Homeಮುಖಪುಟಉಕ್ರೇನ್‌ನಲ್ಲಿನ ಭಾರತೀಯ ವಿದ್ಯಾರ್ಥಿಗಳ ಸ್ಥಿತಿಗೆ ಕೇಂದ್ರ ಬಿಜೆಪಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

ಉಕ್ರೇನ್‌ನಲ್ಲಿನ ಭಾರತೀಯ ವಿದ್ಯಾರ್ಥಿಗಳ ಸ್ಥಿತಿಗೆ ಕೇಂದ್ರ ಬಿಜೆಪಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

- Advertisement -
- Advertisement -

ರಷ್ಯಾ ಉಕ್ರೇನ್ ಮೇಲೆ ದಾಳಿ ಮಾಡುತ್ತಿರುವ ಸಂದರ್ಭದಲ್ಲಿ ಉಕ್ರೇನ್‌ನಲ್ಲಿ ಹಲವು ಭಾರತೀಯ ವಿದ್ಯಾರ್ಥಿಗಳು ಸಿಕ್ಕಿಕೊಂಡಿದ್ದಾರೆ. ಕರ್ನಾಟಕ ಮೂಲದ ವಿದ್ಯಾರ್ಥಿಯೊಬ್ಬ ಸಾವನಪ್ಪಿದ್ದಾನೆ. ಈ ಎಲ್ಲಾ ಸಂದಿಗ್ದ ಪರಿಸ್ಥಿತಿಗೆ ಕೇಂದ್ರ ಬಿಜೆಪಿ ಸರ್ಕಾರದ ಅನಿಶ್ಚಿತ ಮತ್ತು ಬೇಜವಾಬ್ದಾರಿ ನೀತಿ-ನಿಲುವುಗಳೂ ಕಾರಣ ಎಂದು ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕಳೆದ ಕೆಲವು ತಿಂಗಳಿಂದ ಯುಕ್ರೇನ್ – ರಷ್ಯಾ ನಡುವೆ ಯಾವುದೇ ಕ್ಷಣದಲ್ಲಿ ಯುದ್ಧ ಸ್ಪೋಟವಾಗಬಹುದೆಂಬ ವರದಿಗಳ ಹಿನ್ನೆಲೆಯಲ್ಲಿ ಹಲವಾರು ದೇಶಗಳು ತಮ್ಮ ಪ್ರಜೆಗಳನ್ನು ಸುರಕ್ಷಿತವಾಗಿ ವಾಪಸು ಕರೆಸಿಕೊಳ್ಳುವ ಪ್ರಯತ್ನ ಪ್ರಾರಂಭಿಸಿತ್ತು. ಆದರೆ ಭಾರತ ಮಾತ್ರ ಯುದ್ಧ ಶುರುವಾಗುವವರೆಗೆ ಭಾರತೀಯರ ಸುರಕ್ಷತೆ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಮೋದಿಯವರು ಮುನ್ನೆಚ್ಚರಿಕೆ ವಹಿಸಲಿಲ್ಲ ಎಂದು ದೂರಿದ್ದಾರೆ.

