Homeಮುಖಪುಟಮತ್ತೆ ಕರ್ತವ್ಯಕ್ಕೆ ಬನ್ನಿ ಎಂದ ಕೇಂದ್ರ: IAS ಅಲ್ಲ, ಸ್ವಯಂಸೇವಕನಾಗಿ ಮಾತ್ರ ಬರುತ್ತೇನೆ ಎಂದ ಕಣ್ಣನ್

ಮತ್ತೆ ಕರ್ತವ್ಯಕ್ಕೆ ಬನ್ನಿ ಎಂದ ಕೇಂದ್ರ: IAS ಅಲ್ಲ, ಸ್ವಯಂಸೇವಕನಾಗಿ ಮಾತ್ರ ಬರುತ್ತೇನೆ ಎಂದ ಕಣ್ಣನ್

- Advertisement -
- Advertisement -

ಹೆಚ್ಚುತ್ತಿರುವ ಅಸಹಿಷ್ಣುತೆ ಹಾಗೂ ವಾಕ್ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲಾಗಿದೆ ಎಂದು ಎಂಟು ತಿಂಗಳ ಹಿಂದೆ ಐಎಎಸ್ ಹುದ್ದೆಗೆ ರಾಜಿನಾಮೆ ನೀಡಿದ್ದ ಕಣ್ಣನ್ ಗೋಪಿನಾಥನ್ ಅವರಿಗೆ ಮರಳಿ ಕರ್ತವ್ಯಕ್ಕೆ ಬರುವಂತೆ ಕೇಂದ್ರ ಸರ್ಕಾರ ಕೇಳಿಕೊಂಡಿದೆ.

ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ತಕ್ಷಣ ತಮ್ಮ ಕರ್ತವ್ಯಕ್ಕೆ ಸೇರಲು ಕೇಂದ್ರ ಸರ್ಕಾರ ತಿಳಿಸಿದೆಯಾದರು ಕಣ್ಣನ್ ಅವರು ಸರ್ಕಾರಿ ಸೇವೆಯಲ್ಲಿ ಮತ್ತೆ ಸೇರ್ಪಡೆಗೊಳ್ಳುವ ಯಾವುದೇ ಯೋಜನೆ ಇಲ್ಲ ಎಂದು ಹೇಳಿದ್ದಾರೆ.

“ನನ್ನನ್ನು ಕರ್ತವ್ಯಕ್ಕೆ ಮತ್ತೆ ಸೇರಲು ಕೇಳಿಕೊಂಡ ಸರ್ಕಾರದಿಂದ ಪತ್ರವೊಂದನ್ನು ಸ್ವೀಕರಿಸಿದ್ದೇನೆ. ನನ್ನನ್ನು ಅವರ ಅಧೀನೆಯಲ್ಲಿ ಇಡಲು ಇದನ್ನು ಕಳುಹಿಸಿದ್ದಾರೆ, ಕೊರೋನಾ ವಿರುದ್ದ ನಾನು ಈಗಾಲೇ ಕೆಲಸ ಮಾಡುತ್ತಿದ್ದೇನೆ. ಈ ಸಂಕಷ್ಟದ ಸಮಯದಲ್ಲಿ ವಾಲಂಟೀಯರ್‌ ಆಗಿ ಕೆಲಸ ಮಾಡುತ್ತೇನೆಯೇ ಹೊರತು ಮತ್ತೇ ಐಎಎಸ್ ಸೇವೆಗೆ ಸೇರುವುದಿಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ.

“ನಾನು ಇದೀಗ ಕೆಲವು ಸೇವೆಯಲ್ಲಿ ತೊಡಗಿದ್ದೇನೆ. ಇದನ್ನು ಮುಂದುವರಿಸಲು ನಾನು ಬಯಸುತ್ತೇನೆ. ಸರ್ಕಾರ ಬಯಸಿದರೆ ನಾನು ದಾದ್ರಾ ಮತ್ತು ನಗರ ಹವೇಲಿ ಮತ್ತು ದೇಶದ ಯಾವುದೇ ಭಾಗಗಳಿಗೆ ಹೋಗತ್ತೇನೆ, ಆದರೆ ಸ್ವಯಂಸೇವಕರಾಗಿ ಮಾತ್ರ. ಐಎಎಸ್ ತೊರೆಯುವುದು ಚೆನ್ನಾಗಿ ಯೋಚಿಸಿ ಕೈಗೊಂಡ ನಿರ್ಧಾರ ಹಾಗೂ ಅದಕ್ಕೆ ನಾನು ಬದ್ದನಾಗಿದ್ದೇನೆ ”ಎಂದು ಕಣ್ಣನ್ ಹೇಳಿದ್ದಾರೆ.

