Homeಕರ್ನಾಟಕಕೇಂದ್ರದಿಂದ ಐಎಎಸ್‌ಗಳು ದೂರ ಉಳಿಯಲು ಕೇಂದ್ರದ ಕಿರುಕುಳವೇ ಕಾರಣ: ಸಸಿಕಾಂತ್‌ ಸೆಂಥಿಲ್‌

ಕೇಂದ್ರದಿಂದ ಐಎಎಸ್‌ಗಳು ದೂರ ಉಳಿಯಲು ಕೇಂದ್ರದ ಕಿರುಕುಳವೇ ಕಾರಣ: ಸಸಿಕಾಂತ್‌ ಸೆಂಥಿಲ್‌

ಐಎಎಸ್‌ ಕೇಡರ್‌‌ ನಿಯಮಗಳು 1954ಕ್ಕೆ ತಿದ್ದುಪಡಿಗಳನ್ನು ತರಲು ಹೊರಟಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್‌ ವಿರೋಧಿಸಿದ್ದಾರೆ.

- Advertisement -
- Advertisement -

ಐಎಎಸ್‌ ಕೇಡರ್‌‌ ನಿಯಮಗಳು 1954ಕ್ಕೆ ತಿದ್ದುಪಡಿಗಳನ್ನು ತರಲು ಕೇಂದ್ರ ಸರ್ಕಾರ ಹೊರಟಿರುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವಿನ ಜಟಾಪಟಿಗೆ ಕಾರಣವಾಗಿದೆ.

ಕೇಂದ್ರ ಸರ್ಕಾರದ ಸಚಿವಾಲಯಗಳಲ್ಲಿ ಜಂಟಿ ಕಾರ್ಯದರ್ಶಿ ದರ್ಜೆಯ ಅಧಿಕಾರಿಗಳ ಇಳಿಕೆಯಾಗುತ್ತಿದೆ.  2011ರಲ್ಲಿ 309 ಮಂದಿ ಇದ್ದ ಅಧಿಕಾರಿಗಳಿದ್ದರು. ಈಗ 223 ಮಂದಿ ಇದ್ದಾರೆ. ಕೇಂದ್ರೀಯ ನಿಯೋಜನೆ 2011ರಲ್ಲಿ ಶೇ. 25ರಷ್ಟಿತ್ತು. ಈಗ ಶೇ. 18ಕ್ಕೆ ಕುಸಿದಿದೆ.

ಮಂಜೂರಾದ ಹುದ್ದೆಗಳಲ್ಲಿ ಒಂದಿಷ್ಟು ಮಂದಿಯನ್ನು ‘ಕೇಂದ್ರೀಯ ನಿಯೋಜನೆ ಮೀಸಲು’ (ಸಿಡಿಆರ್‌) ಅನ್ವಯ ಕೇಂದ್ರ ಸೇವೆಗೆ ಕಳುಹಿಸಬೇಕಿದ್ದು, ಬಹುತೇಕ ರಾಜ್ಯಗಳು ಸಿ.ಡಿ.ಆರ್‌ ಪಾಲಿಸುತ್ತಿಲ್ಲ ಎಂಬುದು ಕೇಂದ್ರದ ಆರೋಪ. ಹೀಗಾಗಿ ಐಎಎಸ್‌ (ಕೇಡರ್‌) ನಿಯಮಗಳು- 1954ರ ನಿಯಮ 6 (1)ಕ್ಕೆ ಹೆಚ್ಚುವರಿ ಅಂಶಗಳನ್ನು ಸೇರಿಸಿ ತಿದ್ದುಪಡಿ ಮಾಡಲು ಮುಂದಾಗಿದೆ. ಕೇಂದ್ರ ನಿಗದಿಪಡಿಸಿದ ಕಾಲಮಿತಿಯಲ್ಲಿ ಕೇಂದ್ರದ ನಿಯಮವನ್ನು ರಾಜ್ಯ ಸರ್ಕಾರ ಜಾರಿಗೊಳಿಸುವಂತೆ ತಿದ್ದುಪಡಿ ತರುವಂತೆ ನಿಯಮ ರೂಪಿಸಲಾಗುತ್ತಿದೆ.

ಕೇಂದ್ರ ಸರ್ಕಾರದ ನಿರ್ಧಾರವನ್ನು ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ವಿರೋಧಿಸಿದ್ದಾರೆ. ಕೇಂದ್ರವು ಒಕ್ಕೂಟ ವ್ಯವಸ್ಥೆಯನ್ನು ನಿರ್ಲಕ್ಷಿಸುತ್ತಿದೆ ಎಂದಿದ್ದಾರೆ.

