Homeಕರ್ನಾಟಕಕೇಂದ್ರದಿಂದ ಐಎಎಸ್‌ಗಳು ದೂರ ಉಳಿಯಲು ಕೇಂದ್ರದ ಕಿರುಕುಳವೇ ಕಾರಣ: ಸಸಿಕಾಂತ್‌ ಸೆಂಥಿಲ್‌

ಕೇಂದ್ರದಿಂದ ಐಎಎಸ್‌ಗಳು ದೂರ ಉಳಿಯಲು ಕೇಂದ್ರದ ಕಿರುಕುಳವೇ ಕಾರಣ: ಸಸಿಕಾಂತ್‌ ಸೆಂಥಿಲ್‌

ಐಎಎಸ್‌ ಕೇಡರ್‌‌ ನಿಯಮಗಳು 1954ಕ್ಕೆ ತಿದ್ದುಪಡಿಗಳನ್ನು ತರಲು ಹೊರಟಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್‌ ವಿರೋಧಿಸಿದ್ದಾರೆ.

- Advertisement -
- Advertisement -

ಐಎಎಸ್‌ ಕೇಡರ್‌‌ ನಿಯಮಗಳು 1954ಕ್ಕೆ ತಿದ್ದುಪಡಿಗಳನ್ನು ತರಲು ಕೇಂದ್ರ ಸರ್ಕಾರ ಹೊರಟಿರುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವಿನ ಜಟಾಪಟಿಗೆ ಕಾರಣವಾಗಿದೆ.

ಕೇಂದ್ರ ಸರ್ಕಾರದ ಸಚಿವಾಲಯಗಳಲ್ಲಿ ಜಂಟಿ ಕಾರ್ಯದರ್ಶಿ ದರ್ಜೆಯ ಅಧಿಕಾರಿಗಳ ಇಳಿಕೆಯಾಗುತ್ತಿದೆ.  2011ರಲ್ಲಿ 309 ಮಂದಿ ಇದ್ದ ಅಧಿಕಾರಿಗಳಿದ್ದರು. ಈಗ 223 ಮಂದಿ ಇದ್ದಾರೆ. ಕೇಂದ್ರೀಯ ನಿಯೋಜನೆ 2011ರಲ್ಲಿ ಶೇ. 25ರಷ್ಟಿತ್ತು. ಈಗ ಶೇ. 18ಕ್ಕೆ ಕುಸಿದಿದೆ.

ಮಂಜೂರಾದ ಹುದ್ದೆಗಳಲ್ಲಿ ಒಂದಿಷ್ಟು ಮಂದಿಯನ್ನು ‘ಕೇಂದ್ರೀಯ ನಿಯೋಜನೆ ಮೀಸಲು’ (ಸಿಡಿಆರ್‌) ಅನ್ವಯ ಕೇಂದ್ರ ಸೇವೆಗೆ ಕಳುಹಿಸಬೇಕಿದ್ದು, ಬಹುತೇಕ ರಾಜ್ಯಗಳು ಸಿ.ಡಿ.ಆರ್‌ ಪಾಲಿಸುತ್ತಿಲ್ಲ ಎಂಬುದು ಕೇಂದ್ರದ ಆರೋಪ. ಹೀಗಾಗಿ ಐಎಎಸ್‌ (ಕೇಡರ್‌) ನಿಯಮಗಳು- 1954ರ ನಿಯಮ 6 (1)ಕ್ಕೆ ಹೆಚ್ಚುವರಿ ಅಂಶಗಳನ್ನು ಸೇರಿಸಿ ತಿದ್ದುಪಡಿ ಮಾಡಲು ಮುಂದಾಗಿದೆ. ಕೇಂದ್ರ ನಿಗದಿಪಡಿಸಿದ ಕಾಲಮಿತಿಯಲ್ಲಿ ಕೇಂದ್ರದ ನಿಯಮವನ್ನು ರಾಜ್ಯ ಸರ್ಕಾರ ಜಾರಿಗೊಳಿಸುವಂತೆ ತಿದ್ದುಪಡಿ ತರುವಂತೆ ನಿಯಮ ರೂಪಿಸಲಾಗುತ್ತಿದೆ.

ಕೇಂದ್ರ ಸರ್ಕಾರದ ನಿರ್ಧಾರವನ್ನು ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ವಿರೋಧಿಸಿದ್ದಾರೆ. ಕೇಂದ್ರವು ಒಕ್ಕೂಟ ವ್ಯವಸ್ಥೆಯನ್ನು ನಿರ್ಲಕ್ಷಿಸುತ್ತಿದೆ ಎಂದಿದ್ದಾರೆ.