ಕೇಂದ್ರ ಬಿಜೆಪಿ ಸರ್ಕಾರದ ಈ ನಿರ್ಲಕ್ಷ್ಯದಿಂದಾಗಿಯೇ ಕರ್ನಾಟಕದ ಯುವ ವಿದ್ಯಾರ್ಥಿ ನವೀನ್ ಪ್ರಾಣ ಕಳೆದುಕೊಂಡು, ಆತನ ಹೆತ್ತವರು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ಆ ವಿದ್ಯಾರ್ಥಿಯ ಸಹಪಾಠಿಗಳು ಮತ್ತು ಹೆತ್ತವರ ಹೇಳಿಕೆಗಳೇ ಕೇಂದ್ರ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿವೆ ಪ್ರಧಾನಿ ಮೋದಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವರು ಸಕಾಲದಲ್ಲಿ ಈ ವಿದ್ಯಾರ್ಥಿಗಳ ನೆರವಿಗೆ ಧಾವಿಸಿ, ಅವರನ್ನು ಭಾರತಕ್ಕೆ ಕರೆತಂದಿದ್ದರೆ ಅಮೂಲ್ಯವಾದ ಜೀವವೊಂದು ಉಳಿಯುತ್ತಿತ್ತು ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ನಮ್ಮೊಳಗಿನ ರಾಜಕೀಯ ಭಿನ್ನಾಭಿಪ್ರಾಯಗಳು, ಸೈದ್ಧಾಂತಿಕ ವ್ಯತ್ಯಾಸಗಳು ಏನೇ ಇದ್ದರೂ ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಬಿಜೆಪಿ ಸರ್ಕಾರ ಕೈಗೊಳ್ಳುವ ನಿರ್ಧಾರವನ್ನು ಬೆಂಬಲಿಸುವುದು ನಮ್ಮ ಕರ್ತವ್ಯವಾಗಿದೆ. ಆದರೆ ಯುಕ್ರೇನ್‌ನ ಬಹಳಷ್ಟು ಪ್ರದೇಶಗಳಲ್ಲಿ ಆ ದೇಶದ ಜನ ಮತ್ತು ಸೈನಿಕರು ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ-ದೌರ್ಜನ್ಯಗಳನ್ನು ನಡೆಸುತ್ತಿರುವುದು ಮಾತ್ರವಲ್ಲ, ಅಪಹರಿಸಿಕೊಂಡು ಹೋಗಿರುವ ಘಟನೆಗಳು ಕೂಡಾ ವರದಿಯಾಗಿವೆ. ಇದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಯುದ್ಧಗ್ರಸ್ತ ದೇಶದಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯಾಚಾರಣೆ ಭಾರತಕ್ಕೆ ಹೊಸದೇನಲ್ಲ. ಹಿಂದೆಯೂ ಗಲ್ಪ್ ಯುದ್ಧ ನಡೆಯುತ್ತಿದ್ದಾಗ ಸುಮಾರು ಒಂದೂವರೆ ಲಕ್ಷ ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿತ್ತು. ಲಿಬಿಯಾದ ಯುದ್ಧದ ಸಮಯದಲ್ಲಿ ಸುಮಾರು 15,000 ಮತ್ತು ಯೆಮನ್ ಯುದ್ಧ ಕಾಲದಲ್ಲಿ ಅಂದಾಜು 5000 ಭಾರತೀಯರನ್ನು ಆಗಿನ ಕಾಂಗ್ರೆಸ್ ಸರ್ಕಾರ ಭಾರತಕ್ಕೆ ಕರೆತಂದಿತ್ತು. ಕಾಂಗ್ರೆಸ್ ಸರ್ಕಾರ ಇಲ್ಲವೇ ಕಾಂಗ್ರೆಸ್ ಪಕ್ಷ ಆ ಕಾರ್ಯಾಚರಣೆ ಬಗ್ಗೆ ಮೋದಿ
ಸರ್ಕಾರದಂತೆ ಪ್ರಚಾರ ಮಾಡಿ, ರಾಜಕೀಯವಾಗಿ ಬಳಸಿಕೊಳ್ಳುವ ಪ್ರಯತ್ನ ಮಾಡಿರಲಿಲ್ಲ. ಆದರೆ ಮೋದಿ ಕೇಂದ್ರ ಸರ್ಕಾರ ಯುಕ್ರೇನ್ ನಿಂದ ಭಾರತೀಯರನ್ನು ಕರೆತರುವ ಕಾರ್ಯಚಾರಣೆಗೂ ಗಂಗಾ ನದಿಯ ಹೆಸರು ಕೊಟ್ಟು ಅದನ್ನು ಉತ್ತರ ಪ್ರದೇಶದ ಚುನಾವಣೆಯ ಪ್ರಚಾರದಲ್ಲಿ ಬಳಸಲು ಹೊರಟಿದೆ. ಇದು ಭಾರತೀಯ ಜನತಾ ಪಕ್ಷದ ಕ್ಷುಲ್ಲಕ ರಾಜಕೀಯದ ದುರ್ಬುದ್ಧಿಗೆ ಸಾಕ್ಷಿ ಎಂದಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಕೇಂದ್ರ ಸರ್ಕಾರದ ಜೊತೆ ನಿರಂತರ ಸಂಪರ್ಕವಿಟ್ಟುಕೊಂಡು ಯುಕ್ರೇನ್ ನಲ್ಲಿ ಸಂಕಷ್ಟದಲ್ಲಿರುವ ಭಾರತೀಯರನ್ನು ವಾಪಸು ಕರೆತರುವ ಪ್ರಯತ್ನವನ್ನು ಮಾಡಬೇಕು. ಇದೇ ವೇಳೆ ಬಿಜೆಪಿ
ಸರ್ಕಾರ ಯುಕ್ರೇನ್ ಮತ್ತು ರಷ್ಯಾ ದೇಶಗಳ ಜೊತೆ ಮಾತುಕತೆ ನಡೆಸಿ ಭಾರತೀಯರ ಸುರಕ್ಷತೆಯನ್ನು ಖಾತರಿಪಡಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಸರ್ಕಾರಿ ವೈದ್ಯಕೀಯ ಸೀಟಿಗೂ ನಿಗಧಿಗಿಂತ ನಾಲ್ಕು ಪಟ್ಟು ಅಧಿಕ ಶುಲ್ಕ ವಸೂಲಿ ಮಾಡುತ್ತಿರುವ KLE ಕಾಲೇಜು: ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...