮತ್ತು ಅಂಬೇಡ್ಕರ್

“ಪ್ರತಿದಿನ 700 ಮೆಟ್ರಿಕ್ ಟನ್ ಆಕ್ಸಿಜನ್‌‌ ಅನ್ನು ನಿರಂತರವಾಗಿ ಪೂರೈಸಲು ಮತ್ತು ಬೇರೆ ರಾಜ್ಯಗಳಿಗೆ ಮುಖಮಾಡಿರುವ 140 ಮೆಟ್ರಿಕ್ ಟನ್ ಆಕ್ಸಿಜನ್‌‌ ಅನ್ನು ದೆಹಲಿಗೆ ನೀಡಲು ‘ಮೆಸಸ್ ಇನಾಕ್ಸ್’ ಸೂಕ್ತ ಸೂಚನೆಗಳನ್ನು ನೀಡುವಂತೆ ನಾನು ವಿನಂತಿಸುತ್ತೇನೆ” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪಿಯೂಷ್‌ ಗೋಯಲ್ ಅವರು, ದೇಶವು ತನ್ನ ಸಾಮರ್ಥ್ಯದ 110% ಆಕ್ಸಿಜನ್‌‌ ಅನ್ನು ಉತ್ಪಾದಿಸುತ್ತಿದೆ ಎಂದು ಹೇಳಿದ್ದು, ಭಾನುವಾರದಂದು ಟ್ರಕ್‌ಗಳು ಲೋಡ್‌ ಆಗುತ್ತಿರುವ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ.

ಮಹಾರಾಷ್ಟ್ರ ಮತ್ತು ಛತ್ತೀಸ್‌ಗಡದಂತಹ ಹಲವಾರು ರಾಜ್ಯಗಳು ಈಗಾಗಲೇ ಆಕ್ಸಿಜನ್‌‌ನ ಕೊರತೆಯಿಂದ ಬಳಲುತ್ತಿವೆ. ಪಂಜಾಬ್ ಆಕ್ಸಿಜನ್‌‌‌‌ ಕೊರತೆಯತ್ತ ಸಾಗುತ್ತಿದೆ, ಹೆಚ್ಚಿನ ಆಮ್ಲಜನಕಕ್ಕೆ ವ್ಯವಸ್ಥೆ ಮಾಡುವಂತೆ ಕೇಂದ್ರವನ್ನು ಕೇಳಿಕೊಂಡಿದೆ. ಅನೇಕ ಸ್ಥಳಗಳಲ್ಲಿ, ಜನರು ಕಾಳ ಸಂತೆಯಲ್ಲಿ ಆಕ್ಸಿಜನ್‌‌ ಖರೀದಿಸಲಾಗುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೋವಿಡ್ ಕಾರಣಕ್ಕೆ ಬಂಗಾಳದ ನನ್ನ ಎಲ್ಲಾ ಚುನಾವಣಾ ರ್‍ಯಾಲಿಗಳನ್ನು ರದ್ದುಗೊಳಿಸುತ್ತೇನೆ: ರಾಹುಲ್ ಗಾಂಧಿ

ವಿಡಿಯೋ ನೋಡಿ: ಪ್ರತಾಪಗೌಡ ಪಾಟೀಲ್ ನೀವೇನು ವಿಶ್ವೇಶ್ವರಯ್ಯನವರ? ತರಾಟೆಗೆ ತೆಗೆದುಕೊಂಡ ನೀರಾವರಿ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...