Homeಮುಖಪುಟಸೂಕ್ಷ್ಮತೆ ಇಲ್ಲದ ಕೇಂದ್ರ ಸರ್ಕಾರ ಬಿಕ್ಕಟ್ಟಿನ ಸಮುಯದಲ್ಲೂ ತೈಲ ಬೆಲೆ ಹೆಚ್ಚಿಸಿದೆ: ಸೋನಿಯಾ ಗಾಂಧಿ

ಸೂಕ್ಷ್ಮತೆ ಇಲ್ಲದ ಕೇಂದ್ರ ಸರ್ಕಾರ ಬಿಕ್ಕಟ್ಟಿನ ಸಮುಯದಲ್ಲೂ ತೈಲ ಬೆಲೆ ಹೆಚ್ಚಿಸಿದೆ: ಸೋನಿಯಾ ಗಾಂಧಿ

- Advertisement -
- Advertisement -

ಕೊರೊನಾ ಲಾಕ್ ಡೌನ್ ಸಮಯದಲ್ಲಿ ತೈಲ ಬೆಲೆ ಹೆಚ್ಚಳ ಮಾಡಿರುವುದು ಕೇಂದ್ರ ಸರ್ಕಾರದ ಸಂಪೂರ್ಣ ಅಸೂಕ್ಷ್ಮತೆಯನ್ನು ತೋರಿಸುತ್ತದೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಸೋನಿಯಾ ಜನರು ಸಂಕಷ್ಟದಲ್ಲಿ ಸಿಲುಕಿರುವ ಸಂದರ್ಭದಲ್ಲಿ ನಿರಂತರ 10 ನೇ ದಿನವೂ ಪೆಟ್ರೋಲ್ ಮತ್ತು ಡಿಸೆಲ್ ದರ ಏರಿಕೆಯಾಗಿರುವುದು ಜನರಿಗೆ ಹೆಚ್ಚುವರಿ ಹೊರೆ ಹಾಕಿದಂತಾಗಿದೆ ಎಂದು ಹೇಳಿದ್ದಾರೆ.

ಕೊರೊನಾ ಸೋಂಕಿನ ಸಮಸ್ಯೆಯಿಂದ ಭಾರತದ ಸಾರ್ವಜನಿಕ ಆರೋಗ್ಯ, ಆರ್ಥಿಕತೆ ಮತ್ತು ಸಾಮಾಜಿಕ ಸವಾಲುಗಳು ಜನರನ್ನು ಕಾಡುತ್ತಿವೆ. ಮಾರ್ಚ್ ತಿಂಗಳಿಂದ ಕೊರೊನ ಸೋಂಕು ಆರಂಭವಾದ ಬಿಕ್ಕಟ್ಟಿನಿಂದ ಜನರು ಸಂಕಟಷ್ಟಕ್ಕೆ ಸಿಲುಕಿರುವುದು ನನಗೆ ಯಾತನೆಯನ್ನುಂಟು ಮಾಡಿದೆ. ಸರ್ಕಾರದ ಅಸೂಕ್ಷ್ಮತೆಯಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗಿದೆ ಎಂದು ದೂರಿದ್ದಾರೆ.

ಬೆಲೆ ಏರಿಕೆ ಸಂಬಂಧ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುತ್ತದೆಂದು ನಾನು ಎದುರು ನೋಡುತ್ತಿದ್ದೇನೆ. ಕೊರೊನಾ ಆರ್ಥಿಕ ಬಿಕ್ಕಟ್ಟಿನಿಂದ ಲಕ್ಷಾಂತರ ಮಂದಿ ಉದ್ಯೋಗವಿಲ್ಲದೆ ಸಂಕಷ್ಟದಲ್ಲೇ ಜೀವನ ದೂಡುವಂತಹ ಪರಿಸ್ಥಿತಿ ಬಂದಿದೆ.

ಸಣ್ಣ, ದೊಡ್ಡ ವ್ಯಾಪಾರಸ್ಥರು ಮತ್ತು ಮಧ್ಯಮ ವರ್ಗದವರು ಆದಾಯವಿಲ್ಲದೆ ತೊಂದರೆಯಲ್ಲಿದ್ದಾರೆ. ರೈತರು ಸಹ ಬದುಕು ನಡೆಸಲು ಹೋರಾಟ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ತೈಲದ ಮೇಲೆ ಅಬಕಾರಿ ಸುಂಕ ಹೆಚ್ಚಿಸಿ ಜನಸಾಮಾನ್ಯರ ಮೇಲೆ ಬರೆಹಾಕಿದೆ ಎಂದು ಆಪಾದಿಸಿದ್ದಾರೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಕಳೆದ ವಾರ ಭಾರೀ ಇಳಿಕೆಯಾಗಿತ್ತು. ಆದರೆ ಅದರ ಲಾಭವನ್ನು ಜನರಿಗೆ ತಲುಪಿಸಲೇ ಇಲ್ಲ. ಬದಲಿಗೆ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅಬಕಾರಿ ಸುಂಕ ಹೇರಿ 2 ಲಕ್ಷ 60 ಸಾವಿರ ಕೋಟಿ ಆದಾಯದ ನಿರೀಕ್ಷೆಯಲ್ಲಿದೆ ಎಂದು ಹೇಳಿದ್ದಾರೆ.

ಜನರ ನರಳಾಟ ಹೆಚ್ಚಾಗಿದೆ. ಆದರೂ ಸರ್ಕಾರ ಕ್ರಮ ವಹಿಸಿಲಿಲ್ಲ. ಹಾಗಾಗಿ ಜನರನ್ನು ಭಯ ಮತ್ತು ಅಭದ್ರತೆ ಬಿಡದೆ ಕಾಡುತ್ತಿದೆ. ಈಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವುದು ಹೆಚ್ಚುವರಿ ಹೊರೆ ಹೊರಿಸಿದಂತಾಗಿದೆ.

ಕಳೆದ 6 ವರ್ಷಗಳಿಂದ ಅಬಕಾರಿ ಸುಂಕ ಹೆಚ್ಚಳ ಮಾಡುತ್ತಲೇ ಬಂದಿದೆ. ಪೆಟ್ರೋಲ್ ಮೇಲೆ 23.78ರೂ, ಡೀಸೆಲ್ ಮೇಲೆ 28.37 ರೂ ಹೇರಲಾಗಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕ 258% ರಷ್ಟು ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ 820% ರಷ್ಟು ಹೆಚ್ಚಿಸಿದೆ. ಇದರಿಂದ 18 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ತಿಳಿಸಿದ್ದಾರೆ.

ಕಚ್ಚಾರೈಲ ಬೆಲೆ ಕಡಿಮೆಯಾಗಿದ್ದರೂ ಅದರ ಲಾಭವನ್ನು ದೇಶದ ಜನರಿಗೆ ವರ್ಗಾಯಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಪ್ರಧಾನಿಗೆ ಬರೆದಿರುವ ಪತ್ರದಲ್ಲಿ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.


ಓದಿ: ಇದು ರಾಜಕೀಯ ಮಾಡುವ ಸಮಯವಲ್ಲ: ಬಡಜನರಿಗೆ ಸಹಾಯ ಮಾಡಲು ನರೇಗ ಬಳಸಿ- ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...