Homeಮುಖಪುಟಉಕ್ರೇನ್‌ನಲ್ಲಿನ ಭಾರತೀಯ ವಿದ್ಯಾರ್ಥಿಗಳ ಸ್ಥಿತಿಗೆ ಕೇಂದ್ರ ಬಿಜೆಪಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

ಉಕ್ರೇನ್‌ನಲ್ಲಿನ ಭಾರತೀಯ ವಿದ್ಯಾರ್ಥಿಗಳ ಸ್ಥಿತಿಗೆ ಕೇಂದ್ರ ಬಿಜೆಪಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

- Advertisement -
- Advertisement -

ರಷ್ಯಾ ಉಕ್ರೇನ್ ಮೇಲೆ ದಾಳಿ ಮಾಡುತ್ತಿರುವ ಸಂದರ್ಭದಲ್ಲಿ ಉಕ್ರೇನ್‌ನಲ್ಲಿ ಹಲವು ಭಾರತೀಯ ವಿದ್ಯಾರ್ಥಿಗಳು ಸಿಕ್ಕಿಕೊಂಡಿದ್ದಾರೆ. ಕರ್ನಾಟಕ ಮೂಲದ ವಿದ್ಯಾರ್ಥಿಯೊಬ್ಬ ಸಾವನಪ್ಪಿದ್ದಾನೆ. ಈ ಎಲ್ಲಾ ಸಂದಿಗ್ದ ಪರಿಸ್ಥಿತಿಗೆ ಕೇಂದ್ರ ಬಿಜೆಪಿ ಸರ್ಕಾರದ ಅನಿಶ್ಚಿತ ಮತ್ತು ಬೇಜವಾಬ್ದಾರಿ ನೀತಿ-ನಿಲುವುಗಳೂ ಕಾರಣ ಎಂದು ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕಳೆದ ಕೆಲವು ತಿಂಗಳಿಂದ ಯುಕ್ರೇನ್ – ರಷ್ಯಾ ನಡುವೆ ಯಾವುದೇ ಕ್ಷಣದಲ್ಲಿ ಯುದ್ಧ ಸ್ಪೋಟವಾಗಬಹುದೆಂಬ ವರದಿಗಳ ಹಿನ್ನೆಲೆಯಲ್ಲಿ ಹಲವಾರು ದೇಶಗಳು ತಮ್ಮ ಪ್ರಜೆಗಳನ್ನು ಸುರಕ್ಷಿತವಾಗಿ ವಾಪಸು ಕರೆಸಿಕೊಳ್ಳುವ ಪ್ರಯತ್ನ ಪ್ರಾರಂಭಿಸಿತ್ತು. ಆದರೆ ಭಾರತ ಮಾತ್ರ ಯುದ್ಧ ಶುರುವಾಗುವವರೆಗೆ ಭಾರತೀಯರ ಸುರಕ್ಷತೆ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಮೋದಿಯವರು ಮುನ್ನೆಚ್ಚರಿಕೆ ವಹಿಸಲಿಲ್ಲ ಎಂದು ದೂರಿದ್ದಾರೆ.