ಈ ವಿವಾದದ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿರುವ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರು, ಕೇಂದ್ರದ ನಿರ್ಧಾರವನ್ನು ವಿರೋಧಿಸಿದರು. “ಕೇಂದ್ರ ಸರ್ಕಾರ ಮಾಡಲು ಹೊರಟಿರುವ ತಿದ್ದುಪಡಿಗಳು ಒಕ್ಕೂಟ ಸಹಕಾರ ತತ್ವಕ್ಕೆ ವಿರುದ್ಧವಾಗಿದೆ” ಎಂದರು.

ಹೊಸ ತಿದ್ದುಪಡಿಗಳಿಂದಾಗುವ ಸಮಸ್ಯೆಗಳನ್ನು ಸೆಂಥಿಲ್ ವಿವರಿಸಿದರು.

“ರಾಜ್ಯದಲ್ಲಿ ಒಂದು ಮುಖ್ಯವಾದ ಕೆಲಸದಲ್ಲಿ ತೊಡಗಿಸಿಕೊಂಡಿರುವ ಐಎಎಸ್‌ ಅಧಿಕಾರಿಯನ್ನು ಯಾವುದೇ ಮುನ್ನೆಚ್ಚರಿಕೆ ನೀಡದೆ ಕೆಲಸದಿಂದ ತೆಗೆದು ಕೇಂದ್ರಕ್ಕೆ ಕರೆಸಿಕೊಳ್ಳುವ ಅವಕಾಶವನ್ನು ಈ ತಿದ್ದುಪಡಿಗಳು ಕೇಂದ್ರ ಸರ್ಕಾರಕ್ಕೆ ನೀಡುತ್ತವೆ” ಎಂದು ತಿಳಿಸಿದರು.

“ರಾಜ್ಯದಲ್ಲಿ ಕೇಂದ್ರಕ್ಕೆ ವಿರೋಧಿಯಾಗಿರುವ ಪಕ್ಷ ಅಧಿಕಾರದಲ್ಲಿದ್ದಾಗ ರಾಜ್ಯ ಸರ್ಕಾರಕ್ಕೆ ಕಿರುಕುಳ ನೀಡಲೆಂದೇ ಕೆಲವು ಮುಖ್ಯವಾದ ಅಧಿಕಾರಿಗಳನ್ನು ಕೇಂದ್ರ ಕರೆಸಿಕೊಳ್ಳುವ ಅವಕಾಶ ಈ ತಿದ್ದುಪಡಿ ನಿಯಮಗಳಲ್ಲಿದೆ” ಎಂದು ಹೇಳಿದರು.

“ಈ ರೀತಿಯ ಅಧಿಕಾರವು ಕೇಂದ್ರ ಸರ್ಕಾರಕ್ಕೆ ಸಿಕ್ಕಿದಾಗ ಐಎಎಸ್ ಅಧಿಕಾರಿಗಳು ಹೆದರಿಕೊಂಡೇ ಇರಬೇಕಾಗುತ್ತದೆ. ನಮ್ಮನ್ನು ರಾಜ್ಯದಿಂದ ತೆಗೆದು ಕೇಂದ್ರಕ್ಕೆ ಕರೆಸಿಕೊಂಡು ಹಿಂಸೆ ಕೊಡುತ್ತಾರೆ ಎಂಬ ಭಯದಲ್ಲೇ ಐಎಎಸ್‌ಗಳು ಕೆಲಸ ಮಾಡಬೇಕಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಕೇಂದ್ರದಲ್ಲಿ ಕೆಲಸ ಮಾಡುವ ಐಎಎಸ್ ಅಧಿಕಾರಿಗಳ ಪ್ರಮಾಣ ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಈ ಸಮಸ್ಯೆ ಏಕೆ ತಲೆದೋರಿದೆ ಎಂದರೆ, ಕೇಂದ್ರದಲ್ಲಿ ಇವರೊಂದಿಗೆ ಕೆಲಸ ಮಾಡಲು ಐಎಎಸ್‌ ಅಧಿಕಾರಿಗಳು ಸಿದ್ಧವಿಲ್ಲ. ಎಲ್ಲರೂ ಓಡಿ ಹೋಗುತ್ತಿದ್ದಾರೆ. ಕೇಂದ್ರ ಸರ್ಕಾರದ ವರ್ತನೆಯಿಂದ ಬೇಸತ್ತು ಅಧಿಕಾರಿಗಳು ರಾಜ್ಯದಲ್ಲೇ ಉಳಿಯಲು ಬಯಸುತ್ತಿದ್ದಾರೆ” ಎಂದರು.

