Homeಎಕಾನಮಿಅಶಿಸ್ತಿನ ಕ್ರಮ: ಅತಿ ಶ್ರೀಮಂತರಿಗೆ ಕೊರೊನಾ ತೆರಿಗೆ ವಿಧಿಸುವ IRS ಪ್ರಸ್ತಾಪ ತಿರಸ್ಕರಿಸಿದ ಕೇಂದ್ರ

ಅಶಿಸ್ತಿನ ಕ್ರಮ: ಅತಿ ಶ್ರೀಮಂತರಿಗೆ ಕೊರೊನಾ ತೆರಿಗೆ ವಿಧಿಸುವ IRS ಪ್ರಸ್ತಾಪ ತಿರಸ್ಕರಿಸಿದ ಕೇಂದ್ರ

ಇಂತಹ ‘ಕೆಟ್ಟ ಕಲ್ಪನೆಗಳನ್ನು’ ಸಾರ್ವಜನಿಕವಾಗಿ ಬರೆದಿದ್ದಕ್ಕಾಗಿ ಈ ಅಧಿಕಾರಿಗಳಿಂದ ವಿವರಣೆ ಪಡೆಯುವಂತೆ ಹಣಕಾಸು ಸಚಿವಾಲಯ ಸಿಬಿಡಿಟಿ ಅಧ್ಯಕ್ಷರಿಗೆ ನಿರ್ದೇಶನ ನೀಡಿದೆ.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದ ಉಂಟಾಗಿರುವ ಆರ್ಥಿಕ ಕುಸಿತವನ್ನು ನಿವಾರಿಸಲು ಸರ್ಕಾರವು ಅತಿ ಶ್ರೀಮಂತರಿಗೆ ತೆರಿಗೆಗಳನ್ನು ಹೆಚ್ಚಿಸಬೇಕು ಎಂದು ಭಾರತೀಯ ಕಂದಾಯ ಸೇವೆಯ ಅಧಿಕಾರಿಗಳು ಮಾಡಿದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ಭಾನುವಾರ ತಿರಸ್ಕರಿಸಿದೆ.

ಫೋರ್ಸ್ (Fiscal Options and Response to Covid-19 Epidemic) ಎಂಬ ಶೀರ್ಷಿಕೆಯ 44 ಪುಟಗಳ ವರದಿಯಲ್ಲಿ, ತಮ್ಮನ್ನು “ಟೀಮ್ ಫೋರ್ಸ್” ಎಂದು ಕರೆದುಕೊಳ್ಳುವ ಅಧಿಕಾರಿಗಳು ಆದಾಯ ಉತ್ಪಾದನೆಗೆ ಹಲವಾರು ಗಂಭೀರ ಸಲಹೆಗಳನ್ನು ನೀಡಿದ್ದರು. ಅತಿ ಶ್ರೀಮಂತರ ಮೇಲಿನ ತೆರಿಗೆಯನ್ನು ಪ್ರಸ್ತುತ 30% ರಿಂದ 40% ಕ್ಕೆ ಹೆಚ್ಚಿಸುವುದು ಮತ್ತು ವಿದೇಶಿ ಕಂಪನಿಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸುವುದು ಇದರಲ್ಲಿ ಸೇರಿದೆ.

2019-2020ರ ಒಟ್ಟು ತೆರಿಗೆ ಆದಾಯದ ಅಂದಾಜು (gross tax revenue) ಹಿಂದಿನ ಬಜೆಟ್‌ನಲ್ಲಿ ಘೋಷಿಸಿದ 24.6 ಲಕ್ಷ ಕೋಟಿ ರೂ.ಗಳಿಂದ 21.6 ಲಕ್ಷ ರೂ.ಗೆ ಕಡಿಮೆ ಪರಿಷ್ಕರಿಸಲಾಗಿದೆ” ಎಂದು ವರದಿ ತಿಳಿಸಿದೆ. ಮುಂಬರುವ 2020-’21ರ ಆರ್ಥಿಕ ವರ್ಷಕ್ಕೂ ಸಹ, ಒಟ್ಟು ತೆರಿಗೆ ಆದಾಯದಲ್ಲಿ 12% ಹೆಚ್ಚಳ ಅಂದರೆ 24.2 ಲಕ್ಷ ಕೋಟಿ ರೂ. ನಿರೀಕ್ಷಿಸುತ್ತಿದೆ. ಆದಾಗ್ಯೂ, ಕೋವಿಡ್ -19 ರೊಂದಿಗೆ ಆರ್ಥಿಕತೆಯ ಕುಸಿತವು ಆದಾಯ ಸಂಗ್ರಹಣೆಯನ್ನು ವಿಶೇಷವಾಗಿ ನೇರ ತೆರಿಗೆಯನ್ನು ಸಾಕಷ್ಟು ಕಡಿಮೆ ಮಾಡಲಿದೆ.

ಕೊರೊನಾ ಪರಿಹಾರ ಕಾರ್ಯಗಳಿಗೆ ಧನಸಹಾಯ ಹೆಚ್ಚು ಮಾಡಲು 10 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಉಳ್ಳವರಿಗೆ 4% ಕೋವಿಡ್ -19 ರಿಲೀಫ್ ಸೆಸ್ ವಿಧಿಸಲು ಅವರು ಸಲಹೆ ನೀಡಿದ್ದರು.

ಆದರೆ ಈ ವರದಿಯನ್ನು ಕೇಂದ್ರವು ತಿರಸ್ಕರಿಸಿದೆ. ಇದೊಂದು ಅಶಿಸ್ತಿನ ದುಷ್ಕೃತ್ಯ ಎಂದು ಕರೆದಿದ್ದು, ನಿಮ್ಮಿಂದ ಸಲಹೆಗಳನ್ನು ಕೋರಿಲ್ಲ ಮತ್ತು ಅದನ್ನು ಸಿದ್ಧಪಡಿಸುವುದು ಭಾರತೀಯ ಕಂದಾಯ ಸೇವೆಯ ಕರ್ತವ್ಯವಲ್ಲ ಎಂದು Income Tax India ಹೇಳಿದೆ.

ವರದಿಯನ್ನು ಸಲ್ಲಿಸಿದ ಕೇಂದ್ರ ನೇರ ತೆರಿಗೆ ಮಂಡಳಿಯ ಅಧ್ಯಕ್ಷರಿಗೆ ಸಂಘದ ಪದಾಧಿಕಾರಿಗಳಿಂದ ಈ ವಿಷಯದ ಬಗ್ಗೆ ವಿವರಣೆ ಪಡೆಯಲು ಕೋರಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದು ಸಹಜ. ಏಕೆಂದರೆ ಈ ಕೇಂದ್ರ ಸರ್ಕಾರ, ಯಾವತ್ತಿಗೂ ಶ್ರೀಮಂತರ ಪರವೇ ಹೊರತು ಬಡವರ ಪರ ಅಲ್ಲ.

    • ಹೌದು.
      ಬಡವರು ಹೊಟ್ಟೆಗೆ ಇಲ್ಲದೆ ಸಾಯುತ್ತಿರುವಾಗ.
      ಶ್ರೀಮಂತರ ಸಾಲವನ್ನು ಮಣ್ಣಮಾಡಿದೆಯಂತೆ.

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...