ಕೇಂದ್ರ ಬಿಜೆಪಿ ಸರ್ಕಾರದ ಈ ನಿರ್ಲಕ್ಷ್ಯದಿಂದಾಗಿಯೇ ಕರ್ನಾಟಕದ ಯುವ ವಿದ್ಯಾರ್ಥಿ ನವೀನ್ ಪ್ರಾಣ ಕಳೆದುಕೊಂಡು, ಆತನ ಹೆತ್ತವರು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ಆ ವಿದ್ಯಾರ್ಥಿಯ ಸಹಪಾಠಿಗಳು ಮತ್ತು ಹೆತ್ತವರ ಹೇಳಿಕೆಗಳೇ ಕೇಂದ್ರ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿವೆ ಪ್ರಧಾನಿ ಮೋದಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವರು ಸಕಾಲದಲ್ಲಿ ಈ ವಿದ್ಯಾರ್ಥಿಗಳ ನೆರವಿಗೆ ಧಾವಿಸಿ, ಅವರನ್ನು ಭಾರತಕ್ಕೆ ಕರೆತಂದಿದ್ದರೆ ಅಮೂಲ್ಯವಾದ ಜೀವವೊಂದು ಉಳಿಯುತ್ತಿತ್ತು ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ನಮ್ಮೊಳಗಿನ ರಾಜಕೀಯ ಭಿನ್ನಾಭಿಪ್ರಾಯಗಳು, ಸೈದ್ಧಾಂತಿಕ ವ್ಯತ್ಯಾಸಗಳು ಏನೇ ಇದ್ದರೂ ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಬಿಜೆಪಿ ಸರ್ಕಾರ ಕೈಗೊಳ್ಳುವ ನಿರ್ಧಾರವನ್ನು ಬೆಂಬಲಿಸುವುದು ನಮ್ಮ ಕರ್ತವ್ಯವಾಗಿದೆ. ಆದರೆ ಯುಕ್ರೇನ್‌ನ ಬಹಳಷ್ಟು ಪ್ರದೇಶಗಳಲ್ಲಿ ಆ ದೇಶದ ಜನ ಮತ್ತು ಸೈನಿಕರು ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ-ದೌರ್ಜನ್ಯಗಳನ್ನು ನಡೆಸುತ್ತಿರುವುದು ಮಾತ್ರವಲ್ಲ, ಅಪಹರಿಸಿಕೊಂಡು ಹೋಗಿರುವ ಘಟನೆಗಳು ಕೂಡಾ ವರದಿಯಾಗಿವೆ. ಇದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಯುದ್ಧಗ್ರಸ್ತ ದೇಶದಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯಾಚಾರಣೆ ಭಾರತಕ್ಕೆ ಹೊಸದೇನಲ್ಲ. ಹಿಂದೆಯೂ ಗಲ್ಪ್ ಯುದ್ಧ ನಡೆಯುತ್ತಿದ್ದಾಗ ಸುಮಾರು ಒಂದೂವರೆ ಲಕ್ಷ ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿತ್ತು. ಲಿಬಿಯಾದ ಯುದ್ಧದ ಸಮಯದಲ್ಲಿ ಸುಮಾರು 15,000 ಮತ್ತು ಯೆಮನ್ ಯುದ್ಧ ಕಾಲದಲ್ಲಿ ಅಂದಾಜು 5000 ಭಾರತೀಯರನ್ನು ಆಗಿನ ಕಾಂಗ್ರೆಸ್ ಸರ್ಕಾರ ಭಾರತಕ್ಕೆ ಕರೆತಂದಿತ್ತು. ಕಾಂಗ್ರೆಸ್ ಸರ್ಕಾರ ಇಲ್ಲವೇ ಕಾಂಗ್ರೆಸ್ ಪಕ್ಷ ಆ ಕಾರ್ಯಾಚರಣೆ ಬಗ್ಗೆ ಮೋದಿ
ಸರ್ಕಾರದಂತೆ ಪ್ರಚಾರ ಮಾಡಿ, ರಾಜಕೀಯವಾಗಿ ಬಳಸಿಕೊಳ್ಳುವ ಪ್ರಯತ್ನ ಮಾಡಿರಲಿಲ್ಲ. ಆದರೆ ಮೋದಿ ಕೇಂದ್ರ ಸರ್ಕಾರ ಯುಕ್ರೇನ್ ನಿಂದ ಭಾರತೀಯರನ್ನು ಕರೆತರುವ ಕಾರ್ಯಚಾರಣೆಗೂ ಗಂಗಾ ನದಿಯ ಹೆಸರು ಕೊಟ್ಟು ಅದನ್ನು ಉತ್ತರ ಪ್ರದೇಶದ ಚುನಾವಣೆಯ ಪ್ರಚಾರದಲ್ಲಿ ಬಳಸಲು ಹೊರಟಿದೆ. ಇದು ಭಾರತೀಯ ಜನತಾ ಪಕ್ಷದ ಕ್ಷುಲ್ಲಕ ರಾಜಕೀಯದ ದುರ್ಬುದ್ಧಿಗೆ ಸಾಕ್ಷಿ ಎಂದಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಕೇಂದ್ರ ಸರ್ಕಾರದ ಜೊತೆ ನಿರಂತರ ಸಂಪರ್ಕವಿಟ್ಟುಕೊಂಡು ಯುಕ್ರೇನ್ ನಲ್ಲಿ ಸಂಕಷ್ಟದಲ್ಲಿರುವ ಭಾರತೀಯರನ್ನು ವಾಪಸು ಕರೆತರುವ ಪ್ರಯತ್ನವನ್ನು ಮಾಡಬೇಕು. ಇದೇ ವೇಳೆ ಬಿಜೆಪಿ
ಸರ್ಕಾರ ಯುಕ್ರೇನ್ ಮತ್ತು ರಷ್ಯಾ ದೇಶಗಳ ಜೊತೆ ಮಾತುಕತೆ ನಡೆಸಿ ಭಾರತೀಯರ ಸುರಕ್ಷತೆಯನ್ನು ಖಾತರಿಪಡಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಸರ್ಕಾರಿ ವೈದ್ಯಕೀಯ ಸೀಟಿಗೂ ನಿಗಧಿಗಿಂತ ನಾಲ್ಕು ಪಟ್ಟು ಅಧಿಕ ಶುಲ್ಕ ವಸೂಲಿ ಮಾಡುತ್ತಿರುವ KLE ಕಾಲೇಜು: ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...