“ಯಾವುದೇ ಸಚಿವಾಲಯದಲ್ಲೂ ತಮ್ಮ ಅಭಿಪ್ರಾಯವನ್ನು ಹೇಳಲು ಐಎಎಸ್‌ಗಳಿಗೆ ಸಾಧ್ಯವಾಗುತ್ತಿಲ್ಲ. ಯಾವುದೇ ಸಚಿವಾಲಯದ ಸಚಿವರ ಅಭಿಪ್ರಾಯಗಳನ್ನು ಪ್ರಧಾನಿಯವರು ಆಲಿಸುವುದಿಲ್ಲ. ಎಲ್ಲವೂ ಪ್ರಧಾನಿ ಕೇಂದ್ರಿತವಾಗಿ ನಡೆಯುತ್ತಿವೆ. ಪ್ರಧಾನಿ ಹೇಳಿದಂತೆ ಕಡತಗಳನ್ನು ಮಾಡಬೇಕಾಗಿದೆ. ಯಾರ ಬಗ್ಗೆಯೂ ಏನನ್ನೂ ಅಧಿಕಾರಿಗಳು ಹೇಳುವಂತಿಲ್ಲ. ಭಯದ ವಾತಾವರಣದಲ್ಲಿ ಕೆಲಸ ಮಾಡುತ್ತಿದ್ದಾರೆ. ಏನಾದರೂ ಒಂದು ಸಣ್ಣ ಅಪಾದನೆ ಬಂದರೆ ಅಧಿಕಾರಿಯ ವೃತ್ತಿಬದುಕನ್ನೇ ಮುಗಿಸಿಬಿಡುತ್ತಾರೆ. ಇಂತಹ ಕಷ್ಟವನ್ನು ಏಕೆ ಮೈಮೇಲೆ ಎಳೆದುಕೊಳ್ಳಬೇಕು ಎಂದು ಐಎಎಸ್ ಅಧಿಕಾರಿಗಳು ಭಾವಿಸುತ್ತಾರೆ” ಎನ್ನುತ್ತಾರೆ ಸಸಿಕಾಂತ್‌.

“ಕೇಂದ್ರ ಸರ್ಕಾರದಲ್ಲಿ ಕೆಲಸ ಮಾಡುವುದು ಪ್ರತಿಯೊಬ್ಬ ಐಎಎಸ್ ಅಧಿಕಾರಿಗೂ ಹೆಮ್ಮೆಯ ವಿಷಯವಾಗಿರುತ್ತದೆ. ಆದರೆ ಅವಕಾಶ ಇದ್ದರೂ ಕೇಂದ್ರಕ್ಕೆ ಹೋಗುತ್ತಿಲ್ಲ ಎಂಬುದಕ್ಕೆ ಏನು ಕಾರಣ? ಐಎಎಸ್‌ ಅಧಿಕಾರಿಗಳು ಈಗ ಕಡ್ಡಾಯವಾಗಿ ಕೇಂದ್ರಕ್ಕೆ ಬರಬೇಕು ಎಂದು ನಿಯಮ ರೂಪಿಸಲು ಹೊರಟಿರುವುದು ಎಷ್ಟು ಸರಿ?” ಎಂದು ಪ್ರಶ್ನಿಸಿದರು.

“ಜನರ ಜೊತೆಯಲ್ಲಿ ನೇರ ಸಂಪರ್ಕದಲ್ಲಿರುವುದು ರಾಜ್ಯ ಸರ್ಕಾರಗಳು ಮಾತ್ರ. ಕೇಂದ್ರಕ್ಕೆ ಜನ ಸಂಪರ್ಕ ಸಾಧ್ಯವಾಗದು. ರಾಜ್ಯದಲ್ಲಿ ಕೆಲಸ ಮಾಡಿದ ಐಎಎಸ್‌ ಅಧಿಕಾರಿಗಳು ಕೇಂದ್ರಕ್ಕೆ ಬರಬೇಕೆಂಬ ವ್ಯವಸ್ಥೆಯನ್ನು ನಮ್ಮ ಒಕ್ಕೂಟ ವ್ಯವಸ್ಥೆ ಮಾಡಿಕೊಂಡಿದೆ ಎಂದರೆ, ಜನರ ಜೊತೆಯಲ್ಲಿ ಕೆಲಸ ಮಾಡಿದವರು ಕೇಂದ್ರದಲ್ಲಿ ಇರಬೇಕೆಂಬ ಉದ್ದೇಶದಿಂದಷ್ಟೇ. ಎಲ್ಲವಾದರೆ ನೇರವಾಗಿ ನೇಮಕಾತಿಯನ್ನು ಅವರಾಗಿಯೇ ಮಾಡಿಕೊಳ್ಳಬಹುದಿತ್ತಲ್ಲ” ಎಂದರು.