ಈ ವಿವಾದದ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿರುವ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರು, ಕೇಂದ್ರದ ನಿರ್ಧಾರವನ್ನು ವಿರೋಧಿಸಿದರು. “ಕೇಂದ್ರ ಸರ್ಕಾರ ಮಾಡಲು ಹೊರಟಿರುವ ತಿದ್ದುಪಡಿಗಳು ಒಕ್ಕೂಟ ಸಹಕಾರ ತತ್ವಕ್ಕೆ ವಿರುದ್ಧವಾಗಿದೆ” ಎಂದರು.

ಹೊಸ ತಿದ್ದುಪಡಿಗಳಿಂದಾಗುವ ಸಮಸ್ಯೆಗಳನ್ನು ಸೆಂಥಿಲ್ ವಿವರಿಸಿದರು.

“ರಾಜ್ಯದಲ್ಲಿ ಒಂದು ಮುಖ್ಯವಾದ ಕೆಲಸದಲ್ಲಿ ತೊಡಗಿಸಿಕೊಂಡಿರುವ ಐಎಎಸ್‌ ಅಧಿಕಾರಿಯನ್ನು ಯಾವುದೇ ಮುನ್ನೆಚ್ಚರಿಕೆ ನೀಡದೆ ಕೆಲಸದಿಂದ ತೆಗೆದು ಕೇಂದ್ರಕ್ಕೆ ಕರೆಸಿಕೊಳ್ಳುವ ಅವಕಾಶವನ್ನು ಈ ತಿದ್ದುಪಡಿಗಳು ಕೇಂದ್ರ ಸರ್ಕಾರಕ್ಕೆ ನೀಡುತ್ತವೆ” ಎಂದು ತಿಳಿಸಿದರು.

“ರಾಜ್ಯದಲ್ಲಿ ಕೇಂದ್ರಕ್ಕೆ ವಿರೋಧಿಯಾಗಿರುವ ಪಕ್ಷ ಅಧಿಕಾರದಲ್ಲಿದ್ದಾಗ ರಾಜ್ಯ ಸರ್ಕಾರಕ್ಕೆ ಕಿರುಕುಳ ನೀಡಲೆಂದೇ ಕೆಲವು ಮುಖ್ಯವಾದ ಅಧಿಕಾರಿಗಳನ್ನು ಕೇಂದ್ರ ಕರೆಸಿಕೊಳ್ಳುವ ಅವಕಾಶ ಈ ತಿದ್ದುಪಡಿ ನಿಯಮಗಳಲ್ಲಿದೆ” ಎಂದು ಹೇಳಿದರು.

“ಈ ರೀತಿಯ ಅಧಿಕಾರವು ಕೇಂದ್ರ ಸರ್ಕಾರಕ್ಕೆ ಸಿಕ್ಕಿದಾಗ ಐಎಎಸ್ ಅಧಿಕಾರಿಗಳು ಹೆದರಿಕೊಂಡೇ ಇರಬೇಕಾಗುತ್ತದೆ. ನಮ್ಮನ್ನು ರಾಜ್ಯದಿಂದ ತೆಗೆದು ಕೇಂದ್ರಕ್ಕೆ ಕರೆಸಿಕೊಂಡು ಹಿಂಸೆ ಕೊಡುತ್ತಾರೆ ಎಂಬ ಭಯದಲ್ಲೇ ಐಎಎಸ್‌ಗಳು ಕೆಲಸ ಮಾಡಬೇಕಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಕೇಂದ್ರದಲ್ಲಿ ಕೆಲಸ ಮಾಡುವ ಐಎಎಸ್ ಅಧಿಕಾರಿಗಳ ಪ್ರಮಾಣ ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಈ ಸಮಸ್ಯೆ ಏಕೆ ತಲೆದೋರಿದೆ ಎಂದರೆ, ಕೇಂದ್ರದಲ್ಲಿ ಇವರೊಂದಿಗೆ ಕೆಲಸ ಮಾಡಲು ಐಎಎಸ್‌ ಅಧಿಕಾರಿಗಳು ಸಿದ್ಧವಿಲ್ಲ. ಎಲ್ಲರೂ ಓಡಿ ಹೋಗುತ್ತಿದ್ದಾರೆ. ಕೇಂದ್ರ ಸರ್ಕಾರದ ವರ್ತನೆಯಿಂದ ಬೇಸತ್ತು ಅಧಿಕಾರಿಗಳು ರಾಜ್ಯದಲ್ಲೇ ಉಳಿಯಲು ಬಯಸುತ್ತಿದ್ದಾರೆ” ಎಂದರು.

