Homeಮುಖಪುಟಸೂಕ್ಷ್ಮತೆ ಇಲ್ಲದ ಕೇಂದ್ರ ಸರ್ಕಾರ ಬಿಕ್ಕಟ್ಟಿನ ಸಮುಯದಲ್ಲೂ ತೈಲ ಬೆಲೆ ಹೆಚ್ಚಿಸಿದೆ: ಸೋನಿಯಾ ಗಾಂಧಿ

ಸೂಕ್ಷ್ಮತೆ ಇಲ್ಲದ ಕೇಂದ್ರ ಸರ್ಕಾರ ಬಿಕ್ಕಟ್ಟಿನ ಸಮುಯದಲ್ಲೂ ತೈಲ ಬೆಲೆ ಹೆಚ್ಚಿಸಿದೆ: ಸೋನಿಯಾ ಗಾಂಧಿ

- Advertisement -
- Advertisement -

ಕೊರೊನಾ ಲಾಕ್ ಡೌನ್ ಸಮಯದಲ್ಲಿ ತೈಲ ಬೆಲೆ ಹೆಚ್ಚಳ ಮಾಡಿರುವುದು ಕೇಂದ್ರ ಸರ್ಕಾರದ ಸಂಪೂರ್ಣ ಅಸೂಕ್ಷ್ಮತೆಯನ್ನು ತೋರಿಸುತ್ತದೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಸೋನಿಯಾ ಜನರು ಸಂಕಷ್ಟದಲ್ಲಿ ಸಿಲುಕಿರುವ ಸಂದರ್ಭದಲ್ಲಿ ನಿರಂತರ 10 ನೇ ದಿನವೂ ಪೆಟ್ರೋಲ್ ಮತ್ತು ಡಿಸೆಲ್ ದರ ಏರಿಕೆಯಾಗಿರುವುದು ಜನರಿಗೆ ಹೆಚ್ಚುವರಿ ಹೊರೆ ಹಾಕಿದಂತಾಗಿದೆ ಎಂದು ಹೇಳಿದ್ದಾರೆ.

ಕೊರೊನಾ ಸೋಂಕಿನ ಸಮಸ್ಯೆಯಿಂದ ಭಾರತದ ಸಾರ್ವಜನಿಕ ಆರೋಗ್ಯ, ಆರ್ಥಿಕತೆ ಮತ್ತು ಸಾಮಾಜಿಕ ಸವಾಲುಗಳು ಜನರನ್ನು ಕಾಡುತ್ತಿವೆ. ಮಾರ್ಚ್ ತಿಂಗಳಿಂದ ಕೊರೊನ ಸೋಂಕು ಆರಂಭವಾದ ಬಿಕ್ಕಟ್ಟಿನಿಂದ ಜನರು ಸಂಕಟಷ್ಟಕ್ಕೆ ಸಿಲುಕಿರುವುದು ನನಗೆ ಯಾತನೆಯನ್ನುಂಟು ಮಾಡಿದೆ. ಸರ್ಕಾರದ ಅಸೂಕ್ಷ್ಮತೆಯಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗಿದೆ ಎಂದು ದೂರಿದ್ದಾರೆ.

ಬೆಲೆ ಏರಿಕೆ ಸಂಬಂಧ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುತ್ತದೆಂದು ನಾನು ಎದುರು ನೋಡುತ್ತಿದ್ದೇನೆ. ಕೊರೊನಾ ಆರ್ಥಿಕ ಬಿಕ್ಕಟ್ಟಿನಿಂದ ಲಕ್ಷಾಂತರ ಮಂದಿ ಉದ್ಯೋಗವಿಲ್ಲದೆ ಸಂಕಷ್ಟದಲ್ಲೇ ಜೀವನ ದೂಡುವಂತಹ ಪರಿಸ್ಥಿತಿ ಬಂದಿದೆ.

ಸಣ್ಣ, ದೊಡ್ಡ ವ್ಯಾಪಾರಸ್ಥರು ಮತ್ತು ಮಧ್ಯಮ ವರ್ಗದವರು ಆದಾಯವಿಲ್ಲದೆ ತೊಂದರೆಯಲ್ಲಿದ್ದಾರೆ. ರೈತರು ಸಹ ಬದುಕು ನಡೆಸಲು ಹೋರಾಟ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ತೈಲದ ಮೇಲೆ ಅಬಕಾರಿ ಸುಂಕ ಹೆಚ್ಚಿಸಿ ಜನಸಾಮಾನ್ಯರ ಮೇಲೆ ಬರೆಹಾಕಿದೆ ಎಂದು ಆಪಾದಿಸಿದ್ದಾರೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಕಳೆದ ವಾರ ಭಾರೀ ಇಳಿಕೆಯಾಗಿತ್ತು. ಆದರೆ ಅದರ ಲಾಭವನ್ನು ಜನರಿಗೆ ತಲುಪಿಸಲೇ ಇಲ್ಲ. ಬದಲಿಗೆ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅಬಕಾರಿ ಸುಂಕ ಹೇರಿ 2 ಲಕ್ಷ 60 ಸಾವಿರ ಕೋಟಿ ಆದಾಯದ ನಿರೀಕ್ಷೆಯಲ್ಲಿದೆ ಎಂದು ಹೇಳಿದ್ದಾರೆ.

ಜನರ ನರಳಾಟ ಹೆಚ್ಚಾಗಿದೆ. ಆದರೂ ಸರ್ಕಾರ ಕ್ರಮ ವಹಿಸಿಲಿಲ್ಲ. ಹಾಗಾಗಿ ಜನರನ್ನು ಭಯ ಮತ್ತು ಅಭದ್ರತೆ ಬಿಡದೆ ಕಾಡುತ್ತಿದೆ. ಈಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವುದು ಹೆಚ್ಚುವರಿ ಹೊರೆ ಹೊರಿಸಿದಂತಾಗಿದೆ.

ಕಳೆದ 6 ವರ್ಷಗಳಿಂದ ಅಬಕಾರಿ ಸುಂಕ ಹೆಚ್ಚಳ ಮಾಡುತ್ತಲೇ ಬಂದಿದೆ. ಪೆಟ್ರೋಲ್ ಮೇಲೆ 23.78ರೂ, ಡೀಸೆಲ್ ಮೇಲೆ 28.37 ರೂ ಹೇರಲಾಗಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕ 258% ರಷ್ಟು ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ 820% ರಷ್ಟು ಹೆಚ್ಚಿಸಿದೆ. ಇದರಿಂದ 18 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ತಿಳಿಸಿದ್ದಾರೆ.

ಕಚ್ಚಾರೈಲ ಬೆಲೆ ಕಡಿಮೆಯಾಗಿದ್ದರೂ ಅದರ ಲಾಭವನ್ನು ದೇಶದ ಜನರಿಗೆ ವರ್ಗಾಯಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಪ್ರಧಾನಿಗೆ ಬರೆದಿರುವ ಪತ್ರದಲ್ಲಿ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.


ಓದಿ: ಇದು ರಾಜಕೀಯ ಮಾಡುವ ಸಮಯವಲ್ಲ: ಬಡಜನರಿಗೆ ಸಹಾಯ ಮಾಡಲು ನರೇಗ ಬಳಸಿ- ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...