“ಆಲ್‌ ಇಂಡಿಯಾ ಸರ್ವೀಸ್‌ ಬಂದಿರುವ ಕಾರಣವೇ ಜನರೊಂದಿಗೆ ಅಧಿಕಾರಿಗಳು ಇರಬೇಕೆಂದು. ಒಂದು ಪಾಲಿಸಿ ಜನರ ಮೇಲೆ ಹೇಗೆ ಪರಿಣಾಮ ಬೀರಿದ ಎಂಬುದು ಜನರ ಜೊತೆ ಕೆಲಸ ಮಾಡಿದವರಿಗೆ ತಿಳಿಯುತ್ತದೆ. ಮುಖ್ಯವಾಗಿ ಹೇಳಬೇಕೆಂದರೆ ಕೇಂದ್ರಕ್ಕಿಂತ ರಾಜ್ಯ ಸರ್ಕಾರಗಳಲ್ಲಿಯೇ ಐಎಎಸ್ ಅಧಿಕಾರಿಗಳ ಸೇವೆ ಮುಖ್ಯವಾಗಿರುತ್ತದೆ” ಎಂದು ಅಭಿಪ್ರಾಯಪಟ್ಟರು.


ಇದನ್ನೂ ಓದಿರಿ: ಐಎಎಸ್‌ ನಿಯಮಗಳ ಬದಲಾವಣೆ ಪ್ರಸ್ತಾಪ: ಕೇಂದ್ರದ ನಡೆಗೆ ಸಿಎಂಗಳ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ರಾಜ್ಯ ಸರ್ಕಾರಗಳಿಗೆ ಇರುವ ಅಧಿಕಾರಗಳನ್ನು ಕಿತ್ತುಕೊಳ್ಳುವ ಒಕ್ಕೂಟ ಸರ್ಕಾರದ ಈ ಕ್ರಮ ಕಂಡನಾರ್ಹ.

  2. ಸಸಿಕಾಂತ್ ಸೆಂತಿಲ್ ವಾದ ಸರಿಯಾಗಿದೆ. ಅದರೊಂದಿಗೆ ಕೇಂದ್ರವು, ರಾಜ್ಯ ಸರ್ಕಾರವನ್ನು ಕಡೆಗಣಿಸಿ, ರಾಜ್ಯಗಳ ಅಭಿವೃದ್ಧಿ ಕೆಲಸಗಳ ಬಗ್ಗೆ ವಿವರಣೆ ಕೇಳಲು, ಕೇಂದ್ರದ ಯೋಜನೆಗಳನ್ನು ಕಾರ್ಯಗತ ಮಾಡಲು, ರಾಜ್ಯ ಸೇವೆಯಲ್ಲಿ ನಿಯೋಜಿತರಾದ ಐಎಎಸ್ ಅಧಿಕಾರಿಗಳಲ್ಲಿ ನೇರವಾಗಿ ಚರ್ಚಿಸುವುದು ಎಷ್ಟು ಸರಿ? ಇದು, ರಾಜ್ಯ ಸರ್ಕಾರವೊಂದನ್ನು ಮತ್ತು ಅದನ್ನು ಆಡಳಿತ ಮಾಡಲು ನಿಯೋಜಿಸಿದ ಜನರನ್ನು ಅವಮಾನಿಸಿದಂತಲ್ಲವೆ?

  3. ಒಕ್ಕೂಟ ಸರ್ಕಾರ ದಲ್ಲಿ , ಅಂದರೆ ನೇರವಾಗಿ ಆ ಸರ್ಕಾರದ ಅಡಿಯಲ್ಲಿ ಮಾತ್ರ, ಕೆಲಸ ಮಾಡಲೆಂದೇ ಆರಂಭದಲ್ಲಿಯೇ ಅಧಿಕಾರಿಗಳನ್ನು ಆಯ್ಕೆ ಮಾಡಿಕೊಳ್ಳ ಬಹುದು. ಐಎಎಸ್ ಪರೀಕ್ಷೆ ಬರೆಯುವಾಗಲೇ ಅಭ್ಯರ್ಥಿಗಳು ದೆಹಲಿ ಸರ್ಕಾರದ ಅಡಿಯಲ್ಲಿ ಕೆಲಸಮಾಡುವ ತಮ್ಮ ಇಚ್ಛೆಯನ್ನು ವ್ಯಕಪಡಿಸ ಬಹುದು. ವಿವಿಧ ರಾಜ್ಯಗಳ ಕ್ಯಾಡರ್ಬಗಳು ಇದ್ದಂತೆ ಒಕ್ಕೂಟ ಸರ್ಕಾರದ ಕ್ಯಾಡರ್ ಒಂದನ್ನು ಸೃಷ್ಟಿಸುವುದರ ಮೂಲಕ ಈ ಸಮಸ್ಯೆ ಗೆ ಪರಿಹಾರವನ್ನು ಕಂಡುಕೊಳ್ಳಲು ಸಾಧ್ಯವೇ?

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....