“ಯಾವುದೇ ಸಚಿವಾಲಯದಲ್ಲೂ ತಮ್ಮ ಅಭಿಪ್ರಾಯವನ್ನು ಹೇಳಲು ಐಎಎಸ್‌ಗಳಿಗೆ ಸಾಧ್ಯವಾಗುತ್ತಿಲ್ಲ. ಯಾವುದೇ ಸಚಿವಾಲಯದ ಸಚಿವರ ಅಭಿಪ್ರಾಯಗಳನ್ನು ಪ್ರಧಾನಿಯವರು ಆಲಿಸುವುದಿಲ್ಲ. ಎಲ್ಲವೂ ಪ್ರಧಾನಿ ಕೇಂದ್ರಿತವಾಗಿ ನಡೆಯುತ್ತಿವೆ. ಪ್ರಧಾನಿ ಹೇಳಿದಂತೆ ಕಡತಗಳನ್ನು ಮಾಡಬೇಕಾಗಿದೆ. ಯಾರ ಬಗ್ಗೆಯೂ ಏನನ್ನೂ ಅಧಿಕಾರಿಗಳು ಹೇಳುವಂತಿಲ್ಲ. ಭಯದ ವಾತಾವರಣದಲ್ಲಿ ಕೆಲಸ ಮಾಡುತ್ತಿದ್ದಾರೆ. ಏನಾದರೂ ಒಂದು ಸಣ್ಣ ಅಪಾದನೆ ಬಂದರೆ ಅಧಿಕಾರಿಯ ವೃತ್ತಿಬದುಕನ್ನೇ ಮುಗಿಸಿಬಿಡುತ್ತಾರೆ. ಇಂತಹ ಕಷ್ಟವನ್ನು ಏಕೆ ಮೈಮೇಲೆ ಎಳೆದುಕೊಳ್ಳಬೇಕು ಎಂದು ಐಎಎಸ್ ಅಧಿಕಾರಿಗಳು ಭಾವಿಸುತ್ತಾರೆ” ಎನ್ನುತ್ತಾರೆ ಸಸಿಕಾಂತ್‌.

“ಕೇಂದ್ರ ಸರ್ಕಾರದಲ್ಲಿ ಕೆಲಸ ಮಾಡುವುದು ಪ್ರತಿಯೊಬ್ಬ ಐಎಎಸ್ ಅಧಿಕಾರಿಗೂ ಹೆಮ್ಮೆಯ ವಿಷಯವಾಗಿರುತ್ತದೆ. ಆದರೆ ಅವಕಾಶ ಇದ್ದರೂ ಕೇಂದ್ರಕ್ಕೆ ಹೋಗುತ್ತಿಲ್ಲ ಎಂಬುದಕ್ಕೆ ಏನು ಕಾರಣ? ಐಎಎಸ್‌ ಅಧಿಕಾರಿಗಳು ಈಗ ಕಡ್ಡಾಯವಾಗಿ ಕೇಂದ್ರಕ್ಕೆ ಬರಬೇಕು ಎಂದು ನಿಯಮ ರೂಪಿಸಲು ಹೊರಟಿರುವುದು ಎಷ್ಟು ಸರಿ?” ಎಂದು ಪ್ರಶ್ನಿಸಿದರು.

“ಜನರ ಜೊತೆಯಲ್ಲಿ ನೇರ ಸಂಪರ್ಕದಲ್ಲಿರುವುದು ರಾಜ್ಯ ಸರ್ಕಾರಗಳು ಮಾತ್ರ. ಕೇಂದ್ರಕ್ಕೆ ಜನ ಸಂಪರ್ಕ ಸಾಧ್ಯವಾಗದು. ರಾಜ್ಯದಲ್ಲಿ ಕೆಲಸ ಮಾಡಿದ ಐಎಎಸ್‌ ಅಧಿಕಾರಿಗಳು ಕೇಂದ್ರಕ್ಕೆ ಬರಬೇಕೆಂಬ ವ್ಯವಸ್ಥೆಯನ್ನು ನಮ್ಮ ಒಕ್ಕೂಟ ವ್ಯವಸ್ಥೆ ಮಾಡಿಕೊಂಡಿದೆ ಎಂದರೆ, ಜನರ ಜೊತೆಯಲ್ಲಿ ಕೆಲಸ ಮಾಡಿದವರು ಕೇಂದ್ರದಲ್ಲಿ ಇರಬೇಕೆಂಬ ಉದ್ದೇಶದಿಂದಷ್ಟೇ. ಎಲ್ಲವಾದರೆ ನೇರವಾಗಿ ನೇಮಕಾತಿಯನ್ನು ಅವರಾಗಿಯೇ ಮಾಡಿಕೊಳ್ಳಬಹುದಿತ್ತಲ್ಲ” ಎಂದರು.