ಗೋಪಿನಾಥನ್ ಎಂಟು ತಿಂಗಳ ಹಿಂದೆ ರಾಜಿನಾಮೆ ನೀಡಿದ್ದರೂ, ಸರ್ಕಾರ ಇನ್ನೂ ಅವರ ರಾಜೀನಾಮೆಯನ್ನು ಸ್ವೀಕರಿಸಿಲ್ಲ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ನಾನು ರಾಜಿನಾಮೆ ನೀಡಿದ್ದು ಏಕೆಂದರೆ… : ಮಾಜಿ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ಸಂದರ್ಶನ


“ನನ್ನನ್ನು ಸರ್ಕಾರವೂ ಹಿಂತಿರುಗಲು ಕೇಳಿಕೊಳ್ಳುವುದು ಒಳ್ಳೆಯ ಉದ್ದೇಶದಿಂದಲ್ಲ ಎಂದು ನಾನು ಭಾವಿಸುತ್ತೇನೆ. ಕೊರೊನಾ ವಿರುದ್ದ ನಾನು ಮಹಾರಾಷ್ಟ್ರದ ಕೆಲವು ಎನ್‌ಜಿಒಗಳೊಂದಿಗೆ ಈಗಾಗಲೇ ಕೆಲಸ ಮಾಡುತ್ತಿದ್ದೇನೆ. ಸೇವೆ ಮಾಡಲು ನನಗೆ ಐಎಎಸ್ ಟ್ಯಾಗ್ ಅಗತ್ಯವಿಲ್ಲ. ನನ್ನ ಪ್ರಸ್ತುತ ಸ್ವಾತಂತ್ರ್ಯದ ಬಗ್ಗೆ ನನಗೆ ಸಂತೋಷವಿದೆ ”ಎಂದು ಅವರು ಹೇಳಿದರು.

ಈ ಹಿಂದೆ ಕೇರಳದಲ್ಲಿ ಉಂಟಾದ 2018ರ ಪ್ರವಾಹದ ಸಂದರ್ಭದಲ್ಲಿ ಅವರು ದಾದ್ರಾ ಮತ್ತು ನಗರ ಹವೇಲಿ ಆಡಳಿತದ ಚೆಕ್ ಹಸ್ತಾಂತರಿಸಿ ಸದ್ದಿಲ್ಲದೆ ಸ್ಥಳದಿಂದ ಹೊರಟು ಹೋಗಿದ್ದರು. ರಜೆಯಲ್ಲಿದ್ದಾಗ ಪರಿಹಾರ ಸಾಮಗ್ರಿಗಳನ್ನು ಲೋಡ್ ಮಾಡುವ ಮತ್ತು ಇಳಿಸುವ ಮೂಲಕ ಎಂಟು ದಿನಗಳ ಕಾಲ ವಿವಿಧ ಪರಿಹಾರ ಶಿಬಿರಗಳಲ್ಲಿ ಕೆಲಸ ಮಾಡಿದ್ದ ಕಣ್ಣನ್ ತನ್ನ ಬ್ಯಾಚ್-ಮೇಟ್ ಆಗಿದ್ದ ಎರ್ನಾಕುಲಂ ಜಿಲ್ಲಾಧಿಕಾರಿ ವೈ ಎಸ್ ಸಫರುಲ್ಲಾ ಅವರನ್ನು ಗುರುತಿಸಿದ ನಂತರ ಅಲ್ಲಿಂದ ಅವರು ಹೊರಟು ಹೋಗಿದ್ದರು.

ಗೋಪಿನಾಥನ್ ಅವರ ಸೇವೆಯ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ನಂತರದ ದಿನಗಳಲ್ಲಿ ವೈರಲ್ ಆಗಿತ್ತು. ಕಣ್ಣನ್ ಗೋಪಿನಾಥನ್ ಆಲಪ್ಪುಳ ಜಿಲ್ಲೆಯ ಎರಾಮಲ್ಲೂರ್ ಮೂಲದವರು. ಇವರು ರಾಜಿನಾಮೆ ನೀಡುವಾಗ ದಾದ್ರಾ ಮತ್ತು ನಗರ ಹವೇಲಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...