“ಆಲ್‌ ಇಂಡಿಯಾ ಸರ್ವೀಸ್‌ ಬಂದಿರುವ ಕಾರಣವೇ ಜನರೊಂದಿಗೆ ಅಧಿಕಾರಿಗಳು ಇರಬೇಕೆಂದು. ಒಂದು ಪಾಲಿಸಿ ಜನರ ಮೇಲೆ ಹೇಗೆ ಪರಿಣಾಮ ಬೀರಿದ ಎಂಬುದು ಜನರ ಜೊತೆ ಕೆಲಸ ಮಾಡಿದವರಿಗೆ ತಿಳಿಯುತ್ತದೆ. ಮುಖ್ಯವಾಗಿ ಹೇಳಬೇಕೆಂದರೆ ಕೇಂದ್ರಕ್ಕಿಂತ ರಾಜ್ಯ ಸರ್ಕಾರಗಳಲ್ಲಿಯೇ ಐಎಎಸ್ ಅಧಿಕಾರಿಗಳ ಸೇವೆ ಮುಖ್ಯವಾಗಿರುತ್ತದೆ” ಎಂದು ಅಭಿಪ್ರಾಯಪಟ್ಟರು.


ಇದನ್ನೂ ಓದಿರಿ: ಐಎಎಸ್‌ ನಿಯಮಗಳ ಬದಲಾವಣೆ ಪ್ರಸ್ತಾಪ: ಕೇಂದ್ರದ ನಡೆಗೆ ಸಿಎಂಗಳ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ರಾಜ್ಯ ಸರ್ಕಾರಗಳಿಗೆ ಇರುವ ಅಧಿಕಾರಗಳನ್ನು ಕಿತ್ತುಕೊಳ್ಳುವ ಒಕ್ಕೂಟ ಸರ್ಕಾರದ ಈ ಕ್ರಮ ಕಂಡನಾರ್ಹ.

  2. ಸಸಿಕಾಂತ್ ಸೆಂತಿಲ್ ವಾದ ಸರಿಯಾಗಿದೆ. ಅದರೊಂದಿಗೆ ಕೇಂದ್ರವು, ರಾಜ್ಯ ಸರ್ಕಾರವನ್ನು ಕಡೆಗಣಿಸಿ, ರಾಜ್ಯಗಳ ಅಭಿವೃದ್ಧಿ ಕೆಲಸಗಳ ಬಗ್ಗೆ ವಿವರಣೆ ಕೇಳಲು, ಕೇಂದ್ರದ ಯೋಜನೆಗಳನ್ನು ಕಾರ್ಯಗತ ಮಾಡಲು, ರಾಜ್ಯ ಸೇವೆಯಲ್ಲಿ ನಿಯೋಜಿತರಾದ ಐಎಎಸ್ ಅಧಿಕಾರಿಗಳಲ್ಲಿ ನೇರವಾಗಿ ಚರ್ಚಿಸುವುದು ಎಷ್ಟು ಸರಿ? ಇದು, ರಾಜ್ಯ ಸರ್ಕಾರವೊಂದನ್ನು ಮತ್ತು ಅದನ್ನು ಆಡಳಿತ ಮಾಡಲು ನಿಯೋಜಿಸಿದ ಜನರನ್ನು ಅವಮಾನಿಸಿದಂತಲ್ಲವೆ?

  3. ಒಕ್ಕೂಟ ಸರ್ಕಾರ ದಲ್ಲಿ , ಅಂದರೆ ನೇರವಾಗಿ ಆ ಸರ್ಕಾರದ ಅಡಿಯಲ್ಲಿ ಮಾತ್ರ, ಕೆಲಸ ಮಾಡಲೆಂದೇ ಆರಂಭದಲ್ಲಿಯೇ ಅಧಿಕಾರಿಗಳನ್ನು ಆಯ್ಕೆ ಮಾಡಿಕೊಳ್ಳ ಬಹುದು. ಐಎಎಸ್ ಪರೀಕ್ಷೆ ಬರೆಯುವಾಗಲೇ ಅಭ್ಯರ್ಥಿಗಳು ದೆಹಲಿ ಸರ್ಕಾರದ ಅಡಿಯಲ್ಲಿ ಕೆಲಸಮಾಡುವ ತಮ್ಮ ಇಚ್ಛೆಯನ್ನು ವ್ಯಕಪಡಿಸ ಬಹುದು. ವಿವಿಧ ರಾಜ್ಯಗಳ ಕ್ಯಾಡರ್ಬಗಳು ಇದ್ದಂತೆ ಒಕ್ಕೂಟ ಸರ್ಕಾರದ ಕ್ಯಾಡರ್ ಒಂದನ್ನು ಸೃಷ್ಟಿಸುವುದರ ಮೂಲಕ ಈ ಸಮಸ್ಯೆ ಗೆ ಪರಿಹಾರವನ್ನು ಕಂಡುಕೊಳ್ಳಲು ಸಾಧ್ಯವೇ?

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...